ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ?: HDK ಕಿಡಿ

ಚನ್ನಪಟ್ಟಣ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ತಿಟ್ಟಮಾರನಹಳ್ಳಿ ಗ್ರಾಮದಲ್ಲಿ ಗುರುವಾರ ಪ್ರಚಾರ ನಡೆಸಿದ ಸಂದರ್ಭದಲ್ಲಿ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಡಿಕೆಶಿ ಅವರಿಗೆ ಮಹಿಳೆಯರು ಕನಸಿನಲ್ಲಿ ಬಂದು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಕೇಳಿದ್ದಾರೆಯೇ? ಅಥವಾ ದೇವರು ಬಂದು ಹೇಳಿದ್ದಾರೆಯೇ? ಒಂದೊಂದಾಗಿ 5 ಗ್ಯಾರಂಟಿಗಳನ್ನು ನಿಲ್ಲಿಸಲು ಇದೊಂದು ಮೊದಲ ಹೆಜ್ಜೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮಿ, ಯುವ ನಿಧಿ ಕಾರ್ಯಕ್ರಮಗಳನ್ನು ನಿಲ್ಲಿಸಲಿದ್ದಾರೆ. ಅದಕ್ಕೆ ಇವರು ಮರು ಪರಿಶೀಲನೆ ಎಂಬ ಪೀಠಿಕೆ ಹಾಕಿಕೊಂಡಿದ್ದಾರೆ ಎಂದು ಕೇಂದ್ರ ಸಚಿವರು ಕಿಡಿಕಾರಿದರು.

ಒಂದೂವರೆ ವರ್ಷದಲ್ಲಿ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ?

ಟ್ವೀಟ್ ಮೂಲಕ ಮಹಿಳೆಯರು ಶಕ್ತಿ ಯೋಜನೆಯನ್ನು ನಿಲ್ಲಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ. ಯಾರು ಟ್ವೀಟ್ ಮಾಡಿದ್ದಾರೆ? ಅಥವಾ ಮಹಿಳೆಯರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆ ಎಂದು ಇವರಿಗೆ ಹೊಸ ಜ್ಞಾನೋದಯ ಆಗಿದೆಯಾ? ಕೇವಲ ಒಂದೂವರೆ ವರ್ಷದಲ್ಲಿ ಇವರು ಆರ್ಥಿಕವಾಗಿ ಬಲಾಢ್ಯರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು ಕೇಂದ್ರ ಸಚಿವರು.

ಗ್ಯಾರಂಟೀಗಳ ಹೆಸರಿನಲ್ಲಿ ಜನರ ಬ್ರೈನ್ ವಾಷ್

ಶಕ್ತಿ ಯೋಜನೆಯ ಮರು ಪರಿಶೀಲನೆಯ ನಾಟಕ ಗ್ಯಾರಂಟಿಗಳನ್ನು ಒಂದೊಂದಾಗಿಯೇ ತೆಗೆಯಲು ಮೊದಲ ಹಂತಂದ ಪ್ರಕ್ರಿಯೆ ಎಂದೇ ಭಾವಿಸಬೇಕಾಗುತ್ತದೆ. ಇದು ಗ್ಯಾರಂಟಿ ನಿಲ್ಲಿಸಲು ಒಂದು ಪೀಠಿಕೆ ಮಾತ್ರ.

ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಗ್ಯಾರಂಟಿಗಳನ್ನೇ ಪ್ರಮುಖವಾಗಿ ಇವರು ಹೇಳುತ್ತಿದ್ದರು. ನುಡಿದಂತೆ ನಡೆದಿದ್ದೇವೆ ಎಂದು ಜನರ ಬ್ರೈನ್ ವಾಷ್ ಮಾಡುತ್ತಿದ್ದರು. ಇದರಿಂದ ಅಭಿವೃದ್ಧಿ ಕೆಲಸಗಳನ್ನು ಸಂಪೂರ್ಣವಾಗಿ ನಿಲ್ಲಿಸಿದ್ದರು. ತೆರಿಗೆ ಅಧಿಕಾರಿಗಳ ಸಭೆ ಮಾಡಿ ಇನ್ನೂ ಹೆಚ್ಚುವರಿಯಾಗಿ ₹10,000 ಕೋಟಿ ವಸೂಲಿ ಮಾಡುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ. ಅಂದರೆ, ಇನ್ನಷ್ಟು ಸುಲಿಗೆ ಮಾಡಿ ಅಂತ ಅರ್ಥ ಅಲ್ಲವೇ? ಇದು ಯಾವ ಪುರುಷಾರ್ಥಕ್ಕೆ? ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ಗ್ಯಾರಂಟಿ ಹೆಸರು ಹೇಳಿ ಜನರಿಗೆ ಹೊರೆ ಹೊರೆಸಿ, ಅವರ ಹಣವನ್ನೇ ಕಿತ್ತು ಅವರಿಗೆ ಚೂರುಪಾರು ಹಂಚುವ ಗ್ಯಾರಂಟಿಗಳಿಗೆ ಅರ್ಥ ಇದೆಯಾ? ಚುನಾವಣೆ ಗೆಲ್ಲುವ ದುರಾಸೆಯಿಂದ ಇಂಥ ಅವಾಸ್ತವಿಕ ಭರವಸೆಗಳನ್ನು ಕೊಟ್ಟು ರಾಜ್ಯವನ್ನು ಹಾಳು ಮಾಡಿದ್ದಾರೆ. ಜರನ್ನು ರಣಹದ್ದುಗಳ ರೀತಿಯಲ್ಲಿ ಸರಕಾರ ಕಿತ್ತು ತಿನ್ನುತ್ತಿದೆ ಎಂದು ಅವರು ದೂರಿದರು.

