Cmsiddaramaiah| ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಂವಿಧಾನ ವಿರೋಧಿಗಳು ಮನುಷ್ಯ ವಿರೋಧಿಗಳು. ಸಂವಿಧಾನ-ಪ್ರಜಾಪ್ರಭುತ್ವ-ಜಾತ್ಯತೀತತೆ ಬಗ್ಗೆ ಪ್ರತಿಯೊಬ್ಬರೂ ಸ್ಪಷ್ಟತೆ ಬೆಳೆಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಕರೆ ನೀಡಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜಿಸಿದ್ದ ಸಂತಶ್ರೇಷ್ಠ ಕನಕದಾಸ ಜಯಂತಿಯನ್ನು ಉದ್ಘಾಟಿಸಿ, ಕನಕ ಶ್ರೀ ಪ್ರಶಸ್ತಿ ಪ್ರದಾನ ಮಾಡಿ ಸಮಗ್ರ ತತ್ವಪದ ಯೋಜನೆಯ 18 ಸಂಪುಟಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.

ಕನಕದಾಸರ 500ನೇ ಜಯಂತೋತ್ಸವವನ್ನು ಆಚರಿಸುವ ಅವಕಾಶ ನನಗೆ ಸಿಕ್ಕಿತ್ತು. ಆ ಸಂದರ್ಭದಲ್ಲಿ ಕನಕದಾಸರ ಕೀರ್ತನೆಗಳನ್ನು ಸುಲಭವಾಗಿ ಜನರ ಕೈಗೆ ತಲುಪಿಸುವ ಕಾರ್ಯವನ್ನು ಮಾಡಲಾಗಿತ್ತು ಎಂದು ಸ್ಮರಿಸಿದರು.

ಕನಕಶ್ರೀ ಪ್ರಶಸ್ತಿ ಪುರಸ್ಕೃತರನ್ನು ಅಭಿನಂದಿಸಿದ ಮುಖ್ಯಮಂತ್ರಿಗಳು, ಕನಕಶ್ರೀ ಪ್ರಶಸ್ತಿಗೆ ಜಾತಿ-ಧರ್ಮ ಮುಖ್ಯ ಅಲ್ಲ. ಕನಕದಾಸರ ಸಾಮಾಜಿಕ ಸಂದೇಶದ ಮೇಲೆ ಕೆಲಸ ಮಾಡುವುದಷ್ಟೆ ಮುಖ್ಯ ಎಂದರು.

ಬಸವಾದಿ ಶರಣರು, ಕನಕದಾಸರು ಇಬ್ಬರೂ ಮನುಷ್ಯರನ್ನು ವಿಭಜಿಸುವ ಜಾತಿ-ಧರ್ಮದ ತಾರತಮ್ಯವನ್ನು ವಿರೋಧಿಸಿದ್ದರು. ವಚನ ಚಳವಳಿಗೂ ಮೊದಲು ಜನರಿಗೆ ಅರ್ಥ ಆಗದ ಭಾಷೆಯಲ್ಲಿ ಧರ್ಮ‌ ಪ್ರಚಾರ ನಡೆಯುತ್ತಿತ್ತು. ಜನರಿಗೆ ಅರ್ಥವಾಗದ ಸಂಸ್ಕೃತ ಶ್ಲೋಕಗಳನ್ನು ಮುಟ್ಟದ ಬಸವಾದಿ ಶರಣರು ಜನರಿಗೆ ಅರ್ಥವಾಗುವ ಜನರ ಭಾಷೆಯಲ್ಲೇ ಅತ್ಯಂತ ಸರಳವಾಗಿ ಮಾನವೀಯ ಧರ್ಮವನ್ನು ಹೇಳಿದರು. ಮನುಷ್ಯ ನಿರ್ಮಿತ ಜಾತಿ ತಾರತಮ್ಯವನ್ನು, ಧಾರ್ಮಿಕ ತಾರತಮ್ಯವನ್ನು ಅಳಿಸಲು ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿದರು. ಬಸವಾದಿ ಶರಣರು 12 ನೇ ಶತಮಾನದಲ್ಲಿ ಮುನ್ನಡೆಸಿದ ಮಾನವೀಯ ಧರ್ಮವನ್ನು 15 ನೇ ಶತಮಾನದಲ್ಲಿ ಕನಕದಾಸರು ಮುಂದುವರೆಸಿದರು.

