ನ್ಯಾಯಾಂಗ ಆಡಳಿತ ಹಾಗೂ ವಕೀಲ ವೃತ್ತಿಯ ತರಬೇತಿಗಾಗಿ ಅರ್ಹ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆ, (ಸೆಪ್ಟೆಂಬರ್ 05): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ (ಪ್ರವರ್ಗ-1, 2ಎ, 3ಎ ಮತ್ತು 3ಬಿ) ಕಾನೂನು ಪಧವೀಧರರಿಂದ ನ್ಯಾಯಾಂಗ ಆಡಳಿತದಲ್ಲಿ 4 ವರ್ಷಗಳ ಅವಧಿಗೆ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಈ ಕಛೇರಿಯಲ್ಲಿ ನಿಗದಿತ ಅವಧಿಯೊಳಗೆ ಕಛೇರಿ ವೇಳೆಯಲ್ಲಿ ಪಡೆದು ಭರ್ತಿ ಮಾಡಲಾದ ಅರ್ಜಿಗಳನ್ನು ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇಲ್ಲಿಗೆ  ಅಕ್ಟೋಬರ್ 04 ರೊಳಗೆ ಸಲ್ಲಿಸಬೇಕು ಎಂದು  ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸದಸ್ಯ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಿಬಂಧನೆಗಳು:

1. ಅಭ್ಯರ್ಥಿಯು ಕಾನೂನು ಪದವೀಧರರಾಗಿದ್ದು ಈ ತರಬೇತಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿಯನ್ನು ಮುಗಿಸಿ 2 (ಎರಡು) ವರ್ಷಗಳು ಮೀರಿರಬಾರದು.

2. ಅಭ್ಯರ್ಥಿಗಳು ಸರ್ಕಾರದ ಆದೇಶ ಸಂಖ್ಯೆ: ಎಸ್.ಡಬ್ಲ್ಯೂ.ಡಿ 225, ಬಿ.ಸಿ.ಎ 2000, ದಿನಾಂಕ, 30.03.2002 ರ ಆದೇಶದ ಅನುಸಾರ ಹಿಂದುಳಿದ ಪ್ರವರ್ಗ-1, 2ಎ, 3ಎ ಮತ್ತು 3ಬಿ ವರ್ಗೀಕರಣಕ್ಕೆ ಒಳಪಟ್ಟಿರಬೇಕು ಹಾಗೂ ಮೇಲ್ಕಂಡ ವರ್ಗಗಳಿಗೆ ನಿಗದಿಪಡಿಸಲಾದ ಜಾತಿ ಆದಾಯ  ಪ್ರಮಾಣ ಪತ್ರಗಳೊಂದಿಗೆ ವಿವರಗಳನ್ನು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಲಗತ್ತಿಸಿ  ಸಲ್ಲಿಸಬೇಕು.

3. ಅಭ್ಯರ್ಥಿಗಳ ಮತ್ತು ಕುಟುಂಬದ ವಾರ್ಷಿಕ ಆದಾಯ ಮಿತಿ ಪ್ರವರ್ಗ 1 ರ ಅಭ್ಯರ್ಥಿಗಳಿಗೆ ರೂ. 3.50ಲಕ್ಷ ಹಾಗೂ ಪ್ರವರ್ಗ 2 (ಎ), 3 (ಎ) ಅಥವಾ 3 (ಬಿ) ಅಭ್ಯರ್ಥಿಗಳಿಗೆ ರೂ. 2.50 ಲಕ್ಷಗಳ ಮಿತಿ ಇರಬೇಕು.

4. ಭರ್ತಿ ಮಾಡಲಾದ ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಲಾದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳ ವಯಸ್ಸು ಪ್ರವರ್ಗ-1ಕ್ಕೆ 40 ವರ್ಷ ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ 38 ವರ್ಷಗಳನ್ನು ಮೀರಿರಬಾರದು.

