ಮೂಡಾ ಹಗರಣ ಮುಚ್ಚಿ ಹಾಕಲು ಜಾತಿಗಣತಿ ನಾಟಕ; HDK

ಬೆಂಗಳೂರು: ಮೂಡಾ ಹಗರಣದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಜಾತಿಗಣತಿ ವಿಷಯವನ್ನು ಮುನ್ನಲೆಗೆ ತಂದು ನಾಟಕ ಆಡಲಾಗುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (HDK) ಅವರು ದೂರಿದ್ದಾರೆ.

ತಮ್ಮ ನಿವಾಸದ ಸೋಮವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು; ಸರ್ಕಾರದ ವಿರುದ್ಧ ಗುರುತರ ಆರೋಪಗಳು ಕೇಳಿ ಬಂದಾಗಲೆಲ್ಲ ಜನರ ಗಮನ ಬೇರೆಡೆಗೆ ಹೊರಳಿಸಲು ತಂತ್ರಗಾರಿಕೆ ಮಾಡುತ್ತಿದ್ದಾರೆ. ಈಗ ಮೂಡಾ ಹಗರಣದ ಮೂಲಕ ಜನರ ದಿಕ್ಕು ತಪ್ಪಿಸಲು ಜಾತಿಗಣತಿಯ ವಿಚಾರವನ್ನು ಮುಂದಕ್ಕೆ ತಂದಿದೆ ಎಂದು ಆರೋಪಿಸಿದರು.

ಚುನಾವಣೆಗೆ ಮೊದಲೇ ವರದಿ ಕೊಟ್ಟಿದ್ದರು!!

ಕಾಂತರಾಜು ಆಯೋಗ ರಚನೆ ಮಾಡಿದ್ದು 10 ವರ್ಷಗಳ ಹಿಂದೆ. ಈಗ ಅ ವರದಿಗೆ 10 ವರ್ಷ ಆಗಿ ಹೋಗಿದೆ. 10 ವರ್ಷಗಳಲ್ಲಿ ಅನೇಕ ಬೆಳವಣಿಗೆಗಳು ಆಗಿವೆ. ಹಳೆಯ ಜಾತಿಗಣತಿ ವರದಿಯನ್ನು ಇಷ್ಟು ದಿನ ಯಾಕೆ ಬಿಡುಗಡೆ ಮಾಡಿರಲಿಲ್ಲ? ಎಂದು ಕೇಂದ್ರ ಸಚಿವ ಕುಮಾರಸ್ವಾಮಿ (HDK) ಅವರು ಪ್ರಶ್ನಿಸಿದರು.

ಕುಮಾರಸ್ವಾಮಿ ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಬಿಡಲಿಲ್ಲ ಎಂದು ನನ್ನ ಮೇಲೆ ಆರೋಪ ಮಾಡುತ್ತಲೇ ಇದ್ದಾರೆ. ಲೋಕಸಭೆ ಚುನಾವಣೆಗೆ ಮೊದಲೇ ಸಿದ್ದರಾಮಯ್ಯ ಅವರ ಕೈಗೆ ಜಾತಿಗಣತಿ ವರದಿ ಕೊಡಲಾಗಿದೆ, ಅಲ್ಲವೇ? ಲೋಕಸಭೆ ‌ಚುನಾವಣೆ ಮೊದಲೇ ವರದಿ ಪಡೆದರೂ ಇಷ್ಟು ದಿನಗಳವರೆಗೂ ಅದರ ಬಗ್ಗೆ ಸದ್ದೇ ಇರಲಿಲ್ಲ, ಯಾಕೆ? ಎಂದು ಖಾರವಾಗಿ ತೀಕ್ಷ್ಣವಾಗಿ ಕೇಳಿದರು.

ಮೂಡಾ ಅಕ್ರಮದಿಂದ ರಕ್ಷಣೆ ಪಡೆಯಲು ಯತ್ನ

ಈಗ ಮೂಡಾ ಹಗರಣದ ಹಿನ್ನಲೆಯಲ್ಲಿ ಜನರನ್ನು ದಾರಿ ತಪ್ಪಿಸಲು ಮತ್ತು ಜಾತಿಗಣತಿ ವರದಿ ಇಟ್ಟುಕೊಂಡು ಮೂಡಾ ಅಕ್ರಮದಿಂದ ರಕ್ಷಣೆ ಪಡೆಯುವ ಕೆಲಸಕ್ಕೆ ಹೊರಟಿದ್ದಾರೆ. 10 ವರ್ಷಗಳ ಹಿಂದೆ ಮಾಡಿರುವ ಈ ಜಾತಿಗಣತಿ ವರದಿಯಿಂದ ಯಾವುದೇ ಸಮುದಾಯಕ್ಕೆ ಅನುಕೂಲಗಳು ಆಗುವುದಿಲ್ಲ. ಮೂಡಾ ಹಗರಣವನ್ನು ಮರೆಮಾಚಿಕೊಳ್ಳಲು ಈಗ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ. ಇಷ್ಟು ದಿನ ಇಲ್ಲದೇ ಇರೋದು ಈಗ ಯಾಕೆ ಮುನ್ನಲೆಗೆ ತರಲು ಹೊರಟಿದ್ದಾರೆ ಎಂದು ನೇರ ಆರೋಪ ಮಾಡಿದರು.

