ಶ್ರೀರಂಗಪಟ್ಟಣ: ಖಾಸಗಿ ಬಸ್ ಮತ್ತು ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕಾಟೇರ ಸಿನಿಮಾದ ಬಾಲ ನಟ ರೋಹಿತ್ (master rohit) ಸೇರಿ ಐದು ಮಂದಿ ತೀವ್ರ ಗಾಯಗೊಂಡಿರುವ ಘಟನೆ ತಾಲ್ಲೂಕಿನ ಪಾಲಹಳ್ಳಿ ಬಳಿ ಸಂಭವಿಸಿದೆ.
ಶನಿವಾರ ಸಂಜೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ರೋಹಿತ್, ಅವರ ತಾಯಿ ಮತ್ತು ಸ್ನೇಹಿತರನ್ನು ಕಾಲೇಜಿನ ಮುಖ್ಯಸ್ಥ ಯೋಗಣ್ಣ ಅವರ ಕಾರಿನಲ್ಲಿ ಪಾಂಡವಪುರದಿಂದ ಕರೆತರುವಾಗ ಈ ಅವಘಡ ಸಂಭವಿಸಿದೆ.
ಗಾಯಗೊಂಡವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರೋಹಿತ್ ಅವರ ತಾಯಿ ಛಾಯಾಲಕ್ಷ್ಮಿ ಅವರ ಒಂದು ಕೈ ಮತ್ತು ಒಂದು ಕಾಲು ಮುರಿದಿದೆ. ಇದೇ ಕಾರಿನಲ್ಲಿದ್ದ ರೋಹಿತ್ ಸ್ನೇಹಿತ ಯಶಸ್, ಆರಾಧನಾ ಕಾಲೇಜಿನ ಉಪನ್ಯಾಸಕರಾದ ಕೇಶವ್ ಮತ್ತು ಶ್ರೀಕಾಂತ್ ಗಾಯಗೊಂಡಿದ್ದಾರೆ. ಶ್ರೀಕಾಂತ್ ಕಾರು ಚಲಾಯಿಸುತ್ತಿದ್ದರು ಎಂದು ವರದಿಯಾಗಿದೆ.