ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವೆ ಕ್ವಿನ್ ಸಿಟಿ’: ಮಹತ್ತ್ವಾಕಾಂಕ್ಷಿ ಯೋಜನೆಗೆ ಸಿಎಂ ಚಾಲನೆ

ಬೆಂಗಳೂರು: ಸಮೀಪದ ದೊಡ್ಡಬಳ್ಳಾಪುರ ಮತ್ತು ದಾಬಸ್‌ಪೇಟೆ ನಡುವೆ, ಸ್ಯಾಟಲೈಟ್ ಟೌನ್ ರಿಂಗ್ ರಸ್ತೆಯ ಆಸುಪಾಸಿನಲ್ಲಿ ಅಭಿವೃದ್ಧಿಪಡಿಸಲಿರುವ ಕ್ವಿನ್ ಸಿಟಿ (ಜ್ಞಾನ, ಆರೋಗ್ಯ ಮತ್ತು ಸಂಶೋಧನಾ ನಗರ) ಯೋಜನೆಯ ಮೊದಲನೆಯ ಹಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಚಾಲನೆ ನೀಡಿದರು.

ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವೆ ಕ್ವಿನ್ ಸಿಟಿ': ಮಹತ್ತ್ವಾಕಾಂಕ್ಷಿ ಯೋಜನೆಗೆ ಸಿಎಂ ಚಾಲನೆ

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಇದರ ಅಂಗವಾಗಿ ಸಮಾರಂಭ ಏರ್ಪಡಿಸಲಾಗಿತ್ತು. ಇದರಲ್ಲಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೇರಿದಂತೆ ಸಚಿವ ಸಂಪುಟದ ಹಲವು ಮಂತ್ರಿಗಳು ಮತ್ತು ಹಿರಿಯ ಜನಪ್ರತಿನಿಧಿಗಳು ಹಾಗೂ ಗಣ್ಯ ಉದ್ಯಮಿಗಳು ಉಪಸ್ಥಿತರಿದ್ದರು.

ಯೋಜನೆಗೆ ನಾಂದಿ ಹಾಡಿ ಮಾತನಾಡಿದ ಮುಖ್ಯಮಂತ್ರಿಗಳು, ಕರ್ನಾಟಕವು ದೇಶದ ಜ್ಞಾನಾಧಾರಿತ ಆರ್ಥಿಕತೆಯಲ್ಲಿ ಪ್ರಥಮ ಸ್ಥಾನದಲ್ಲಿದೆ.ಕ್ವಿನ್ ಸಿಟಿಯು ಕರ್ನಾಟಕ ಮತ್ತು ಭಾರತದ ಪಾಲಿಗೆ ಹೊಸ ಭಾಷ್ಯ ಬರೆಯಲಿದೆ. ಇಲ್ಲಿ ಜಾಗತಿಕ ಮಟ್ಟದ ಸಹಭಾಗಿತ್ವ ಮತ್ತು ನಾವೀನ್ಯತೆಗಳಿಗೆ ಆದ್ಯತೆ ಇರಲಿದ್ದು,ಸ್ಮಾರ್ಟ್ ಲಿವಿಂಗ್’ ಪರಿಕಲ್ಪನೆಗೆ ಒತ್ತು ಕೊಡಲಾಗುವುದು. ಇಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನಗಳನ್ನು ಗರಿಷ್ಠ ಪ್ರಮಾಣದಲ್ಲಿ ಬಳಸಿಕೊಂಡು, ಸುಸ್ಥಿರ ಬೆಳವಣಿಗೆ ಸಾಧಿಸಲಾಗುವುದು’ ಎಂದರು.

