ದೊಡ್ಡಬಳ್ಳಾಪುರ ಸಮೀಪದ ಕ್ವಿನ್ ಸಿಟಿ: ತೇಜಸ್ವಿ ಸೂರ್ಯ ಆಸಕ್ತಿಗೆ ಸಚಿವರ ಮೆಚ್ಚುಗೆ

ಬೆಂಗಳೂರು: ರಾಜ್ಯ ಸರಕಾರದ ಮಹತ್ತ್ವಾಕಾಂಕ್ಷಿ ಯೋಜನೆಯಾಗಿರುವ ಕ್ವಿನ್ ಸಿಟಿ ಕುರಿತು ಆಸಕ್ತಿ ತಾಳಿ, ಇದರ ಬಗ್ಗೆ ಚೆನ್ನೈನಲ್ಲಿರುವ ಸಿಂಗಪುರದ ಕಾನ್ಸುಲ್ ಜನರಲ್ ಎಡ್ಗರ್ ಪ್ಯಾನ್ ಜತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಚರ್ಚಿಸಿರುವುದನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸ್ವಾಗತಿಸಿದ್ದಾರೆ.

ಪ್ಯಾನ್ ಅವರೊಂದಿಗೆ ಕ್ವಿನ್ ಸಿಟಿ ಬಗ್ಗೆ ನಡೆಸಿದ ವಿಚಾರ ವಿನಿಮಯ ಕುರಿತು ತೇಜಸ್ವಿ ಎಕ್ಸ್’ನಲ್ಲಿ ತಮ್ಮ ಸಂತೋಷ ಹಂಚಿಕೊಂಡಿದ್ದರು. ಇದಕ್ಕೆ ಸ್ಪಂದಿಸಿರುವ ಸಚಿವರು,ರಾಜ್ಯದ ಅಭಿವೃದ್ಧಿ ಮತ್ತು ಹಿತಾಸಕ್ತಿಗಳು ಚುನಾಯಿತ ಜನಪ್ರತಿನಿಧಿಗಳ ಮೊದಲ ಆದ್ಯತೆಯಾಗಿರಬೇಕು. ತೇಜಸ್ವಿ ಸೂರ್ಯ ಅವರು ತಮ್ಮ ಪಕ್ಷದ ಆಚೆಗೂ ಯೋಚಿಸಿ, ರಾಜ್ಯ ಸರಕಾರದ ಉಪಕ್ರಮಗಳನ್ನು ಸ್ವಾಗತಿಸುತ್ತಿರುವುದು ಸಂತೋಷದ ಸಂಗತಿಯಾಗಿದೆ’ ಎಂದಿದ್ದಾರೆ.

ರಾಜ್ಯ ಮತ್ತು ಕೇಂದ್ರ ಸರಕಾರ ಎರಡರ ಪಾತ್ರವೂ ಇರುವ ಧಾರವಾಡದ ಬಿಎಂಐಸಿ ಯೋಜನೆಯನ್ನು ಸ್ವತಃ ತಾವು ಮತ್ತು ಮುಖ್ಯಮಂತ್ರಿ ಸಿದ್ಧರಾಮಯ್ಯ ಈ ಸರಕಾರದ ಮೊದಲ ಬಜೆಟ್ಟಿನಲ್ಲೇ ಮುಂದಕ್ಕೆ ಕೊಂಡೊಯ್ದೆವು. ತೇಜಸ್ವಿ ಅವರಂತೆಯೇ ರಾಜ್ಯದ ಉಳಿದ ಸಂಸದರು ಕೂಡ ಕೇಂದ್ರದಿಂದ ಹೆಚ್ಚಿನ ಯೋಜನೆಗಳನ್ನು ತರಬೇಕು. ಮುಖ್ಯವಾಗಿ ರಾಜ್ಯಕ್ಕೆ ಒಂದಾದರೂ ಸೆಮಿಕಂಡಕ್ಟರ್ ಯೋಜನೆಯ ತುರ್ತಿದೆ. ಈ ಯೋಜನೆಗೆ ಗುಜರಾತಿನಂತೆಯೇ ನಾವೂ ಸಹ ಎಲ್ಲ ಬಗೆಯ ಸಹಕಾರ ಮತ್ತು ಹಣಕಾಸು ನೆರವು ನೀಡಲು ಸಿದ್ಧರಿದ್ದೇವೆ ಎಂದು ಅವರು ಒತ್ತಾಯಿಸಿದ್ದಾರೆ.

