ರಾಜ್ಯದ ಬೇಡಿಕೆಗಳ ಕುರಿತು ಕೇಂದ್ರ ಮೂವರು ಸಚಿವರೊಂದಿಗೆ ಎಂಬಿ ಪಾಟೀಲ ಚರ್ಚೆ

ನವದೆಹಲಿ, (ಸೆ.11); ರಾಜ್ಯದ ಕೈಗಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಕೇಂದ್ರ ಸರಕಾರದ ಸಹಕಾರ ಕೋರಿ ಮತ್ತು ಅಗತ್ಯ ಬಂಡವಾಳ ಹೂಡಿಕೆ ನಿರೀಕ್ಷಿಸಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರು ಕೇಂದ್ರ ಸಚಿವರಾದ ರಾಜನಾಥ್ ಸಿಂಗ್, ನಿರ್ಮಲಾ ಸೀತಾರಾಮನ್ ಮತ್ತು ಎಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಇಲ್ಲಿ ಭೇಟಿ ಮಾಡಿ, ವಿಸ್ತೃತ ಮಾತುಕತೆ ನಡೆಸಿದರು.

2025ರ ಫೆಬ್ರವರಿ 12ರಿಂದ 14ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಪಾಟೀಲ ಅವರು ದೆಹಲಿಗೆ ಎರಡು ದಿನಗಳ ಭೇಟಿ ನೀಡಿದ್ದು, ಮೊದಲ ದಿನ ಎಡೆಬಿಡದ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದರು.

ಮೊದಲಿಗೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ರಕ್ಷಣಾ ಸಾಧನಗಳ ಉತ್ಪಾದನೆ ಮತ್ತು ಅವುಗಳ ರಫ್ತಿನ ಮೇಲೆ ಇರುವ ನಿರ್ಬಂಧದ ತೆರವು, ಡಿಫೆನ್ಸ್ ಕಾರಿಡಾರ್ ಸ್ಥಾಪನೆಯ ಜರೂರು, ರಾಜ್ಯದಲ್ಲಿರುವ ಬಿಎಚ್ಇಎಲ್ ಮತ್ತು ಬಿಇಎಂಎಲ್ ತರಹದ ಕೇಂದ್ರೋದ್ಯಮಗಳಲ್ಲಿ ಹೂಡಿಕೆ ಹೆಚ್ಚಳಕ್ಕೆ ಉತ್ತೇಜನ ಮತ್ತು ಕಾರವಾರದ ನೌಕಾ ವೈಮಾನಿಕ ನಿಲ್ದಾಣದ ರನ್-ವೇಯನ್ನು ಈಗಿರುವ 2 ಕಿ.ಮೀ.ನಿಂದ 2.7 ಕಿ.ಮೀ.ವರೆಗೆ ವಿಸ್ತರಿಸಲು ಬೇಕಾಗಿರುವ ನೆರವಿನ ಬಗ್ಗೆ ಚರ್ಚಿಸಿದರು.

ಬಳಿಕ ರಾಜ್ಯದವರೇ ಆದ ಕೇಂದ್ರ ಉಕ್ಕು ಮತ್ತು ಭಾರೀ ಕೈಗಾರಿಕಾ ಸಚಿವ ಎಚ್ ಡಿ ಕುಮಾರಸ್ವಾಮಿ ಅವರನ್ನು ಕಂಡ ಪಾಟೀಲ ಅವರು, ಮೇಲಿನ ಸಂಗತಿಗಳ ಜತೆಗೆ ಕರ್ನಾಟಕದ ಕೈಗಾರಿಕಾ ವಲಯದ ಬೆಳವಣಿಗೆಗೆ ಅಗತ್ಯವಿರುವ ನಿರ್ಣಾಯಕ ನೆರವಿನ ಕುರಿತು ವಿಚಾರ ವಿನಿಮಯ ನಡೆಸಿದರು.

