Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ದೊಡ್ಡಬಳ್ಳಾಪುರ: ಆಧುನಿಕ ಕೃಷಿಯಲ್ಲಿ ಡ್ರೋನ್ ತಂತ್ರಜ್ಞಾನವನ್ನು ಬಳಸಿ ಕೀಟನಾಶಕಗಳು ಮತ್ತು ಬೆಳೆ ಪೋಷಕಾಂಶಗಳನ್ನು ಪರಿಣಾಮಕಾರಿಯಾಗಿ ಹಾಗು ನಿಖರವಾಗಿ ಸಿಂಪಡಿಸುವಿಕೆಯ ಮೂಲಕ ಉತ್ಪಾದನೆಯನ್ನು ಹೆಚ್ಚಿಸಬಹುದು ಎಂದು Doddaballapura ಸಹಾಯಕ ಕೃಷಿ ನಿರ್ದೇಶಕ ರಾಘವೇಂದ್ರ ತಿಳಿಸಿದರು.

Doddaballapura ತಾಲ್ಲೂಕಿನ ಕಸಬಾ ಹೋಬಳಿಯ ಸೊಣ್ಣಪ್ಪನಹಳ್ಳಿ ಗ್ರಾಮದಲ್ಲಿರುವ ಆಯೋಜಿಸಿದ್ದ ಕೃಷಿ ಇಲಾಖೆ ವತಿಯಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆ ಹಾಗೂ ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ತರಬೇತಿ ಮತ್ತು ಪ್ರಾತ್ಯಕ್ಷಿತೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

Doddaballapura; ಕೃಷಿಯಲ್ಲಿ ಡ್ರೋನ್ ಬಳಕೆ ಕುರಿತು ಪ್ರಾತ್ಯಕ್ಷಿಕೆ..

ಪ್ರಸ್ತುತ ನಮ್ಮ ದೇಶದ ಜನಸಂಖ್ಯೆ 141 ಕೋಟಿಗಳಿದ್ದು, ಏರುತ್ತಿರುವ ಜನಸಂಖ್ಯೆಗೆ ಆಹಾರ ಒದಗಿಸುವ ಉದ್ದೇಶದಿಂದ ರಾಷ್ಟ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತಾ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಆಹಾರ ಬೆಳೆಗಳ “ವಿಸ್ತೀರ್ಣ, ಉತ್ಪಾದನೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವುದು ಈ ಯೋಜನೆಯ ಮುಖ್ಯ ಗುರಿಯಾಗಿದೆ.

ಪ್ರಸ್ತುತ ದಿನಗಳಲ್ಲಿ ಕೃಷಿ ಕಾರ್ಮಿಕರ ಕೊರತೆ ಅತಿ ದೊಡ್ಡ ಸಮಸ್ಯೆಯಾಗಿದೆ. ಸಸ್ಯ ಪೋಷಕಾಂಶಗಳನ್ನು ಸಿಂಪರಣೆ ಮಾಡಲು ಅಧಿಕ ಸಮಯ ಮತ್ತು ಹಣ ವ್ಯಯವಾಗುತ್ತಿದೆ. ಇದಕ್ಕೆ ಪರಿಹಾರವಾಗಿ ಕೃಷಿ ಡ್ರೋನ್ ಬಳಸಿ ಸಿಂಪರಣೆ ಮಾಡುವುದು ಒಳ್ಳೆಯ ಮಾರ್ಗವಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Darshan ಪರ ಸಿವಿ ನಾಗೇಶ್ ಅವರ ಪ್ರಬಲ ವಾದಕ್ಕೆ ಕೆಲ ಖಾಸಗಿ ಸುದ್ದಿ ವಾಹಿನಿಗಳು ಶಾಕ್..!

ಹಾಡೋನಹಳ್ಳಿಯ ಕೃಷಿ ವಿಜ್ಞಾನ ಕೇಂದ್ರ, ವಿಜ್ಞಾನಿಗಳಾದ ಡಾ.ವೆಂಕಟೇಗೌಡ ಜೆ ಮಾತನಾಡಿ, ಯೂರಿಯಾವನ್ನು ಮೇಲುಗೊಬ್ಬರವಾಗಿ ಬೆಳೆಗಳಿಗೆ ಎರಚುವುದು ಪ್ರಸ್ತುತ ಚಾಲ್ತಿಯಲ್ಲಿರುವ ವಿಧಾನವಾಗಿದೆ. ಈ ವಿಧಾನದಿಂದ ಯೂರಿಯಾ ಹರಳುಗಳು ಸಸ್ಯಗಳ ಬೇರುಗಳಿಗೆ ಸೂಕ್ತವಾಗಿ ದೊರೆಯುವುದಿಲ್ಲ. ವಾತವಾರಣದಲ್ಲಿ ತಾಪಮಾನ ಹೆಚ್ಚಾದಂತೆ ಯೂರಿಯಾದಲ್ಲಿನ ಪೋಷಕಾಂಶವು ಆವಿಯಾಗಬಹುದು. ಹೆಚ್ಚಿನ ಮಳೆಂದ ಕೊಚ್ಚಿ ಹೋಗುವ ಸಾಧ್ಯತೆ ಇರುತ್ತದೆ.

