ಪ್ರಧಾನಿ ನರೇಂದ್ರ ಮೋದಿಯವರು ಭೂ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ: ಆರ್‌.ಅಶೋಕ

ಚನ್ನಪಟ್ಟಣ; ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಚನ್ನಪಟ್ಟಣದ ಮನೆ ಮಗ ಎನ್ನುವುದಾದರೆ ಇಲ್ಲಿನ ಜಿಲ್ಲಾ ಉಸ್ತುವಾರಿಯ ಹೊಣೆ ಹೊತ್ತುಕೊಳ್ಳಲಿ. ಚುನಾವಣೆ ಬಂದಾಗ ನಾಟಕ ಮಾಡಲು ಮಾತ್ರ ಈ ರೀತಿಯ ಭಾವನಾತ್ಮಕ ಮಾತು ಆಡುತ್ತಾರೆ ಎಂದು ಪ್ರತಿಪಕ್ಷ ಆರ್‌.ಅಶೋಕ ಟೀಕಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿಖಿಲ್‌ ಕುಮಾರಸ್ವಾಮಿ ಅವರು ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎರಡೂ ಪಕ್ಷ ಇರುವುದರಿಂದ ಗೆಲುವು ಸಮೀಪದಲ್ಲಿದೆ. ಎಚ್‌.ಡಿ.ಕುಮಾರಸ್ವಾಮಿ ಅವರು ಈ ಹಿಂದೆ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದರು. ಈ ಬಾರಿ ಬಿಜೆಪಿಯ ಸಾಂಪ್ರದಾಯಿಕ ಮತಗಳೂ ಸಿಗುವುದರಿಂದ ಗೆಲ್ಲುವ ಸಾಧ್ಯತೆ ಹೆಚ್ಚು. ಕಾಂಗ್ರೆಸ್‌ ಸರ್ಕಾರದಲ್ಲಿ ಭ್ರಷ್ಟಾಚಾರ, ಮುಡಾ ಹಗರಣ, ದಲಿತರ ಹಣವನ್ನು ಬೇರೆಡೆ ವರ್ಗಾಯಿಸಿರುವುದು ಮೊದಲಾದ ಕಾರಣಗಳಿಂದ ಜನರಿಗೆ ಕಾಂಗ್ರೆಸ್‌ ಮೇಲೆ ವಿಶ್ವಾಸವಿಲ್ಲ ಎಂದರು.

ಈ 16 ತಿಂಗಳಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚನ್ನಪಟ್ಟಣಕ್ಕಾಗಲೀ, ರಾಮನಗರಕ್ಕಾಗಲೀ ಭೇಟಿ ನೀಡಿಲ್ಲ. ಭೇಟಿ ನೀಡಲು ಕೂಡ ಸಮಯವಿಲ್ಲವೆಂದಾದರೆ ಅಭಿವೃದ್ಧಿ ಹೇಗೆ ಮಾಡುತ್ತಾರೆ? ಡಿಸಿಎಂ ಡಿಕೆ ಶಿವಕುಮಾರ್‌ ನಾನು ಮನೆ ಮಗ ಎಂದು ಜನರ ಕಿವಿ ಮೇಲೆ ಹೂ ಇಡಲು ನೋಡಿದ್ದರು. ನಂತರ ತಾಯಿ ಜಿಲ್ಲೆಯನ್ನು ಬಿಟ್ಟು ಬೆಂಗಳೂರಿನ ಉಸ್ತುವಾರಿ ಪಡೆದುಕೊಂಡರು.

ರಾಮಲಿಂಗಾರೆಡ್ಡಿ ಅವರನ್ನು ಇಲ್ಲಿನ ಜಿಲ್ಲಾ ಉಸ್ತುವಾರಿ ಮಾಡಿದ್ದರೂ, ಅವರಿಗೆ ಇಲ್ಲಿಗೆ ಬರಲು ಇಷ್ಟವಿಲ್ಲ. ಚುನಾವಣೆ ಬಂದಿರುವುದರಿಂದ ನಾಟಕ ಮಾಡಲು ಇಲ್ಲಿಗೆ ಬಂದಿದ್ದಾರೆ.

ಡಿಕೆ ಶಿವಕುಮಾರ್‌ ಅವರಿಗೆ ಅಷ್ಟೊಂದು ಪ್ರೀತಿ ಇದ್ದರೆ ಅವರೇ ಜಿಲ್ಲಾ ಉಸ್ತುವಾರಿ ಸಚಿವರಾಗಿ ಕೆಲಸ ಮಾಡಬೇಕಿತ್ತು. ಬೆಂಗಳೂರಿನಲ್ಲಿ ಸಮೃದ್ಧಿ ಮಾಡಲು ಹೊರಟಿದ್ದಾರೆ. ಆದರೆ ಚನ್ನಪಟ್ಟಣ ಅಭಿವೃದ್ಧಿಗೆ ಹತ್ತು ಪೈಸೆ ಹಣವಿಲ್ಲ ಎಂದು ದೂರಿದರು.

