ನಾನು ಓಡಿ ಹೋಗುವ ಸಿಎಂ ಅಲ್ಲ: ಮುಖ್ಯಮಂತ್ರಿ ಬೊಮ್ಮಾಯಿ

ಶಿಗ್ಗಾವಿ, (ಏ.19): ನನ್ನನ್ನು ಬೆಳಸಿದವರು ನೀವು. ನನ್ನನ್ನು ಉಳಿಸಿಕೊಳ್ಳುವವರು ನೀವು. ನಾನು ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ. ನನ್ನ ಸಾವಾದರೆ, ನನ್ನನ್ನು ಶಿಗ್ಗಾವಿಯಲ್ಲೇ ಮಣ್ಣು ಮಾಡಬೇಕು. ಇದು ನನ್ನ ಶಿಗ್ಗಾವಿಯ ಭೂಮಿ ತಾಯಿಯ ಮಣ್ಣಿನ ಋಣ ತೀರಿಸುವಂತದ್ದಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇಂದು ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಕೆಗೆ ಮುನ್ನ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು.

ಅದ್ಯಾವ ಜನ್ಮದ ಸಂಬಂಧವೊ ಯಾವ ಋಣಾನುಬಂಧವೊ ನೀವು ಹದಿನೈದು ವರ್ಷ ಸತತ ಬೆಂಬಲ ನೀಡಿದ್ದೀರಿ, ನಮ್ಮ ನಿಮ್ಮ ನಡುವೆ ಯಾವುದೇ ಶಕ್ತಿ ಅಡ್ಡಿ ಬರುವುದಿಲ್ಲ. ನಿಮ್ಮ ಪ್ರೀತಿ ವಿಶ್ವಾಸಕ್ಕೆ ನಾನು ತಲೆ ಬಾಗಿ, ನನ್ನ ಕೊನೆ ಉಸಿರು ಇರುವ ತನಕ ನಿಮ್ಮ ಸೇವೆ ಮಾಡುತ್ತೇನೆ ಎಂಬ ಪ್ರತಿಜ್ಞೆ ಮಾಡುತ್ತೇನೆ ಎಂದರು.

ಶಿಗ್ಗಾವಿ-ಸವಣೂರಿನ ಅಭಿವೃದ್ಧಿ ನಮ್ಮೆಲ್ಲರ ಕನಸಾಗಿತ್ತು. 2008ರಲ್ಲಿ ನಾನು ಬಂದಾಗ ಒಳ್ಳೆಯ ರಸ್ತೆ ಇರಲಿಲ್ಲ, ರಸ್ತೆಯ ಮಧ್ಯೆ ಹಳ್ಳಗಳಿದ್ದವು.  ಕುಡಿಯಲು ನೀರಿರಲಿಲ್ಲ. ಕುಡಿಯುವ ನೀರಿಗಾಗಿ ನಮ್ಮ ತಾಯಂದಿರು ರಸ್ತೆಯಲ್ಲಿ ಕೊಡ ಹಿಡಿದುಕೊಂಡು ಸಾಲು ಹಿಡಿದು ನಿಲ್ಲುತ್ತಿದ್ದರು. ಒಂದು ಒಳ್ಳೆಯ ಆಫೀಸ್ ನ ಕಟ್ಟಡ ಇರಲಿಲ್ಲ. ಜನರ ಕಷ್ಟಕ್ಕೆ ಸ್ಪಂದನೆ ಇರಲಿಲ್ಲ. ಕೆರೆಗಳಿಗೆ ನೀರು ಇರಲಿಲ್ಲ. ಇದರ ಮಧ್ಯೆ ಪ್ರಾರಂಭವಾಗಿರುವ ನಮ್ಮ ಅಭಿವೃದ್ಧಿ ಪಯಣ ಇವತ್ತು ಎರಡು ಏತ ನೀರಾವರಿ ಮಾಡಿ 100ಕ್ಕಿಂತ ಹೆಚ್ಚು ಕೆರೆಗಳನ್ನು ತುಂಬಿಸಿರುವ ದಾಖಲೆ ಶಿಗ್ಗಾವಿ-ಸವಣೂರನಲ್ಲಿ ಆಗಿದೆ ಎಂದರು.

ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಳ್ಳಿಯಿಂದ ಹೊಲಗಳಿಗೆ ಹೋಗುವ 2 ಸಾವಿರ ಕಿ.ಮೀ ಗ್ರಾಮೀಣ ರಸ್ತೆ ನಿರ್ಮಾಣ ಮಾಡಿದ್ದೇವೆ. 15 ವರ್ಷಗಳಲ್ಲಿ ಮಾರು 10 ಸಾವಿರ ಬಡವರಿಗೆ ಮನೆ ನಿರ್ಮಾಣ ಮಾಡಿದ್ದೆವೆ. ಮಳೆಯಿಂದ ಹಾನಿಗೊಳಗಾದ ಜನರಿಗೆ 12 ಸಾವಿರ ಮನೆಗಳನ್ನು ಕಟ್ಟಿರುವ ದಾಖಲೆಯನ್ನು ಮಾಡಿದ್ದೇವೆ. ಬಡತನ ಶಾಪವಲ್ಲ. ಹುಟ್ಟುವಾಗ ಬಡತನ ಇರಬಹುದು. ಆದರೆ ಸಾಯುವವರೆಗೂ ಬಡತನದಲ್ಲಿಯೇ ಇರಬೇಕೆಂದು ಇಲ್ಲ. ತಮ್ಮ ದುಡಿಮೆಯಿಂದ ಪ್ರಾಮಾಣಿಕವಾಗಿ ಮುಂದೆ ಬರುವ ಅವಕಾಶವನ್ನು ಮಾಡಿಕೊಟ್ಟಿದ್ದೇನೆ. ಆದ್ದರಿಂದ ಜನರು ಸ್ವಾಭಿಮಾನದ ಬದುಕಿನಿಂದ ಬಾಳುತ್ತಿದ್ದಾರೆ ಎಂದರು.

ಶಿಗ್ಗಾವಿ, ಸವಣೂರು, ಬಂಕಾಪುರದಲ್ಲಿ 6 ಸಾವಿರ ಮನೆ ನಿರ್ಮಾಣ ಮಾಡಿದ್ದೇವೆ. ನಗರಗಳ ಸಂಪೂರ್ಣ ಅಭಿವೃದ್ಧಿಯನ್ನು ಮಾಡಿದ್ದೇವೆ. ಪ್ರತಿಯೊಂದು ಗ್ರಾಮಕ್ಕೆ ಇನ್ನು ಆರು ತಿಂಗಳಲ್ಲಿ ಪ್ರತಿಯೊಂದು ಮನೆಗೆ ನಳದಿಂದ ನೀರು ಕೊಡುವಂತಹ ವ್ಯವಸ್ಥೆ ನಮ್ಮ ಸರ್ಕಾರ ಮತ್ತು ಕೇಂದ್ರ ಸರ್ಕಾರದಿಂದ ಆಗುತ್ತಿದೆ. ನಮ್ಮ ಪ್ರಧಾನಿ ಮೋದಿ, ನಡ್ಡಾ ಅವರ ನೇತೃತ್ವದಲ್ಲಿ ಜಲ ಜೀವನ್ ಮಿಷನ್ ಅಡಿಯಲ್ಲಿ ಹಳ್ಳಿ ಹಳ್ಳಿಯ ಪ್ರತಿ ಮನೆಗೂ ನಲ್ಲಿ ನೀರು ಕೊಡಲಾಗುತ್ತಿದೆ ಎಂದರು.

ಜೆ.ಪಿ ನಡ್ಡಾ ಅವರ ನೇತೃತ್ವದಲ್ಲಿ ಪಕ್ಷ ಕರ್ನಾಟಕದಲ್ಲಿ ಅತ್ಯಂತ ಸಂಘಟಿತವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ 125 ಕ್ಕಿಂತ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಪಡೆದು, ಮತ್ತೊಮ್ಮೆ ಕನ್ನಡ ನಾಡಿನ ಸೇವೆಯನ್ನು ಮಾಡಲು ಬಾರತೀಯ ಜನತಾ ಪಕ್ಷಕ್ಕೆ ಜನರು ಆಶೀರ್ವಾದ ಮಾಡುತ್ತಾರೆ. ಮುಖ್ಯಮಂತ್ರಿಯಾಗಿ ನಾನು ರೈತರಿಗೆ, ಯುವಕರಿಗೆ, ಮಹಿಳೆಯರಿಗೆ, ಕಾರ್ಮಿಕರಿಗೆ ವಿದ್ಯಾರ್ಥಿಗಳಿಗೆ ಏನೆಲ್ಲ ಕೆಲಸ ಮಾಡಿದ್ದೇನೆ ಎನ್ನುವುದು ಎಲ್ಲರಿಗೂ ಗೊತ್ತಿದೆ. ನನ್ನ ಜೀವನದ ಕೊನೆಯ ಉಸಿರು ಇರುವವರೆಗೂ ನಿಮ್ಮ ಸೇವೆಯನ್ನು ಮಾಡುತ್ತೇನೆ ಎಂದರು.

