ಎರಡು ಬಾರಿ ಕುತಂತ್ರದಿಂದ ಸೋಲನುಭವಿಸಿದೆ, ಈಗಲೂ ಅನಿವಾರ್ಯವಾಗಿ ನಿಂತೆ: ನಿಖಿಲ್ ಕುಮಾರಸ್ವಾಮಿ

ರಾಮನಗರ: ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ. ಈಗಲೂ ಚುನಾವಣೆ ನಿಲ್ಲುವ ಭಾವನೆ ನನ್ನಲ್ಲಿ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಎನ್ ಡಿ ಎ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ NDA ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಅನೇಕ ವಿಚಾರಗಳ ಬಗ್ಗೆ ತಿಳಿಸಿದರು.

ರಾಜ್ಯದಲ್ಲಿ ನಿನ್ನೆ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ನಡೆದಿದೆ. ಇದರಲ್ಲಿ ಚನ್ನಪಟ್ಟಣ ಕ್ಷೇತ್ರ ಬಹಳ ಮಹತ್ವ ಪಡೆದುಕೊಂಡಿತ್ತು. ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಚನ್ನಪಟ್ಟಣ ಫಲಿತಾಂಶದ ಬಗ್ಗೆ ಕುತೂಹಲ ಇದೆ. ಈ ಉಪಚುನಾವಣೆ ರಾಜ್ಯದ ಇತಿಹಾಸದ ಪುಟದಲ್ಲಿ ಉಳಿಯುತ್ತೆ. ಈ ಉಪಚುನಾವಣೆ ನಿಖಿಲ್ ಕುಮಾರಸ್ವಾಮಿ ಉಪಚುನಾವಣೆ ಆಗಿರಲಿಲ್ಲ. ಎರಡೂ ಪಕ್ಷದ ಕಾರ್ಯಕರ್ತರ ಚುನಾವಣೆ ಆಗಿತ್ತು ಎಂದರು.

ಎರಡು ಬಾರಿ ಕುತಂತ್ರದಿಂದ ಸೋಲು

ಸೋಮವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾಜಿ ಅವರು ಸ್ಪಷ್ಟ ಸಂದೇಶ ಕೊಟ್ಟಿದ್ರು. ಯುವಕನ ಪರವಾಗಿ ನಡ್ಡಾರವರು ಮಾತನಾಡಿದ್ದಕ್ಕೆ ಧನ್ಯವಾದ ತಿಳಿಸುತ್ತೇನೆ.

ಎರಡೂ ಪಕ್ಷದ ಕಾರ್ಯಕರ್ತರು ಒಟ್ಟಾಗಿ ಚುನಾವಣೆ ಮಾಡಿದ್ದಾರೆ. ಕಳೆದ 18 ದಿನಗಳ ಹಿಂದೆ ಎನ್ ಡಿ ಎ ಅಭ್ಯರ್ಥಿ ಯಾರು ಆಗಬೇಕು ಎಂಬ ಪ್ರಶ್ನೆ ಉದ್ಭವ ಆಯ್ತು. ಆಗ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ನಿವಾಸಕ್ಕೆ ಕರೆದು ನನ್ನ ಹೆಸರು ಘೋಷಣೆ ಮಾಡಿದ್ರು. ಕಳೆದ ಎರಡು ಬಾರಿ ರಾಜಕೀಯ ಕುತಂತ್ರದಿಂದ ಸೋಲು ಅನುಭವಿಸಿದೆ ಎಂದು ತಿಳಿಸಿದರು.

ನನಗೆ ಜನ ಆಶೀರ್ವಾದ ಮಾಡಿದ್ದಾರೆ

ಈ ಉಪ ಚುನಾವಣೆಯಲ್ಲಿ ನಿಲ್ಲುವ ನನಗೆ ಭಾವನೆ ಇರಲಿಲ್ಲ. ಆದರೆ ಕೊನೆ ಕ್ಷಣದಲ್ಲಿ ಆದ ರಾಜಕೀಯ ಪರಿಸ್ಥಿತಿಗೆ ಕಾರ್ಯಕರ್ತರು ಆತಂಕ, ಗೊಂದಲಕ್ಕೆ ಪರಿಹಾರ ಕೊಡಬೇಕಿತ್ತು. ಹಾಗಾಗಿ ಸ್ಪರ್ಧೆ ಅನಿವಾರ್ಯ ಆಯ್ತು.