ಸರ್ಕಾರದಲ್ಲಿ ಸಂಬಳ ಕೊಡಲು ಕೂಡ ದುಡ್ಡಿಲ್ಲ. ರಾಮನಗರ ಜಿಲ್ಲೆಗೆ ಇವರೇನು ಮಾಡಿದ್ದಾರೆಂದು ತಿಳಿಸಬೇಕು. ಬಿಜೆಪಿ ಸರ್ಕಾರವಿದ್ದಾಗ ಇಲ್ಲಿಗೆ ವಿಶ್ವವಿದ್ಯಾಲಯ ತರಲಾಯಿತು. ನೀರಾವರಿ ಯೋಜನೆಗಳನ್ನು ತರಲಾಯಿತು.

ಸಿ.ಪಿ.ಯೋಗೇಶ್ವರ್‌ ತಾವೇ ನೀರಾವರಿ ಯೋಜನೆ ತಂದಿದ್ದೇನೆಂದು ಹೇಳಿಕೊಂಡರು ಕೂಡ, ಅನುದಾನ ಮಂಜೂರು ಮಾಡಿದ್ದು ಬಿಜೆಪಿ ಸರ್ಕಾರವೇ ಹೊರತು ಶಾಸಕರಲ್ಲ. ಅದಕ್ಕಿಂತ ಹೆಚ್ಚಾಗಿ ಇಲ್ಲಿ ಎಂಜಿನಿಯರ್‌ ಆಗಿದ್ದ ವೆಂಕಟೇಗೌಡ ನಮ್ಮ ಬಳಿ ಬಂದು ಅನುದಾನ ಮಂಜೂರು ಮಾಡಿಸಿಕೊಂಡಿದ್ದರು. ಯಾವುದೇ ಯೋಜನೆ ಬರಬೇಕೆಂದರೂ ಅದಕ್ಕೆ ಸರ್ಕಾರ ಕಾರಣ ಎಂದರು.

ಪಕ್ಷವನ್ನು ಬಿಟ್ಟು ಹೋಗುವವರು ಒಂದೇ ಡೈಲಾಗ್‌ ಹೊಡೆಯುತ್ತಾರೆ. ಬಿಜೆಪಿ ಜೊತೆ ಕಾರ್ಯಕರ್ತರ ಪಡೆ ಇದೆ. ಸಂಘಟನೆಯನ್ನು ಇನ್ನಷ್ಟು ಗಟ್ಟಿಯಾಗಿ ಬೆಳೆಸುತ್ತೇವೆ ಎಂದರು.

ಓಡಿಹೋದ ಡಿಕೆಶಿ

ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಪಾಲ್ಗೊಂಡು ಮಾತನಾಡಿದರು.

ಕಾಂಗ್ರೆಸ್ ಸರ್ಕಾರ ಬಂದು 16 ತಿಂಗಳಾಗಿದೆ. ಮನಸ್ಸು ಮಾಡಿದರೆ ಸಿಎಂ ಸಿದ್ದರಾಮಯ್ಯನವರಿಗೆ ಎಲ್ಲ ಜಿಲ್ಲೆಗೆ ಹೋಗಬಹುದು. ಆದರೆ ಅವರು ಚನ್ನಪಟ್ಟಣಕ್ಕೆ ಬಂದು 500 ದಿನಗಳು ಕಳೆದಿವೆ. ಈಗಾಗಲೇ ಮುಡಾ ಹಗರಣದ ತನಿಖೆ ನಡೆಯುತ್ತಿದ್ದು, ಅದರ ಫಲಿತಾಂಶ ಬಂದರೆ ಶಾಶ್ವತವಾಗಿ ಈ ಕಡೆ ಬರುವುದಿಲ್ಲ. ಡಿಕೆ ಶಿವಕುಮಾರ್ ಇಲ್ಲಿ ಅಭ್ಯರ್ಥಿಯಾಗುತ್ತೇನೆಂದು ಹೇಳಿ ಓಡಿಹೋದರು.

ಮುಡಾ ಹಗರಣದ ತನಿಖೆಯ ವರದಿ ಬಂದರೆ ಸರ್ಕಾರವೇ ಬಿದ್ದು ಹೋಗಬಹುದು. ಹೀಗೆ ಮುಳುಗುವ ಪಕ್ಷಕ್ಕೆ ಮತ ಹಾಕಿದರೆ ಲಾಭವಿಲ್ಲ ಎಂದು ಜನರಿಗೆ ತಿಳಿಸಬೇಕು ಎಂದರು.

