113 ಕೋಟಿ ರೂ. ಒಡೆಯ ನಿಖಿಲ್ ಕುಮಾರಸ್ವಾಮಿ: ಸಾಲ ಎಷ್ಟು ಗೊತ್ತಾ..?

ಚನ್ನಪಟ್ಟಣ: ತೀವ್ರ ಕುತೂಹಲ ಕೆರಳಿಸಿರುವ ಹೈವೊಲೇಜ್ ಕ್ಷೇತ್ರವೆಂದೇ ಬಿಂಬಿತವಾಗಿರುವ ಚನ್ನ ಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ಕುಮಾರಸ್ವಾಮಿ ಎನ್‌ಡಿಎ ಅಭ್ಯರ್ಥಿಯಾಗಿ ನಿನ್ನೆ ನಾಮಪತ್ರ ಸಲ್ಲಿಸಿದರು.

ನಗರದ ತಾಲೂಕು ಕಚೇರಿಗೆ ಅಪಾರಬೆಂಬಲಿಗರೊಂದಿಗೆ ಶುಕ್ರವಾರ ಮಧ್ಯಾಹ್ನ1.30ಕ್ಕೆ ಆಗಮಿಸಿದ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಮೂರು ಪ್ರತ್ಯೇಕ ಪ್ರತಿಗಳೊಂದಿಗೆ ಉಮೇದುವಾರಿಕೆ ಸಲ್ಲಿಸಿದರು.

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂಸದಾನಂದಗೌಡ, ಸಂಸದ ಬಿ.ವೈ. ರಾಘವೇಂದ್ರ, ಪತ್ನಿ ರೇವತಿ ಅವರೊಂದಿಗೆ ಒಂದು ಪ್ರತಿ ನಾಮಪತ್ರ, ಸಂಸದ ಡಾ.ಮಂಜುನಾಥ್, ರಾಜ್ಯ ಸಭೆ ಸದಸ್ಯ ಲೆಹರ್ ಸಿಂಗ್‌, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಅಜಯ್, ಮುಖಂಡ ಪ್ರಸನ್ನ ಪಿ.ಗೌಡ, ಅವರೊಂದಿಗೆ ಎರಡನೇ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಬಿಡಿಸಿಸಿ ಬ್ಯಾಂಕ್‌ ನಿರ್ದೇಶಕ ಕುಕ್ಕೂರು ದೊಡ್ಡಜಯರಾಮು, ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ಹಾಪ್‌ಕಾಮ್ಸ್‌ ದೇವರಾಜು ಅವರೊಂದಿಗೆ ಮೂರನೇ ಪ್ರತಿ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಗೆ ಚನ್ನಪಟ್ಟಣಕ್ಕೆ ಆಗಮಿಸುವ ಈ ಮುನ್ನ ಬೆಂಗಳೂರಿನ ಜೆ.ಪಿ.ನಗರದ ಶ್ರೀ ತಿರುಮಲಗಿರಿ ವೆಂಕಟರಮಣ ದೇವಸ್ಥಾನದಲ್ಲಿ ಪತ್ನಿ ಯೊಂದಿಗೆ ಪೂಜೆ ಸಲ್ಲಿಸಿದ ನಿಖಿಲ್, ತಾತಾ, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಆಶೀರ್ವಾದ ಪಡೆದುಕೊಂಡರು. ನಂತರ ಚನ್ನಪಟ್ಟಣಕ್ಕೆ ಆಗಮಿಸಿದ ಅವರು, ತಂದೆ ಕುಮಾರಸ್ವಾಮಿ ಹಾಗೂ ಪತ್ನಿಯೊಂದಿಗೆ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದರು.

ಶಕ್ತಿ ಪ್ರದರ್ಶನ: ನಿಖಿಲ್ ನಾಮಪತ್ರ ಸಲ್ಲಿಕೆಗೆ ಮುನ್ನ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶಿಸಿದರು. ಕೆಂಗಲ್ ಆಂಜನೇಯಸ್ವಾಮಿ ದೇವ ಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ನಗರದ ಶೇರ್ವಾ ಹೋಟೆಲ್ ಬಳಿಯಿಂದ ಅದ್ದೂರಿ ಮೆರವಣಿಗೆ ನಡೆಸುವ ಮೂಲಕ ಎನ್‌ಡಿಎ ಶಕ್ತಿ ಪ್ರದರ್ಶನ ನಡೆಸಿತು.

