ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಬೆಂಗಳೂರು: ಮಾರುಕಟ್ಟೆಯಲ್ಲಿ ಖರೀದಿಸುವ ವಿವಿಧ ಆಹಾರ ಪದಾರ್ಥಗಳ ಗುಣಮಟ್ಟದಲ್ಲಿ ಪಾರದರ್ಶಕತೆ ಹಾಗೂ ಉತ್ತರದಾಯಿತ್ವ ಅಳವಡಿಸಿಕೊಳ್ಳಲು ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕಿಯಾಸ್ಕ್ ಗಳು ಸಹಕಾರಿಯಾಗಲಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅಭಿಪ್ರಾಯಪಟ್ಟರು.

ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ದೇಶದಲ್ಲೇ ಪ್ರಪ್ರಥಮ ಬಾರಿಗೆ ವಿನುತನ ಪ್ರಯತ್ನವಾಗಿ ಬೆಂಗಳೂರು ನಗರದ ಫೀನಿಕ್ಸ್ ಮಾಲ್ ಆಫ್ ಏಷಿಯಾದಲ್ಲಿ ಆಹಾರ ಪದಾರ್ಥಗಳ ತ್ವರಿತ ಪರೀಕ್ಷೆಗಾಗಿ ಪ್ರಾಯೋಗಿಕವಾಗಿ ನಿರ್ಮಿಸಿರುವ ‘ಮ್ಯಾಜಿಕ್ ಬಾಕ್ಸ್’ ಆಹಾರ ಪರೀಕ್ಷಾ ಕೇಂದ್ರವನ್ನು ಅವರು ಉದ್ಘಾಟಿಸಿ ಮಾತನಾಡಿದರು.

ಮನೆಯಲ್ಲಿ ಅಡುಗೆ ಮಾಡುವಾಗ ನಾವು ಎಚ್ಚರಿಕೆವಹಿಸಿ ನೈಸರ್ಗಿಕ ಹಾಗೂ ಒಳ್ಳೆಯ ಗುಣಮಟ್ಟದ ಕಲಬೆರಕೆ ಇಲ್ಲದ ಉತ್ತಮ ಆಹಾರ ಉತ್ಪನ್ನಗಳನ್ನು ಬಳಸುತ್ತೇವೆ. ಆದರೆ ಹೊರಗೆ ತಿನ್ನುವ ಆಹಾರಗಳಲ್ಲಿ ನೋಡಲು ಆಕರ್ಷಕವಾಗಿರುವಂತೆ ರಾಸಾಯನಿಕ ಬಣ್ಣಗಳನ್ನು ಮತ್ತು ರುಚಿಯನ್ನು ಹೆಚ್ಚಿಸುವ ಟೇಸ್ಟ್ ಮೇಕರ್ ಗಳನ್ನು ಬಳಸಲಾಗುತ್ತದೆ. ಆರ್ಥಿಕವಾಗಿ ಲಾಭದಾಯಕ ಮಾಡಿಕೊಳ್ಳಲು ಕಲಬೆರಕೆ ವಸ್ತುಗಳನ್ನು ಇಲ್ಲಿ ಬಳಸಲಾಗುತ್ತದೆ.

ಇತ್ತೀಚಿನ ದಿನಗಳಲ್ಲಿ ಜನರು ತಮ್ಮ ಬದಲಾದ ಜೀವನಶೈಲಿ, ಆಹಾರ ಪದ್ಧತಿಗಳು ಮತ್ತು ಮಲಿನಗೊಂಡ ಪರಿಸರದಲ್ಲಿ ಬದುಕುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲಿಯೇ ಮಧುಮೇಹ, ಹೃದಯಘಾತ ಮತ್ತು ಮಾರಕ ಕ್ಯಾನ್ಸರ್ ಗಳಿಗೆ ತುತ್ತಾಗುತ್ತಿದ್ದಾರೆ. ಹಾಗಾಗಿ ನಾವು ಸೇವಿಸುವ ಆಹಾರ ಒಳ್ಳೆಯ ಗುಣಮಟ್ಟ ಹಾಗೂ ನೈಸರ್ಗಿಕ ವಸ್ತುಗಳಿಂದ ಕೂಡಿರುವುದನ್ನು ನಾವು ಖಾತರಿ ಪಡಿಸಿಕೊಳ್ಳಬೇಕು.

