Vijay tata ವಿರುದ್ಧ ತನಿಖೆಗೆ SIT ರಚಿಸಿ; ರಮೇಶ್ ಗೌಡ ಆಗ್ರಹ

ಬೆಂಗಳೂರು: ವಿಜಯ್ ತಾತಾನಿಂದ (Vijay tata) ಅನೇಕರಿಗೆ ಮೋಸವಾಗಿದ್ದು, ಮೋಸ ಹೋದವರಿಗೆ ನ್ಯಾಯ ಕೊಡಿಸಲು ವಿಶೇಷ ತನಿಖಾ ತಂಡ (SIT) ರಚನೆ ಮಾಡಬೇಕು ಎಂದು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಮಾಜಿ ಶಾಸಕ ಹೆಚ್.ಎಂ.ರಮೇಶ್ ಗೌಡ (RameshGowda) ಆರೋಪ ಮಾಡಿದ್ದಾರೆ.

ಪಕ್ಷದ ಕಚೇರಿಯಲ್ಲಿ ಸಂಸದ ಮಲ್ಲೇಶ್ ಬಾಬು, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿಗೌಡ ಸೇರಿ ಪಕ್ಷದ ವಿವಿಧ ಮುಖಂಡರ ಜತೆ ಜಂಟಿ ಮಾಧ್ಯಮಗೋಷ್ಠಿ ನಡೆಸಿದ ಅವರು, ಅನೇಕರಿಗೆ ವಿಜಯ್ ತಾತಾ ಮೋಸ ಮಾಡಿದ್ದಾನೆ. ಆತನ ವಿರುದ್ಧ ನೂರಾರು ಪ್ರಕರಣಗಳು ದಾಖಲಾಗಿವೆ. ವಂಚನೆಯೇ ಆತನ ಪ್ರವೃತ್ತಿ ಆಗಿದ್ದು, ವಿಶೇಷ ತನಿಖೆ ನಡೆಯಬೇಕು ಎಂದು ಆಗ್ರಹಿಸಿದರು.

ಅಲ್ಲದೆ, ರಾಜ್ಯದ ಆಂತರಿಕ ಭದ್ರತಾ ವಿಭಾಗದಿಂದ ನನ್ನ ಫೋನ್ ಕದ್ದಾಲಿಕೆ ಆಗುತ್ತಿದೆ. ಪೊಲೀಸ್ ಆಯುಕ್ತರಿಗೆ ನಾನು ದೂರು ನೀಡುತ್ತೇನೆ. ಈ ಬಗ್ಗೆಯೂ ತನಿಖೆ ನಡೆಯಬೇಕು ಎಂದು ರಮೇಶ್ ಗೌಡ ಒತ್ತಾಯಿಸಿದರು.

ಪೊಲೀಸರ ಮೇಲೆ ಅನುಮಾನ

ಪೊಲೀಸ್ ಠಾಣೆಯಲ್ಲಿ ಸ್ವತಃ ವಿಜಯ್ ತಾತಾನೇ ನನಗೆ ಹೇಳಿದ್ದಾರೆ. ಕುಮಾರಸ್ವಾಮಿ ಮತ್ತು ನಿಮ್ಮ ಮೇಲೆ ಕೇಸು ದಾಖಲಿಸಲು ನನ್ನ ಮೇಲೆ‌ ಸಿಎಂ‌‌ ಕಚೇರಿ ಹಾಗೂ ಕೆಲ ಸಚಿವರ ಒತ್ತಡ ಇದೆ ಎಂದು ಹೇಳಿದ್ದಾನೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿನ ಸಿಸಿ ಕ್ಯಾಮೆರಾಗಳನ್ನು ಪರಿಶೀಲನೆ ಮಾಡಲಿ ಎಂದು ಅವರು ಒತ್ತಾಯಿಸಿದರು.

ಇದನ್ನೂ ಓದಿ; ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು..!

