ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡಿದರೆ ರೈತರಿಗೆ ಅಧಿಕ ಲಾಭ

ಬೆಂಗಳೂರು: ಉತ್ತಮ ಗುಣಮಟ್ಟದ ಮೇವುನ್ನು ಜಾನುವಾರುಗಳಿಗೆ ನೀಡುವುದರಿಂದ ಹಾಲು ಉತ್ಪಾದನೆ ಹೆಚ್ಚಾಗಲಿದ್ದು,ಇದರಿಂದ ರೈತರ ಆದಾಯವೂ ಕೂಡ ಅಧಿಕವಾಗಲಿದೆ ಎಂದು ಬೀದರ, ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಗೌರವಾನ್ವಿತ ಕುಪಪತಿಗಳಾದ ಪ್ರೊ.ಕೆ.ಸಿ.ವೀರಣ್ಣ ಅವರು ರೈತರಿಗೆ ತಿಳಿದರು.

ಇಂದು ನಗರದ ಹೆಬ್ಬಾಳದಲ್ಲಿರುವ ಪಶುವೈದ್ಯಕೀಯ ಕಾಲೇಜು,ಬಾಲಕರ ಹಾಸ್ಟೆಲ್ ಮೈದಾನದಲ್ಲಿ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್. ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಮತ್ತು ಭಾರತೀಯ ಡೈರಿ ಅಸೋಸಿಯೇಷನ್-ದಕ್ಷಿಣ ವಲಯ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ “ಮೇವು ಮೇಳ” ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತಾನಾಡಿದರು.

ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಿದಾಗ ಮಾತ್ರ ದೇಶವು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ರೈತರು ವಿವಿಧ ಮೇವಿನ ಬೆಳೆಗಳನ್ನು ಬೆಳೆದು ಜಾನುವಾರುಗಳಿಗೆ ಪೋಷಕಾಂಶದ ಮೇವನ್ನು ನೀಡಬೇಕು. ಒಣ ಮೇವುಗಳನ್ನು ಸಂಗ್ರಹಿ ಇಟ್ಟುಕೊಳ್ಳಬೇಕು. ಪ್ರೋಟಿನ್ ಯುಕ್ತ ಮೇವಿನ ಬೆಳೆಗಳ ಮಾಹಿತಿ ಮತ್ತು ಬೀಜಗಳ ಲಭ್ಯವಿದ್ದು ಇದನ್ನು ಎಲ್ಲಾ ರೈತಪಿ ವರ್ಗದವರು ಸದುಪಯೋಗ ಪಡಿಸಿಕೊಳ್ಳಬೇಕೆಂದು ರೈತರಿಗೆ ಸಲಹೆ ನೀಡಿದರು.

ಬಹಳಷ್ಟು ರೈತರು ಮಾವಿನ ತೋಟ, ಚಿಕ್ಕು ತೋಟ, ತೆಂಗಿನ ತೋಟ, ಹೊಂದಿರುತ್ತಾರೆ, ಗಿಡಗಳು ದೊಡ್ಡದಾದ ಮೇಲೆ ಗಿಡಗಳ ಮಧ್ಯದ ಪ್ರದೇಶವನ್ನು ಉಪಯೋಗಿಸುವುದಿಲ್ಲ ಇಂತಹ ಪ್ರದೇಶದಲ್ಲಿ ಮೇವಿನ ಬೆಳೆಯುವುದರಿಂದ ಹೈನುಗಾರಿಕೆ ಖರ್ಚನ್ನು ಕಡಿಮೆ ಮಾಡಿ ಜಾನುವಾರುಗಳಿಗೆ ಮೇವಿ ಉತ್ತಾದನೆ ಮಾಡಿಕೊಂಡು, ಅಧಿಕ ಲಾಭವನ್ನು ಪಡೆಯಬಹುದು ಎಂದು ಅವರು ತಿಳಿಸಿದರು.

