nayanthara-ಧನುಶ್ ಜಗಳ ಜೋರು..!

ಚೆನ್ನೈ: ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ ಎಂದು ಹತ್ತು ಕೋಟಿ ರೂ.ನೀಡುವಂತೆ ನಟ ಧನುಶ್ ಅವರು ನಟಿ ನಯನತಾರಾ (nayanthara) ಹಾಗೂ ನೆಟ್‌ ಫಿಕ್ಸ್‌ ಸಂಸ್ಥೆಗೆ ನೋಟೀಸ್ ನೀಡಿದ್ದಾರೆ.

ನಟ ಧನುಷ್‌ ಹಾಗೂ ನಯನತಾರಾ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕೆಲವು ಸಿನಿಮಾಗಳಲ್ಲಿ ಇಬ್ಬರೂ ಒಟ್ಟಿಗೆ ನಟಿಸಿದ್ದರು. ಆದರೆ ಈಗ ಇಬ್ಬರ ನಡುವೆ ಮಾತಿನ ಯುದ್ದ ಆರಂಭವಾಗಿದೆ.

ಈ ಬೆನ್ನಲ್ಲೇ ಧನುಶ್ ಅವರನ್ನು ನಯನತಾರಾ ನೀಚ ಎಂದು ಜರಿದಿದ್ದಾರೆ. ನಯನತಾರಾ ಸಿನಿಮಾ ಜರ್ನಿಯ ಕುರಿತ ನಯನತಾರಾ ಬಿಯಾಂಡ್ ದಿ ಫೇರೀಟೇಲ್ ಸಾಕ್ಷ್ಯ ಚಿತ್ರ ರಿಲಿಸ್‌ಗೆ ರೆಡಿಯಾಗಿದ್ದು, ನೆಟ್ ಪ್ಲಿಕ್ಸ್‌ನಲ್ಲಿ ಪ್ರಸಾರ ಆರಂಭಿಸಲಿದೆ.

ಈ ಡಾಕ್ಯುಮೆಂಟರಿಯ ಪ್ರೋಮೋ ಬಿಡುಗಡೆ ಆಗಿದ್ದು, ಇದರಲ್ಲಿ ಕೆಲವು ಸಿನಿಮಾಗಳ ದೃಶ್ಯಗಳು, ಚಿತ್ರೀಕರಣದ ದೃಶ್ಯಗಳನ್ನು ಬಳಸಿಕೊಳ್ಳಲಾಗಿದೆ. ಅದರಲ್ಲಿ ನಾನುಮ್ ರೌಡಿ ದಾನ್ ಚಿತ್ರದ ಮೂರು ಸೆಕೆಂಡ್ ದೃಶ್ಯವೂ ಇದೆ.

ಇದು ಧನುಶ್ ನಿರ್ಮಾಣದ ಸಿನಿಮಾವಾಗಿದ್ದು, ತಮ್ಮ ಅನುಮತಿ ಇಲ್ಲದೆ ದೃಶ್ಯವನ್ನು ಬಳಿಸಿಕೊಳ್ಳಲಾಗಿದೆ, ಹಾಗಾಗಿ ಹತ್ತು ಕೋಟಿ ರು.ನೀಡುವಂತೆ ಧನುಶ್, ನಯನತಾರಾ ಹಾಗೂ ನೆಟ್‌ ಫಿಕ್ಸ್‌ಗೆ ನೋಟೀಸ್ ನೀಡಿದ್ದರು.

ಧನುಶ್ ಕಳಿಸಿರುವ ನೊಟೀಸ್ ನೋಡಿ ಕೆಂಡಾಮಂಡಲರಾಗಿರುವ ನಯನ, ಧನುಶ್‌ ಅವರನ್ನು ನೀಚ, ದುರಹಂಕಾರಿ, ಹಣಬಾಕ ಎಂದು ನಿಂದಿಸಿದ್ದಾರೆ.

