ಹೆಚ್ಚಿನ ಮಕ್ಕಳನ್ನು ಹೆರುವಂತೆ ಪ್ರೇರೇಪಿಸಲು: ದಂಪತಿಗಳಿಗೆ ಹೆರಿಗೆ ಸಹಾಯಧನ

ಬೀಜಿಂಗ್: ಚೀನಾದಲ್ಲಿ ಕುಸಿಯುತ್ತಿರುವ ಜನನ ಪ್ರಮಾಣ ದರ ತಡೆಗಟ್ಟಲು ದಂಪತಿಗಳಿಗೆ ಹೆಚ್ಚಿನ ಮಕ್ಕಳನ್ನು ಹೆರುವಂತೆ ಪ್ರೇರೇಪಿಸಲು ‘ಹೆರಿಗೆ ಸಹಾಯಧನ’ ಮತ್ತು ಪೋಷಕರಿಗೆ ತೆರಿಗೆ ಕಡಿತ ಸೇರಿ ಹಲವು ಉತ್ತೇಜನಾಕಾರಿ ನೀತಿಗಳನ್ನು ಸರಕಾರ ಘೋಷಿಸಿದೆ.

ದೇಶದಲ್ಲಿ ಉದ್ಭವಿಸಿರುವ ಜನಸಂಖ್ಯಾ ಬಿಕ್ಕಟ್ಟು ಪರಿಹರಿಸುವ ಸಲುವಾಗಿ, ಕಮ್ಯುನಿಸ್ಟ್ ದೇಶದ ಕೇಂದ್ರ ಸಂಪುಟವು ಮಕ್ಕಳ ಜನನ ಉತ್ತೇಜಿಸುವ ಸೇವೆಗಳನ್ನು ವಿಸ್ತರಿಸಲು ರೂಪಿಸಲಾದ 13 ಉದ್ದೇಶಿತ ಕ್ರಮಗಳ ಕುರಿತು ಸೋಮವಾರ ನಿರ್ದೇಶನ ಹೊರಡಿಸಿದೆ.

ಶಿಕ್ಷಣ, ವಸತಿ ಮತ್ತು ಉದ್ಯೋಗದಲ್ಲಿ ಬೆಂಬಲ ಉತ್ತೇಜನಾಕಾರಿ ನೀತಿ ಹೆಚ್ಚಿಸುವುದು, ಹೆರಿಗೆಗೆ ಪೂರಕವಾದ ವಾತಾವರಣ ನಿರ್ಮಿಸುವುದು ಸೇರಿವೆ. ಈ ಉತ್ತೇಜನಾಕಾರಿ ಕ್ರಮಗಳು, ಹೆರಿಗೆ ಸಹಾಯಧನ ಮತ್ತು ಹೆರಿಗೆಗೆ ಸಂಬಂಧಿಸಿದ ಆದಾಯ ತೆರಿಗೆ ವಿನಾಯಿತಿ ಸುಧಾರಣೆಗಳನ್ನು ಒಳಗೊಂಡಿವೆ ಎಂದು ಅಧಿಕೃತ ಮಾಧ್ಯಮ ವರದಿ ಮಾಡಿದೆ.

ನೌಕರರು ಮತ್ತು ಗ್ರಾಮೀಣ ವಲಸೆ ಕಾರ್ಮಿಕರಿಗೂ ಹೆಚ್ಚು ಮಕ್ಕಳನ್ನು ಹೆರುವಂತೆ ಉತ್ತೇಜನಕಾರಿ ಸವಲತ್ತುಗಳನ್ನು ಸರಕಾರ ಘೋಷಿಸಿದೆ. ಮಾತೃತ್ವ, ಪಿತೃತ್ವ ಮತ್ತು ಶಿಶುಪಾಲನಾ ರಜೆಗೆ ಸಂಬಂಧಿಸಿದ ನೀತಿಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೂ ಸೂಚಿಸಲಾಗಿದೆ.

ಹೊಸ ಪೋಷಕರು, ಮಕ್ಕಳನ್ನು ಹೆರಲು, ಲಾಲನೆ-ಪಾಲನೆಗೆ ಉದ್ಯೋಗದ ವೇಳೆ ರಜೆ ತೆಗೆದುಕೊಳ್ಳುವುದು ಸುರಕ್ಷಿತವೆಂದು ಖಾತ್ರಿಪಡಿಸುವ ಗುರಿಯನ್ನು ಈ ಹೊಸ ಕ್ರಮಗಳು ಹೊಂದಿವೆ ಎಂದು ಅಧಿಕೃತ ಸರಕಾರಿ ಮಾಧ್ಯಮ ಸಿಜಿಟಿಎನ್ ವರದಿ ಮಾಡಿದೆ.

ಚೀನಾದ ಗಂಭೀರ ಜನಸಂಖ್ಯಾ ಬಿಕ್ಕಟ್ಟಿಗೆ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷವು ಅನುಸರಿಸುತ್ತಿರುವ ದಶಕಗಳಷ್ಟು ಹಳೆಯದಾದ ಒಂದು ಮಗು ನೀತಿಯೇ ಕಾರಣವೆಂದು ದೂಷಿಸಲಾಗಿದೆ. 2021ರಲ್ಲಿ ಜನಸಂಖ್ಯಾ ನೀತಿ ಪರಿಷ್ಕರಿಸಿರುವ ಚೀನಾ ದಂಪತಿಗೆ ಮೂರು ಮಕ್ಕಳನ್ನು ಹೊಂದಲು ಅವಕಾಶ ನೀಡಿದೆ.

ರಾಜಕೀಯ

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಲೆ ಏರಿಕೆಗೆ ಹೊಣೆ ಯಾರು?: ಡಿಸಿಎಂ ಡಿ.ಕೆ. ಶಿವಕುಮಾರ್

"ಕೇಂದ್ರ ಸರ್ಕಾರ ಜನಸಾಮಾನ್ಯರ ನೋವನ್ನು ಅರ್ಥ ಮಾಡಿಕೊಳ್ಳಬೇಕಿತ್ತು. ಎಲ್ಲಾ ಪದಾರ್ಥಗಳ ಬೆಲೆ ಆಕಾಶಕ್ಕೇರಿದೆ. ಆದಾಯ ಪಾತಳಕ್ಕೆ ಕುಸಿದಿದೆ. ಬೆಲೆ ಹೆಚ್ಚಳಕ್ಕೆ ಹೊಣೆ ಯಾರು?" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಕೇಂದ್ರ

[ccc_my_favorite_select_button post_id="121597"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಗೆ ಹುಡುಗಿ ಸಿಗಲಿಲ್ಲವೆಂದು ಯುವಕ ಆತ್ಮಹತ್ಯೆ..!

ಮದುವೆಯಾಗಲು ಸೂಕ್ತ ಯುವತಿ ದೊರೆಯದ ಕಾರಣ ಮನನೊಂದ ಯುವಕನೊಬ್ಬ ಕಲ್ಯಾಣಿಗೆ ಬಿದ್ದು ಆತ್ಮಹತ್ಯೆ (suicide) ಮಾಡಿಕೊಂಡಿರುವ ಘಟನೆ ನಡೆದಿದೆ.

[ccc_my_favorite_select_button post_id="121591"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]