ಕಳೆದ 18 ದಿನಗಳಿಂದ ಸರಿಯಾಗಿ ನಿದ್ದೆ ಮಾಡಿಲ್ಲ. ಮುಖಂಡರು, ಕಾರ್ಯಕರ್ತರು ನಿದ್ದೆಗೆಟ್ಟು ಕೆಲಸ ಮಾಡಿದ್ದಾರೆ. ಈ ಚುನಾವಣೆಯಲ್ಲಿ ನನಗೆ ಪೂರಕವಾಗಿ ಜನ ಆಶೀರ್ವಾದ ಮಾಡಿದ್ದಾರೆ. ಹಿರಿಯ ನಾಗರೀಕರು, ಯುವಕರು ಹೆಚ್ಚು ಬೆಂಬಲ ನೀಡಿದ್ದಾರೆ. ಹಾಗಾಗಿ ನಿಮ್ಮ ಜೊತೆಯಲ್ಲಿ ನಾನು ಶಾಶ್ವತವಾಗಿ ಇರುತ್ತೇನೆ ಎಂದು ತಿಳಿಸಿದರು.

ಈ ಚುನಾವಣೆ ನನಗೆ ಅಗ್ನಿ ಪರೀಕ್ಷೆ

ಈ ಉಪಚುನಾವಣೆ ನನಗೆ ಅಗ್ನಿ ಪರೀಕ್ಷೆ ಅಂತ ಹೇಳಿದ್ದೆ. ನಿನ್ನೆ ಶೇ 88.80% ರಷ್ಟು ಮತದಾನ ಆಗಿದೆ. ಚನ್ನಪಟ್ಟಣ ಇತಿಹಾಸದಲ್ಲಿ ದೊಡ್ಡ ಪ್ರಮಾಣದಲ್ಲಿ ಮತದಾನ ಆಗಿದೆ ತಾಲೂಕಿನ ಜನತೆ ಒಂದು ದೊಡ್ಡ ಸಂದೇಶ ಕೊಟ್ಟಿದ್ದಾರೆ ಎಂದರು.

ಒಗ್ಗಟ್ಟಾಗಿ ಕೆಲಸ ಮಾಡಿದ್ದಾರೆ

ಚನ್ನಪಟ್ಟಣದಿಂದ ಹೊರಗಡೆ ನೆಲಸಿರುವ ಕ್ಷೇತ್ರದ ಮತದಾರರು ಬಂದು ಮತದಾನ ಮಾಡಿ ಹೋಗಿದ್ದಾರೆ. ಜೆಡಿಎಸ್-ಬಿಜೆಪಿ ಎಂಬ ತಾರತಮ್ಯ ಬಿಟ್ಟು ಎರಡೂ ಪಕ್ಷದ ಕಾರ್ಯಕರ್ತರು ಕೆಲಸ ಮಾಡಿದ್ದಾರೆ ಎಲ್ಲರಿಗೂ ಧನ್ಯವಾದ ತಿಳಿಸುತ್ತೇನೆ. ಕ್ಷೇತ್ರದ ಎಲ್ಲಾ ಮತದಾರರಿಗೂ ಕೃತಜ್ಞತೆ ಸಲ್ಲಿಸುತ್ತೇನೆ. ಯುವಕನಿಗೆ ಈ ಬಾರಿ ಅವಕಾಶ ಕೊಡುವ ತೀರ್ಮಾನ ಮಾಡಿದ್ದೀರಿ ಅನ್ನೋ ವಿಶ್ವಾಸ ಇದೆ ಎಂದರು.

ರಾಜಕೀಯ

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ ಸೂಚನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಧರ್ಮಸ್ಥಳ ಪ್ರಕರಣ; ಸುಳ್ಳು ಆಪಾದನೆ ಮಾಡಿದವರ ವಿರುದ್ದ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲು ಸಿಎಂ

“ಧರ್ಮಸ್ಥಳ ವಿಚಾರದಲ್ಲಿ ಸುಳ್ಳು ಆಪಾದನೆ ಮಾಡಿದ್ದರೆ ನಿರ್ಧಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದುʼ ಎಂದು ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿಯವರೇ ಭರವಸೆ ನೀಡಿದ್ದಾರೆ”; ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="112789"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!