ಜಾತಿಗಣತಿ ವರದಿ ಜಾರಿ ಮಾಡದಂತೆ ಸಿದ್ದರಾಮಯ್ಯ ಅವರನ್ನು ಹಿಡಿದುಕೊಂಡವರು ಯಾರು? ನನ್ನ ಬಗ್ಗೆ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ವರದಿ ಸ್ವೀಕಾರ ಮಾಡಿ ಎಷ್ಟು ದಿನವಾಯಿತು? ಇನ್ನೂ ಯಾಕೆ ಇಟ್ಟುಕೊಂಡು ಕೂತಿದ್ದಾರೆ? ಇಷ್ಟು ದಿನ ಸದ್ದುಗದ್ದಲ ಇರಲಿಲ್ಲ. ಈಗ ಈ ವಿಷಯ ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ. ಇವರು ಮಾಡಿರುವ ತಪ್ಪುಗಳನ್ನು ಮುಚ್ಚಿಕೊಳ್ಳೋಕೆ‌ ಜಾತಿಯಂತಹ ವಿಷಯಗಳನ್ನು ಮುಂದೆ ಬಿಟ್ಟುಕೊಂಡು ಹೊರಟಿದ್ದಾರೆ ಎಂದು ಸರ್ಕಾರದ ವಿರುದ್ದ ಕುಮಾರಸ್ವಾಮಿ ಅವರು ಕಿಡಿಕಾರಿದರು.

ಜಾತಿ ಗಣತಿ ವರದಿ ಇಟ್ಟುಕೊಂಡು ಚುನಾವಣೆಗೆ ಹೋಗಿ

ಜಾತಿಗಣತಿ ವರದಿ ಇಟ್ಟುಕೊಂಡು ರಾಜಕೀಯ ಮಾಡುತ್ತೀರಿ, ಈ ವಿಷಯ ಇಟ್ಟುಕೊಂಡು ಚುನಾವಣೆ ಹೋಗಿ ನೋಡೋಣ ಎಂದು ಕಾಂಗ್ರೆಸ್ ನಾಯಕರಿಗೆ ಸವಾಲು ಹಾಕಿದ ಕುಮಾರಸ್ವಾಮಿ ಅವರು; ಸರ್ಕಾರ ಹೋದರೆ ಹೋಗಲಿ ಎನ್ನುವ ಬದಲಿಗೆ ಮುಕ್ತವಾಗಿ ಘೋಷಣೆ ಮಾಡಿ ಚುನಾವಣೆಗೆ ಹೋಗಲಿ ಎಂದರು.

ಸರ್ಕಾರ ಹೋದರೆ ಹೋಗಲಿ, ಜಾತಿಗಣತಿ ಜಾರಿ ಮಾಡಿ ಎಂಬ ಬಿ.ಕೆ. ಹರಿಪ್ರಸಾದ್‌ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಜಾತಿಗಣತಿ ವಿಷಯ ಇಟ್ಟುಕೊಂಡು ಸರ್ಕಾರ ವಿಸರ್ಜನೆ ಮಾಡಿ ಚುನಾವಣೆಗೆ ಹೋಗಿ ನೋಡೋಣ. ಹರಿಪ್ರಸಾದ್‌ ಅವರು ಈ ರೀತಿ ಹೇಳುವುದು ಏನಿದೆ? ಅದರ ಬದಲು ವಿಧಾನಸಭೆಯನ್ನು ವಿಸರ್ಜನೆ ಮಾಡಿ ಚುನಾವಣೆಗೆ ಹೋಗಬಹುದಲ್ಲವೆ? ಎಂದು HDK ಸವಾಲು ಹಾಕಿದರು.

ಸಿದ್ದರಾಮಯ್ಯನವರು ಹಾಗೂ ಕಾಂಗ್ರೆಸ್ ನಾಯಕರು ಜಾತಿಗಣತಿ ವರದಿ ಇಟ್ಟುಕೊಂಡು ನಾವು ಅನುಷ್ಠಾನ ಮಾಡುತ್ತೇವೆ, ನಮಗೆ ಇನ್ನೊಂದು ಅವಕಾಶ ಕೊಡಿ ಅಂತ ಜನರ ಮುಂದೆ ಹೋಗಬಹುದು.