ಈ ನಿಟ್ಟಿನಲ್ಲಿ ಸಾರ್ವಜನಿಕರೇ ಖುದ್ದು ಪರೀಕ್ಷಿಸಿಕೊಳ್ಳಬಹುದಾದಂತಹ ಮ್ಯಾಜಿಕ್ ಬಾಕ್ಸ್ ಆಹಾರ ಪರೀಕ್ಷಾ ಕೇಂದ್ರಗಳು ಅತ್ಯಂತ ಸಹಕಾರಿಯಾಗಲಿವೆ ಎಂದ ಅವರು ಈ ವ್ಯವಸ್ಥೆಯು ಆಹಾರ ಉತ್ಪನ್ನ ಹಾಗೂ ಮಾರುಕಟ್ಟೆದಾರರಲ್ಲಿ ಹೆಚ್ಚು ಪಾರದರ್ಶಕತೆ ಹಾಗೂ ಉತ್ತರದಾಯಿತ್ವವನ್ನು ರೂಪಿಸಲು ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ ಜನಸಾಮಾನ್ಯರಲ್ಲಿ ಜಾಗೃತಿ ಮತ್ತು ಅರಿವು ಮೂಡಿಸಲಿದೆ ಎಂದವರು ವಿಶ್ವಾಸ ವ್ಯಕ್ತಪಡಿಸಿದರು.

ಇಲಾಖೆಯು ನಗರದ ವಿವಿಧ ಭಾಗಗಳಲ್ಲಿ ಸತತ ಆಹಾರ ಉತ್ಪನ್ನಗಳ ಗುಣಮಟ್ಟದ ಪರೀಕ್ಷೆಯನ್ನು ನಡೆಸುತ್ತಾ ಬಂದಿದೆ. ತೀವ್ರ ವಿವಾದಕ್ಕೆ ತುಪ್ಪದ ಸ್ಯಾಂಪಲ್ ಗಳನ್ನು ಕೂಡ ಇಲಾಖೆ ಪರೀಕ್ಷಿಸಿದೆ. ಒಟ್ಟು 230 ಸ್ಯಾಂಪಲ್ ಗಳನ್ನು ಪರೀಕ್ಷಿಸಿದಾಗ ಅವುಗಳಲ್ಲಿ 224 ಸ್ಯಾಂಪಲ್ ಗಳು ಸೇವನೆಗೆ ಸುರಕ್ಷಿತವಾಗಿದೆ ಎಂದು ಕಂಡು ಬಂದಿದೆ. ಐದು ಸ್ಯಾಂಪಲ್ ಗಳು ಅಸುರಕ್ಷಿತ ಎಂದು ಕಂಡುಬಂದಿದ್ದು ಒಂದು ಸ್ಯಾಂಪಲ್ ಮಾತ್ರ ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದರು.

ಇದನ್ನೂ ಓದಿ: 113 ಕೋಟಿ ರೂ. ಒಡೆಯ ನಿಖಿಲ್ ಕುಮಾರಸ್ವಾಮಿ: ಸಾಲ ಎಷ್ಟು ಗೊತ್ತಾ..?

ರಾಜ್ಯಾದ್ಯಂತ ರೈಲ್ವೆ ನಿಲ್ದಾಣದಲ್ಲಿರುವ ಆಹಾರ ಮಳಿಗೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಕಾಯ್ದೆ 2006ರ ನಿಯಮಾವಳಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದರ ಕುರಿತು ಖಚಿತಪಡಿಸಿಕೊಳ್ಳಲು ವಿಶೇಷ ಆಂದೋಲನವನ್ನು ಕೈಗೊಳ್ಳುವ ಮೂಲಕ ಕಳೆದ ಸೆಪ್ಟೆಂಬರ್ ಮಾಹೆಯಲ್ಲಿ 142 ಆಹಾರ ಮಳಿಗೆಗಳನ್ನು ತಪಾಸಣೆ ಮಾಡಲಾಗಿದ್ದು, ಕಂಡು ಬಂದಿರುವ ಲೋಪಗಳನ್ನು ಸರಿಪಡಿಸಿಕೊಳ್ಳುವಂತೆ ಸೂಚಿಸಲಾಗಿದೆ ಹಾಗೂ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರಾಜ್ಯದ ಪ್ರಮುಖ ಪ್ರವಾಸಿ, ತಾಣಗಳಲ್ಲಿ ಸ್ಥಾಪಿಸಿರುವ 35 ಹೋಟೆಲ್ ಘಟಕಗಳಲ್ಲಿ ಗ್ರಾಹಕರುಗಳಿಗೆ ಸರಬರಾಜು ‘ಮಾಡಲಾಗುವ ಆಹಾರ ಪದಾರ್ಥಗಳ ಗುಣಮಟ್ಟವನ್ನು ಪರಿಶೀಲಿಸುವಂತೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಕುರಿ/ಮೇಕೆ ಮಾಂಸದ 184 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 179 ಮಾದರಿಗಳು ಸುರಕ್ಷಿತ ಎಂದು, 05 ಮಾದರಿಗಳು ಕಳಪೆ ಎಂದು, ಮೊಟ್ಟೆಯ 81 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 80 ಮಾದರಿಗಳು ಸುರಕ್ಷಿತ ಎಂದು, 01 ಮಾದರಿಯು ಕಳಪೆ ಎಂದು ಹಾಗೂ ಕೋಳಿ ಮಾಂಸದ 246 ಆಹಾರ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿದ್ದು ಅವುಗಳಲ್ಲಿ 236 ಮಾದರಿಗಳು ಸುರಕ್ಷಿತ ಎಂದು, 10 ಮಾದರಿಗಳು ಕಳಪೆ ಗುಣಮಟ್ಟದ್ದಾಗಿದೆ ಎಂದು ವರದಿಯಾಗಿರುತ್ತದೆ ಎಂದವರು ತಿಳಿಸಿದರು.