ನಾನೂಮ್ ರೌಡಿ `ದಾನ್ ಸಿನಿಮಾದ ಹಾಡು, ಕೆಲವು ವಿಡಿಯೊ ತುಣುಕನ್ನು ಬಳಸಿಕೊಳ್ಳಲು ಕಳೆದ ಎರಡು ವರ್ಷದಿಂದಲೂ ಅನುಮತಿ ಕೇಳಿದ್ದೇನೆ. ಆದರೆ ನಮ್ಮ ಮನವಿಗೆ ಸ್ಪಂದಿಸಿಲ್ಲ. ನಿಮ್ಮಿಂದ ಯಾವುದೇ ಪ್ರತಿಕ್ರಿಯೆ ಬರದೇ ಇದ್ದಾಗ ಹಾಡು ಬಳಸುವುದನ್ನು ಕೈಬಿಟ್ಟು ಸಿನಿಮಾದ ಶೂಟಿಂಗ್ ದೃಶ್ಯವನ್ನು ಬಳಸಿಕೊಂಡಿದ್ದೇವೆ. ಅದರ ಮೂರು ಸೆಕೆಂಡ್ ಬಳಸಿಕೊಂಡಿದ್ದಕ್ಕೆ ಹತ್ತು ಕೋಟಿ ರು.ನೀಡುವಂತೆ ನೊಟೀಸ್ ಕಳಿಸಿದ್ದೀರ. ಇದು ನನಗೆ ಬೇಸರತರಿಸಿದೆ ಎಂದು ನಯನತಾರಾ ಕಿಡಿಕಾರಿದ್ದಾರೆ.

ಇದಿಷ್ಟೇ ಅಲ್ಲ, ನಾನುಮ್ ರೌಡಿ ದಾನ್ ಸಿನಿಮಾ ನಿರ್ಮಾಣ ಮಾಡುವಾಗ ಚಿತ್ರತಂಡದ ವಿರುದ್ದ ಅದೆಷ್ಟು ವಿಷಕಾರಿದಿರಿ. ಸಿನಿಮಾದ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ನೀನು ಆಡಿದ ಮಾತುಗಳು ಮನಸಿಗೆ ನೋವುಂಟು ಮಾಡಿವೆ. ಅದನ್ನು ನಾನು ಇನ್ನು ಮರೆತಿಲ್ಲ, ನನ್ನ ಮನಸಿಗೆ ಮಾಡಿದ ಗಾಯ ಇನ್ನೂ ಆರಿಲ್ಲ ಎಂದು ಖಾರವಾಗಿಯೇ ನುಡಿದಿದ್ದಾರೆ ನಯನತಾರಾ.

ಅಭಿಮಾನಿಗಳ ಮುಂದೆ ನಾಟಕೀಯವಾಗಿ ನಟಿಸುತ್ತೀಯಾ ತಾನು ಭಾರೀ ಸಾಧು ಎಂದು ಬಿಂಬಿಸಿಕೊಳ್ಳುತ್ತೀಯಾ ನೀನೆಂತ ನೀಚ ಎಂದು ಎಲ್ಲರಿಗೂ ಗೊತ್ತಾಗಲಿದೆ ಅದನ್ನು ಹೆಚ್ಚು ದಿನ ಮುಚ್ಚಿಡಲಾಗುವುದಿಲ್ಲ ಎಂದು ನಯನ ತಾರಾ ನೇರವಾಗಿಯೇ ನಿಂದಿಸಿದ್ದಾರೆ.

ನಾನುಮ್ ರೌಡಿ ದಾನ್ 2015ರಲ್ಲಿ ತೆರೆಗೆ ಬಂದಿತ್ತು. ನಯನಾತಾರ ಪತಿ ವಿಣೇಶ್ ಶಿವನ್ ನಿರ್ದೇಶಿದ್ದ ಈ ಚಿತ್ರವನ್ನು ಧನುಶ್ ನಿರ್ಮಾಣ ಮಾಡಿದ್ದರು. ವಿಜಯ್ ಸೇತುಪತಿ ಹಾಗೂ ನಯನತಾರಾ ಚಿತ್ರದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!