ದೊಡ್ಡಬಳ್ಳಾಪುರಕ್ಕೆ ಬಂದಿದ್ದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ..!

ದೊಡ್ಡಬಳ್ಳಾಪುರ: ನಾಳೆ ಅಕ್ಟೋಬರ್ 2. ಭಾರತದ ಪಾಲಿನ ಮಹತ್ವದ ದಿನ. ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಜನ್ಮ ದಿನವಿದು. ಮಹಾತ್ಮ ಗಾಂಧೀಜಿ ಎನ್ನುವುದು ಭಾರತೀಯರ ಮನಸ್ಸಿನಲ್ಲಿ ಅಚ್ಚಳಿಯದೇ ಸದಾ ಶಾಶ್ವತವಾಗಿರುವ ಹೆಸರು.

ಇವರೊಂದು ಶಕ್ತಿ, ಬದುಕಿನ ಆದರ್ಶ. ಗಾಂಧೀಜಿ ತನ್ನ ಸತ್ಯ, ಅಹಿಂಸೆಯ ಸಿದ್ಧಾಂತದಿಂದಲೇ ಜಗವನ್ನು ಗೆದ್ದ ಚೇತನ. ಹೀಗಾಗಿ ವಿಶ್ವದಾದ್ಯಂತ ಈ ದಿನವನ್ನು ಆಚರಿಸಲಾಗುತ್ತದೆ. ಗಾಂಧೀಜಿ ಅವರ ಶಾಂತಿ ಮತ್ತು ಅಹಿಂಸಾ ತತ್ವವನ್ನು ಗೌರವಿಸುವ ಸಲುವಾಗಿ ಈ ದಿನವನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿಯೂ ಆಚರಣೆ ಮಾಡಲಾಗುತ್ತದೆ.

ಜಗತ್ತಿನ ಮೇರು ವ್ಯಕ್ತಿಗಳಲ್ಲಿ ಒಬ್ಬರಾದ ಮಹಾತ್ಮಗಾಂಧೀಜಿ ದೊಡ್ಡಬಳ್ಳಾಪುರಕ್ಕೆ ಬಂದಿದ್ದರು ಎಂದು ಹೇಳಿಕೊಳ್ಳುವುದೇ ಹೆಮ್ಮೆಯ ವಿಷಯ. ಅದೆಷ್ಟೋ ದೇಶ ಪ್ರೇಮಿಗಳಿಗೆ ಪ್ರೇರಣೆಯಾಗಿ ರುವ ಮಹಾತ್ಮ ಗಾಂಧೀಜಿಯವರ ಜನ್ಮ ದಿನಾಚರಣೆ ಸಂದರ್ಭದಲ್ಲಿ ಗಾಂಧೀಜಿ ದೊಡ್ಡಬಳ್ಳಾಪುರ ಹಾಗೂ ತಾಲೂಕಿನ ಸಮೀಪದ ನಂದಿ ಬೆಟ್ಟಕ್ಕೆ ಭೇಟಿ ನೀಡಿದ್ದ ಸಂದರ್ಭಗಳ ಕುರಿತು ಒಂದು ಮೆಲುಕು.

ದೊಡ್ಡಬಳ್ಳಾಪುರದಲ್ಲಿ ಗಾಂಧಿ: 1934ರ ಜನವರಿ 4 ರಂದು ದೊಡ್ಡ ಬಳ್ಳಾಪುರಕ್ಕೆ ಭೇಟಿ ನೀಡಿದ್ದ ಗಾಂಧಿಯನ್ನು ಕಂಡ ಹಿರಿಯರಿಗೆ ಏನೋ ಧನ್ಯತಾಭಾವ. ದೊಡ್ಡಬಳ್ಳಾಪುರಕ್ಕೆ ಗಾಂಧೀಜಿ ಭೇಟಿ ನೀಡಿದ್ದ ವೇಳೆ ಇಲ್ಲಿನ ಜನತೆಗೆ ದೇಶ ಪ್ರೇಮದ ಭಾಷಣ ಮಾಡಿದ್ದರು ಮಹಾತ್ಮ ಗಾಂಧಿ ಆಗ ದೊಡ್ಡಬಳ್ಳಾಪುದ ಜನಸಂಖ್ಯೆ ಬರೀ 25 ಸಾವಿರ. ಸಿದ್ದಲಿಂಗಯ್ಯ, ರುಮಾಲೆ ಭದ್ರಣ್ಣ, ಮುಗುವಾಳಪ್ಪ ಮೊದಲಾದವರು ಸ್ವಾತಂತ್ರ್ಯ ಹೋರಾಟಗಾರರಾಗಿ ರೂಪಗೊಳ್ಳಲು ಗಾಂಧೀಜಿ ಪ್ರೇರಣೆ.

