ADGP ಚಂದ್ರಶೇಖರ್ ಒಬ್ಬ ಕ್ರಿಮಿನಲ್, ಬ್ಲ್ಯಾಕ್ ಮೇಲರ್; HD ಕುಮಾರಸ್ವಾಮಿ ಆಕ್ರೋಶ

ಬೆಂಗಳೂರು: ADGP ಚಂದ್ರಶೇಖರ್ ಒಬ್ಬ ಬ್ಲ್ಯಾಕ್ ಮೇಲರ್, ಕ್ರಿಮಿನಲ್ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಗುಡುಗಿದರು.

ಆತ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರವನ್ನು ಚೆನ್ನಾಗಿ ತಯಾರು ಮಾಡಿದ್ದಾರೆ. ಆ ಪತ್ರವನ್ನು ಯಾರು, ಎಲ್ಲಿ ತಯಾರು ಮಾಡಿಕೊಟ್ಟರು ಎನ್ನುವುದು ನನಗೂ ಚೆನ್ನಾಗಿ ಗೊತ್ತಿದೆ. ಉತ್ತರ ಕೊಡುವ ಜಾಗದಲ್ಲಿ, ಸಂದರ್ಭದಲ್ಲಿ ಇದಕ್ಕೆ ಉತ್ತರ ಕೊಡುತ್ತೇನೆ ಎಂದು ಅವರು ಹೇಳಿದರು.

ಅಧಿಕಾರಿ ತನ್ನ ಸಹೋದ್ಯೋಗಿಗಳಿಗೆ ಬರೆದಿರುವ ಪತ್ರದ ಬಗ್ಗೆ ಭಾನುವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಸಚಿವರು ಉತ್ತರಿಸಿದರು.

ಆತ ಹೇಳಿರುವಂತೆ ನಾನು ಪ್ರಕರಣದಲ್ಲಿ ಆರೋಪಿ ಇರಬಹುದು. ಆದರೆ, ಆತ ಅಧಿಕಾರಿ ಸೋಗಿನಲ್ಲಿರುವ ಕ್ರಿಮಿನಲ್. ಆತನ ವಿರುದ್ಧ ಸರಣಿ ಅಪರಾಧ ಕೃತ್ಯಗಳನ್ನು ಎಸಗಿರುವ ಆರೋಪಗಳಿವೆ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಲೋಕಾಯುಕ್ತರಿಗೆ ರಾಜ್ಯಪಾಲರು ಬರೆದ ಪತ್ರವು ಸರಕಾರಿ ಪ್ರಾಯೋಜಿತ ಒಂದು ನಿರ್ದಿಷ್ಟ ಸುದ್ದಿ ವಾಹಿನಿಗೆ ಸೋರಿಕೆ ಆಗಿತ್ತು. ಅದನ್ನು ಸೋರಿಕೆ ಮಾಡಿದ್ದು ಯಾರು ಎನ್ನುವುದು ಎಲ್ಲರಿಗೂ ಗೊತ್ತಿದೆ. ಆದರೆ, ಅದು ರಾಜಭವನದಿಂದಲೇ ಸೋರಿಕೆ ಆಗಿರಬೇಕೆಂದು ಕಥೆ ಕಟ್ಟಿ, ರಾಜಭವನ ಸಿಬ್ಬಂದಿಯನ್ನೇ ತನಿಖೆ ಮಾಡಬೇಕು, ಅನುಮತಿ ಕೊಡಿ ಎಂದು ಅಧಿಕಾರಿ ಚಂದ್ರಶೇಖರ್ ತನ್ನ ಉನ್ನತ ಅಧಿಕಾರಿಗೆ ಪತ್ರ ಬರೆದಿದ್ದರು. ಹೀಗಾಗಿ ಆ ಅಧಿಕಾರಿಯ ದರ್ಪ ಹಾಗೂ ಆತನ ಹಿನ್ನೆಲೆಯ ಬಗ್ಗೆ ನಾನು ದಾಖಲೆಗಳ ಸಮೇತ ಮಾತನಾಡಿದ್ದೇನೆ ಎಂದು ಸಚಿವರು ಹೇಳಿದರು.