ದೆಹಲಿಯಲ್ಲಿ ರಾಹುಲ್ ಗಾಂಧಿ ಒಂದು ಹೇಳುತ್ತಾರೆ.. ಇಲ್ಲಿ ಇವರು ಇನ್ನೊಂದು ಹೇಳುತ್ತಾರೆ. ಸರ್ಕಾರದಲ್ಲಿ ಆಗಿರುವ ಹಲವಾರು ತಪ್ಪುಗಳನ್ನು ಮುಚ್ಚಿಕೊಳ್ಳೋದಕ್ಕೆ ಜಾತಿಗಣತಿ ವಿಷಯವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ರಾಜ್ಯದಲ್ಲಿ ಅಭಿವೃದ್ಧಿ ಇಲ್ಲ. ಇದೆಲ್ಲವನ್ನು ಜನರ ಮನಸಿನಿಂದ ಡೈವರ್ಟ್ ಮಾಡೋದಕ್ಕೆ ಈ ಡ್ರಾಮಾಗಳು ಪ್ರಾರಂಭ ಮಾಡಿದ್ದಾರೆ ಎಂದು ಅವರು ದೂರಿದರು.

ರಾಜಕೀಯ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8ರಂದು ದೊಡ್ಡಬಳ್ಳಾಪುರಕ್ಕೆ ನಿಖಿಲ್ ಕುಮಾರಸ್ವಾಮಿ: ನಾಳೆ ಪೂರ್ವಭಾವಿ ಸಭೆ

ಮೇ.8 ರಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರು ದೊಡ್ಡಬಳ್ಳಾಪುರಕ್ಕೆ ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ, ನಾಳೆ (ಏ.28) ರಂದು ಪೂರ್ವಭಾವಿ ಸಭೆಯನ್ನು ಕರೆಯಲಾಗಿದೆ ಎಂದು ಜೆಡಿಎಸ್ ದೊಡ್ಡಬಳ್ಳಾಪುರ

[ccc_my_favorite_select_button post_id="121433"]
ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳನ್ನು ದೂರವಿಟ್ಟು, ಜನರ ಸಮಸ್ಯೆಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಮಧ್ಯವರ್ತಿಗಳು (Brokers) ಎಲ್ಲೆಡೆ ಇರುತ್ತಾರೆ ಆದರೆ ಅವರನ್ನು ಕಚೇರಿಯೊಳಗೆ ಬಿಟ್ಟುಕೊಳ್ಳದೇ ಹೊರಗೆ ಕಳಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ( Cm Siddaramaiah) ಅಧಿಕಾರಿಗಳಿಗೆ ಸೂಚಿಸಿದರು

[ccc_my_favorite_select_button post_id="121435"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ: ವಕೀಲರ ಭವನದಲ್ಲಿ ವಾರ್ಷಿಕ ಕ್ರೀಡಾಕೂಟದ ಪ್ರಶಸ್ತಿ ವಿತರಣೆ..

ದೊಡ್ಡಬಳ್ಳಾಪುರ ತಾಲೂಕು ವಕೀಲರ ಸಂಘ ಹಾಗೂ ನ್ಯಾಯಾಂಗ ಇಲಾಖೆಯಿಂದ ವಾರ್ಷಿಕ ಕ್ರೀಡಾಕೂಟ 2026-27ರ (Annual sports event) ಪ್ರಶಸ್ತಿ ವಿತರಣೆ ಕಾರ್ಯಕ್ರಮ (Awards ceremony) ನಗರದ ವಕೀಲರ ಭವನದಲ್ಲಿ ಆಯೋಜಿಸಲಾಗಿತ್ತು.

[ccc_my_favorite_select_button post_id="121459"]
ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಬದಿಯಲ್ಲಿ ನಿಂತು ಲೈಂಗಿಕ ಕ್ರಿಯೆಗೆ ಪ್ರಚೋದನೆ: 6 ವಿದೇಶಿ ಯುವತಿಯರ ಬಂಧನ..!

ರಸ್ತೆಯಲ್ಲಿ ನಿಂತ ಆರು ಯುವತಿಯರು ಪುರುಷರನ್ನು ಲೈಂಗಿಕ ಕ್ರಿಯೆಗೆ ಪ್ರಚೋದಿಸುತ್ತಿದ್ದ (Sexually arousing) ಆರೋಪದ ಅಡಿಯಲ್ಲಿ ಆರು ವಿದೇಶಿ ಮಹಿಳೆಯರನ್ನು ಬಂಧಿಸಲಾಗಿದೆ.

[ccc_my_favorite_select_button post_id="121454"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಹೆಲ್ಮೆಟ್ ಕಡ್ಡಾಯ ಜಾರಿ ಮಾಡಿ, ಹಲವು ರೀತಿಯಲ್ಲಿ ಅರಿವು ಮೂಡಿಸಿದರು, ಬೈಕ್ ಸವಾರರು ಹೆಲ್ಮೆಟ್ ಧರಿಸದೆ ಬೇಜವಬ್ದಾರಿ ತೋರಿಸುತ್ತಿದ್ದಾರೆ. ಶನಿವಾರ ರಾತ್ರಿ ಸಂಭವಿಸಿದ ಅಪಘಾತದಲ್ಲಿ (Accident) ಇಬ್ಬರು ಬ್ಯಾಂಕ್ ಉದ್ಯೋಗಿ ಯುವಕರು ಕೂಡ ಹೆಲ್ಮೆಟ್

[ccc_my_favorite_select_button post_id="121414"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]