ಬುದ್ದ, ಬಸವ, ಕನಕದಾಸರು, ಅಂಬೇಡ್ಕರ್ ಅವರ ಆಶಯಗಳೆಲ್ಲಾ ಒಂದೇ ಆಗಿದ್ದವು. ಜಾತಿ, ಧರ್ಮದ ಹೆಸರಿನಲ್ಲಿ ನಡೆಯುವ ಮನುಷ್ಯ ತಾರತಮ್ಯಗಳನ್ನು ನಿವಾರಿಸಲು ಶ್ರಮಿಸಿದರು ಎಂದು ವಿವರಿಸಿದರು.

ವಿದ್ಯಾವಂತರಾದಷ್ಟೂ ಜಾತಿವಾದಿಗಳಾದರೆ ಆ ವಿದ್ಯೆಗೆ ಗೌರವ ಬರುತ್ತದಾ? ಸಂವಿಧಾನವನ್ನು ವಿರೋಧಿಸುವವರೂ ಈಗ ತಲೆ ಎತ್ತಿದ್ದಾರೆ. ಸಂವಿಧಾನ ವಿರೋಧಿಗಳು ನಿಜವಾದ ಮನುಷ್ಯ ವಿರೋಧಿಗಳು ಎಂದರು.

ಮನುಷ್ಯ ಮನುಷ್ಯರನ್ನು ಜಾತಿ, ಧರ್ಮದ ಹೆಸರಲ್ಲಿ, ಮೇಲು-ಕೀಳು ಎನ್ನುವ ತಾರತಮ್ಯವನ್ನು ತ್ಯಜಿಸಿ ಮನುಷ್ಯರನ್ನು ಪ್ರೀತಿಸುವುದೇ ಕನಕದಾಸರಿಗೆ ನಾವು ಸಲ್ಲಿಸುವ ನಿಜವಾದ ಗೌರವ ಎಂದರು.

ತಿಂಥಿಣಿ ಕನಕ ಗುರುಪೀಠದ ಜಗದ್ಗುರು ಸಿದ್ದರಾಮಾನಂದ ಸ್ವಾಮಿಗಳ‌ ದಿವ್ಯ ಸಾನಿದ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಲೇಖಕರಾದ ಬಂಜಗೆರೆ ಜಯಪ್ರಕಾಶ್ ಅವರು ವಿಶೇಷ ಉಪನ್ಯಾಸ ನೀಡಿದರು. ಸಚಿವರಾದ ಶಿವರಾಜ್ ತಂಗಡಗಿ, ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನ ಪರಿಷತ್ ಮುಖ್ಯ ಸಚೇತಕರಾದ ಸಲೀಂ ಅಹಮದ್ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.

ಇಲಾಖೆ ಪ್ರಕಟಣೆಗಳಿಗೆ ಶೇ50 ರಿಯಾಯ್ತಿ ನೀಡಿ

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಡಿಯಲ್ಲಿ ಬರುವ ಎಲ್ಲಾ ಅಕಾಡೆಮಿಗಳು ಮತ್ತು ಪ್ರಾಧಿಕಾರಿಗಳು ಪ್ರಕಟಿಸುವ ಪುಸ್ತಕಗಳನ್ನು ವಿಶೇಷ ಸಂದರ್ಭಗಳಲ್ಲಿ ಶೇ50 ರಷ್ಟು ರಿಯಾಯ್ತಿ ದರದಲ್ಲಿ ಮಾರಾಟ ಮಾಡುವಂತೆ ಇದೇ ಸಂದರ್ಭದಲ್ಲಿ ಘೋಷಿಸಿದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ ನೀಡಿದ ಕರವೇ ರಾಜಘಟ್ಟರವಿ