ಕುಮಾರಸ್ವಾಮಿ ಅವರು ಹಾಗೂ ನನ್ನ ಮೇಲೆ ವಿಜಯ್ ತಾತಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಇದಾದ ಮೇಲೆ ನಾನು ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ದೂರು ಕೊಡಲು ಹೋದಾಗ ವಿಜಯ್ ತಾತಾ ಆ ಠಾಣೆಯಲ್ಲಿಯೇ ಇದ್ದರು. ನಾನು ಆಗ ಇನ್ಸ್ಪೆಕ್ಟರ್ ಮುಂದೆಯೇ ಕೇಳಿದೆ, ಯಾಕೆ ಸುಳ್ಳು ದೂರು ಕೊಡುತ್ತೀಯಾ? ಇದು ಸರೀನಾ? ಎಂದು ಕೇಳಿದೆ. ಅದಕ್ಕೆ ವಿಜಯ್ ತಾತಾ, “ನನ್ನ ಮೇಲೆ ಒತ್ತಡ ಇದೆ” ಎಂದು ಹೇಳಿದ ಎಂದು ರಮೇಶ್ ಗೌಡ ಹೇಳಿದರು.

ವಿಜಯ್ ತಾತಾ (Vijay tata) ಮೇಲೆ ಕರ್ನಾಟಕದಲ್ಲಿ ಮಾತ್ರವಲ್ಲ, ನಾಗಪುರ, ಪುಣೆ ಮುಂಬಯಿಯಲ್ಲೂ ಪ್ರಕರಣಗಳು ದಾಖಲಾಗಿವೆ. ಇದಕ್ಕೆ ಸಂಬಂಧಪಟ್ಟ ಎಲ್ಲಾ ದಾಖಲೆಗಳು ನನ್ನ ಬಳಿ ಇವೆ. ನೂರಾರು ಎಫ್ಐಆರ್ ಗಳು ಆಗಿವೆ.

ಸಿಸಿ ಟಿವಿ ತೋರಿಸಲಿ

ನಾನು ಮನೆಗೆ ಹೋಗಿ ದೂರವಾಣಿ ಕರೆ ಮಾಡಿಕೊಟ್ಡಿದ್ದರೆ ಸಿಸಿ ಟಿವಿ ಇದೆಯಲ್ಲ ಅದನ್ನು ತೋರಿಸಲಿ ಎಂದು ಸವಾಲು ಹಾಕಿದ ರಮೇಶ್ ಗೌಡ (Ramesh Gowda), ದೂರವಾಣಿಯ ವಾಯ್ಸ್ ರೆಕಾರ್ಡ್ ತೆಗಿಸಲಿ. ವಿಜಯ್ ತಾತಾ ಹಲವು ಬಾರಿ ನನಗೆ ಕರೆ ಮಾಡಿದ್ದ, ಮೆಸೆಜ್ ಕಳಿಸಿದ್ದ ಎಂದು ಅವರು ಹೇಳಿದರು.

ವಿಜಯ್ ತಾತಾ (Vijay tata) ವಂಚನೆ ಮಾಡುತ್ತಲೇ ಬಂದ ವ್ಯಕ್ತಿ. 2006-07 ಹಾಗೂ 2008ರಲ್ಲಿ ಯೂರೋಪಿಯನ್ ಟೌನ್ ಶಿಪ್ ಮಾಡಿ ಲೇಔಟ್ ಮಾಡುತ್ತೇನೆ ಅಂತಾ ಹೇಳಿದ್ದರು. ಎರಡು ಹೆಲಿಕಾಪ್ಟರ್ ತರಿಸಿ ಪೂಜೆ ಮಾಡುತ್ತಾನೆ.

ಮೂವರಿಗೆ ಮಾರಾಟ

ಯಾವುದೇ ಲೇಔಟ್ ಗೆ ಜಮೀನು ಇಲ್ಲ ಎಂದು ಹೇಳುವ ಮೂಲಕ ಬಿಡಿಎ ಇವನ ಬಣ್ಣ ಬಯಲು ಮಾಡಿತ್ತು. ದೇವನಹಳ್ಳಿ ಬಳಿ ಅಪಾರ್ಟ್ಮ ಮೆಂಟ್ ಕಟ್ಟುತ್ತೇನೆ, ಮನೆ ತೆಗೆದುಕೊಂಡರೆ ಬೆನ್ಜ್ ಕಾರು ಕೊಡುತ್ತೇನೆ ಎಂದು ಜಾಹೀರಾತು ನೀಡಿದ್ದ. ಒಂದು ಜಮೀನನ್ನು ಮೂವರಿಗೆ ಮಾರಾಟ ಮಾಡಿದ್ದಾನೆ. ಸೋಫಾ ಶೋರೂಮ್ ತೆಗೆದು ಹಲವು ಜನರಿಗೆ ಮೋಸ ಮಾಡಿದ್ದಾನೆ ಎಂದು ಅವರು ಆರೋಪ ಮಾಡಿದರು.