113.4 ಕೋಟಿ ರೂ ಒಡೆಯ; ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ ಸ್ಪರ್ಧೆ ಬಯಸಿ ಎನ್‌ಡಿಎ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ನಿಖಿಲ್ ಕುಮಾರ ಸ್ವಾಮಿ ಕುಟುಂಬ 113.4 ಕೋಟಿ ರೂ. ಮೌಲ್ಯದ ಚರಾಸ್ತಿ – ಸ್ಥಿರಾಸ್ತಿ ಹೊಂದಿರುವುದಾಗಿ ಘೋಷಿಸಿ ಕೊಂಡಿದ್ದಾರೆ.

2019ರ ಲೋಕಸಭಾ ಚುನಾ ವಣೆಯಲ್ಲಿ ಮಂಡ್ಯ ಕ್ಷೇತ್ರದಿಂದ ಸ್ಪರ್ಧಿಸಿದ್ದಾಗ (ನಿಖಿಲ್ ಮದು ವೆಗು ಮುನ್ನ) 75 ಕೋಟಿ ಹಾಗೂ 2023ರ ರಾಮನಗರ ವಿಧಾನಸಭಾ ಕ್ಷೇತ್ರ ಚುನಾವಣೆ ಯಲ್ಲಿ ನಾಮಪತ್ರದೊಂದಿಗೆ ಸಲ್ಲಿಸಿರುವ ಅಫಿ ಡೆವಿಟ್‌ನಲ್ಲಿ 104.96 ಕೋಟಿ ಆಸ್ತಿ ಹೊಂದಿದ್ದ ನಿಖಿಲ್ ಕುಟುಂಬ, 2024ರ ಚನ್ನಪಟ್ಟಣ ಕ್ಷೇತ್ರ ಉಪಚುನಾವಣೆಯಲ್ಲಿ 113.4 ಕೋಟಿ ಆಸ್ತಿ ಘೋಷಿಸಿದೆ. ಕೇವಲ ಒಂದೂವರೆ ವರ್ಷದಲ್ಲಿ 8.44 ಕೋಟಿ ರೂ. ಆಸ್ತಿ ವೃದ್ಧಿಯಾಗಿದೆ.

ನಿಖಿಲ್ ಅವರ ಚರಾಸ್ತಿ ಮೌಲ್ಯ 29.34 ಕೋಟಿ ರೂ. ಸ್ಥಿರಾಸ್ತಿ ಮೌಲ್ಯ 78.14 ಕೋಟಿ
ರೂ. ಸೇರಿ ಒಟ್ಟು 107.48 ಕೋಟಿ ರೂ. ಹಾಗೂ ಪತ್ನಿ ರೇವತಿ ಬಳಿ 43.43 ಲಕ್ಷ ರೂ. ಮೌಲ್ಯದ ಸ್ಥಿರಾಸ್ತಿ ಮತ್ತು 5.49 ಕೋಟಿ ರೂ. ಮೌಲ್ಯದ ಚರಾಸ್ತಿ ಸೇರಿ ಒಟ್ಟು 5.92 ಕೋಟಿ ರೂ. ಮೌಲ್ಯದ ಆಸ್ತಿ ಇದೆ. ನಿಖಿಲ್ ಮತ್ತು ರೇವತಿ ಕುಟುಂಬದ ಒಟ್ಟು ಚರಾಸ್ತಿ – ಸ್ಥಿರಾಸ್ತಿ ಮೌಲ್ಯ 113.4 ಕೋಟಿ ರೂ.ಗಳಾಗಿದೆ.