ಅಲ್ಲದೆ ಅವರು, ಇ.ವಿ. ವಲಯದಲ್ಲಿ ನವೋದ್ಯಮಗಳಿಗೆ 10 ಸಾವಿರ ಕೋಟಿ ರೂ. ಪೂರೈಸಲು ಎದುರಾಗಿರುವ ಸವಾಲು, ಫೇಮ್-3 ಯೋಜನೆಯ ಜಾರಿಯಲ್ಲಿ ಆಗುತ್ತಿರುವ ವಿಳಂಬ, ರಕ್ಷಣಾ ತಂತ್ರಜ್ಞಾನ ಹಬ್ ಗಳ ಸ್ಥಾಪನೆಯ ಜರೂರು, ಬೆಂಗಳೂರು ಗ್ರಾಮಾಂತರದಲ್ಲಿ ಇಎಂಸಿ ಕ್ಲಸ್ಟರ್ ಸ್ಥಾಪನೆಗೆ ಬಾಕಿ ಇರುವ ಅನುಮೋದನೆ, ಹಾರೋಹಳ್ಳಿ, ಕುಡುತಿನಿ ಮತ್ತು ದೇವಕತ್ತಿಕೊಪ್ಪದಲ್ಲಿ ಕೈಗಾರಿಕಾ ಯೋಜನೆಗಳಿಗೆ ಬಾಕಿ ಇರುವ ಪರಿಸರ ಮತ್ತು ಅರಣ್ಯ ಇಲಾಖೆಯ ಅನುಮತಿ, ಸೆಮಿಕಂಡಕ್ಟರ್ ಕಂಪನಿ ಸ್ಥಾಪನೆಯ ತುರ್ತು ಮತ್ತು ಕೇಂದ್ರವು ಇತ್ತೀಚೆಗೆ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಯೋಜನೆಯಡಿ ರೂಪಿಸಿರುವ 12 ಸ್ಮಾರ್ಟ್ ಸಿಟಿ ಯೋಜನೆಯಿಂದ ಕರ್ನಾಟಕವನ್ನು ಹೊರಗಿಟ್ಟಿರುವುದರ ಬಗ್ಗೆ ಮಾತುಕತೆ ನಡೆಸಿದರು.

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಸಚಿವರು, ಬೇಗನೆ ಹಾಳಾಗುವಂತಹ ಪದಾರ್ಥಗಳನ್ನು ವಿಮಾನದ ಮೂಲಕ ಹೊರದೇಶಗಳಿಗೆ ಕಳುಹಿಸುತ್ತಿರುವ ಸಣ್ಣ ಪ್ರಮಾಣದ ರಫ್ತುದಾರರ ಮೇಲೆ ಹೇರಿರುವ ಜಿಎಸ್ ಟಿ ತೆರಿಗೆಯನ್ನು ರದ್ದುಪಡಿಸಬೇಕು ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಆಮದಿನ ಮೇಲೆ ಈಗ ಇರುವ ಭಾರೀ ಆಮದು ತೆರಿಗೆ ಮತ್ತು ಸುಂಕವನ್ನು ಕಡಿಮೆ ಮಾಡಬೇಕು ಎಂದು ಮನವಿ ಮಾಡಿದರು.

ಸಿಂಗಪುರ್ ಹೈಕಮೀಷನರ್ ಭೇಟಿ (ಬಾಕ್ಸ್); ಇದಕ್ಕೂ ಮುನ್ನ ಎಂ ಬಿ ಪಾಟೀಲ, ಸಿಂಗಪುರ್ ಹೈಕಮಿಷನರ್ ಸೈಮನ್ ವಾಂಗ್ ಅವರನ್ನು ಭೇಟಿಯಾಗಿ, ಫೆಬ್ರವರಿಯಲ್ಲಿ ನಡೆಯಲಿರುವ ಹಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಿದರು.

ಈ ಸಂದರ್ಭದಲ್ಲಿ ಅವರು, ಇತ್ತೀಚೆಗೆ ಭಾರತ ಮತ್ತು ಸಿಂಗಪುರ್ ಸೆಮಿಕಂಡಕ್ಟರ್, ಡಿಜಿಟಲ್ ಸಹಕಾರ, ಆರೋಗ್ಯ ಸೇವೆ, ವೈದ್ಯಕೀಯ ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರಕ್ಕೆ ಮಾಡಿಕೊಂಡಿರುವ ಒಡಂಬಡಿಕೆ ಕುರಿತು ಚರ್ಚಿಸಿದರು.