ನನ್ನ ಪ್ರಶ್ನೆಗಳಿಗೆ ಅಧಿಕಾರಿ ಉತ್ತರಿಸಲಿ; ನಾನು ಕೇಳಿರುವ ಪ್ರಶ್ನೆಗಳಿಗೆ ಆತ ಉತ್ತರ ನೀಡಿಲ್ಲ. ಬದಲಿಗೆ ಕ್ರಿಮಿನಲ್ ಮನಃಸ್ಥಿತಿಯ ಕೊಳಕು ಭಾಷೆಯನ್ನು ಬಳಸಿ, ಒಬ್ಬ ಕೇಂದ್ರ ಸಚಿವರ ಬಗ್ಗೆ ಕೆಟ್ಟದ್ದಾಗಿ ಪತ್ರದಲ್ಲಿ ಪದ ಬಳಕೆ ಮಾಡಿದ್ದಾರೆ. ಇದಕ್ಕೆ ಏನು ಮಾಡಬೇಕು, ಎಲ್ಲಿ ಉತ್ತರ ಕೊಡಬೇಕು ಎನ್ನುವುದು ನನಗೆ ಗೊತ್ತಿದೆ ಎಂದು ಅವರು ಹೇಳಿದರು.

ನಾನು ದಾಖಲೆ, ವಿಷಯ ಇಲ್ಲದೆ ಮಾತನಾಡುವುದಿಲ್ಲ. ಅಧಿಕಾರಿ ಬರೆದಿರುವ ಪತ್ರವನ್ನು ಚೆನ್ನಾಗಿ ಸಿದ್ಧ ಮಾಡಿಕೊಟ್ಟಿದ್ದಾರೆ. ನಾನು ಶನಿವಾರ ಬೆಳಗ್ಗೆ ಮಾಧ್ಯಮಗೋಷ್ಠಿ ಮಾಡಿದ ಮೇಲೆ, ಸಂಜೆ ಆ ಅಧಿಕಾರಿ ಎಲ್ಲಿ ಹೋಗಿದ್ದ ಎನ್ನುವುದು ಗೊತ್ತಿದೆ. ಅವರ ಪತ್ರವನ್ನು ಅಲ್ಲಿ ಯಾವ ಕಾನೂನು ಪಂಡಿತರು ರೆಡಿ ಮಾಡಿಕೊಟ್ಟರು, ಅವರೊಂದಿಗೆ ಇನ್ನೊಬ್ಬರು ಯಾರಿದ್ದರು ಎನ್ನುವುದು ನನಗೆ ಗೊತ್ತಿದೆ ಎಂದು ಸಚಿವರು ಹೇಳಿದರು.

ನಾನು ದಾಖಲೆ ಇಟ್ಕೊಂಡೇ ನಿನ್ನೆ ಮಾತಾಡಿದ್ದೇನೆ. ಈತ ಆಂಧ್ರ ಪ್ರದೇಶ ಮೂಲದವನು, ಹಿಮಾಚಲ ಪ್ರದೇಶ ಕೇಡರ್ ಅಧಿಕಾರಿ 25 ವರ್ಷಗಳಿಂದ ಇಲ್ಲಿದ್ದಾರೆ. ಯಾರು ಯಾರನ್ನು ಹಿಡಿದು ಇಲ್ಲಿಗೆ ಬಂದಿದ್ದೀರಿ? ಆತ ಬಳಕೆ ಮಾಡಿರುವ ಭಾಷೆ ಆತನ ಸಂಸ್ಕೃತಿಯನ್ನು ತೋರಿಸುತ್ತದೆ.