ಗ್ಯಾರಂಟಿಗಳಿಂದ ಕ್ಯಾಪಿಟಲ್ ಅಸೆಟ್ ಆಗುತ್ತಿಲ್ಲ, ಬರೀ ಖರ್ಚಾಗುತ್ತಿದೆ. ನಾನು ಗ್ಯಾರಂಟಿ ಕೊಡುವುದನ್ನು ವಿರೋಧಿಸುತ್ತಿಲ್ಲ. ಗ್ಯಾರಂಟಿ ಕೊಡಿ, ಗ್ಯಾರಂಟಿ ಹೆಸರಲ್ಲಿ ಆರ್ಥಿಕ ಪರಿಸ್ಥಿತಿ ಹಾಳು ಮಾಡಬೇಡಿ. ಮುಂದಿನ ಅಧಿಕಾರ ನಡೆಸುವ ಪೀಳಿಗೆಯ ಭವಿಷ್ಯ ಹಾಳು ಮಾಡಬೇಡಿ. ಅನ್ನಭಾಗ್ಯಕ್ಕೂ ಷರತ್ತುಗಳನ್ನು ವಿಧಿಸಿದ್ದಾರೆ. ಗೃಹಲಕ್ಷ್ಮಿಗೂ ಷರತ್ತುಗಳನ್ನು ಹಾಕಿದ್ದಾರೆ. ಅಕ್ಕಿ ಕೊಡುವುದನ್ನು ಕಡಿತಗೊಳಿಸಿದ್ದಾರೆ. ಇದು ಮುಂದೆ ಯಾವ ಹಂತಕ್ಕೆ ಹೋಗುತ್ತದೆ ಈಜುವುದನ್ನು ಕಾದು ನೋಡಬೇಕು ಎಂದು ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದರು.

ಗ್ಯಾರಂಟಿ ಬಗ್ಗೆ ನಮಗೆ ಹೊಟ್ಟೆ ಉರಿ ಇಲ್ಲ

ನಮಗೆ ಗ್ಯಾರಂಟಿ ಬಗ್ಗೆ ಯಾವುದೇ ಹೊಟ್ಟೆ ಉರಿ ಇಲ್ಲ. ಗ್ಯಾರಂಟಿ ಬೇಕಾದರೆ ಡಬಲ್ ಮಾಡಿಕೊಳ್ಳಿ. ಆದರೆ ರಾಜ್ಯವನ್ನು ದೀವಾಳಿ ಮಾಡಬೇಡಿ. ಸರ್ಕಾರದ ಅಭಿವೃದ್ಧಿ ಶೂನ್ಯ ಆಗಿದೆ. ಬೇರೆ ದೇಶಗಳಲ್ಲಿ ಉಂಟಾಗಿರುವ ಆರ್ಥಿಕ ಅರಾಜಕತೆ ನಮ್ಮ ರಾಜ್ಯಕ್ಕೆ ಬರಬಾರದು ನನ್ನ ನಮ್ಮ ಕಳಕಳಿ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ್ ಸೇರಿದಂತೆ ಜೆಡಿಎಸ್ ಬಿಜೆಪಿ ಪಕ್ಷಗಳ ಹಲವಾರು ನಾಯಕರು ಕೇಂದ್ರ ಸಚಿವರ ಜತೆಯಲ್ಲಿ.ಇದ್ದರು.

ರಾಜಕೀಯ

12 ರಾಜ್ಯಗಳಲ್ಲಿ 2ನೇ ಹಂತದ SIR ಆರಂಭ: ಚುನಾವಣೆ ಆಯೋಗದಿಂದ ಮಹತ್ವದ ಘೋಷಣೆ

12 ರಾಜ್ಯಗಳಲ್ಲಿ 2ನೇ ಹಂತದ SIR ಆರಂಭ: ಚುನಾವಣೆ ಆಯೋಗದಿಂದ ಮಹತ್ವದ ಘೋಷಣೆ

12 ರಾಜ್ಯಗಳಲ್ಲಿ ಎರಡನೇ ಹಂತದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯನ್ನು (SIR) ಪ್ರಾರಂಭಿಸಲಾಗುತ್ತಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಘೋಷಿಸಿದರು.

[ccc_my_favorite_select_button post_id="115401"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ನಡುವೆ ಭೀಕರ ಅಪಘಾತ.. ತಪ್ಪಿದ ಭಾರಿ ಅನಾಹುತ.!

ಕಾರು ಮತ್ತು ಬೊಲೆರೋ ವಾಹನದ ನಡುವೆ ಭೀಕರ ಅಪಘಾತ (Accident) ಉಂಟಾಗಿದ್ದು, ಅದೃಷ್ಟವಶಾತ್ ಸಂಭವಿಸಬಹುದಾಗಿದ್ದ ಭಾರಿ ಅನಾಹುತ ತಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 44 ರ

[ccc_my_favorite_select_button post_id="115379"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!