ಈ ಸಮಸ್ಯೆಗಳಿಗೆ ಪರಿಹಾರವಾಗಿ ನ್ಯಾನೋ ಯೂರಿಯ ಸಿಂಪರಣೆಯು ಯೋಗ್ಯ ಮಾರ್ಗವಾಗಿದೆ. ನ್ಯಾನೋ ಯೂರಿಯಾದ ಸೂಕ್ಷ್ಮ ಕಣಗಳು ಹೆಚ್ಚಿನ ಸುತ್ತಳತೆ ಹೊಂದಿದ್ದು, ಎಲೆಗಳ ಮೇಲೆ ಸಿಂಪರಣೆ ಮಾಡಿದಾಗ ಶೀರ್ಘವಾಗಿ ಎಲೆಗಳಲ್ಲಿನ ಸೂಕ್ಷ್ಮ ರಂಧ್ರಗಳಾದ ಸ್ಟೋಮ್ಯಾಟ ಮೂಲಕ ಸಸ್ಯದ ಶರೀರದೊಳಗೆ ಸೇರಿ ಪೋಷಕಾಂಶಗಳು ನ್ಯಾಯೋಚಿತವಾಗಿ ಸಸ್ಯದ ಬೆಳವಣಿಗೆಗೆ ದೊರೆಯುವಂತೆ ಮಾಡುತ್ತವೆ. ರೈತರು ಈ ತಂತ್ರಜ್ಞಾನವನ್ನು ಬಳಸಿಕೊಂಡು ಆಹಾರ ಧಾನ್ಯಗಳ ಉತ್ಪಾದನೆಯನ್ನು ಹೆಚ್ಚಿಸಿಕೊಳ್ಳುವಂತೆ ತಿಳಿಸಿದರು.

ಇಫ್ಕೋ ಸಂಸ್ಥೆಯ ಚೇತನ್ ಮಾತನಾಡಿ, ನ್ಯಾನೋ ಯೂರಿಯಾ ಬಳಕೆಗೆ ರೈತರ ಖರ್ಚು ಕಡಿಮೆಯಾಗುವುದಲ್ಲದೇ ರೈತರು ಹೆಚ್ಚಿನ ಆದಾಯ ಪಡೆಯಬಹುದು. ನ್ಯಾನೋ ಯೂರಿಯಾ ಮತ್ತು ನ್ಯಾನೋ ಡಿಎಪಿಯನ್ನು ಡ್ರೋನ್ ಮೂಲಕ ಸಿಂಪರಣೆ ಮಾಡುವುದರ ಮೂಲಕ ರೈತರು ಕೃಷಿ ಕಾರ್ಮಿಕರ ಕೊರತೆ ನೀಗಿಸಬಹುದೆಂದು ತಿಳಿಸಿದರು.

ಅಂತಿಮವಾಗಿ Doddaballapura ತಾಲೂಕಿನ ಸೊಣ್ಣೇನಹಳ್ಳಿ ಗ್ರಾಮದ ರೈತ ಸದಾಶಿವಮೂರ್ತಿ ಅವರ ಜಮೀನಿನಲ್ಲಿ ಬೆಳೆಯಲಾಗುತ್ತಿರುವ ರಾಗಿ ಬೆಳೆಗೆ ಡ್ರೋನ್ ಬಳಸಿ ನ್ಯಾನೋ ಯೂರಿಯಾ ವನ್ನು ಸಿಂಪರಣೆ ಮಾಡುವ ವಿಧಾನವನ್ನು ಪ್ರಾತ್ಯಕ್ಷಿತೆ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಕೊನ್ನಘಟ್ಟ ಗ್ರಾಮ ಪಂಚಾತಿಯ ಅಧ್ಯಕ್ಷೆ ಮಂಗಳ, ಸದಸ್ಯ ಪ್ರಭಾಕರ್, ಇಪ್ಕೋ ಸಂಸ್ಥೆಯ ಪ್ರತಿನಿಧಿಗಳು, ಪ್ರಗತಿ ಪರ ರೈತರು, ಗ್ರಾಮದ ರೈತರು,ರೈತ ಮಹಿಳೆಯರು, ಕೃಷಿ ಅಧಿಕಾರಿಗಳು ಹಾಗೂ ಆತ್ಮ ಸಿಬ್ಬಂದಿಗಳು ಭಾಗವಸಿದ್ದರು.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!