ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಹೊರ ಬರಲೇಬೇಕು; ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಆಶೀರ್ವಚನ

ದೊಡ್ಡಬಳ್ಳಾಪುರ: ನಮ್ಮ ಧರ್ಮ, ಸಂಸ್ಕೃತಿ, ಪರಂಪರೆಗಳ ಬಗ್ಗೆ ದೃಢವಾದ ತಿಳುವಳಿಕೆ ಇದ್ದಾಗ ಮಾತ್ರ ನಮ್ಮನ್ನು ಯಾರೂ ದಾರಿ ತಪ್ಪಿಸಲು ಸಾಧ್ಯವಿಲ್ಲ. ಧರ್ಮವೇ ಸತ್ಯವಾಗಿದ್ದೆಂಬ ಸತ್ಯಾಂಶ ಒಂದಲ್ಲ ಒಂದು ದಿನ ಹೊರ ಬರಲೇಬೇಕು ಎಂದು ಶೃಂಗೇರಿ ಶಾರದಾ ಪೀಠದ ಜಗದ್ಗುರು ವಿಧುಶೇಖರ ಭಾರತೀ ಸ್ವಾಮೀಜಿ ಪ್ರತಿಪಾದಿಸಿದರು.

ತಾಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಹಿಸಿ ಅವರು ಆಶೀರ್ವಚನ ನೀಡಿದರು.

ಇಂದು ಸಮಾಜದಲ್ಲಿ ನಡೆಯುತ್ತಿರುವ ಹಲವು ಅಕ್ರಮಗಳು,ವೈರುಧ್ಯಗಳ ನಡುವೆಯೂ ಧರ್ಮ ತನ್ನದೇ ಆದ ಅಸ್ತಿತ್ವ ಹೊಂದಿದೆ ಎನ್ನುವುದಕ್ಕೆ ಆಸ್ತಿಕ ಸಮಾಜದ ಈ ಸಮಾಗಮ ನಿದರ್ಶನವಾಗಿದೆ. ಆದಿಗುರು ಶಂಕರಾಚಾರ್ಯರು ಪ್ರತಿಪಾದಿಸಿದ ಧರ್ಮ ಸಿದ್ದಾಂತಗಳು ಆಳವಾಗಿ ಬೇರೂರಿವೆ. ಭಗವಂತ ಒಬ್ಬನೇ ಆಗಿದ್ದು, ಆತ ಬೇರೆ ಬೇರೆ ರೂಪಗಳನ್ನು ಅವತರಿಸಿ, ಭಕ್ತನನ್ನು ಕಾಪಾಡುತ್ತಿದ್ದಾನೆ ಎನ್ನುವುದನ್ನು ಶಂಕರಾಚಾರ್ಯರು ನಿರೂಪಿಸಿದ್ದಾರೆ.

ಪ್ರಾಣಿಗಳಿಗಿಂತ ಭಿನ್ನವಾಗಿ ಬದುಕುವ ಮನುಷ್ಯ ಅವುಗಳಿಂದ ಹೊರತಾಗಿ ಬದುಕದಿದ್ದರೆ, ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇರುವುದಿಲ್ಲ. ಈ ದಿಸೆಯಲ್ಲಿ ಧರ್ಮಾಚರಣೆ ಪ್ರಮುಖ ಪಾತ್ರ ವಹಿಸುತ್ತದೆ.

ಮಾನವನ ಆಯುಷ್ಯ 100 ವರ್ಷಗಳು ಎಂದಿಟ್ಟುಕೊಂಡರೆ ಆತ ಮೋಕ್ಷ ಪಡೆಯಲು ಹಲವಾರು ಜನ್ಮಗಳನ್ನು ತಾಳಿ ಬರಬೇಕಿದೆ. ಪ್ರತಿ ಜನ್ಮದಲ್ಲಿಯೂ ಧರ್ಮಾಚರಣೆ ಹಾಗೂ ಪರೋಪಕಾರಗಳನ್ನು ಮಾಡಿದಾಗ ಮಾತ್ರ, ಜನ್ಮ ಸಾರ್ಥಕತೆ ಪಡೆಯುತ್ತದೆ. ಇಲ್ಲವಾದಲ್ಲಿ ಮಾನವ ಜನ್ಮಕ್ಕೆ ಯಾವುದೇ ಅರ್ಥವಿರುವುದಿಲ್ಲ.