2021-2200 ವಾರ್ಷಿ ಕ 4.27 ಕೋಟಿ ರು. ಆದಾಯ ಘೋಷಿಸಿದ್ದರೆ, 2022-23ನೇ ಸಾಲಿನಲ್ಲಿ 2.38 ಕೋಟಿ ರೂ., ಈಗ ಸಲ್ಲಿಸಿರುವ ಆಸ್ತಿ ವಿವರಣೆಯಲ್ಲಿ 2023-24 ನೇ ಸಾಲಿನಲ್ಲಿ 1.69 ಕೋಟಿ ರೂ. ಗಳಿವೆ ಎಂದು ಹೇಳಿಕೊಂಡಿದ್ದಾರೆ.

ನಿಖಿಲ್ ಅವರ ಬಳಿ ಸದ್ಯ ನಗದು 27,760 ರೂ. ಇದ್ದರೆ, ಪತ್ನಿ ಬಳಿ 3.53 ಲಕ್ಷ ರೂ.ಇದೆ. ನಿಖಿಲ್ ಮಾಲೀಕತ್ವದ ಚನ್ನಾಂ ಬಿಕ ಫಿಲಂಸ್ 4.38 ಲಕ್ಷ ರೂ.ಇದೆ. ವಿವಿಧ ಬ್ಯಾಂಕು ಗಳಲ್ಲಿ ವೈಯಕ್ತಿಕ 24.23 ಕೋಟಿ ರೂ. ಇದೆ. ಎನ್‌.ಕೆ. ಎಂಟರ್ಟೈನ್ವೆಂಟ್ಸ್ ಹೆಸರಿನ ಖಾತೆಯಲ್ಲಿ 20.48 ಲಕ್ಷ ರೂ. ಇದೆ.

ಚನ್ನಾಂಬಿಕ ಫಿಲಿಮ್ಸ್‌ ಹೆಸರಿನ ಖಾತೆಗಳಲ್ಲಿ 5, ಮೌಲ್ಯ 92 ಲಕ್ಷ ರೂ.ಇದೆ. ಕಸ್ತೂರಿ ಮೀಡಿಯಾ ಪ್ರೈ.ಲಿನಲ್ಲಿ ಹೂಡಿಕೆ 76 ಲಕ್ಷ ರೂ. ಹಾರಿ ಜಾನ್‌ ರಿಯಾಲಿಟಿ ಸಂಸ್ಥೆಯಲ್ಲಿ 60 ಲಕ್ಷ ರೂ., ನಾರ್ಥ ಆರ್ಕ್ ಸಂಸ್ಥೆಯಲ್ಲಿ 30 ಲಕ್ಷ ರೂ. ಹೂಡಿಕೆ ಮಾಡಿದ್ದಾರೆ.

ನಿಖಿಲ್ ಬಳಿ 39.84 ಲಕ್ಷ ರೂ. ಮೌಲ್ಯದ ಇನ್ನೋವಾ ಹೈಕ್ರಾಸ್ ಕೃಷಿಯೇ ಕಾರಿದೆ. ಇವರ ಮಾಲೀಕತ್ವದ ಎನ್.ಕೆ.ಎಂಟ ರ್ಟೈನೆಂಟ್ ಸಂಸ್ಥೆಯಿಂದ ಖರೀದಿಸಿರುವ ರೇಂಜ್ ರೋವರ್‌ ಕಾರು, ವ್ಯಾನಿಟಿ ವ್ಯಾನ್ (ಜಿಮ್), ಇನ್ನೋವ ಕ್ರಿಸ್ಟ ಕಾರು, ವ್ಯಾನಿಟಿ ವ್ಯಾನ್ (ಕ್ಯಾರವಾನ್) ವಾಹನಗಳಿವೆ. 2023ರಲ್ಲಿ ಘೋಷಿಸಿಕೊಂಡಿದ್ದ ಲ್ಯಾಂಬೊಗ್ನಿ ವೆಂಟೋರ್‌ ಕಾರು ಈ ಬಾರಿಯ ಆಸ್ತಿ ಘೋಷ ಣೆಯಲ್ಲಿ ನಮೂದಾಗಿಲ್ಲ.

