Dasara; ದೊಡ್ಡಬಳ್ಳಾಪುರದ ಮನೆ ಮನೆಗಳಲ್ಲಿ ದಸರಾ ಬೊಂಬೆಗಳ ಸಂಭ್ರಮ

ದೊಡ್ಡಬಳ್ಳಾಪುರ: ನಗರದಲ್ಲಿ ದಸರಾ (Dasara) ಬೊಂಬೆಗಳ ಪ್ರದರ್ಶನ,ಪೂಜೆ ಪ್ರಾರಂಭವಾಗಿದ್ದು ಪ್ರತಿ ದಿನ ಸಂಜೆ ಬೊಂಬೆಗಳನ್ನು ಕೂರಿಸಿರುವ ಮನೆಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಮಹಾಲಯ ಅಮವಾಸೆ ಮುಗಿದ ಮರುದಿನ ಪಾಡ್ಯಮಿಯಂದು ಕಳಶ ಪ್ರತಿಷ್ಠಾಪನೆಯೊಂದಿಗೆ ಪ್ರಾರಂಭವಾಗುವ ಬೊಂಬೆಗಳ ಸಂಭ್ರಮ 9 ದಿನಗಳ ಕಾಲವು ಪ್ರತಿದಿನ ಸಂಜೆ ವಿಶೇಷ ಪೂಜೆ, ನೈವೇದ್ಯ ಹಾಗೂ ನೆರೆಹೊರೆ ಮನೆಯರವನ್ನು ಆಹ್ವಾನಿಸಿ ಉಡುಗೊರೆ ನೀಡಲಾಗುತ್ತದೆ.

ಹಾಗೆಯೇ ಬೊಂಬೆಗಳ ಪ್ರದರ್ಶನ ವೀಕ್ಷಣೆ ಮಾಡಲು ಮನೆಗೆ ಬರುವ ಮಕ್ಕಳು ಸೇರಿದಂತೆ ಎಲ್ಲರಿಗೂ ಪ್ರಸಾದ ನೀಡಲಾಗುತ್ತದೆ.

ನಗರದ ಬಹುತೇಕ ಕುಟುಂಬಗಳಲ್ಲಿನ ಬೊಂಬೆ ಕೂರಿಸುವ ಸಂಭ್ರಮ ಎರಡು ಮೂರು ತಲೆಮಾರುಗಳಿಂದಲು ನಡೆದುಕೊಂಡು ಬಂದಿದ್ದು, ಅಷ್ಟೇ ಹಳೇಯದಾದ ಬೊಂಬೆಗಳ ಸಂಗ್ರಹದಿಂದ ಈಗಿನ ದಿನಗಳಲ್ಲಿನ ಬೊಂಬೆಗಳನ್ನು ಕಾಣಬಹುದಾಗಿದೆ.

ಸೋಮಣ್ಣ ಲೇಔಟ್ ನಲ್ಲಿರುವ ರೇಖಾ ಹರ್ಷ ಅವರ ಮನೆಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ವಿವಿಧ ರೀತಿಯ Dasara ಬೊಂಬೆಗಳ ಸಂಗ್ರಹ ಇದ್ದು, ಅಷ್ಟೇ ಅಚ್ಚುಕಟ್ಟಾಗಿ ಕೂರಿಸಿರುವುದು ನೋಡುಗರ ಗಮನ ಸೇಳೆಯುತ್ತಿದೆ. ಬೊಂಬೆಗಳ ಪ್ರದರ್ಶನ ವಿಜಯದಶಮಿಯವರೆಗೂ ಇರಲಿದೆ.

ಇವರು ತಮಿಳುನಾಡಿನ ಕಲಾವಿದರಿಂದ ಭೂದೇವಿ ಮತ್ತು ಪದ್ಮಾವತಿಯೊಂದಿಗೆ ಶ್ರೀನಿವಾಸ ಮೂರ್ತಿಯನ್ನು ದಸರಾ ಹಬ್ಬಕ್ಕೆಂದು ತಯಾರಿಸಿಕೊಂಡು ಬಂದಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ಬೊಂಬೆ ಕೂರಿಸುವ ಆಚರಣೆ ಪಾಲಿಸುತ್ತಿದ್ದು, ಜೀವನದಲ್ಲಿ ಹಲವು ರೀತಿಯ ಉತ್ತಮ ಅನುಕೂಲಕರ ಬದಲಾವಣೆ ಉಂಟಾಗಿದೆ ಎಂದು ತಿಳಿಸಿದ್ದಾರೆ.

ಅಂತೆಯೇ ನಗರದ ಗಾಣಿಗರಪೇಟೆಯಲ್ಲಿನ ವಿದ್ವಾನ್ ಎಸ್.ನವೀನ್ ಅವರ ಮನೆಯಲ್ಲಿ ನವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಬೊಂಬೆಗಳನ್ನು ಕೂರಿಸಿದ್ದು ಲಕ್ಷ್ಮೀ ಸಮೇತ ನರಸಿಂಹಸ್ವಾಮಿಯ ದರ್ಬಾರ್ ಪ್ರಸಂಗ ನೋಡುಗರ ಕಣ್ಮನ ಸೇಳೆಯುವಂತಿದೆ.

ಹಾಗೆಯೇ ಹಳ್ಳಿಯಲ್ಲಿನ ದಿನ ಬಳಕೆ ಪರಿಕರಗಳ ಬೊಂಬೆ ಪ್ರದರ್ಶನವು ಗ್ರಾಮೀಣ ಜೀವನವನ್ನು ನಗರದ ಜನರು ಬೆರಗು ಗಣ್ಣಿನಿಂದ ನೋಡುವಂತಿದೆ.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!