ಬದುಕಿನಲ್ಲಿ ಸಂಪಾದನೆಯೊಂದೇ ಮುಖ್ಯವಲ್ಲ. ಅದರೊಂದಿಗೆ ನಮ್ಮ ಬದುಕಿನ ಸ್ವರೂಪ ಮುಖ್ಯವಾಗುತ್ತದೆ. ದುಃಖ, ಕಷ್ಟಗಳು ಬರಬಾರದು ಎಂದರೆ ನಾವು ಕಷ್ಟಪಡಬೇಕು. ಅದಕ್ಕಾಗಿ ಪ್ರಯತ್ನ ಪಡಬೇಕು. ಸಾಧನೆ ಮಾಡಬೇಕು. ಹಲವು ಜನ್ಮಗಳ ಆಚರಣೆಯೇ ಕೊನೆಗೆ ಮೋಕ್ಷ ರೂಪ ಪಡೆಯುತ್ತದೆ.

ಭಗವಂತ ನಾನಾ ಅವತಾರಗಳನ್ನು ಎತ್ತಿರುವುದು ಸಹ ಅಧರ್ಮವನ್ನು ಅಳಿಸಿ, ಧರ್ಮವನ್ನು ಉಳಿಸಬೇಕು ಎನ್ನುವ ಉದ್ದೇಶಕ್ಕಾಗಿಯೇ. ಶಂಕರಾಚಾರ್ಯರು ಆತ್ಮ ಮತ್ತು ಪರಮಾತ್ಮ ಎಂಬುದು ಎರಡು ಬೇರೆ ಬೇರೆ ಅಂಶಗಳಲ್ಲ. ಇರುವುದು ಒಂದೇ. ಆತ್ಮನೇ ಪರಮಾತ್ಮನು. ಪರಮಾತ್ಮನೇ ಆತ್ಮನು ಎಂದು ಅದ್ವೈತ ಸಿಧ್ಧಾಂತದ ಮೂಲ ಸಾರವನ್ನು ಸಾರಿದರು. ನಮ್ಮ ಗುರು ಹಿರಿಯರು ಹಾಕಿಕೊಟ್ಟ ಮಾರ್ಗದಲ್ಲಿ ನಡೆದು ಧರ್ಮಾಚರಣೆ ಮಾಡುವ ಮೂಲಕ ನಮ್ಮ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳಬೇಕು. ನಮ್ಮ ಧರ್ಮ ಪರಂಪರೆಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯದ ದರ್ಮದರ್ಶಿ ಹೆಚ್.ಎಸ್.ಅಶ್ವಥ್ ನಾರಾಯಣ ಕುಮಾರ್ ಮತ್ತಿತರರಿದ್ದರು.

ರಾಜಕೀಯ

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ದೊಡ್ಡಬಳ್ಳಾಪುರ ನಗರಸಭೆ ಬಜೆಟ್ ಸಭೆ: ಆಡಳಿತ ಮಂಡಳಿ ವೈಫಲ್ಯ ಬಯಲು ಮಾಡಿದ ಸಾರ್ವಜನಿಕರು

ನಗರಸಭೆ (Doddaballapur Municipal Council) ವತಿಯಿಂದ 2026-27ನೇ ಸಾಲಿನ ಆಯ-ವ್ಯಯ (Budget) ಕುರಿತ ಸಾರ್ವಜನಿಕ ಸಮಾಲೋಚನೆಯ ಸಭೆ ನಗರದ ಡಾ.ರಾಜ್ ಕುಮಾರ್ ಕಲಾ ಮಂದಿರದಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರ ಆನಂದ್ ಅಧ್ಯಕ್ಷತೆಯಲ್ಲಿ ನಡೆಯಿತು. ಆದರೆ

[ccc_my_favorite_select_button post_id="119326"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು ಆಯ್ಕೆ

ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ ಆರ್.ಎಲ್. ಜಾಲಪ್ಪ ತಾಂತ್ರಿಕ ಕಾಲೇಜಿನ ವಿದ್ಯಾರ್ಥಿಗಳು

ಆರ್.ಎಲ್. ಜಾಲಪ್ಪ (R.L. Jalapppa) ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿಯರಾದ ಗೌತಮಿ .ಬಿ ಹಾಗೂ ಹೇಮಾ .ಬಿ ವಿ ಅವರು ಆಲ್ ಇಂಡಿಯಾ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಗೆ (All India Ball Badminton Competition) ವಿಶ್ವೇಶ್ವರಯ್ಯ

[ccc_my_favorite_select_button post_id="119295"]

RCB: ಮತ್ತೆ ಕಪ್ ನಮ್ದು

[ccc_my_favorite_select_button post_id="119174"]

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ.

[ccc_my_favorite_select_button post_id="118983"]

ಜ.30 ರಂದು ಜಿಲ್ಲಾ ಮಟ್ಟದ ಸರ್ಕಾರಿ ನೌಕರರ

[ccc_my_favorite_select_button post_id="118943"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!