ದೊಡ್ಡಬಳ್ಳಾಪುರ- ದಾಬಸ್‌ಪೇಟೆ ನಡುವೆ ಕ್ವಿನ್ ಸಿಟಿ': ಮಹತ್ತ್ವಾಕಾಂಕ್ಷಿ ಯೋಜನೆಗೆ ಸಿಎಂ ಚಾಲನೆ

ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮಾತನಾಡಿ, `ಬೆಂಗಳೂರಿನ ಕೈಗಾರಿಕಾ ಬೆಳವಣಿಗೆಗೆ ಹೇರಳ ಅವಕಾಶಗಳಿದ್ದು, ಇದನ್ನು ಸಾಧಿಸಲು ಸರಕಾರ ಬದ್ಧವಾಗಿದೆ. ಎರಡು ವಾರಗಳಲ್ಲಿ ಕಾವೇರಿ 5ನೇ ಹಂತದ ಕುಡಿವ ನೀರು ಪೂರೈಕೆ ಆರಂಭವಾಗಲಿದ್ದು, 20 ವರ್ಷಗಳ ಕಾಲ ನೀರಿನ ಕೊರತೆ ಇರುವುದಿಲ್ಲ. ಹಾಗೆಯೇ, ಇಲ್ಲಿ ವಿದ್ಯುತ್ ತೊಂದರೆ ಕೂಡ ಇಲ್ಲ. ಸಂಚಾರ ವ್ಯವಸ್ಥೆಯಲ್ಲಿ ತುಸು ಸಮಸ್ಯೆ ಇರುವುದು ನಿಜ. ಅದನ್ನು ಕ್ಷಿಪ್ರಗತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುವುದು. ಇಲ್ಲಿರುವಷ್ಟು ಪ್ರತಿಭಾನ್ವಿತ ಮಾನವ ಸಂಪನ್ಮೂಲ ಕೈಗಾರಿಕೆಗಳಿಗೆ ಇನ್ನೆಲ್ಲೂ ಸಿಕ್ಕುವುದಿಲ್ಲ’ ಎಂದರು.

ಸಚಿವ ಎಂ ಬಿ ಪಾಟೀಲ ಮಾತನಾಡಿ, `ಒಟ್ಟು 5,800 ಎಕರೆಯಲ್ಲಿ ಕ್ವಿನ್ ಸಿಟಿಯನ್ನು ಅಭಿವೃದ್ಧಿ ಪಡಿಸುವ ಉದ್ದೇಶವಿದ್ದು, ಮೊದಲ ಹಂತದಲ್ಲಿ 2,000 ಎಕರೆಯಲ್ಲಿ ಇದನ್ನು ಸಾಕಾರಗೊಳಿಸಲಾಗುವುದು. 5 ಲಕ್ಷ ಜನವಸತಿಯ ಗುರಿಯುಳ್ಳ ವಿನೂತನ ನಗರದ ಪರಿಧಿಯಲ್ಲಿ ಶೇ 40ರಷ್ಟು ಜಾಗವನ್ನು ಉದ್ಯಾನಗಳಿಗೆ ಮೀಸಲಿಡಲಾಗಿದೆ. ಜೊತೆಗೆ 0.69 ಮೆಗಾವ್ಯಾಟ್ ಸಾಮರ್ಥ್ಯದ ಸೌರ ವಿದ್ಯುತ್ ಘಟಕಕ್ಕೆ 465 ಎಕರೆ, ವರ್ಷಕ್ಕೆ 7 ಸಾವಿರ ಟನ್ ಹಣ್ಣು-ತರಕಾರಿ ಬೆಳೆಯಲು 200 ಎಕರೆ, ಶೇಕಡ 50ರಿಂದ 70ರಷ್ಟು ಜಲ ಮರುಪೂರಣ ವ್ಯವಸ್ಥೆ ಇರಲಿದೆ’ ಎಂದರು.

ಉದ್ದೇಶಿತ ನಗರದಲ್ಲಿ ಮೊದಲಿಗೆ ಅತ್ಯುತ್ತಮ ಗುಣಮಟ್ಟದ ಶಾಲಾ ಕಾಲೇಜು ಮತ್ತು ವಿಶ್ವವಿದ್ಯಾಲಯಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಜತೆಗೆ ಜಗತ್ತಿನ ಅಗ್ರ 500 ವಿ.ವಿ.ಗಳು ತಮ್ಮ ಕ್ಯಾಂಪಸ್ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಉತ್ಕೃಷ್ಟ ದರ್ಜೆಯ ಆಸ್ಪತ್ರೆಗಳು, ವೈದ್ಯಕೀಯ ಸಂಶೋಧನಾ ಸಂಸ್ಥೆಗಳು ಮತ್ತು ವೈದ್ಯಕೀಯ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು. ಒಟ್ಟಿನಲ್ಲಿ 40 ಸಾವಿರ ಕೋಟಿ ರೂ. ಹೂಡಿಕೆಯ ಯೋಜನೆಯಿಂದ ಒಂದು ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಅವರು ಯೋಜನೆಯ ವೈಶಿಷ್ಟ್ಯಗಳನ್ನು ವಿವರಿಸಿದರು.

