BengaluruRains; ಧಾರಾಕಾರ ಮಳೆಗೆ ಬೆಂಗಳೂರು ತತ್ತರ; HD ಕುಮಾರಸ್ವಾಮಿ ಟ್ವಿಟ್ಗೆ ನೆಟ್ಟಿಗರ ತಿರುಗೇಟು

ಬೆಂಗಳೂರು: ವಾಯುಭಾರ ಕುಸಿತದ ಕಾರಣ ಸತತವಾಗಿ ಸುರಿಯುತ್ತಿರುವ ಧಾರಕಾರ ಮಳೆಗೆ ಭಾರತದ ಸಿಲಿಕಾನ್ ವ್ಯಾಲಿ ಬೆಂಗಳೂರು ಕೆರೆಯಂತೆ ಆಗಿದ್ದು, ಇಲ್ಲಿನ ಜನಜೀವನ ಅಸ್ತವ್ಯಸ್ತವಾಗಿದೆ. ಆದರೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಇಂಥ ದುಸ್ಥಿತಿಗೆ ರಾಜ್ಯ ಕಾಂಗ್ರೆಸ್ ಸರಕಾರದ ಕೆಟ್ಟ ನೀತಿಗಳೇ ಕಾರಣ ಎಂದು ಕಿಡಿಕಾರಿ ರಾಜಕೀಯ ಪ್ರೇರಿತ ಟ್ವಿಟ್ ಮಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಕಾರಣವಾಗಿದೆ.

ಮಳೆಯಿಂದಾದ ಅವ್ಯವಸ್ಥೆ ಕುರಿತು ಟ್ವಿಟ್ ಮಾಡಿರುವ ಕೇಂದ್ರ ಸಚಿವರು, ಬೆಂಗಳೂರಿನಲ್ಲಿ ಒಂದೇ ದಿನದ ವರುಣನ ಅಬ್ಬರಕ್ಕೆ ಭಾರತದ ಸಿಲಿಕಾನ್ ವ್ಯಾಲಿಯ ಮೂಲಸೌಕರ್ಯ ವ್ಯವಸ್ಥೆ ತತ್ತರಿಸಿ ಹೋಗಿದೆ. ರಾಜ್ಯ ಕಾಂಗ್ರೆಸ್ ಸರಕಾರದ ದುರಾಡಳಿತ ಮತ್ತು ಅಸಮರ್ಪಕ ನಿರ್ವಹಣೆಯಿಂದ ಭಾರತದ ಐಟಿ ಕಾರಿಡಾರ್’ನಲ್ಲಿ ಪ್ರವಾಹಸದೃಶ ಪರಿಸ್ಥಿತಿ ತಲೆದೋರಿದೆ ಎಂದು ಅವರು ದೂರಿದ್ದಾರೆ.

ಒಳಚರಂಡಿ ವ್ಯವಸ್ಥೆ ಹದಗೆಟ್ಟು ರಸ್ತೆಗಳು ನದಿಗಳಾಗಿವೆ. ಸರಕಾರದ ಘೋರ ವೈಫಲ್ಯದಿಂದ ಬೆಂಗಳೂರಿನ ಜನರು ಮಳೆಗೆ ಸಿಕ್ಕಿ ನರಕಯಾತನೆ ಅನುಭವಿಸುತ್ತಿದ್ದಾರೆ. ಆಡಳಿತ ವ್ಯವಸ್ಥೆಯ ಕೆಟ್ಟ ನೀತಿಗಳು ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರವನ್ನು ಹಾಳುಗೆಡವಿದೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದ್ದಾರೆ.

ಹೂಡಿಕೆದಾರ ಸ್ವರ್ಗವಾಗಿದ್ದ ಬೆಂಗಳೂರು, ಜಾಗತಿಕ ಮಟ್ಟದ ತಂತ್ರಜ್ಞಾನದ ನೆಚ್ಚಿನ ನೆಲೆವೀಡಾಗಿದ್ದ ಬೆಂಗಳೂರು ಈಗ ಇನ್ನಿಲ್ಲದ ದುಸ್ಥಿತಿಗೆ ಸಿಲುಕಿ ಕಣ್ಣೀರು ಹಾಕುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕುಮಾರಸ್ವಾಮಿ ಅವರ ಟ್ವಿಟ್

ಕುಮಾರಸ್ವಾಮಿ ಅವರ ಆರೋಪಕ್ಕೆ ನೆಟ್ಟಿಗರು ತಿರುಗೇಟು ನೀಡಿದ್ದು, ಕೇಂದ್ರ ಸಚಿವರಿಗೆ ಮುಜುಗರವನ್ನುಂಟು ಮಾಡುವಂತಿದೆ.