ಗಾಂಧೀಜಿ ದೊಡ್ಡಬಳ್ಳಾಪುರಕ್ಕೆ ಬಂದ ಸಂದರ್ಭದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ಟಿ.ಸಿದ್ದಲಿಂಗಯ್ಯ, ರುಮಾಲೆ ಚನ್ನಬಸವಯ್ಯ, ರುಮಾಲೆ ಭದ್ರಣ್ಣ, ಎಚ್‌.ಮುಗುವಾಳಪ್ಪ, ನಾ.ನಂಜುಂಡಯ್ಯ ಮುಂತಾದವರೊಂದಿಗೆ ಊರಿನ ಜನ ಹೂ ಮಾಲೆ ಹಾಕಿ ಆತ್ಮೀಯ ಸ್ವಾಗತಕೋರಿದ್ದರು.

ಪುರಸಭೆ ವತಿಯಿಂದ ಗಾಂಧೀಜಿಗೆ ಭಿನ್ನವತ್ತಳೆ ನೀಡಿ ಸನ್ಮಾನಿಸಿ, ಹರಿಜನ ನಿಧಿಗಾಗಿ ಅಂದಿನ ಕಾಲದಲ್ಲಿಯೇ 500ರೂ. ಸಂಗ್ರಹಿಸಿ ನೀಡಲಾಗಿತ್ತು. ಅದನ್ನು ಸ್ವೀಕರಿಸಿದ ಗಾಂಧೀಜಿ ಸ್ಥಳೀಯರು ತೋರಿದ ಅಭಿಮಾನಕ್ಕೆ ವಂದಿಸಿದ್ದರು.

ಅಂದು ಗಾಂಧೀಜಿ ಉಪನ್ಯಾಸ ನೀಡಿದ ಸ್ಮರಣಾರ್ಥವಾಗಿ ಆ ಸ್ಥಳಕ್ಕೆ ಗಾಂಧಿನಗರ ಎಂದು ನಾಮಕರಣ ಮಾಡಲಾಗಿತ್ತು. ಅದೇ ಇಂದಿಗೂ ಹಳೇ ಬಸ್‌ ನಿಲ್ದಾಣ ಸಮೀಪದ ಪೇಟೆಗೆ ಗಾಂಧಿನಗರ ಅಂತಾ ಹೆಸರಿದೆ.

ಗಾಂಧೀಜಿ ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಿದ್ದಾಗ ರುಮಾಲೆ ಭದ್ರಣ್ಣ ಮತ್ತು ಸಂಗಡಿಗರು ರುಮಾಲೆ ಛತ್ರದಲ್ಲಿ ಖಾದಿ ಬಟ್ಟೆಗಳ ಪ್ರದರ್ಶನ ಏರ್ಪಡಿಸಿದ್ದರು. ಅಂದು ಸಾವಿರಾರು ಗಾಂಧಿ ಟೋಪಿಗಳು ಮಾರಾಟವಾಗಿದ್ದವು ಎನ್ನುವುದು ಗಮನಾರ್ಹ ಸಂಗತಿ.