ಕ್ವಿನ್ ಸಿಟಿಯು ರಾಜ್ಯದ ಕೈಗಾರಿಕಾ ಬೆಳವಣಿಗೆಗೆ ಮತ್ತು ಶ್ರೇಷ್ಠತೆಗೆ ಮಾನದಂಡವಾಗಿ ಹೊರಹೊಮ್ಮಲಿದೆ. ಬೆಂಗಳೂರಿನಲ್ಲಿರುವ ವಿಜ್ಞಾನ, ತಂತ್ರಜ್ಞಾನ, ಸಂಶೋಧನೆ, ನವೋದ್ಯಮ, ವೈಮಾಂತರಿಕ್ಷ ಮತ್ತು ರಕ್ಷಣಾ ವಲಯಗಳ ಕಾರ್ಯ ಪರಿಸರವನ್ನು ಇದಕ್ಕೆ ಪೂರಕವಾಗಿ ಬಳಸಿಕೊಳ್ಳಲಾಗುವುದು. ಇಲ್ಲಿ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಳು ನಾಲ್ಕು ಪ್ರಮುಖ ವಲಯಗಳಾಗಿದ್ದು, ಮುಂಬರುವ ದಿನಗಳ ಸ್ಮಾರ್ಟ್ ಸಿಟಿಗಳಿಗೆ ಮೇಲ್ಪಂಕ್ತಿಯಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಸಚಿವರಾದ ಎಚ್ ಕೆ ಪಾಟೀಲ, ಪ್ರಿಯಾಂಕ್ ಖರ್ಗೆ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್, ಚೆಲುವರಾಯಸ್ವಾಮಿ, ಡಾ.ಎಂ ಸಿ ಸುಧಾಕರ್, ಲಕ್ಷ್ಮೀ ಹೆಬ್ಬಾಳ್ಕರ್, ಕೆ ಎನ್ ರಾಜಣ್ಣ, ಶರಣಬಸಪ್ಪ ದರ್ಶನಾಪುರ, ಮಂಕಾಳ ವೈದ್ಯ, ಬೋಸರಾಜು, ಶಿವಾನಂದ ಪಾಟೀಲ, ಮಧು ಬಂಗಾರಪ್ಪ, ರಹೀಂ ಖಾನ್ ಮತ್ತು ಆರ್ ಬಿ ತಿಮ್ಮಾಪುರ, ಹಿರಿಯ ಶಾಸಕ ಆರ್ ವಿ ದೇಶಪಾಂಡೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಉದ್ಯಮಿಗಳಾದ ಪ್ರಶಾಂತ್ ಪ್ರಕಾಶ್, ಗೀತಾಂಜಲಿ ಕಿರ್ಲೋಸ್ಕರ್, ರಂಗೇಶ್ ರಾಘವನ್, ವೈದ್ಯ ಡಾ.ವಿವೇಕ ಜವಳಿ ಉಪಸ್ಥಿತಿರಿದ್ದರು.

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಯೋಜನೆ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕೆಐಎಡಿಬಿ ಸಿಇಒ ಡಾ,ಮಹೇಶ್ ಉಪಸ್ಥಿತರಿದ್ದರು.
ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಸ್ವಾಗತಿಸಿದರು. ಕೆಐಎಡಿಬಿ ಸಿಇಒ ಡಾ.ಮಹೇಶ ವಂದಿಸಿದರು.

ರಾಜಕೀಯ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮೇ ಮೊದಲ ವಾರದಲ್ಲಿ ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ಹರೀಶ್ ಗೌಡ

ಮುಂದಿನ ತಿಂಗಳ (ಮೇ) ಮೊದಲ ವಾರದಲ್ಲಿ ಜೆಡಿಎಸ್ (JDS) ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿದ್ದಾರೆಂದು ಜೆಡಿಎಸ್ ಹಿರಿಯ ಮುಖಂಡ ಎಸ್.ಎಂ. ಹರೀಶ್ ಗೌಡ (S.M.

[ccc_my_favorite_select_button post_id="120975"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]