ಕೆಲ ಕಾಮೆಂಟ್ ಹೀಗಿವೆ.

ಈಗ ನೀವೇ ಮುಖ್ಯಮಂತ್ರಿ ಆಗಿದ್ರೆ ಈ ತರಹ ಮಳೆ ಬಂದಿದ್ರೆ ನೀರೆಲ್ಲ ಚರಂಡಿಯಲ್ಲಿ ಹರಿದುಹೊಗ್ತಾ ಇತ್ತಾ ಸರ್ ಇದರಲ್ಲಿ ಎಲ್ಲಾ ಪಕ್ಷದವರ ಪಾಲು ಇದೆ ಅದನ್ನ ಬಿಟ್ಟು ನಿಮ್ಮ ರಾಜಕೀಯಕ್ಕೆ ಯಾಕೆ ಬೆಂಗಳೂರನ್ನ So called ಅಂತಾ ಕರಿತಿರಾ?.

ಸರ್, ನೀವು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಿರಿ. ಈ ಸರ್ಕಾರ ಅಧಿಕಾರಕ್ಕೆ ಬರುವ ಮೊದಲು ನಿಮ್ಮ ಮೈತ್ರಿ ಪಕ್ಷ ಬಿಜೆಪಿ 4 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಬಿಬಿಎಂಪಿಯಲ್ಲೂ ಬಿಜೆಪಿ ಅಧಿಕಾರದಲ್ಲಿತ್ತು. 15 ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಸರ್ಕಾರವನ್ನು ಏಕೆ ದೂರುತ್ತೀರಿ?.

ಅತಿ ಹೆಚ್ಚು ಮಳೆ ಬಂದಾಗ ಇವು ಸರ್ವೇ ಸಾಮಾನ್ಯ, ಯಾವ ಸರ್ಕಾರ ಬಂದ್ರು ಅಷ್ಟೆ ಅವರ ಮೇಲೆ ನೀವು, ನಿಮ್ಮ ಮೇಲೆ ಅವರು ಸದಾ ಮಾತಿನ ಚಾಕಮಕಿ ಅಷ್ಟೆ, ಕೊನೆಗೆ ಬಳಿ ಆಗೋದು ಸಾರ್ವಜನಿಕರು ಅಷ್ಟೆ.

೨೦೧೮ ರಲ್ಲಿ ಅಧಿಕಾರಕ್ಕಾಗಿ ಕಾಂಗ್ರೆಸ್ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ಮಾಡುವಾಗ ಆಡಳಿತ ನೀತಿ ಸರಿಯಾಗಿತ್ತೇ? ಅಥವಾ ತಾವು ಕೆಳಗಿಳಿದ ನಂತರ ಅಧಿಕಾರ ಮುಂದುವರೆಸಿದ ಈಗ ಮೈತ್ರಿ ಮಾಡಿಕೊಂಡಿರುವ ಬಿಜೆಪಿ ಯವರ ಆಡಳಿತ ನೀತಿ ಚೆನ್ನಾಗಿತ್ತೇ? ಆರು ಕೊಟ್ಟರೆ ಅತ್ತೆ ಕಡೆ ಮೂರು ಕೊಟ್ಟರೆ ಸೊಸೆ ಕಡೆ ಅಲ್ಲವೇ!!.

ಯಾವ ಸರ್ಕಾರ ಇದ್ದರು ಮಳೆಗೆ ಬೆಂಗಳೂರಿನ ರಸ್ತೆಗಳು ನೀರಿನಿಂದ ಮುಳುಗುತ್ತವೆ ಕಾರಣ ಇಲ್ಲಿನ ಚರಂಡಿ ವ್ಯವಸ್ಥೆಗಳು ಬ್ರಿಟಿಷ್ ಕಾಲದ್ದು ನೀವುಗಳು ಅದನ್ನೆ ಮುಂದುವರಿಸಿಕೊಂಡು ಬಂದಿದ್ದೀರ ಜೊತೆಗೆ ರಾಜಕಾಲುವೆ ಮುಚ್ಚಿದ್ದೀರ.