1924ರಲ್ಲಿ ಬೆಳಗಾವಿಯಲ್ಲಿ ನಡೆದ 39ನೇ ಅಖೀಲ ಭಾರತ ಕಾಂಗ್ರೆಸ್‌ ಅಧಿವೇಶನಕ್ಕೆ ದೊಡ್ಡಬಳ್ಳಾಪುರದಿಂದಲೂ ಪ್ರತಿನಿಧಿಗಳು ಭಾಗವಹಿಸಿದ್ದರು.1930ರಲ್ಲಿ ನಡೆದದಂಡಿಉಪ್ಪಿನ ಸತ್ಯಾಗ್ರಹದಲ್ಲೂ ದೊಡ್ಡಬಳ್ಳಾಪುರದಿಂದ ರುಮಾಲೆ ಚನ್ನಬಸವಯ್ಯ, ಎಚ್‌.ಮುಗು ವಾಳಪ್ಪ ಭಾಗವಹಿಸಿದ್ದರು. ಇಲ್ಲಿಯೂ ದೇಶಿ ಉಪ್ಪನ್ನು ಮಾರಾಟ ಮಾಡಲಾಯಿತಲ್ಲದೆ, ವರ್ತಕರು ವಿದೇಶಿ ವಸ್ತುಗಳನ್ನು ಮಾರಾಟ ಮಾಡುವುದಿಲ್ಲವೆಂದು ಸಂಕಲ್ಪ ಮಾಡಿದ್ದರು.

ಇದನ್ನೂ ಓದಿ: ಮೈಸೂರು ದಸರಾ ಕ್ರೀಡಾಕೂಟದಲ್ಲಿ ದೊಡ್ಡಬಳ್ಳಾಪುರ ಅಥ್ಲೆಟಿಕ್ ಆಟಗಾರರು..!

ದೊಡ್ಡಬಳ್ಳಾಪುರ ತಾಲೂಕಿನ ಸಮೀಪವೇ ಇರುವ ನಂದಿ ಬೆಟ್ಟಕ್ಕೆ1927ರಲ್ಲಿ45 ದಿನ ಹಾಗೂ 1936ರಲ್ಲಿ3 ವಾರ ಗಾಂಧೀಜಿ ತಂಗಿದ್ದರು. ಗಾಂಧೀಜಿ ಅವರಿಗೆ ಅಪೊಪ್ಲಿಕ್ಸ್‌ (ಲಕ್ವಾ)ಗೆ ಸಂಬಂಧಿಸಿದ ಕಾಯಿಲೆ ಸಂಬಂಧ ಸಂಪೂರ್ಣ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಕುಟುಂಬ ವೈದರ ಸಲಹೆ ಮೇರೆಗೆ ನಂದಿ ಗಿರಿಧಾಮವೇ ಪ್ರಶಸ್ತ ಸ್ಥಳವೆಂದು ತೀರ್ಮಾನಿಸಿ ಇಲ್ಲಿಗೆ ಬಂದಿದ್ದರು.

ಗಿರಿಧಾಮದಲ್ಲಿ ಜನಸಂದಣಿ ಹೆಚ್ಚಾಗಿ ಗಾಂಧೀಜಿ ಅವರ ಆರೋಗ್ಯ ಕೈಕೊಟ್ಟಿದ್ದೂ ಉಂಟು. ಆದರೆ ವೈದ್ಯರ ಕಟ್ಟುನಿಟ್ಟಿನ ನಿಗಾದಿಂದ ಅವರು ಬಹುಬೇಗ ಚೇತರಿಸಿಕೊಂಡರು. 1936ರಲ್ಲಿ ಹಠಾತ್ತನೆ ರಕ್ತದೊತ್ತಡ ಅಧಿಕವಾಗಿ ನಂದಿಗಿರಿಧಾಮವೇ ಪ್ರಶಸ್ತ ಸ್ಥಳವೆಂದು ಮತ್ತೂಮ್ಮೆ ಇಲ್ಲಿಗೆ ಆಗಮಿಸಿದ್ದರು.