ನಾನು ದೂರು ಕೊಟ್ಟರೆ ಎಫ್ಐಆರ್ ಆಗಲ್ಲ. ಆತ ದೂರು ಕೊಟ್ಟರೆ ಆಗುತ್ತದೆ. ಪೊಲೀಸ್ ಠಾಣೆ ಮುಂದೆ ಧರಣಿ ಕೂರುತ್ತೇನೆ. ನಾಳೆಯಿಂದ ಎಲ್ಲಾ ಸಚಿವರ ಮೇಲೆ ದೂರು ಕೊಟ್ಟರೆ ಎಫ್ಐಆರ್ ಸಚಿವರುಗಳ ಹಾಕುತ್ತಾರಾ? ಧರ್ಮಸ್ಥಳದ ಮಂಜುನಾಥ ಸ್ವಾಮಿ, ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡುತ್ತೇನೆ.

ನಾನು ವಿಜಯ್ ತಾತಾ (Vijay tata) ಬಳಿ ಯಾವುದೇ ಹಣ ಕೇಳಿಲ್ಲ. ನವರಾತ್ರಿ ನಡೆಯುತ್ತಿದೆ, ಪ್ರಮಾಣ ಮಾಡುತ್ತೇನೆ. ಯಾವುದೇ ಮನೆ ಹಾಳು ಕೆಲಸ ಮಾಡಿಲ್ಲ. ಇದೇ ವಿಜಯ್ ತಾತಾ ಹಲವು ಬಾರಿ ನನಗೆ ಕರೆ ಮಾಡಿದ್ದಾನೆ. ನನ್ನ ಪೋನ್, ಆತನ ಅವರ ಪೋನ್ ಸೀಜ್ ಮಾಡಲಿ ಎಂದು ಅವರು ಸವಾಲು ಹಾಕಿದರು.

ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ

ವಿಜಯ್ ತಾತಾ ವಿರುದ್ಧ ನಾನು ದೂರು ಕೊಟ್ಟಿದ್ದರೂ ಎಫ್ಐಆರ್ ಮಾಡದಿರುವ ಪೊಲೀಸರ ಕ್ರಮ ಖಂಡಿಸಿ ರಮೇಶ್ ಗೌಡ (Ramesh Gowda) ಮತ್ತಿತರೆ ಮುಖಂಡರು ನಗರ ಪೊಲೀಸ್ ಆಯುಕ್ತರ ಕಚೇರಿ ಎದುರು ಧರಣಿ ನಡೆಸಿದರು.

ಪೊಲೀಸ್ ಇಲಾಖೆ ಸಹಜ ನ್ಯಾಯ ಪಾಲನೆ ಮಾಡುತ್ತಿಲ್ಲ. ಒತ್ತಡಕ್ಕೆ ಮಣಿದು ಕೆಲಸ ಮಾಡುತ್ತಿದೆ ಎಂದು ಅವರು ಆರೋಪ ಮಾಡಿದರು.

ರಾಜಕೀಯ

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪ.ಪಂ. ಚುನಾವಣೆ ಶಾಂತಿಯುತ.. ಬಿ.ಸಿ. ಆನಂದ್ ಕುಮಾರ್ ಹಿಡಿತ.. ಬಿಜೆಪಿಗೆ ತಳಮಳ.!?

ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ (Bashettihalli town panchayat election) ರಚನೆಯಾದ ನಂತರ ಇದೇ ಪ್ರಥಮ ಬಾರಿಗೆ ಇಂದು ನಡೆದ ಮತದಾನದಲ್ಲಿ, ಸಣ್ಣ ಪುಟ್ಟ ಮಾತಿನ ಚಕಮಕಿಗಳ ಹೊರತುಪಡಿಸಿ ಚುನಾವಣೆ ಶಾಂತಿಯುತವಾಗಿ ಮುಕ್ತಾಯವಾಗಿದ್ದು, ಶೇ.81.34 ರಷ್ಟು

[ccc_my_favorite_select_button post_id="117650"]
ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ಕಲಾವಿದರಾದ ಉಮೇಶ್, ರಾಮಚಂದ್ರಯ್ಯ ಅವರಿಗೆ ದೊಡ್ಡಬಳ್ಳಾಪುರದಲ್ಲಿ ನುಡಿನಮನ

ದೊಡ್ಡಬಳ್ಳಾಪುರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಜಾಗೃತ ಪರಿಷತ್ತು ವತಿಯಿಂದ ಚಲನಚಿತ್ರ ಹಾಸ್ಯ ನಟ ಉಮೇಶ್ (Umesh) ಮತ್ತು ಜಾನಪದ ಕಲಾವಿದ ಶ್ಯಾಕಲದೇವನಪುರ ರಾಮಚಂದ್ರಯ್ಯ (Ramachandraiah) ಅವರಿಗೆ ನುಡಿನಮನ ಕಾರ್ಯಕ್ರಮ ನಡೆಯಿತು. 