ತಮ್ಮ ಆಡಳಿತಾವಧಿಯಲ್ಲಿ ಹೇಗಿತ್ತು ಎಂಬುದನ್ನು ವಿವರಿಸಿ 😜 ಮೂಲಭೂತ ಸೌಕರ್ಯಗಳನ್ನು ಒದಗಿಸುವುದು ಪ್ರಾರಂಭಿಕ ಹಂತದಲ್ಲಿ ರೂಪುಗೊಂಡಿದ್ದರೆ ಈ ಅವ್ಯವಸ್ಥೆ ಹೀಗಿರಲಾರದು.

ಅಣ್ಣ ನಿಮ್ಮಅಭಿಮಾನಿ ,ನಿಖಿಲಣ್ಣಂಗೆ ಟಿಕೆಟ್ ಕೊಡ್ಲೆಬೇಕು
ನಿಖಿಲ್ ಅಣ್ಣ ಗೆದ್ದು ಬರ್ಬೇಕು ,
ಈ ಕಿತಾ ಗೆಲ್ದೆ ಸೋತ್ರೆ ಮುಂದಿನ್ ಕಿತಾ ಗೆದ್ದೆ ಗೆಲ್ತಾರೆ
ಸಿಎಂ ಆಗೆ ಆಗ್ಬೇಕು
ಕಾರ್ಯಕರ್ತರು ಒತ್ತಡ ಹಾಕ್ತೀವಿ ಹೂ ಅನ್ನಿ ಅಣ್ಣ.

ನೀವು ಬಿಡಿ ಸಕತ್ತಾಗಿ ಆಡಳಿತ ಮಾಡಿದ್ರೆ.

ಉಸಾರು ಕಣಣ್ಣ ಈಗ ೧೮ ಇಂಗೆ ಆಡ್ತಾ ಇದ್ರೆ ಜನ ೮ಕ್ಕೆ ತಂದು ಬುಡ್ತಾರೆ 🙏🙏.

English post ಅಲಿ “so called” ಅಂತಾ ಹಾಕಿ ಇಲ್ಲಿ ಯಾಕ್ ಹಾಕಿಲ ಸ್ವಾಮಿ? ಯಾರನ್ ಮೆಚಿಸೋಕೆ ಈ ನಾಟಕಗಳು?

All those infrastructure by bjp 40% commission government.

೨೫೦ ಚದರ ಚ ಕಿ ಮೀ ಇದ್ದ ಮೂಲ ಬೆಂಗಳೂರಿಗೆ ಸೌಕರ್ಯಗಳೆ ಇಲ್ಲದ 550 ಚ ಕಿ ಮೀ unplanned areaವನ್ನು ರಾತ್ರೊ ರಾತ್ರಿ ಸೇರಿಸಿದ್ದು ತಮ್ಮ ಮುಖ್ಯಮಂತ್ರಿ ಅವಧಿಯಲ್ಲಿ , ಈಗಿನ ಸಂಕಷ್ಟಗಳಿಗೆ ಅದುವೇ ಮೂಲಕಾರಣ

ನಿಮ್ಮ ಬಿಜೆಪಿ ಅಧಿಕಾರದಲ್ಲಿ ಇದ್ದಾಗ್ಲೂ ಇದೇ ರೀತಿ ತುಂಬಾ ಸಾರಿ ನೀರು ತುಂಬಿದೆ ಅಣ್ಣ ನೀವು ಏನು ಮಾಡಿದ್ರಿ ಬೇಕಾದರೆ ದಿನಾಂಕ ಸಮೇತ ವಿಡಿಯೋ ಕಳುಹಿಸುತ್ತಿನಿ ನೋಡಿ ಕಣ್ಣು ತುಂಬಿಕೊಳ್ಳಿ.

ಕೇವಲ ಕಾಂಗ್ರೆಸ್ ಮಾತ್ರ ಅಲ್ಲ ಇರುವ 3 ಪಕ್ಷಗಳ ಭ್ರಷ್ಟಾಚಾರ ಆಡಳಿತದಿಂದ ನಮ್ಮ ರಾಜ್ಯ ತತ್ತರಿಸಿ ವಿನಾಶದ ಅಂತದಲ್ಲಿ ಇದೆ ಏನೇ ಆದರೂ ನಮ್ಮ ಜನ ಇದರ ಬಗ್ಗೆ ಆಲೋಚನೆ ಸಹ ಮಾಡುವುದಿಲ್ಲ ಬಿಡಿ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!