ಯಾರು ಯಾರ ಜತೆ ಈತನ ಕ್ರಿಮಿನಲ್ ನಂಟಿದೆ ಎನ್ನುವುದನ್ನು ಶನಿವಾರವೇ ದಾಖಲೆ ಸಮೇತ ಹೇಳಿದ್ದೇನೆ. ಒಬ್ಬ ಕೇಂದ್ರ ಮಂತ್ರಿ ಬಗ್ಗೆ ಯಾವ ಭಾಷೆ ಬಳಸಿದ್ದಾನೆ ಎನ್ನುವುದು ಎಲ್ಲರಿಗೂ ಗೊತ್ತಾಗಿದೆ ಎಂದು ಸಚಿವರು ಹೇಳಿದರು.

ನಾನು ದೂರು ಕೊಟ್ಟಿದ್ದೀನಾ?; ಪತ್ರದಲ್ಲಿ ಸತ್ಯಮೆಯ ಜಯತೆ ಎಂದು ಆತ ಬರೆದಿದ್ದಾರೆ. ನಾನು ಹೋರಾಟ ಮಾಡುತ್ತಿರುವುದು ಕೂಡ ಅದೇ ಉದ್ದೇಶಕ್ಕೆ. ಶನಿವಾರ ಅಷ್ಟು ದಾಖಲೆಗಳ ಸಮೇತ ಈ ವ್ಯಕ್ತಿ ಬಗ್ಗೆ ಹೇಳಿದ್ದು ಕೂಡ ಸತ್ಯಮೇವ ಜಯತೇ ಕಾರಣಕ್ಕಾಗಿಯೇ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಪೊಲೀಸ್ ಠಾಣೆಗೆ ಈ ಅಧಿಕಾರಿ ವಿರುದ್ಧ ನಾನು ದೂರು ಕೊಟ್ಟಿದ್ದೀನಾ? ಅವರ ಕೈಕೆಳಗೆ ಕೆಲಸ ಮಾಡುವ ಇನ್ಸ್ಪೆಕ್ಟರ್ ಗೆ ರೂ.20 ಕೋಟಿ ಡಿಮ್ಯಾಂಡ್ ಇಟ್ಟು ಸಿಕ್ಕಿಬಿದ್ದಿದ್ದಾನೆ. ಆ ಇನ್ಸ್ಪೆಕ್ಟರ್ ಈ ಅಧಿಕಾರಿ ವಿರುದ್ಧ ದೂರು ನೀಡಿದ್ದಾರೆ. ತಕ್ಷಣ ₹2 ಕೋಟಿ ತಂದು ಕೊಡಬೇಕು ಎಂದು ಬ್ಲಾಕ್ ಮೇಲ್ ಮಾಡಿದ್ದು ಈತನೇ ಅಲ್ಲವೇ? FIR ಹಾಕಿದ ನಂತರ ಕೇಸ್ ಕೋರ್ಟ್ ಮುಂದೆ ಇದೆಯಲ್ಲ.. ಇದೇನಾ ಆತನ ಸತ್ಯಮೇವ ಜಯತೆ? ಎಂದು ಸಚಿವರು ಕಿಡಿಕಾರಿದರು.

ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ: ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪಟಾಲಂಗೆ ನನ್ನ ರಾಜೀನಾಮೆ ಕೇಳುವ ನೈತಿಕತೆ ಇಲ್ಲ. ಸಿದ್ದರಾಮಯ್ಯ ಮೆಚ್ಚಿಸಲು ನಾನು ರಾಜೀನಾಮೆ ಕೊಡಬೇಕಾ? ನಾನು ತಪ್ಪು ಮಾಡಿಲ್ಲ, ತಪ್ಪು ಮಾಡಿಲ್ಲ ಅಂದ್ಮೇಲೆ ರಾಜೀನಾಮೆ ಯಾಕೆ ಕೊಡಲಿ? ಸುಳ್ಳು ಹೇಳ್ತಿರೋದು ನಾನಲ್ಲ ಎಂದು ಟೀಕಾ ಪ್ರಹಾರ ನಡೆಸಿದರು.

ರಾಜಕೀಯ

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಾತ್ಯತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ (Manjunath K.V) ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ತನು, ಮನ, ಧನವನ್ನ ಅರ್ಪಿಸಿದ್ದ

[ccc_my_favorite_select_button post_id="119223"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!