ಎಚ್.ಡಿ.ಕುಮಾರಸ್ವಾಮಿ ಅವರು ಭಾವನಾತ್ಮಕ ಜೀವಿ ಆದರೆ ಕಾಂಗ್ರೆಸ್ ನಾಯಕರು ಕಟುಕರು. ಕುಮಾರಸ್ವಾಮಿ ಕಾರಿನಲ್ಲಿ ಹೋಗುತ್ತಿರುವಾಗ ಬಡ ವ್ಯಕ್ತಿ ಕಂಡರೆ ಅವನ ಬಳಿ ಹೋಗಿ ಸಹಾಯ ಮಾಡುತ್ತಾರೆ. ಆದರೆ ಕಾಂಗ್ರೆಸ್ ನವರು ಈ ಭಾವನೆಯನ್ನೇ ತಮಾಷೆ ಮಾಡುತ್ತಾರೆ‌. ಜೊತೆಗೆ ದೇವೇಗೌಡರ ವಯಸ್ಸಿನ ಬಗ್ಗೆಯೂ ಟೀಕೆ ಮಾಡುತ್ತಾರೆ‌. ಯಾರಿಗೂ ರೋಗ ಬರುವುದಿಲ್ಲವೇ? ಔಷಧಿ ಸೇವಿಸುವುದಿಲ್ಲವೇ? ಎಂದು ಪ್ರಶ್ನಿಸಿದರು‌.

ರೈತರ ಆಸ್ತಿ ಲೂಟಿ

ರೈತರ ಸಾವಿರಾರು ಎಕರೆ ಭೂಮಿಯನ್ನು ವಕ್ಫ್ ಗೆ ಬರೆದುಕೊಟ್ಟಿದ್ದಾರೆ. ಜಮೀರ್ ಅಹ್ಮದ್ ಸಚಿವರಾದ ಬಳಿಕ ಲಕ್ಷಾಂತರ ಜಮೀನುಗಳನ್ನು ವಕ್ಫ್ ಗೆ ಸೇರಿಸಲು ಕ್ರಮ ವಹಿಸಲಾಗುತ್ತಿದೆ. ಆದರೆ ರೈತರು ಈ ವಿವಾದವನ್ನು ಕೋರ್ಟ್ ಗೆ ತೆಗೆದುಕೊಂಡು ಹೋಗಲು ಸಾಧ್ಯವಾಗುವುದಿಲ್ಲ. ಅದು ವಕ್ಫ್ ಬೋರ್ಡ್ ನಲ್ಲೇ ತೀರ್ಮಾನವಾಗುತ್ತದೆ.

ಪ್ರಧಾನಿ ನರೇಂದ್ರ ಮೋದಿಯವರು ಈ ಕಬಳಿಕೆ ತಪ್ಪಿಸಲು ಪ್ರತ್ಯೇಕ ಕಾನೂನು ತರುತ್ತಿದ್ದಾರೆ. ರೈತರು ತಮ್ಮ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು. ಅದರಲ್ಲಿ ವಕ್ಫ್ ಭೂಮಿ ಎಂದಿದ್ದರೆ ಭೂಮಿ ಸಿಗುವುದಿಲ್ಲ ಎಂದರು.

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ದಲಿತರ ಹಣವನ್ನೂ ಕಾಂಗ್ರೆಸ್ ಬಿಡಲಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ 14 ಸೈಟುಗಳನ್ನು ಲೂಟಿ ಮಾಡಿದ್ದಾರೆ. ಬಡವರಿಗೆ ನಿವೇಶನ ನೀಡುವ ಬದಲು ತಾವೇ ಎಲ್ಲವನ್ನೂ ಲೂಟಿ ಮಾಡಿದ್ದಾರೆ. ಇವರಿಗೆ ಮತ ಹಾಕಿದರೆ ಲೂಟಿಗೆ ಬೆಂಬಲ ನೀಡಿದಂತಾಗುತ್ತದೆ ಎಂದು ಹೇಳಿದರು.

ರಾಜಕೀಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ: ಡಿ.ಕೆ. ಸುರೇಶ್ ವ್ಯಂಗ್ಯ

ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟ ಖಾಲಿ ಟ್ರಂಕ್ ಹಿಡಿದಿರುವ ತೇಜಸ್ವಿ ಸೂರ್ಯ:

"ಕಳೆದ 12 ವರ್ಷಗಳಿಂದ ಕೇಂದ್ರ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕೊಟ್ಟಿರುವ ಖಾಲಿ ಟ್ರಂಕ್ ಅನ್ನು ಸಂಸದ ತೇಜಸ್ವಿ ಸೂರ್ಯ ಅವರು ಹಿಡಿದಿರುವುದು" ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ (D.K. Suresh) ಅವರು ತಿರುಗೇಟು

[ccc_my_favorite_select_button post_id="119275"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!