10 ಮಾಲ್ ಗಳಲ್ಲಿ ಕೇಂದ್ರಗಳ ಸ್ಥಾಪನೆ

ಇಲಾಖೆಯ ಆಯುಕ್ತರಾದ ಕೆ ಶ್ರೀನಿವಾಸ್ ಅವರು ಮಾತನಾಡಿ, ಬೆಂಗಳೂರು ನಗರಾದ್ಯಂತ ಒಟ್ಟು 10 ಮಾಲ್ ಗಳಲ್ಲಿ ಈ ಆಹಾರ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದರು. ತುಮಕೂರು ರಸ್ತೆಯ ವೈಷ್ಣವಿ ಸಫಾಯರ್ ಮಾಲ್, ಥಣಿಸಂದ್ರದ ಎಲಿಮೆಂಟ್ಸ್ ಮಾಲ್, ಬನ್ನೇರುಘಟ್ಟ ರಸ್ತೆಯ ಮೀನಾಕ್ಷಿ ಮಾಲ್, ಚರ್ಚ್ ಸ್ಟ್ರೀಟ್ ಒನ್ ಶೋಭಾ ಮಾಲ್, ಬೆಳ್ಳಂದೂರಿನಲ್ಲಿರುವ ಸೆಂಟ್ರಲ್ ಮಾಲ್, ಬೆನ್ನಿಗಾನಹಳ್ಳಿಯಲ್ಲಿರುವ ಗೋಪಾಲನ್ ಸಿಗ್ನೇಚರ್ ಮಾಲ್, ಕೋರಮಂಗಲದಲ್ಲಿರುವ ನೆಕ್ಸಸ್ ಫೋರಮ್ ಮಾಲ್.

ಥಣಿಸಂದ್ರ ದಲ್ಲಿರುವ ಭಾರತೀಯ ಮಾಲ್ ಆಫ್ ಬೆಂಗಳೂರು ಹಾಗೂ ಮಾಗಡಿ ರಸ್ತೆಯಲ್ಲಿರುವ ಜಿ ಟಿ ವರ್ಲ್ಡ್ ಮಾಲ್ ಗಳಲ್ಲಿ ಈ ಪರೀಕ್ಷೆ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ಸಾರ್ವಜನಿಕರಲ್ಲಿ ಆಹಾರ ಗುಣಮಟ್ಟ ಆಹಾರ ಕಲಬೆರಿಕೆ ಬಗ್ಗೆ ಅರಿವು ಮೂಡಿಸುವುದೇ ಈ ಪ್ರಯತ್ನದ ಉದ್ದೇಶ ಎಂದು ಅವರು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಮಾಲ್ ಆಫ್ ಏಷ್ಯಾದ ಜನರಲ್ ಮ್ಯಾನೇಜರ್ ರಾದ ಸತೀಶ್ ಸೇರಿದಂತೆ ಅಹಾರ ಸುರಕ್ಷತೆ ಮತ್ತು ಗುಣಮಟ್ಟಿಲಾಖೆಯ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು ಏನೇ ಹೇಳಿದರೂ ಮಾತಾಡಬೇಡಿ; ಬಿ.ವೈ.ವಿಜಯೇಂದ್ರ

ಜೆಡಿಎಸ್‌ನವರು (JDS) ಏನೇ ಹೇಳಿದರೂ ಮಾತಾಡಬೇಡಿ ಎಂದು ನಮ್ಮವರಿಗೆ ಹೇಳಿದ್ದೇನೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ (H.D. Kumaraswamy) ಮಾತನಾಡುತ್ತೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ತಿಳಿಸಿದರು.

[ccc_my_favorite_select_button post_id="119469"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಹಾಸ್ಟೆಲ್‌ನಿಂದ ಬಿದ್ದು ಗೀತಂ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ..!

ಗೀತಂ ವಿಶ್ವವಿದ್ಯಾಲಯದಲ್ಲಿ (Geetham University) ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ (Suicide) ಪ್ರಕರಣಗಳಿಗೆ ಕೊನೆ ಇಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದ್ದು, ವಿದ್ಯಾರ್ಥಿಗಳ ಆಕಸ್ಮಿಕ ಸಾವು, ಆತ್ಮಹತ್ಯೆ ಕುರಿತಂತೆ ಪದೇ ಪದೇ ದೂರು ದಾಖಲಾಗುತ್ತಿದೆ.

[ccc_my_favorite_select_button post_id="119472"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!