ಮೈಸೂರು Dasara: ಬಾನಂಗಳದಲ್ಲಿ ಚಿತ್ತಾರ ಬಿಡಿಸಿದ ಡ್ರೋನ್ ಗಳು: ಫೋಟೋಗಳಲ್ಲಿ ನೋಡಿ

ಮೈಸೂರು: ನಾಡಹಬ್ಬ ಮೈಸೂರು ದಸರಾ (Dasara) ಮಹೋತ್ಸವದ ಅಂಗವಾಗಿ ನಡೆದ ಡ್ರೋನ್ ಪ್ರದರ್ಶನ ಸಾಂಸ್ಕೃತಿಕ ನಗರಿ ಮೈಸೂರಿನ ಬಾನಂಗಳದಲ್ಲಿ ಚಿತ್ತಾರ ಬಿಡಿಸುವ ಮೂಲಕ ಕಣ್ಮನ ಸೆಳೆಯಿತು.

ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ(ಸೆಸ್ಕ್)ದ ವತಿಯಿಂದ ದಸರಾ (Dasara) ಹಿನ್ನೆಲೆಯಲ್ಲಿ ಇದೇ ಮೊದಲ ಬಾರಿಗೆ ಡ್ರೋನ್ ಪ್ರದರ್ಶನ ಆಯೋಜಿಸಲಾಗಿತ್ತು. ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಭಾನುವಾರ ರಾತ್ರಿ ನಡೆದ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಬಳಿಕ ನಡೆದ ಡ್ರೋನ್ ಪ್ರದರ್ಶನದಲ್ಲಿ 1500 ಡ್ರೋನ್ ಗಳು ಏಕಕಾಲದಲ್ಲಿ ಆಗಸದ ಎತ್ತರಕ್ಕೆ ಹಾರಿ ಹಲವು ಬಗೆಯ ಕಲಾಕೃತಿಗಳನ್ನು ರಚಿಸಿದವು. ಬಾಟ್ ಲ್ಯಾಬ್ ಡೈನಮಿಕ್ಸ್ ಸಂಸ್ಥೆ ಸಹಯೋಗದೊಂದಿಗೆ ಈ ಡ್ರೋನ್ ಪ್ರದರ್ಶನ ನಡೆಯಿತು.

ರಾತ್ರಿ 8:45ರ ಸುಮಾರಿಗೆ ಆರಂಭವಾದ ಡ್ರೋನ್ ಪ್ರದರ್ಶನದಲ್ಲಿ ರಾಷ್ಟ್ರಧ್ವಜ, ಚಂದ್ರಯಾನ, ವಿಶ್ವಭೂಪಟ, ಸೈನಿಕ, ಕರ್ನಾಟಕ ಭೂಪಟ, ಅಂಬಾರಿ, ಸುವರ್ಣ ಕರ್ನಾಟಕ ಸಂಭ್ರಮ, ಅರಳಿಮರ, ತಿಮಿಂಗಿಲ, ಚಾಮುಂಡೇಶ್ವರಿ ಸೇರಿದಂತೆ 15ಕ್ಕೂ ಹೆಚ್ಚು ವಿನ್ಯಾಸಗಳನ್ನು ರಚಿಸುವ ಮೂಲಕ ನೆರೆದಿದ್ದ ಜನರಿಗೆ ನಿರೀಕ್ಷೆಗೂ ಮೀರಿದ ಅನುಭವ ನೀಡಿತು.

ಡ್ರೋನ್ ಪ್ರದರ್ಶನದ ಆಕರ್ಷಣೆ ಕಣ್ತುಂಬಿಕೊಳ್ಳುವ ಸಲುವಾಗಿ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಕಿಕ್ಕಿರಿದು ತುಂಬಿದ್ದರು.

ರಾಜೇಶ್ ಕೃಷ್ಣನ್ ಹಾಡಿನ ಮೋಡಿ:

ಡ್ರೋನ್ ಪ್ರದರ್ಶನ ಆರಂಭಕ್ಕೂ ಮುನ್ನ ಖ್ಯಾತ ಹಿನ್ನಲೆ ಗಾಯಕ ರಾಜೇಶ್ ಕೃಷ್ಣನ್ ಮತ್ತು ತಂಡದಿಂದ ಸಂಗೀತ ಕಾರ್ಯಕ್ರಮ ನಡೆಯಿತು. ತಮ್ಮ ಸುಮಧುರ ಕಂಠದಿಂದಲೇ‌ ಕನ್ನಡಿಗರ ಮನಗೆದ್ದಿರುವ ರಾಜೇಶ್ ಕೃಷ್ಣನ್, “ಉಸಿರೇ ಉಸಿರೇ, ಜೊತೆಯಲಿ ಜೊತೆ ಜೊತೆಯಲಿ, ಯಾರೋ ಕಣ್ಣಲ್ಲಿ ಕಣ್ಣನಿಟ್ಟು, ಕುಚಿಕ್ಕು ಕುಚ್ಚಿಕು, ಕೂರಕ್ ಕುಕ್ಕರಹಳ್ಳಿಕೆರೆ ಸೇರಿದಂತೆ ಹಲವು ಗೀತೆಗಳನ್ನು ಹಾಡುವ ಮೂಲಕ ನೆರೆದಿದ್ದ ಪ್ರೇಕ್ಷಕರನ್ನು ರಂಜಿಸಿದರು.

ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ನರೇಂದ್ರ ಸ್ವಾಮಿ, ಶಾಸಕರು ಹಾಗೂ ಸೆಸ್ಕ್ ನಿಗಮದ ಅಧ್ಯಕ್ಷರಾದ ರಮೇಶ್ ಬಂಡಿಸಿದ್ದೇಗೌಡ, ಮಾಜಿ ಶಾಸಕ ಎಂ.ಕೆ.‌ ಸೋಮಶೇಖರ್, ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷೆ ಡಾ. ಪುಷ್ಪಾ ಅಮರನಾಥ್, ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕಿ ಜಿ. ಶೀಲಾ, ತಾಂತ್ರಿಕ ‌ವಿಭಾಗದ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ದಸರಾ ದೀಪಾಲಂಕಾರ ಉಪ ಸಮಿತಿ(ಅಧಿಕಾರೇತರ) ಅಧ್ಯಕ್ಷ ಸೈಯದ್ ಇಕ್ಬಾಲ್, ಉಪಾಧ್ಯಕ್ಷರಾದ ಸುಹೇಲ್ ಬೇಗ್, ಕಾಂತರಾಜ್ ಸೇರಿದಂತೆ ಇನ್ನಿತರರು ಹಾಜರಿದ್ದರು.

ರಾಜಕೀಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ ಹೆಸರುಗಳಿವೆ: ಸಿಎಂ ಸಿದ್ದರಾಮಯ್ಯ

ನಾನು ಕೂಡ ಹಿಂದೂ. ನನ್ನ ಹೆಸರಿನಲ್ಲಿ ಈಶ್ವರ ಮತ್ತು ರಾಮ ಎರಡೂ ದೇವರುಗಳ

ಬಿಜೆಪಿಯವರು ಪ್ರಚೋದನಾ ಕಾರಿಯಾದ ಭಾಷಣ ಮಾಡಿದರೆ ಏನು ಮಾಡಬೇಕು? ಶಾಂತಿ ನೆಮ್ಮದಿಯನ್ನು ಕಾಪಾಡುವುದು ಅತ್ಯಂತ ಅವಶ್ಯಕ. ಅದಕ್ಕಾಗಿ ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ: Cmsiddaramaiah

[ccc_my_favorite_select_button post_id="113856"]
ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಕೃಷ್ಣಾ ನದಿಗೆ ಬಾಗಿನ ಅರ್ಪಿಸಿದ ಸಿಎಂ, ಡಿಸಿಎಂ

ಆಲಮಟ್ಟಿಯಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಯ ಜಲಧಿಗೆ ಗಂಗಪೂಜೆ ಹಾಗೂ ಬಾಗಿನ ವನ್ನು ಅರ್ಪಣೆ CM

[ccc_my_favorite_select_button post_id="113575"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಸ್ಕೇಟಿಂಗ್ ಸ್ಪರ್ಧೆ: ದೊಡ್ಡಬಳ್ಳಾಪುರದ ಎಂಎಸ್‌ವಿ ಪಬ್ಲಿಕ್ ಶಾಲೆ ವಿದ್ಯಾರ್ಥಿಗಳ ಸಾಧನೆ

ಜಿಲ್ಲಾ ಮಟ್ಟದ ಸ್ಕೇಟಿಂಗ್ ಸ್ಪರ್ಧೆಯಲ್ಲಿ ತಾಲೂಕಿನ ಪ್ರತಿಷ್ಠಿತ ಎಂಎಸ್‌ವಿ ಪಬ್ಲಿಕ್ ಶಾಲೆಯ (MSV Public School) ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದಿದ್ದಾರೆ.

[ccc_my_favorite_select_button post_id="113787"]
ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಅಪ್ರಾಪ್ತ ಬಾಲಕಿ ನೇಣಿಗೆ ಶರಣು

ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ಪಾಲನಜೋಗಿಹಳ್ಳಿಯಲ್ಲಿ ನಡೆದಿದೆ

[ccc_my_favorite_select_button post_id="113869"]
ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ ಸಂಖ್ಯೆ ..!| Video

ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಮೇಲೆ ನುಗ್ಗಿದ ಕ್ಯಾಂಟರ್.. 9ಕ್ಕೆ ಏರಿದ ಮೃತರ

ಶುಕ್ರವಾರ ರಾತ್ರಿ ಗಣೇಶ (Ganesha) ವಿಸರ್ಜನಾ ಮೆರವಣಿಗೆ ಮೇಲೆ ಕ್ಯಾಂಟ‌ರ್ ಲಾರಿ ನುಗ್ಗಿದ ಪರಿಣಾಮ, 9 ಮಂದಿ ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಮೊಸಳೆ ಹೊಸಹಳ್ಳಿಯಲ್ಲಿ ಸಂಭವಿಸಿದೆ.

[ccc_my_favorite_select_button post_id="113840"]

ಆರೋಗ್ಯ

ಸಿನಿಮಾ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

Darshan; ‘ಇದ್ರೇ ನೆಮ್ಮದಿಯಾಗ್ ಇರ್ಬೇಕ್’ ಹಾಡು ಬಿಡುಗಡೆ.. Video ಲಿಂಕ್ ಇಲ್ಲಿದೆ ನೋಡಿ

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಅಭಿನಯದ ದಿ ಡೆವಿಲ್ ಸಿನಿಮಾದ 'ಇದ್ರೇ ನೆಮ್ಮದಿಯಾಗ್ ಇರ್ಬೇಕ್' ಹಾಡು ಯುಟ್ಯೂಬ್‌ನಲ್ಲಿ ಬಿಡುಗಡೆಯಾಗಿದೆ.

[ccc_my_favorite_select_button post_id="113046"]
error: Content is protected !!