[ccc_my_favorite_select_button post_id="117539"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ದೊಡ್ಡಬಳ್ಳಾಪುರದ ಎಂ.ಆ‌ರ್.ಜಾಹ್ನವಿಗೆ ಬಾಲ ವಿಕಾಸ ಅಕಾಡೆಮಿ ಪ್ರಶಸ್ತಿ

ಇಲ್ಲಿನ ನಿಸರ್ಗ ಯೋಗ ಕೇಂದ್ರದ ಯೋಗಪಟು ಎಂ. ಆರ್. ಜಾಹ್ನವಿ (M.R. Jahnavi) ಅವರಿಗೆ ಧಾರವಾಡದ ಕರ್ನಾಟಕ ಬಾಲ ವಿಕಾಸ ಅಕಾಡೆಮಿ ವತಿಯಿಂದ 2023-24ನೇ ಸಾಲಿಗೆ ನೀಡಲಾಗುವ ಅಕಾಡೆಮಿ ಬಾಲ ಗೌರವ ಪ್ರಶಸ್ತಿ ಬಾಲ

[ccc_my_favorite_select_button post_id="117462"]
ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ದೊಡ್ಡಬಳ್ಳಾಪುರ: ನೀರಿಲ್ಲದ ಪಾಳು ಬಾವಿಗೆ ಬಿದ್ದು ವ್ಯಕ್ತಿ ಸಾವು..!

ಸುಮಾರು 40 ಅಡಿ ಆಳದ ಪಾಳು ಬಾವಿಗೆ (Water well) ಬಿದ್ದು ವ್ಯಕ್ತಿಯೋರ್ವ ಸಾವನಪ್ಪಿರುವ ಘಟನೆ ತಾಲೂಕಿನ ಪುಟ್ಟಯ್ಯನ ಅಗ್ರಹಾರದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ್ದು, ಶನಿವಾರ ಬೆಳಕಿಗೆ ಬಂದಿದೆ.

[ccc_my_favorite_select_button post_id="117569"]
ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ದೊಡ್ಡಬಳ್ಳಾಪುರ; ಕಂಟೇನರ್‌ಗೆ ಡಿಕ್ಕಿ.. ಬೈಕ್ ಸವಾರ ಸಾವು..

ಕಂಟೇನರ್ (container) ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ತಿರುವ ಪಡೆದ ವೇಳೆ ಎದುರು ರಸ್ತೆಯಲ್ಲಿ ಬರುತ್ತಿದ್ದ ದ್ವಿಚಕ್ರ ವಾಹನ‌ ಡಿಕ್ಕಿ ಹೊಡೆದ ಪರಿಣಾಮ (Accident) ಬೈಕ್ (Bike) ಸವಾರ ಸಾವನಪ್ಪಿರುವ ಘಟನೆ ಕನ್ನಮಂಗಲ ಗೇಟ್ ಬಳಿ

[ccc_my_favorite_select_button post_id="117565"]

ಆರೋಗ್ಯ

ಸಿನಿಮಾ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video ನೋಡಿ

‘ದಿ ಡೆವಿಲ್’ ರಿಲೀಸ್; ದೊಡ್ಡಬಳ್ಳಾಪುರದಲ್ಲಿ ಮುಗಿಲು ಮುಟ್ಟಿದ ದರ್ಶನ್ ಅಭಿಮಾನಿಗಳ ಸಂಭ್ರಮ.!| Video

ಅಭಿಮಾನಿಗಳ ದಾಸ, ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ (Darshan) ಅಭಿನಯದ ಬಹುನಿರೀಕ್ಷಿತ ಚಿತ್ರ 'ದಿ ಡೆವಿಲ್' ಇಂದು (ಡಿ.11) ರಾಜ್ಯಾದ್ಯಂತ ಅದ್ಧೂರಿಯಾಗಿ ರಿಲೀಸ್ ಆಗಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ.

[ccc_my_favorite_select_button post_id="117242"]
error: Content is protected !!