ವೃಶ್ಚಿಕ ರಾಶಿಯ 2024ರ ಅಕ್ಟೋಬರ್ ತಿಂಗಳ ಭವಿಷ್ಯ| Vrischika Rashi

ವೇದ ಜ್ಯೋತಿಷ್ಯದ ಆಧಾರದ ಮೇಲೆ ವೃಶ್ಚಿಕ ರಾಶಿಯ (Vrischika Rashi) ಜಾತಕದಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗ, ಆರ್ಥಿಕ ಸ್ಥಿತಿ, ಕುಟುಂಬ ಮತ್ತು ವ್ಯವಹಾರಕ್ಕೆ ಸಂಬಂಧಿಸಿದ ಫಲಿತಾಂಶಗಳು ಹೀಗಿದೆ.

ರಾಶಿ ಚಕ್ರದಲ್ಲಿ ಎಂಟನೇ ಜ್ಯೋತಿಷ್ಯ ರಾಶಿಯಾಗಿದ್ದು, ಆಕಾಶ ರೇಖಾಂಶದ 210-230 ಡಿಗ್ರಿಗಳನ್ನು ವ್ಯಾಪಿಸಿದೆ.

ಈ ತಿಂಗಳಲ್ಲಿ ಮಿಶ್ರ ಫಲಿತಾಂಶಗಳು ಬರುತ್ತವೆ. ವೃತ್ತಿಪರವಾಗಿ ಅದ್ಭುತವಾದ ಪ್ರಗತಿ ಇರುತ್ತದೆ. ನೀವು ಉತ್ತಮ ಬದಲಾವಣೆಗಳನ್ನು ನೋಡುತ್ತೀರಿ. ಬಡ್ತಿಗಾಗಿ ಕಾಯುತ್ತಿರುವವರಿಗೆ ಈ ತಿಂಗಳಲ್ಲೇ ವೃತ್ತಿಜೀವನದಲ್ಲಿ ಒಳ್ಳೆಯದು ನಡೆಯುತ್ತದೆ. ಮೇಲಧಿಕಾರಿಗಳು ನಿಮ್ಮ ಕೆಲಸ, ಪ್ರತಿಷ್ಠೆಯನ್ನು ಶ್ಲಾಘಿಸುತ್ತಾರೆ.

ಅದೇ ಸಮಯದಲ್ಲಿ, ನಿಮಗೆ ಕೆಲಸದ ಭಾರವೂ ಹೆಚ್ಚಾಗಿರುತ್ತದೆ, ಇದನ್ನು ನೀವು ಯಶಸ್ವಿಯಾಗಿ ಪೂರ್ಣಗೊಳಿಸುತ್ತೀರಿ. ಆದರೆ ದ್ವಿತೀಯಾರ್ಧದಲ್ಲಿ ನಿಮ್ಮ ಅಹಂಕಾರದ ಕಾರಣದಿಂದ ನಿಮ್ಮ ಮೇಲಿನ ಅಧಿಕಾರಿಗಳು ಕೋಪಗೊಳ್ಳುವ ಸಾಧ್ಯತೆ ಇದೆ.

ಈ ತಿಂಗಳಲ್ಲಿ ಆರ್ಥಿಕವಾಗಿ ಮಿಶ್ರ ಫಲಿತಾಂಶಗಳಿರುತ್ತವೆ. ಮೊದಲ ಎರಡು ವಾರಗಳು ಉತ್ತಮ ಆದಾಯ ಬರುತ್ತದೆ. ಕಳೆದ ಎರಡು ವಾರಗಳಲ್ಲಿ, ನೀವು ಕುಟುಂಬ ಮತ್ತು ವೈಯಕ್ತಿಕ ವಿಷಯಗಳಿಗಾಗಿ ಹೆಚ್ಚು ಹಣ ಖರ್ಚು ಮಾಡಬೇಕಾಗಬಹುದು.

ಈ ತಿಂಗಳಲ್ಲಿ ಮನೆ ಅಥವಾ ವಾಹನ ಖರೀದಿಸುವ ಸಾಧ್ಯತೆ ಇದೆ. ಹಣ ಹೂಡಿಕೆ ಮಾಡಲು ಬಯಸುವವರು ಮೊದಲ ಎರಡು ವಾರಗಳಲ್ಲಿ ಮಾಡಬಹುದು. ಮೂರನೇ ವಾರದಿಂದ ಆದಾಯ ಚೆನ್ನಾಗಿ ಹೆಚ್ಚಾಗುತ್ತದೆ.

