ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಸಿಎಂ ಅಭಯ

ಮೈಸೂರು: ಸಂವಿಧಾನದಿಂದ ಆಯ್ಕೆಯಾದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ. ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

ಅವರು ಇಂದು ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.

ರಾಷ್ಟ್ರಪತಿಗಳಾಗಲಿ ಅಥವಾ ರಾಜ್ಯಪಾಲರಾಗಲಿ ಸಂವಿಧಾನದ ಪ್ರಕಾರ ಕೆಲಸ ಮಾಡಲು ನಾಮಾಂಕಿತರಾಗಿದ್ದು, ಯಾವುದು ಚುನಾವಣೆಯ ಮೂಲಕ ಆಯ್ಕೆಯಾದವರಲ್ಲ. ಅವರು ಸಂವಿಧಾನದಲ್ಲಿ ಪ್ರಮುಖರು. ಆದರೆ ಜನಪ್ರತಿನಿಧಿಗಳು ಚುನಾವಣೆಯ ಮೂಲಕ ಆಯ್ಕೆಯಾಗಿ ಆಡಳಿತದಲ್ಲಿ ಪ್ರಮುಖರು. ಇಂತಹ ಪ್ರಮುಖ ವ್ಯತ್ಯಾಸವಿರುವಾಗ ಯಾವುದೇ ರಾಜ್ಯದ ರಾಜ್ಯಪಾಲರು ರಾಜ್ಯದ ಆಡಳಿತದಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ . ಈ ವಿಷಯದ ಕುರಿತು ರಾಷ್ಟ್ರಾದ್ಯಂತ ಚರ್ಚೆಯಾಗಬೇಕು ಎಂದರು.

ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲು: ಮುಡಾ ಪ್ರಕರಣದಲ್ಲಿ ಕಾನೂನು ಪ್ರಕಾರ ಹೋರಾಟ ಮಾಡಲಾಗುವುದು. ನನ್ನ ಮೇಲಿನ ಜನಬೆಂಬಲದಿಂದ ಬೆದರಿರುವ ಪ್ರತಿಪಕ್ಷಗಳು, ನನ್ನ ಮೇಲೆ ರಾಜಕೀಯ ಪ್ರೇರಿತ ಕೇಸ್ ಹಾಕಿರುವುದು ಇದೇ ಮೊದಲ ಬಾರಿ ಎಂದರು.

ಸರ್ಕಾರ ಮತ್ತು ರಾಜ್ಯಪಾಲರ ನಡುವಿನ ಸಂಘರ್ಷದಿಂದ ಸಂವಿಧಾನದ ಸಂಘರ್ಷ ಉಂಟಾಗುತ್ತಿದೆಯೇ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ನಮ್ಮ ಸರ್ಕಾರಕ್ಕೆ ಜನಬೆಂಬಲ ದೊರೆತಿದ್ದು, ಉತ್ತಮ ರೀತಿಯಲ್ಲಿ ಆಡಳಿತ ನಡೆಸುತ್ತಿದ್ದೇವೆ. ಈ ಐದು ವರ್ಷದ ಅವಧಿಯಲ್ಲಿ ರಾಜ್ಯವನ್ನು ಅಭಿವೃದ್ಧಿಗೊಳಿಸಬೇಕೆಂದು ಜನಾದೇಶವಿದೆ ಎಂದರು.

ಕೇಂದ್ರ ಸರ್ಕಾರದಿಂದ ಅಧಿಕಾರದ ದುರ್ಬಳಕೆ: ಕೇಂದ್ರದ ಇಡಿ ಮತ್ತು ಸಿಬಿಐ ಗಳು ದುರ್ಬಳಕೆಯಾಗುತ್ತಿದ್ದು, ಆಪರೇಷನ್ ಕಮಲದ ಭಾಗವಾಗಿರಬಹುದೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಇಡೀ ದೇಶದಲ್ಲಿ ಎಲ್ಲೆಲ್ಲಿ ವಿರೋಧಪಕ್ಷಗಳ ಸರ್ಕಾರವಿದೆಯೋ, ಅಲ್ಲಿ ಕೇಂದ್ರ ಸರ್ಕಾರ ಇಡಿ, ಸಿಬಿಐ ಹಾಗೂ ರಾಜಭವನದ ಕಚೇರಿಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದರು

ಪ್ರತಿಪಕ್ಷಗಳಿಂದ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ: ಬಿಜೆಪಿಯವರು ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕೆಂದು ಪ್ರತಿಭಟನೆ ಮಾಡುತ್ತಿರುವ ಬಗ್ಗೆ ಉತ್ತರಿಸಿ, ತಪ್ಪು ಮಾಡಿಲ್ಲವಾದ್ದರಿಂದ ರಾಜಿನಾಮೆ ನೀಡುವ ಅಗತ್ಯವಿಲ್ಲ. ಜಾಮೀನಿನ ಮೇಲಿರುವ ಕುಮಾರಸ್ವಾಮಿಯವರು ರಾಜಿನಾಮೆ ನೀಡಿದ್ದಾರೆಯೇ? ಎಂದು ಮರುಪ್ರಶ್ನಿಸಿ , ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನವನ್ನು ಪ್ರತಿಪಕ್ಷಗಳು ಮಾಡುತ್ತಿವೆ ಎಂದರು.