ತೇಜಸ್ವಿ ಅವರು ತಮ್ಮ `ಎಕ್ಸ್’ ಸಂದೇಶದಲ್ಲಿ, ನಗರ ವಿನ್ಯಾಸ, ಸಾರಿಗೆ, ತ್ಯಾಜ್ಯ ಮತ್ತು ನೀರಿನ ನಿರ್ವಹಣೆಯಲ್ಲಿ ಸಿಂಗಪುರ ಪರಿಣತಿ ಹೊಂದಿದೆ. ಇದು, ಕ್ಷಿಪ್ರವಾಗಿ ನಗರೀಕರಣವನ್ನು ಕಾಣುತ್ತಿರುವ ಭಾರತದ ನೆರವಿಗೆ ಬರಲಿದೆ. ಕ್ವಿನ್ ಸಿಟಿ ಯೋಜನೆಯಿಂದ ಬೆಂಗಳೂರಿನ ಸುತ್ತಮುತ್ತ ಬಂಡವಾಳ ಹೂಡಿಕೆ ಉತ್ತೇಜನ ಸಿಗಲಿದೆ.

ಜತೆಗೆ ಜಾಗತಿಕ ಮಟ್ಟದ ಕೈಗಾರಿಕೆಗಳು, ಸಂಶೋಧನಾ ಕೇಂದ್ರಗಳು ಮತ್ತು ಆಸ್ಪತ್ರೆಗಳು ಬರಲಿದೆ. ಎಡ್ಗರ್ ಅವರೊಂದಿಗಿನ ಚರ್ಚೆಯಲ್ಲಿ ಎರಡೂ ದೇಶಗಳ ನಡುವಿನ ಸಹಭಾಗಿತ್ವ ಮತ್ತು ಪರಸ್ಪರ ಕಲಿಕೆ ಕುರಿತೂ ಚರ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ರಾಜಕೀಯ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಸೇವ್‌ ಮೈಸೂರು ಸಿಲ್ಕ್‌ ಎಂಬ ಜನಾಂದೋಲನ ಮಾಡುತ್ತೇವೆ: ಆರ್‌.ಅಶೋಕ

ಈ ಯೋಜನೆ ಕೈ ಬಿಡದೇ ಇದ್ದರೆ ಬಿಜೆಪಿಯಿಂದ ʼಸೇವ್‌ ಮೈಸೂರು ಸಿಲ್ಕ್‌ʼ ಎಂಬ ಹೆಸರಿನ ಜನಾಂದೋಲನವನ್ನು ರೂಪಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ (R. Ashoka) ಎಚ್ಚರಿಕೆ ನೀಡಿದರು.

[ccc_my_favorite_select_button post_id="119800"]
ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಮನರೇಗಾ ಮರುಸ್ಥಾಪಿಸುವ ಕಾಂಗ್ರೆಸ್ ಹೋರಾಟವನ್ನು ಬೆಂಬಲಿಸಿ: ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಕರೆ

ಗ್ರಾಮೀಣ ಜನರ ಉದ್ಯೋಗದ ಹಕ್ಕನ್ನು ಕಸಿಯುತ್ತಿರುವ ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಕರೆ ನೀಡಿದರು.

[ccc_my_favorite_select_button post_id="119685"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ದೊಡ್ಡಬಳ್ಳಾಪುರ: ಕೌಟುಂಬಿಕ ಕಲಹ ಶಂಕೆ.. ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ವ್ಯಕ್ತಿಯೋರ್ವ ತಂದೆಯ ಮನೆಯಲ್ಲಿ ಆತ್ಮಹತ್ಯೆಗೆ ( Suicide) ಶರಣಾಗಿರುವ ಘಟನೆ ತಾಲೂಕಿನ *** ನಡೆದಿದೆ.

[ccc_my_favorite_select_button post_id="119787"]
ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ದೊಡ್ಡಬಳ್ಳಾಪುರ: Accident.. ಗೀತಂ ವಿವಿ ವಿದ್ಯಾರ್ಥಿ ಸ್ಥಳದಲ್ಲೇ ಸಾವು

ಮುಂದೆ ಸಾಗುತ್ತಿದ್ದ ಟಿಪ್ಪರ್ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ (Accident) ಓರ್ವ ವಿದ್ಯಾರ್ಥಿ ಸಾವನಪ್ಪಿದ್ದು, ಮತ್ತೋರ್ವ ಗಾಯಗೊಂಡಿರುವ ಘಟನೆ ನಗರದ ಹೊರವಲಯದಲ್ಲಿರುವ ರೈಲ್ವೆ ಸ್ಟೇಷನ್ ಪೆಟ್ರೋಲ್ ಬಂಕ್ ಮುಂಭಾಗ ಸಂಭವಿಸಿದೆ.

[ccc_my_favorite_select_button post_id="119695"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!