ಕೌಟುಂಬಿಕವಾಗಿ ನಿಮಗೆ ಒಳ್ಳೆಯ ಸಮಯ ಸಿಗುತ್ತದೆ. ವಿವಾಹ ಅಥವಾ ಸಂತಾನಕ್ಕಾಗಿ ಕಾಯುತ್ತಿರುವವರಿಗೆ ಈ ತಿಂಗಳಲ್ಲಿ ಒಳ್ಳೆಯ ಫಲಿತಾಂಶ ಸಿಗುತ್ತದೆ. ಕುಟುಂಬ ಸದಸ್ಯರೊಂದಿಗೆ ಕೌಟುಂಬಿಕ ಕಾರ್ಯಕ್ರಮಗಳಿಗೆ ಹಾಜರಾಗಬಹುದು. ದ್ವಿತೀಯಾರ್ಧದಲ್ಲಿ ಕುಟುಂಬದಲ್ಲಿ ಹಿರಿಯರ ಆರೋಗ್ಯ ಕ್ಷೀಣಿಸುವುದರಿಂದ ಮಾನಸಿಕವಾಗಿ ಖಿನ್ನತೆಗೆ ಒಳಗಾಗಬಹುದು. ಆದರೆ ಗುರು ಸಂಚಾರ ಅನುಕೂಲಕರ ವಾಗಿರುವುದರಿಂದ ಮಾನಸಿಕ ಸಮಸ್ಯೆಗಳಿಂದ ಹೊರಬರುತ್ತೀರಿ.

ಆರೋಗ್ಯದ ವಿಷಯದಲ್ಲಿ ಈ ತಿಂಗಳು ಸರಾಸರಿಯಾಗಿರುತ್ತದೆ. ಮೂರನೇ ವಾರದಿಂದ ಉತ್ತಮ ಆರೋಗ್ಯ ದೊಂದಿಗೆ ಇರುತ್ತೀರಿ. ಮೊದಲ ಎರಡು ವಾರಗಳಲ್ಲಿ, ನೀವು ರಕ್ತದೊತ್ತಡದಂತಹ ಶೀತ ಮತ್ತು ರಕ್ತ ಸಂಬಂಧಿತ ಆರೋಗ್ಯ ಸಮಸ್ಯೆಗಳಿಂದ ಬಳಲಬಹುದು. ಚಾಲನೆ ಮಾಡುವಾಗ ಜಾಗರೂಕರಾಗಿರಿ.

ವ್ಯಾಪಾರಿಗಳಿಗೆ ಲಾಭದಾಯಕ ವ್ಯಾಪಾರ ಇರುತ್ತದೆ, ಆದರೆ ಈ ತಿಂಗಳಲ್ಲಿ ಹಲವು ಅಡೆತಡೆಗಳು ಮತ್ತು ಕೆಲಸದ ಭಾರ ಇರುತ್ತದೆ. ಮೂರನೇ ವಾರದಿಂದ ಉತ್ತಮ ಆದಾಯ ದೊರೆಯುತ್ತದೆ. ಹೊಸ ಉದ್ಯಮ ಆರಂಭಿಸಲು ಬಯಸಿದರೆ ಮೊದಲ ಎರಡು ವಾರಗಳಲ್ಲಿ ಮಾಡುವುದು ಉತ್ತಮ. ಪ್ರಥಮಾರ್ಧದಲ್ಲಿ ಆದಾಯಕ್ಕಿಂತ ಹೆಚ್ಚು ಖರ್ಚು ಇರುವ ಸಾಧ್ಯತೆ ಇದೆ, ಆದ್ದರಿಂದ ಈ ಸಮಯದಲ್ಲಿ ಹೂಡಿಕೆಗಳ ವಿಷಯದಲ್ಲಿ ಜಾಗರೂಕರಾಗಿರುವುದು ಒಳ್ಳೆಯದು.

ವಿದ್ಯಾರ್ಥಿಗಳಿಗೆ ಈ ತಿಂಗಳು ಮಿಶ್ರ ಫಲಿತಾಂಶಗಳಿರುತ್ತವೆ. ಸೂರ್ಯನ ಸಂಚಾರ ಪ್ರಥಮಾರ್ಧದಲ್ಲಿ ಅನುಕೂಲಕರವಾಗಿರುವುದರಿಂದ ಓದಿನ ಬಗ್ಗೆ ಆಸಕ್ತಿ ಹೆಚ್ಚಾಗುತ್ತದೆ. ಆದರೆ ಕುಜನ ಸಂಚಾರ ಅನುಕೂಲಕರವಾಗಿಲ್ಲದ ಕಾರಣ ಕೆಲವೊಮ್ಮೆ ಕೋಪಗೊಳ್ಳುವುದು, ಕೆಲಸಗಳನ್ನು ಆತುರದ ಕಾರಣದಿಂದ ಸರಿಯಾಗಿ ಮಾಡದೆ ಮತ್ತೆ ಮಾಡಬೇಕಾಗಿ ಬರುವುದು ಸಂಭವಿಸಬಹುದು.

