ಚನ್ನಪಟ್ಟಣ ಚುನಾವಣೆ ಘೋಷಣೆಗೆ ಮುನ್ನವೇ ದಳಪತಿಗಳ ಮತಬೇಟೆ ಜೋರು

ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಜಯ ಸಾಧಿಸಿ ಕೇಂದ್ರ ಸಚಿವರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಅವರ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ದಿನಾಂಕ ಘೋಷಣೆಯಾಗದೆ ಉಳಿದಿದ್ದರು, ಕಮಲ-ದಳ ಮೈತ್ರಿ ಅಭ್ಯರ್ಥಿ ಅಂತಿಮವಾಗದೇ ಇದ್ದರೂ, ದಳಪತಿಗಳ ಮತ ಬೇಟೆ ಮಾತ್ರ ಜೋರಾಗಿದೆ.

ಬಿಜೆಪಿಯ ಸೈನಿಕ ಯೋಗೇಶ್ವರ್ ನಾನೇ ಅಭ್ಯರ್ಥಿ ಎನ್ನುತ್ತ ಒಂದೆಡೆ ಇದ್ದರೆ, ಕಮಲ-ದಳ ಮೈತ್ರಿ ಅಭ್ಯರ್ಥಿ ಇಂತವರೇ ಎನ್ನದಿದ್ದರು.. ನಿಖಿಲ್ ಕುಮಾರಸ್ವಾಮಿ ಅವರ ಸರಣಿ ಕ್ಷೇತ್ರ ಭೇಟಿ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿದೆ.

ಇದಕ್ಕೆ ಪೂರಕವೆಂಬಂತೆ ಇಂದು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಕೋಡಂಬಳ್ಳಿ, ಅಕ್ಕೂರು, ಮಳೂರು, ಬೇವೂರು ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಮುಖಂಡರುಗಳು ಹಾಗೂ ಕಾರ್ಯಕರ್ತರುಗಳ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷರಾದನಿಖಿಲ್ ಕುಮಾರಸ್ವಾಮಿ ಅವರು ಜ್ಯೋತಿ ಬೆಳಗುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಕುಮಾರಣ್ಣ ರಾಜ್ಯದಲ್ಲಿ ಎರಡನೇ ಬಾರಿಗೆ ಸಿಎಂ ಆಗಲು ಚನ್ನಪಟ್ಟಣದ ಜನತೆ ಕಾರಣ. ಚನ್ನಪಟ್ಟಣ ತಾಲೂಕಿಗೆ ಒಂದುವರೆ ಸಾವಿರ ಕೋಟಿಯಷ್ಟು
ಅನುದಾನ ತಂದಿದ್ರು. ಇದನ್ನ ಯಾರಿಂದಲೂ ತಿರುಚಲು ಸಾಧ್ಯವಿಲ್ಲ ಎಂದರು.

ಈಗ ಡಿಸಿಎಂಗೆ ಮಮಕಾರ ಬಂದಿದೆ

ರಾಜ್ಯದ ಉಪ ಮುಖ್ಯಮಂತ್ರಿಗಳಿಗೆ ಚನ್ನಪಟ್ಟಣ ತಾಲೂಕು ಎಲ್ಲಿದೆ ಅಂತ ಗೊತ್ತಿರಲಿಲ್ಲ. ಈಗ ಉಪಚುನಾವಣೆ ಬಂದಿರೋದರಿಂದ ಚನ್ನಪಟ್ಟಣಕ್ಕೆ ನಿರಂತರ ಪ್ರವಾಸ ಮಾಡ್ತಿದ್ದಾರೆ. ಏನೋ ಅನುದಾನ ತಂದಿದ್ದೀವಿ ಅಂತ ದೊಡ್ಡದೊಡ್ಡ ಫ್ಲೆಕ್ಸ್ ಹಾಕಿಸ್ತಿದ್ದಾರೆ. ಕುಮಾರಸ್ವಾಮಿ ಅವರು ತಾವು ತಂದ 1500ಕೋಟಿ ಅನುದಾನದ ಬಗ್ಗೆ ಜಾಹಿರಾತು ಕೊಟ್ಟಿರಲಿಲ್ಲ. ಪಾಪ ಈಗ ಉಪ ಮುಖ್ಯಮಂತ್ರಿಗಳಿಗೆ ಚನ್ನಪಟ್ಟಣದ ಮೇಲೆ ಮಮಕಾರ ಬಂದಿದೆ ಎಂದು ಡಿಕೆ ಶಿವಕುಮಾರ್ ವಿರುದ್ಧ ಕಿಡಿಕಾರಿದರು.