ಇದೇ ವೇಳೆ ಖ್ಯಾತ ವಿಜ್ಞಾನಿ ಭಾರತರತ್ನ ಸರ್‌ ಸಿ.ವಿ.ರಾಮನ್‌ಕೂಡ ಬೆಟ್ಟಕ್ಕೆ ಬಂದು ಮಹಾತ್ಮರೊಡನೆ ಕೆಲ ದಿನ ತಂಗಿದ್ದರು.

ಅಕ್ಟೋಬರ್ 2 ಎಂಬುದು ಬಾಪು ಅವರ ಚಿಂತನೆ, ಆದರ್ಶ, ಜೀವನ ಮೌಲ್ಯಗಳನ್ನು ಸ್ಮರಿಸುವ ಹಾಗೂ ಅದರಂತೆ ನಾವು ಕೂಡಾ ನಡೆಯುವ ಪಣ ತೊಡುವ ದಿನವಾಗಿದೆ.

ರಾಜಕೀಯ

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಬಾಶೆಟ್ಟಿಹಳ್ಳಿ ಪಟ್ಟಣಪಂಚಾಯಿತಿ ಚುನಾವಣೆ: ಮುರಿದುಬಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ..!

ಡಿ. 21 ರಂದು ನಡೆಯಲಿರುವ ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಗೆ (Bashettihalli Town Panchayat Election) ನಾಮಪತ್ರಗಳನ್ನು ಹಿಂಪಡೆಯಲು ಶುಕ್ರವಾರ ಕಡೆಯ ದಿನವಾಗಿದ್ದು, 10 ಅಭ್ಯರ್ಥಿಗಳು ನಾಮಪತ್ರಗಳನ್ನು ಹಿಂತೆಗೆದುಕೊಂಡಿದ್ದು, 64 ಅಭ್ಯರ್ಥಿಗಳು ಅಂತಿಮ

[ccc_my_favorite_select_button post_id="117290"]
ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ 2,84,881 ಹುದ್ದೆಗಳು ಖಾಲಿ: ನಿರುದ್ಯೋಗಿಗಳ ಅಳಲು ಕೇಳುವವರು ಯಾರು..?

ರಾಜ್ಯದಲ್ಲಿ ಸರ್ಕಾರದಲ್ಲಿ ವಿವಿಧ ಇಲಾಖೆಗಳೂ ಸೇರಿದಂತೆ ರಾಜ್ಯದಲ್ಲಿ ಬರೋಬ್ಬರಿ 2,84,881 ಹುದ್ದೆಗಳು ಖಾಲಿಯಿರುವ (Bacant Posts) ಮಾಹಿತಿ ಬಯಲಾಗಿದೆ.

[ccc_my_favorite_select_button post_id="117270"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ  ತೀರ್ಮಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಾವಳಿಗೆ ಅನುಮತಿ; ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ: ಡಿಸಿಎಂ

"ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡುವ ಬಗ್ಗೆ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ತೀರ್ಮಾನ ಮಾಡಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar) ತಿಳಿಸಿದರು.

[ccc_my_favorite_select_button post_id="117214"]
ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ ಆರೋಪ

ಕಾಲೇಜ್ ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆ..!: ಕುಟುಂಬಸ್ಥರಿಂದ ಕೊಲೆ

ಕಾಲೇಜ್ ಹಾಸ್ಟೆಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ವೈದ್ಯಕೀಯ ವಿದ್ಯಾರ್ಥಿ ಶವ ಪತ್ತೆಯಾಗಿರುವ (Student's body found hanging in college hostel) ಘಟನೆ *** ಜಿಲ್ಲೆ *** ಪಟ್ಟಣದಲ್ಲಿ ನಡೆದಿದೆ.

[ccc_my_favorite_select_button post_id="117263"]
ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ.. 3 ಮಂದಿ ದುರ್ಮರಣ

ಕಾರು ಮತ್ತು ಕೆಎಸ್ಆರ್ಟಿಸಿ ಬಸ್ ನಡುವೆ ಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ (Accident) ಮೂವರು ಸಾವನಪ್ಪಿರುವ ಘಟನೆ *** ಹೊರವಲಯದ *** ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="117239"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]