ವೃಶ್ಚಿಕ ರಾಶಿ (Vrischika Rashi) : ವಿಶಾಖ (4ನೇ ಪಾದ), ಅನುರಾಧ (4), ಜ್ಯೇಷ್ಠ (4) ಅಡಿಯಲ್ಲಿ ಜನಿಸಿದ ಜನರು ವೃಶ್ಚಿಕ ರಾಶಿ ಅಡಿಯಲ್ಲಿ ಬರುತ್ತಾರೆ. ಈ ರಾಶಿ ಅಧಿಪತಿ ಮಂಗಳ.

ವೃಶ್ಚಿಕ ರಾಶಿಗೆ ಸೂಚಿಸಲಾದ ಅಕ್ಷರಗಳು: ತೊ, ನ, ನಿ, ನು, ನೆ, ನೊ, ಯ, ಯಿ, ಯು.

ಹೆಚ್ಚಿನ ಮಾಹಿತಿಗೆ: ವಿದ್ವಾನ್ ಎಸ್.ನವೀನ್ M.A., ಅಧ್ಯಕ್ಷರು, ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕರ ಮತ್ತು ಪುರೋಹಿತರ ಪರಿಷತ್ (ರಿ ), ದೊಡ್ಡಬಳ್ಳಾಪುರ ತಾಲ್ಲೂಕು ಮತ್ತು ಧಾರ್ಮಿಕ ಚಿಂತಕರು ಹಾಗೂ ಸುವರ್ಣ ಕನ್ನಡಿಗ ರಾಜ್ಯ ಪ್ರಶಸ್ತಿ ಪುರಸ್ಕೃತರು. ಮೊ:9620445122.

ರಾಜಕೀಯ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ. ಕುಮಾರಸ್ವಾಮಿ

ಮೋದಿ ಅವರ ಬಲಿಷ್ಠ ನಾಯಕತ್ವ, ಸಮರ್ಪಣಾ ಮನೋಭಾವ ಎಲ್ಲರ ಹೃದಯದಲ್ಲಿ ಬೇರೂರಿದೆ: ಹೆಚ್.ಡಿ.

ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಸದೃಢ ನಾಯಕತ್ವ ಹಾಗೂ ರಾಷ್ಟ್ರ ನಿರ್ಮಾಣದಲ್ಲಿನ ಅವರ ಸಮರ್ಪಣ ಭಾವವು ಸಮಸ್ತ ಭಾರತೀಯರ ಹೃದಯಂತರಹದಲ್ಲಿ ಹಾಳವಾಗಿ ನೆಲೆಸಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="120986"]
ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪ ಚುನಾವಣೆಯು ಕಾಂಗ್ರೆಸ್ ಸರ್ಕಾರವನ್ನು ಕಿತ್ತುಹಾಕಲು ಅವಕಾಶ: ಆರ್.ಅಶೋಕ

ಈ ಉಪಚುನಾವಣೆಯಲ್ಲಿ ಬಡವರು ಹಾಗೂ ಶ್ರೀಮಂತರ ನಡುವೆ ಸ್ಪರ್ಧೆ ನಡೆಯಲಿದೆ. ಇದರಲ್ಲಿ ಕಾಂಗ್ರೆಸ್ ಸೋತು ಮುಂದಿನ ರಾಜ್ಯದ ಭವಿಷ್ಯ ತೀರ್ಮಾನವಾಗಲಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ (R. Ashoka) ಹೇಳಿದರು.

[ccc_my_favorite_select_button post_id="120773"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ದೊಡ್ಡಬಳ್ಳಾಪುರ: ನೇಣುಬಿಗಿದು ಕೊಂಡು ಇಬ್ಬರ ಆತ್ಮಹತ್ಯೆ..!

ಕೆಲವೇ ಗಂಟೆಗಳ ಅಂತರದಲ್ಲಿ ಇಬ್ಬರು ಪುರುಷರು ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಸೋಮವಾರ ಸಂಜೆ ದೊಡ್ಡಬಳ್ಳಾಪುರ ಗ್ರಾಮಾಂತರ ಹಾಗೂ ದೊಡ್ಡಬೆಳವಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

[ccc_my_favorite_select_button post_id="120943"]
ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ದೊಡ್ಡಬಳ್ಳಾಪುರ: ಎರಡು ಪ್ರತ್ಯೇಕ ಅಪಘಾತ.. ಇಬ್ಬರ ದುರ್ಮರಣ..!

ಮಂಗಳವಾರ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತದಲ್ಲಿ (Accident) ಇಬ್ಬರು ಸಾವನಪ್ಪಿರುವ ಘಟನೆ ತಾಲೂಕಿನ..*** ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವರದಿಯಾಗಿದೆ.

[ccc_my_favorite_select_button post_id="120965"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!