ಸರ್ಕಾರವನ್ನು ಟೀಕಿಸಲು ಬಿಜೆಪಿಗೆ ನೈತಿಕತೆ ಇಲ್ಲ: ಮೋದಿಯವರು ತಮ್ಮ ರಾಜಕೀಯ ಭಾಷಣದಲ್ಲಿ ಕರ್ನಾಟಕ ಹಾಗೂ ತೆಲಂಗಾಣ ಸರ್ಕಾರಗಳ ವಿರುದ್ಧ ದೂರುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಮೋದಿಯವರು ಗುಜರಾತಿನ ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ನಡೆದ ಗೋದ್ರಾ ಘಟನೆಗೆ ಸಂಬಂಧಪಟ್ಟಂತೆ ಮೋದಿಯವರು ರಾಜಿನಾಮೆ ನೀಡಿದ್ದಾರೆಯೇ? ನಮ್ಮ ಸರ್ಕಾರವನ್ನು ಟೀಕಿಸಲು ಬಿಜೆಪಿಯವರಿಗೆ ಯಾವ ನೈತಿಕತೆಯೂ ಇಲ್ಲ. ಆಪರೇಷನ್ ಕಮಲ ಮಾಡಿ , ಸರ್ಕಾರವನ್ನು ಅಸ್ಥಿರಗೊಳಿಸುವ ಅವರ ಪ್ರಯತ್ನ ವಿಫಲವಾಗಿದೆ ಎಂದರು.

ಸಂವಿಧಾನ ಹಾಗೂ ಕಾನೂನು ವಿರೋಧಿ ಕೆಲಸ ಮಾಡಿಲ್ಲ: ಕುಮಾರಸ್ವಾಮಿಯವರು ರಾಜ್ಯದಲ್ಲಿ ಲೋಕಾಯುಕ್ತ ಮರಳಿರುವ ಬಗ್ಗೆ ಟ್ವೀಟ್ ಮಾಡಿರುವ ಬಗ್ಗೆ ಉತ್ತರಿಸಿ, ಲೋಕಾಯುಕ್ತವನ್ನು ಮುಚ್ಚಲಾಗಿರಲಿಲ್ಲ. ಆನೇಕ ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲಿ ಎಸಿಬಿ ಅಸ್ತಿತ್ವದಲ್ಲಿದೆ. ಬಿಜೆಪಿಯವರಿಗೆ ಈ ಧೋರಣೆ ಏಕೆ? ಬಿಜೆಪಿಯಲ್ಲಿ ತಪ್ಪು ಮಾಡದಿರುವ , ಭ್ರಷ್ಟಾಚಾರ ಮಾಡದಿರುವ ಒಬ್ಬರೂ ಇಲ್ಲ. ನಾವು ಎಂದಿಗೂ ಸಂವಿಧಾನ ವಿರುದ್ಧವಾಗಿಯಾಗಲಿ, ಕಾನೂನು ವಿರುದ್ಧವಾಗಿ ಯಾವುದೇ ಕೆಲಸಗಳನ್ನು ಹಿಂದೆಯೂ ಮಾಡಿರುವುದಿಲ್ಲ, ಮುಂದೆಯೂ ಮಾಡುವುದಿಲ್ಲ ಎಂದರು.

ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ: ಅನಿಶ್ಚಿತ ರಾಜಕೀಯ ಬೆಳವಣಿಗೆಯಿಂದ ಗ್ಯಾರಂಟಿಗಳು ನಿಲ್ಲಬಹುದೆಂಬ ಆತಂಕ ಜನರಲ್ಲಿ ಮನೆಮಾಡಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಯಾವುದೇ ಕಾರಣಕ್ಕೂ ಬಡವರ ಕಾರ್ಯಕ್ರಮಗಳನ್ನು ನಿಲ್ಲಿಸುವುದಿಲ್ಲ. ಇಂದಿನ ಕಾರ್ಯಕ್ರಮಕ್ಕೆ ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸಿ ಮುಖ್ಯಮಂತ್ರಿಗಳ ಪರ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ.

136 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿದೆ. ಬಿಜೆಪಿಯವರು ಜನಾದೇಶ ಎಂದಿಗೂ ಪಡೆಯದೆ, ಕೇವಲ ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯನ್ನು ಜನರು ತಿರಸ್ಕರಿಸಿದ್ದಾರೆ ಎಂದರು.

ರಾಜಕೀಯ

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರ ಅನುಮತಿ ಕೊಟ್ಟರೆ ಮೇಕೆದಾಟು, ಯುಕೆಪಿ ಯೋಜನೆಗಳ ಜಾರಿ: ಡಿಸಿಎಂ ಡಿ.ಕೆ.

“ಕೇಂದ್ರ ಸರ್ಕಾರ ಅಗತ್ಯ ಅನುಮತಿ ನೀಡಿದರೆ ಕರ್ನಾಟಕ ಸರ್ಕಾರವು ಮೇಕೆದಾಟು ಹಾಗೂ ಕೃಷ್ಣಾ ಮೇಲ್ದಂಡೆ ಬಾಕಿ ಯೋಜನೆಗಳನ್ನು ಜಾರಿ ಮಾಡಲಿದೆ. ಕೇಂದ್ರ ಸರ್ಕಾರ ನಮಗೆ ಸಹಕಾರ ನೀಡುವ ಭರವಸೆ ಇದೆ” ಎಂದು ಡಿಸಿಎಂ ಡಿ.ಕೆ.

[ccc_my_favorite_select_button post_id="119395"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೆಳ್ಳಂಬೆಳಗ್ಗೆ ಭೀಕರ ಅಪಘಾತ.. 7 ಸಾವು

ಬೈಕ್, ಕಾರು ಹಾಗೂ ಕ್ಯಾಂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) 7 ಮಂದಿ ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಸೂಲಿಬೆಲೆ ಹೋಬಳಿ ಕಂಬ್ಳಿಪುರ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="119381"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!