ಹಂದಿ ಪದ ಬಳಕೆ; ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಪ್ರತಿಭಟನೆ

ಬೆಂಗಳೂರು: ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಆರೋಪದ ಕುರಿತು ಕೆಳಹಂತದ ಅಧಿಕಾರಿಗಳಿ ಬರೆದ ಪತ್ರದಲ್ಲಿ, ಹಂದಿಗಳೊಂದಿಗೆ ಎಂದಿಗೂ ಕುಸ್ತಿಯಾಡಬೇಡಿ. ನೀವು ಕೊಳಕಾಗುತ್ತೀರಿ ಮತ್ತು ಹಂದಿಯು ಅದನ್ನು ಇಷ್ಟಪಡುತ್ತದೆ ಎಂಬ ಜಾರ್ಜ್ ಬರ್ನಾರ್ಡ್ ಷಾ ಅವರ ಸಂದೇಶ ಬಳಸಿದ್ದ ಐಪಿಎಸ್ ಅಧಿಕಾರಿ, ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಭಾರೀ ಪ್ರತಿಭನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

ಪಕ್ಷದ ರಾಜ್ಯ ಕಚೇರಿ ಮುಂಭಾಗದಲ್ಲಿ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ, ಓರ್ವ ಅಧಿಕಾರಿಯಾಗಿ ಚಂದ್ರಶೇಖರ್ ಅವರು ಕೇಂದ್ರ ಸಚಿವರ ಬಗ್ಗೆ ಬಳಕೆ ಮಾಡಿರುವ ಭಾಷೆ ಸರಿ ಇಲ್ಲ. ಅದಕ್ಕೆ ಕ್ಷಮೆ ಕೇಳಬೇಕು ಹಾಗೂ ಅವರ ಶಿಸ್ತು ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

ಇದನ್ನೂ ಓದಿ; ನಾನು ಯಾವುದೇ ಅಧಿಕಾರಿಯನ್ನು ವೈಯಕ್ತಿಕವಾಗಿ ಬಳಸಿಕೊಂಡಿಲ್ಲ; ಹೆಚ್.ಡಿ.ಕುಮಾರಸ್ವಾಮಿ

ಅವರ ಹೇಳಿಕೆಯಿಂದ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಅಸಂಖ್ಯಾತ ಜೆಡಿಎಸ್ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ನಾಯಕರ ವಿರುದ್ಧ ಅಧಿಕಾರಿಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಅವರು ಹೇಳಿದರು.

ಇದೇ ವೇಳೆ ಹಿರಿಯ ಶಾಸಕರಾದ ತಿಪ್ಪೇಸ್ವಾಮಿ, ಶರವಣ ಅವರು ಕೂಡಾ ಎಡಿಜಿಪಿ ಹೇಳಿಕೆಯನ್ನು ಉಗ್ರ ಶಬ್ದಗಳಲ್ಲಿ ಖಂಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಮುಖ್ಯರಸ್ತೆಯವರೆಗೂ ಮೆರವಣಿಗೆ ನಡೆಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು ಹಾಗೂ ಅಧಿಕಾರಿ ಕೂಡಲೇ ಕೇಂದ್ರ ಸಚಿವರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು.

ಒಂದು ವೇಳೆ ಕ್ಷಮೆ ಕೇಳದಿದ್ದರೆ ನಗರದ ಎಲ್ಲೆಡೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಮುಂದೆ ಆಗಬಹುದಾದ ಪರಿಣಾಮಗಳಿಗೆ ಸರಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ಕೊಟ್ಟರು.

ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ ತೂಪಲ್ಲಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಶೈಲಜಾ ರಾವ್, ಬೆಂಗಳೂರು ಮಹಾನಗರದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ತುಳಸೀ ರಾಮ್‌, ಪಾಲಿಕೆಯ ಮಾಜಿ ಸದಸ್ಯ ತಿಮ್ಮೇಗೌಡರು, ವಕ್ತಾರರುಗಳಾದ ದೇವರಾಜು, ಪೂರ್ಣಿಮ ಗೌಡ, ಬೆಂಗಳೂರು ಘಟಕದ ವಿವಿಧ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.

ರಾಜಕೀಯ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ ಲೇವಡಿ

BJP ಎಂಎಲ್‌ಎ ಲೋಕಾಗೆ ಲಾಕ್: ಬಿಜೆಪಿಯವರು ಬಹಳ ಪ್ರಾಮಾಣಿಕರಲ್ಲವೇ ಎಂದು ಸಿಎಂ, ಡಿಸಿಎಂ

ಆಡಳಿತಾರೂಢ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಕಮಿಷನ್ ಆರೋಪ ಮಾಡುತ್ತಿದ್ದ ಬಿಜೆಪಿ (BJP), ಅದರ ಶಾಸಕನೇ ಕಮಿಷನ್ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿರುವುದು ತೀವ್ರ ಮುಜುಗರಕ್ಕೆ ಎದುರಿಸುವಂತಾಗಿದೆ.

[ccc_my_favorite_select_button post_id="119653"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ರಾಹುಲ್‌ ಗಾಂಧಿಗೆ ಜೀವ ಬೆದರಿಕೆ; ಬಿಜೆಪಿ ಬೆಂಬಲಿಗನ ಬಂಧನ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಸೇರಿದಂತೆ ವಿರೋಧ ಪಕ್ಷಗಳ 25 ಸಂಸದರ ಮೇಲೆ ಗುಂಡು ಹಾರಿಸುವುದಾಗಿ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟು ಬೆದರಿಕೆ ಹಾಕಿದ ಆರೋಪದ ಮೇಲೆ ವ್ಯಕ್ತಿಯೋರ್ವನನ್ನು ರಾಜಸ್ಥಾನದ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="119595"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!