Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ದೊಡ್ಡಬಳ್ಳಾಪುರ: ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗು ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು Doddaballapura ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ತಿಳಿಸಿದರು.

Doddaballapura ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿರುವ ಆಯೋಜಿಸಿದ್ದ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ ಹಾಗೂ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ 141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ “ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳನ್ನು ಸಿಂಪರಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪರಣೆ ಮಾಡುವುದು ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿಗಳಾದ ಡಾ.ವೆಂಕಟೇಗೌಡ ಜೆ ಮಾತನಾಡಿ, ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ. ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪರಣೆಯು ಯೋಗ್ಯ ಮಾರ್ಗವಾಗಿದೆ. ನ್ಯಾನೋ ಯೂರಿಯಾದ ಸೂಕ್ಷ್ಮ ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪರಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಇಫ್ಕೋ ಸಂಸ್ಥೆಯ ಚೇತನ್ ಮಾತನಾಡಿ, ನ್ಯಾನೋ ಯೂರಿಯಾ ಬಳಕೆಗೆ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

ಅಂತಿಮವಾಗಿ Doddaballapura ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದ ರೈತ ಸದಾಶಿವಮೂರ್ತಿ ಅವರ ಜಮೀನಿನಲ್ಲಿ ಬೆಳೆಯಲಾಗುತ್ತಿರುವ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ವನ್ನು ಸಿಂಪರಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿತೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೊನ್ನಘಟ್ಟ ಗ್ರಾಮ ಪಂಚಾತಿಯ ಅಧ್ಯಕ್ಷೆ ಮಂಗಳ, ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರು, ಗ್ರಾಮದ ರೈತರು,ರೈತ ಮಹಿಳೆಯರು, ಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳು ಭಾಗವಸಿದ್ದರು.

ರಾಜಕೀಯ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ; ಹೆಚ್.ಡಿ. ಕುಮಾರಸ್ವಾಮಿ

ಮುಂದಿನ ಮುಖ್ಯಮಂತ್ರಿ ಕುಮಾರಸ್ವಾಮಿ ಎಂದು ಅಥವಾ ಕುಮಾರಣ್ಣ ಮುಖ್ಯಮಂತ್ರಿಯಾಗಲಿ ಎಂದು ನೀವು ಕೂಗುವ ಸಮಯ ಇದಲ್ಲ. ಅಂಬೇಡ್ಕರ್ ಅವರ ಜಯಂತಿ ದಿನ ನನ್ನ ಬಗ್ಗೆ ಘೋಷಣೆಗಳನ್ನು ಕೂಗುವುದು ಬೇಡ: ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy)

[ccc_my_favorite_select_button post_id="120957"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ಟ್ಯಾಂಕರ್ ಉರುಳಿ BMW ಕಾರು ಅಪ್ಪಚ್ಚಿ.. ವಕೀಲ ದುರ್ಮರಣ

ರಸ್ತೆಯಲ್ಲಿ ಟ್ಯಾಂಕರ್ ಬ್ರೇಕ್ ವಿಫಲವಾಗಿದ್ದರಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಪಕ್ಕದಲ್ಲೇ ಸಾಗುತ್ತಿದ್ದ ಬಿಎಂಡಬ್ಲ್ಯು ಕಾರಿನ (BMW Car) ಮೇಲೆ ಮಗುಚಿ ಬಿದ್ದಿದೆ.

[ccc_my_favorite_select_button post_id="120918"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]