ನಿಖಿಲ್ ಬಳಿ 1488.44 ಗ್ರಾಂ ಚಿನ್ನಾಭರಣದ ಸದ್ಯದ ನಲ್ಲಿ ಒದ ಮಾರುಕಟ್ಟೆ ಮೌಲ್ಯ 1.96 ಕೋಟಿ ರೂ., 16 ಕೆ.ಜಿ ಬೆಳ್ಳಿ ಆಭರಣಗಳ ಮೌಲ್ಯ 15.55 ಲಕ್ಷ ರೂ.ಗಳಾಗಿದೆ. ಪತ್ನಿ ರೇವತಿ ಬಳಿ 1411.96 ಗ್ರಾಂ ಚಿನ್ನವಿದ್ದು, ಇದರ ಮೌಲ್ಯ 1.04ಕೋಟಿ ರೂ.ಗಳಾದರೆ, 32.56 ಲಕ್ಷ ರೂ. ಮೌಲ್ಯದ ಬ್ಯಾಂಕು ಬೆಳ್ಳಿ ಆಭರಣ, 12.59 ಕ್ಯಾರೆಟ್ ವಜ್ರದ ಮೌಲ್ಯ 12.46 ಲಕ್ಷ ರೂ.ಗಳಾಗಿದೆ.

ಸ್ಥಿರಾಸ್ತಿ ವಿವರ: 2023ರಲ್ಲಿ ನಿಖಿಲ್ ಹೆಸರಿನಲ್ಲಿ ಕೃಷಿ ಭೂಮಿ ಇರಲಿಲ್ಲ. ಈ ಬಾರಿ ಬಿಡದಿ ಹೋಬಳಿಯಲ್ಲಿ 4 ಎಕರೆ ಕೃಷಿ ಭೂಮಿ ಕೊಂಡಿರುವುದಾಗಿ ತಿಳಿಸಿದ್ದಾರೆ. ಇದರ ಮಾರುಕಟ್ಟೆ ಮೌಲ್ಯ 1.34 ಕೋಟಿ ರೂ. ಕೃಷಿಯೇತರ ಭೂಮಿ ಇಲ್ಲ.

ಬೆಂಗಳೂರಿನ ರಿಚಮಂಡ್‌ ಟೌನ್‌ನಲ್ಲಿ 21500 ಚದರಡಿಯ ವಾಣಿಜ್ಯ ಕಟ್ಟಡವಿದೆ. 2014ರಲ್ಲಿ ಇವರು ಈ ಆಸ್ತಿಯನ್ನು 5.47 ಕೋಟಿ ರೂ.ಗಳಿಗೆ ಖರೀದಿ ಸಿದ್ದರು. ಇದರ ಪ್ರಸಕ್ತ ಮಾರುಕಟ್ಟೆ ಮೌಲ್ಯ 38 ಕೋಟಿ ರೂ., ತಮ್ಮ ಬಳಿ ವಸತಿ ಕಟ್ಟಡಗಳು ಇಲ್ಲ.

ಪತ್ನಿ ರೇವತಿ ತಮಗೆ ಕೊಡುಗೆಯಾಗಿ ಬಂದಿರುವ ಬೆಂಗಳೂರು ಅತ್ತಿಗುಪ್ಪೆಯಲ್ಲಿರುವ ತಿರುಮಲ ಲಕ್ಟೋರಿಯಾ ಅಪಾರ್ಟ್ ಮೆಂಟ್ ನಲ್ಲಿ ಒಂದು ಫ್ಲಾಟ್ ಇದ್ದು, ಇದರ ಮೌಲ್ಯ 43.43 ಲಕ್ಷ ರೂ. ಎಂದು ತಿಳಿಸಿದ್ದಾರೆ.

ನಿಖಿಲ್ ತಾಯಿ ಅನಿತಾ ಅವರಿಗೆ 4.65 ಕೋಟಿ, ತಂದೆ ಕುಮಾರಸ್ವಾಮಿಗೆ 9.18 ಲಕ್ಷ ರೂ. ಸಾಲ ಬಾಕಿ ಕೊಡಬೇಕಿದೆ. ನಿಖಿಲ್ ಬ್ಯಾಂಕುಗಳು ಸೇರಿದಂತೆ ಒಟ್ಟು 70.44 ಕೋಟಿ ಸಾಲ ಕೊಡಬೇಕಾಗಿದೆ.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!