ನಾನು ಕ್ಷೇತ್ರ ಬಿಟ್ಟು ಬೇರೆ ಕಡೆ ಹೋಗುತ್ತೇನೆ ಎಂದು ಕೇಳಿದರು. ನಾನು ಓಡಿ ಹೋಗುವ ಮುಖ್ಯಮಂತ್ರಿ ಅಲ್ಲ. ಏನೇ ಆದರೂ ನನ್ನ ಜನರ ಮುಂದೆ ತೀರ್ಮಾನ ಆಗಬೇಕು. ನೀವೇ ನನ್ನ ಮಾಲೀಕರು, ನಾನು ಕ್ಷೇತ್ರ ಬಿಟ್ಟು ದಾವಣಗೆರೆಗೆ ಹೋಗುತ್ತೆನೆ. ಎಂದು ಹಬ್ಬಿಸಿದ್ದರು. ಯಾವ ನನ್ನ ಮಗ ಹೇಳಿದ್ದು ಎಂದು ಕೇಳಿದೆ. ಇದು ನನ್ನ ಆತ್ಮಸ್ಥೈರ್ಯ. ಕರ್ನಾಟಕ ಮಾತೆಗೆ, ಕನ್ನಡಿಗರಿಗೆ ಮತ್ತು ಈ ಕ್ಷೇತ್ರದ ಜನರಿಗೆ ನಾನು ಪ್ರಾಮಾಣಿಕ ಸೇವೆಯನ್ನು ಮಾಡಿದ್ದೇನೆ. ಅದರಲ್ಲಿ ನನ್ನ ನಂಬಿಕೆಯಿದೆ ಎಂದರು.

ಕ್ಷೇತ್ರದಲ್ಲಿ ಆರ್ಯುವೇದಿಕ ಆಸ್ಪತ್ರೆ, ಶಿಗ್ಗಾವಿ, ಸವಣೂರಿನಲ್ಲಿ 250 ಹಾಸಿಗೆಯ ಆಸ್ಪತ್ರೆ, ಜಿಟಿಟಿಸಿ ಮತ್ತು ಇಂಜಿನಿಯರಿಂಗ್ ಕಾಲೇಜು, 10 ಸಾವಿರ ಜನರಿಗೆ ಉದ್ಯೋಗ ಕೊಡುವ ಟೆಕ್ಸ್ಟೈಲ್ ಪಾರ್ಕ್ ಸೇರಿದಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯನ್ನು ಮಾಡಿದ್ದೇನೆ. ಬಂಕಾಪುರ ತಾಲ್ಲೂಕು ಆಗಬೇಕೆಂದು ಜನರ ಬೇಡಿಕೆ ಇದೆ. ನಾನು ಇವತ್ತು ಅದಕ್ಕೆ ಎಲ್ಲ ಅನುಮತಿ ಕೊಟ್ಟು ಆಜ್ಞೆ ಮಾಡಿದ್ದೇನೆ. ಚುನಾವಣೆ ನೀತಿ ಸಂಹಿತೆ ಅದಕ್ಕೆ ಅಡಚಣೆಯಾಗಿದೆ. ಬರುವ ದಿನಗಳಲ್ಲಿ ಬಂಕಾಪುರವನ್ನು ತಾಲ್ಲೂಕು ಕೇಂದ್ರವನ್ನಾಗಿ ಮಾಡುತ್ತೇನೆ ಎಂದರು.

ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ, ಚಲನಚಿತ್ರ ನಟ ಸುದೀಪ್, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹಾಜರಿದ್ದರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ

ಆದಿಚುಂಚನಗಿರಿಯಲ್ಲಿ ನಿರ್ಮಾಣವಾಗಿರುವ ಭೈರವೈಕ್ಯ ಮಂದಿರದ ಉದ್ಘಾಟನೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ನೆರವೇರಿಸಿದರು.

[ccc_my_favorite_select_button post_id="120981"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]