5. ಆಯ್ಕೆಯಾದ ಅಭ್ಯರ್ಥಿಗಳಿಗೆ 4 ವರ್ಷಗಳ ತರಬೇತಿ ಅವಧಿ ಇದ್ದು, ಈ ಅವಧಿಯೊಳಗೆ ತರಬೇತಿಯನ್ನು ಬಿಡಲು ಅವಕಾಶವಿರುವುದಿಲ್ಲ ಹಾಗೂ ಅಭ್ಯರ್ಥಿಯು ಸುಳ್ಳು ಮಾಹಿತಿ ನೀಡಿದಲ್ಲಿ ಅಥವಾ ತರಬೇತಿ ಅವಧಿಯ ಮಧ್ಯದಲ್ಲಿ ತರಬೇತಿಯಿಂದ ಬಿಟ್ಟು ಹೋದಲ್ಲಿ ಸರ್ಕಾರ ಅವರಿಗಾಗಿ ಖರ್ಚು ಮಾಡಿದ ಹಣವನ್ನು ವರ್ಷಕ್ಕೆ ಶೇ.10 ರ ಬಡ್ಡಿಯೊಂದಿಗೆ ಭೂ ಕಂದಾಯದ ಬಾಕಿ ಎಂದು ಪರಿಗಣಿಸಿ ವಸೂಲು ಮಾಡಲಾಗುವುದು. ಆದರೆ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ಹೊಂದಿದ ಅಭ್ಯರ್ಥಿಗಳಿಗೆ ಅನ್ವಯಿಸುವುದಿಲ್ಲ.

6. ಆಯ್ಕೆಯಾದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ತಿಂಗಳಿಗೆ ರೂ. 4,000/- ಗಳ ತರಬೇತಿ ಭತ್ಯೆಯನ್ನು ದಿನಚರಿ ಆಧಾರದ ಮೇರೆಗೆ ನೀಡಲಾಗುವುದು. 

7. ಆಯ್ಕೆಯಾದ ಅಭ್ಯರ್ಥಿಗಳಿಗೆ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್ /ಸರ್ಕಾರಿ ವಕೀಲರು ಅಥವಾ 20 ವರ್ಷಗಳಿಗಿಂತ ಹೆಚ್ಚಿನ ವರ್ಷಗಳು ವಕೀಲ ವೃತ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಹಿರಿಯ ವಕೀಲರಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ಕಾನೂನು ತರಬೇತಿ ಪಡೆಯುವ ಸಲುವಾಗಿ ತರಬೇತಿಗೆ ನಿಯೋಜಿಸಲಾಗುವುದು.

8. ಆಯ್ಕೆಯಾದ ಅಭ್ಯರ್ಥಿಯು ಈ ಇಲಾಖೆಯ ನಿಬಂಧನೆಗಳು ಹಾಗೂ ಕಾಲಕಾಲಕ್ಕೆ ಹೊಂದಿರುವ ಸರ್ಕಾರದ ಆದೇಶಗಳಿಗೆ ಬದ್ಧನಾಗಿರುತ್ತೇನೆಂದು ಮುಚ್ಚಳಿಕೆಯನ್ನು ಬರೆದು ಕೊಡಬೇಕು. 

9. ಹೆಚ್ಚಿನ ಮಾಹಿತಿಯನ್ನು ಅಭ್ಯರ್ಥಿಗಳು, ಜಿಲ್ಲಾ ಅಧಿಕಾರಿಗಳ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ, ನಂ.215, ಎರಡನೇ ಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ-562110 ಇವರ ಕಛೇರಿಯಲ್ಲಿ ಕೆಲಸದ ವೇಳೆಯಲ್ಲಿ ಪಡೆಯಬಹುದು.

10. ಅರ್ಹ ಅಭ್ಯರ್ಥಿಗಳಿಗೆ ಆಯ್ಕೆ ಸಮಿತಿಯ ಸಂದರ್ಶನದ ದಿನಾಂಕ ಹಾಗೂ ಸ್ಥಳವನ್ನು ತಿಳಿಸಿದಾಗ ಸಂದರ್ಶನಕ್ಕೆ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗತಕ್ಕದ್ದು.

11. ಅಭ್ಯರ್ಥಿಗಳು ಭರ್ತಿ ಮಾಡಲಾದ ಅರ್ಜಿಯೊಂದಿಗೆ ಅವಶ್ಯಕ ಮಾಹಿತಿಗಳಾದ ಕಾನೂನು ಪದವಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿಗಳ ದೃಢೀಕರಣ ಪ್ರತಿ ಹಾಗೂ ಜನ್ಮ ದಿನಾಂಕದ ಆಧಾರಕ್ಕಾಗಿ ಎಸ್.ಎಸ್.ಎಲ್.ಸಿ ಅಂಕಪಟ್ಟಿ ಅಥವಾ ಟಿ.ಸಿ ದೃಢೀಕೃತ ಪ್ರತಿಯನ್ನು ಲಗತ್ತಿಸಬೇಕು. 

12. ಅರ್ಜಿಗಳನ್ನು ಸ್ವೀಕರಿಸಲು ಅಕ್ಟೊಬರ್ 04 ಕೊನೆದಿನವಾಗಿದೆ.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]