ಕುಮಾರಣ್ಣ ಮೋದಿಯವರ ಸಂಪುಟದಲ್ಲಿ ಕೆಲಸ ಮಾಡ್ತಿದ್ದಾರೆ. ಮಂಡ್ಯದ ಜಿಲ್ಲೆಯ ಜನರ ಆಶಿರ್ವಾದದಿಂದ ಕೇಂದ್ರ ಕೈಗಾರಿಕಾ ಸಚಿವರಾಗಿದ್ದಾರೆ. ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಾಕಷ್ಟು ಯುವ ಜನತೆ ವಿದ್ಯಾವಂತರಿದ್ದಾರೆ. ಅವರಿಗೆ ಸಮರ್ಪಕಉದ್ಯೋಗಾವಕಾಶಗಳಿಲ್ಲ. ಇದೆಲ್ಲವನ್ನೂ ಕುಮಾರಸ್ವಾಮಿ ಅವರು‌ ಮನಸ್ಸಿಗೆ ತೆಗೆದುಕೊಂಡು ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.

ಮಂಡ್ಯದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದ್ದಾರೆ. ಮಂಡ್ಯದಲ್ಲಿ ಹಲವಾರು ಕೈಗಾರಿಕೆಗಳನ್ನು ಸ್ಥಾಪಿಸಲು ಕೆಲಸ ಮಾಡುತ್ತಿದ್ದಾರೆ ಎಂದು ತಿಳಿಸಿದರು.

ಚನ್ನಪಟ್ಟಣದಲ್ಲಿ ದೇವೇಗೌಡರು ಇಗ್ಗಲೂರು ಡ್ಯಾಂ ನಿರ್ಮಾಣ ಮಾಡಿದ್ದಾರೆ. ಇದು ತಾಲೂಕಿನ ರೈತರಿಗೆ ದೇವೇಗೌಡರು ನೀಡಿರೋ ಕೊಡುಗೆಯಾಗಿದೆ. ಜನರು ಇದನ್ನ ಪ್ರತಿದಿನ ನೆನಪು ಮಾಡಿಕೊಳ್ತಾರೆ.

ಹಗಲು ದರೋಡೆ ಮಾಡ್ತಿದೆ

ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಐದು ಗ್ಯಾರಂಟಿ ಅಂತ ಚರ್ಚೆ ಮಾಡ್ತಿದ್ದಾರೆ. ಅದನ್ನ ಸಮರ್ಪಕವಾಗಿ ಕೊಡ್ತಿದ್ದಾರಾ.? ಗ್ಯಾರಂಟಿ ಹೆಸರಲ್ಲಿ ಸರ್ಕಾರ ಹಗಲು ದರೋಡೆ ಮಾಡ್ತಿದೆ. ಪರಿಶಿಷ್ಟ ಜಾತಿ, ಪಂಗಡದ 187 ಕೋಟಿ ಹಣವನ್ನ ಬೇರೆ ರಾಜ್ಯದ ಚುನಾವಣೆಗೆ ಬಳಸಿಕೊಂಡಿದೆ. ಇದನ್ನು ಸ್ವತಃ ಸಿಎಂ ಅವರೇ ಇದನ್ನು ಸದನದಲ್ಲಿ ಒಪ್ಪಿಕೊಂಡಿದ್ದಾರೆ. ರಾಜ್ಯದ ಜನತೆ ಇಂತಹ ಭ್ರಷ್ಟ ಸರ್ಕಾರ ನೋಡಿಲ್ಲ. ಕೇವಲ ಒಂದುವರೆ ವರ್ಷದಲ್ಲಿ ಸರ್ಕಾರ ನಡವಳಿಕೆ ಗೊತ್ತಾಗ್ತಿದೆ ಎಂದು ಕಿಡಿಕಾರಿದರು.

ಡಿಸಿಎಂಗೆ ಈಗ ಚನ್ನಪಟ್ಟಣ ನೆನಪಿಗೆ ಬಂದಿದೆ. ಚನ್ನಪಟ್ಟಣ ತಾಲೂಕಿಗೆ ಕಾಂಗ್ರೆಸ್ ಕೊಡುಗೆ ಏನು.? ಇದನ್ನ ನೀವು ಪ್ರಶ್ನೆ ಮಾಡಬೇಕು.ಕೇವಲ ಚುನಾವಣೆ ಗೋಸ್ಕರ ಮಾಡ್ತಿರೋ ದೊಂಬರಾಟ ಇದು ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!