ಇದಕ್ಕೆ ಸ್ಪಂದಿಸಿದ ಹೈಕಮಿಷನರ್, ನೆಟ್-ಜೀರೋ ಕೈಗಾರಿಕಾ ಪಾರ್ಕುಗಳನ್ನು ಸ್ಥಾಪಿಸಲು ತಮಗಿರುವ ಆಸಕ್ತಿಯನ್ನು ವ್ಯಕ್ತಪಡಿಸಿದರು. ಜತೆಗೆ ಡೇಟಾ ಕೇಂದ್ರಗಳು, ಎಂಆರ್ ಓ, ವೈದ್ಯಕೀಯ ಉಪಕರಣಗಳು ಮತ್ತು ಔಷಧ ಕಂಪನಿಗಳಲ್ಲಿ ಹೂಡಿಕೆ ಮಾಡಲು ತಮ್ಮ ದೇಶದ ಕಂಪನಿಗಳಿರುವ ಒಲವನ್ನು ಹಂಚಿಕೊಂಡರು.

ಮಾಹಿತಿ ಇಷ್ಟವಾಗಿದ್ದರೆ ಶೇರ್ ಮಾಡಿ: ಕ್ಷಣ ಕ್ಷಣದ ಮಾಹಿತಿಗಾಗಿ ಹರಿತಲೇಖನಿ Facebook, Koo, Dailyhunt ಮೂಲಕ ಫಾಲೋ ಮಾಡಿ. Whatsup, Telegram ಗುಂಪಿಗೆ ಸೇರಿ ನಮ್ಮೊಂದಿಗೆ ಜೊತೆಯಾಗಿ….

ರಾಜಕೀಯ

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

ಯುದ್ಧದಿಂದ ದೇಶದಲ್ಲಿ ಸಾಕಷ್ಟು ಸಮಸ್ಯೆ; ಪ್ರಧಾನಿಯವರು ಮೌನ ಮುರಿದಿಲ್ಲ – ಡಿ.ಕೆ. ಸುರೇಶ್‌

“ಲೋಕಸಭಾ, ವಿಧಾನಸಭಾ ಕ್ಷೇತ್ರಗಳ ಮರು ವಿಂಗಣೆಯಿಂದ ದಕ್ಷಿಣ ಭಾರತದ ರಾಜ್ಯಗಳಲ್ಲಿ ಕ್ಷೇತ್ರಗಳು ಕಡಿಮೆಯಾಗುವುದರ ಜೊತೆಗೆ ಆರ್ಥಿಕ ಮುಗ್ಗಟನ್ನು ಎದುರಿಸಬೇಕಾಗುತ್ತದೆ. ನಮ್ಮ ತೆರಿಗೆಗಳು ಉತ್ತರದ ರಾಜ್ಯಗಳಿಗೆ ಹಂಚಿಕೆಯಾಗಲಿದೆ” ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ. ಸುರೇಶ್‌ (D.K.

[ccc_my_favorite_select_button post_id="120770"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆಗಾಗಿ ಮಗನ ಜಗಳ; ತಾಯಿ ಸಾವು..!

ಮದುವೆ (Marriage) ಮಾಡಿಲ್ಲವೆಂದು ಜಗಳ ತಗೆದ ಮಗ (Son) ಸ್ವಂತ ತಾಯಿಯನ್ನೇ (Mother) ಹೊಡೆದು ಕೊಂದಿರುವ (Murder) ಘಟನೆ ವರದಿಯಾಗಿದೆ.

[ccc_my_favorite_select_button post_id="120643"]
ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಡಿವೈಡರ್‌ಗೆ ಡಿಕ್ಕಿ.. ಕಾರು ಪಲ್ಟಿ: ಬಾಲಕಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ (Accident) ಪಲ್ಟಿಯಾದ ಪರಿಣಾಮ 9 ವರ್ಷದ ಬಾಲಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ನಡೆದಿದೆ.

[ccc_my_favorite_select_button post_id="120735"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]