ಮೇಳದಲ್ಲಿ ಹೆಚ್ಚಿನ ಖನಿಜಾಂಶ ಇರುವ, ಬೇಸಿಗೆ–ಮಳೆಗಾಲ ಎರಡೂ ಋತುಗಳಲ್ಲಿ ಹಸಿರು ಮೇವು ನೀಡುವ ‘ಮೇವಿನ ಸಜ್ಜೆ’, ನೆಲ–ಹೊಲದ ಅಗತ್ಯವೇ ಇಲ್ಲದಂತೆ ಮನೆ ಮಹಡಿಯಲ್ಲಿಯೂ ಬೆಳೆಯಬಹುದಾದ ಜಲಕೃಷಿ ಮೇವಿನ ಬೆಳೆ, ಹಲವು ಬಾರಿ ಕಟಾವ್ ಮಾಡಬಹುದಾದ ಹೈಬ್ರಿಡ್ ನೇಪಿಯರ್ ಹುಲ್ಲು, ರೇಷ್ಮೆಗೂ ಮೇವಿಗೂ ಬಳಸಬಹುದಾದ ಹಿಪ್ಪು ನೇರಳೆ (ಮಲ್ಬೆರಿ), ನೇಪಿಯರ್ ಮತ್ತು ಜೋಳವನ್ನು ಕಸಿ ಮಾಡಿದ ಪುಲೆ ಜೈವಂತ್ ಹುಲ್ಲುಗಳು ಗಮನ ಸೆಳೆದವು.

ಮೇವು ಸಹಿತ ವಿವಿಧ ಕೃಷಿಗೆ ಬಳಸುವ ಅಡಿಕೆ ಹಾಳೆ ಗೊಬ್ಬರ, ಹಲಸಿನ ಹಣ್ಣಿನ ಗೊಬ್ಬರ, ಎರೆಹುಳು ಗೊಬ್ಬರ ಸಹಿತ ವಿವಿಧ ತರಹದ ಗೊಬ್ಬರಗಳನ್ನು ಪ್ರದರ್ಶಿಸಲಾಯಿತು.

ಪಾಚಿ ರೀತಿಯಲ್ಲಿ ಬೆಳೆಯುವ ಅಜೋಲ, ಏಕ ಕಟಾವ್ ದ್ವಿದಳ ಮೇವಿನ ಬೆಳೆಗಳಾದ ಗೋವಿನ ಜೋಳ, ಮೇವಿನ ಜೋಳ, ಮೇವಿನ ಅಲಸಂದಿ, ಹುರುಳಿ, ಸೋಯಾ ಅವರೆ, ಬಹುಕಟಾವು/ ಬಹು ವಾರ್ಷಿಕ ದ್ವಿದಳ ಮೇವಿನ ಬೆಳೆಗಳಾದ ಕುದುರೆ ಮಸಾಲೆ, ದಶರಥ ಹುಲ್ಲು, ಬೇಲಿ ಮೆಂತೆ, ನೇಪಿಯರ್ ಹುಲ್ಲು, ಉತ್ತಮವಾಗಿ ಇಳುವರಿ ನೀಡುವ ಗಿರಿಮೇವು, ಗಿನಿ ಹುಲ್ಲು, ರೋಡ್ಸ್ ಹುಲ್ಲು, ಬ್ರೆಕೇರಿಯ ಹುಲ್ಲು, ಕುದುರೆಮೆಂತೆ, ಸ್ಟೈಲೊ, ಸೂಪರ್ ನೇಪಿಯರ್, ಪ್ಯಾರಾ ಹುಲ್ಲು, ಬರ್ಸಿಮ, ಲೂಸರ್ನ್, ಚವಳಿ, ಮರ ಹುಲ್ಲುಗಳಾದ ಸುಬಾಬುಲ್, ಚೊಗಚಿಗಳು ಪ್ರದರ್ಶನಗೊಂಡವು.

ಇದನ್ನು ಓದಿ; ಆಹಾರ ಗುಣಮಟ್ಟದಲ್ಲಿ ಪಾರದರ್ಶಕತೆ ತರಲು ಸ್ಪಾಟ್ ಟೆಸ್ಟ್ ಕಿಯಾಸ್ಕ್ ಸಹಕಾರಿ: ದಿನೇಶ್ ಗುಂಡೂರಾವ್

ಈ ಮೇವು ಮೇಳದಲ್ಲಿ ಮುಖ್ಯ ಅತಿಥಿಗಳಾಗಿ ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆಯ ನಿರ್ದೇಶಕರಾದ ಡಾ. ಮಂಜುನಾಥ್ ಎಸ್ ಪಾಳೇಗಾರ್, ಬೆಂಗಳೂರಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಡಾ .ಎನ್ ಕೆ ಎಸ್ ಗೌಡ, ಕರ್ನಾಟಕ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾದ ಪದ್ಮ ಪ್ರಕಾಶ್, ಕಪಮೀವಿವಿಯ ವ್ಯವಸ್ಥಾಪಕ ಮಂಡಳಿ ಸದಸ್ಯರು, ಸೇರಿದಂತೆ ಇತರೆ ಅಧಿಕಾರಿಗಳು, ರೈತಾಪಿ ವರ್ಗದವರು, ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]