ದೊಡ್ಡಬಳ್ಳಾಪುರದಲ್ಲಿ 132 ಮಂದಿ ಶಿಕ್ಷಕರ ಕೊರತೆ: BEO ಕಚೇರಿಗೆ ಬೀಗ ಜಡಿಯುವ ಎಚ್ಚರಿಕೆ

ದೊಡ್ಡಬಳ್ಳಾಪುರ ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ 132 ಮಂದಿ ಶಿಕ್ಷಕರ (Teacher) ಹುದ್ದೆ ಖಾಲಿಯಿದ್ದು, ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿ ಮೇಲೆ ತೀವ್ರತರವಾದ ಆತಂಕ.

[ccc_my_favorite_select_button post_id="110310"]
ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು: ಸಿಎಂ ಸಿದ್ದರಾಮಯ್ಯ

ವಿಜ್ರಂಭಣೆ ರಭಸದಲ್ಲಿ ದಸರಾದ ಚಾರಿತ್ರಿಕ‌ ಮಹತ್ವ ಮರೆಯಾಗಬಾರದು. ಜನರ, ಪ್ರವಾಸಿಗರ ಸುರಕ್ಷತೆ ಮತ್ತು ಅನುಕೂಲಕ್ಕೆ ಆದ್ಯತೆ; ಸಿಎಂ ಸಿದ್ದರಾಮಯ್ಯ (Cmsiddaramaiah)

[ccc_my_favorite_select_button post_id="110133"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ಗೋಣಿ ಚೀಲದಲ್ಲಿ ಅಪರಿಚಿತ ಶವ ಪತ್ತೆ.. !

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಬಾಶೆಟ್ಟಿಹಳ್ಳಿ ಬಳಿ ಗೋಣಿ ಚೀಲದಲ್ಲಿ ಅಪರಿಚಿತ ಪುರುಷನ ಶವ (Unknown corpse) ಪತ್ತೆಯಾಗಿದೆ. ಬಾಶೆಟ್ಟಿಹಳ್ಳಿಯ ಪೆಟ್ರೋಲ್ ಬಂಕ್ ಹಿಂಭಾಗದ ಕಾಂಪ್ಲೆಕ್ಸ್‌ ಬಳಿ ಮೂಟೆ ಕಟ್ಟಿ ಎಸೆದಿರುವ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿದೆ. ಸ್ಥಳಕ್ಕೆ ಎಸ್ಪಿ ಸಿಕೆ ಬಾಬಾ, ಡಿವೈಎಸ್

[ccc_my_favorite_select_button post_id="110342"]
ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ದೊಡ್ಡಬಳ್ಳಾಪುರ: ವಿದ್ಯುತ್ ತಂತಿ ಬಿದ್ದು ಇಬ್ಬರು ಕಾರ್ಮಿಕರ ಸ್ಥಿತಿ ಗಂಭೀರ..!

ವಿದ್ಯುತ್ ತಂತಿಬಿದ್ದು ಇಬ್ಬರು ಕಾರ್ಮಿಕರು (laborer) ಗಂಭೀರವಾಗಿ ಗಾಯಗೊಂಡರುವ ಘಟನೆ ಕರೇನಹಳ್ಳಿಯಲ್ಲಿ ಮಂಗಳವಾರ ಮದ್ಯಾಹ್ನ ನಡೆದಿದೆ.

[ccc_my_favorite_select_button post_id="110354"]

ಆರೋಗ್ಯ

ಸಿನಿಮಾ

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ನಟಿ ಶೆಫಾಲಿ ಜರಿವಾಲಾ ಅನುಮಾನಾಸ್ಪದ ಸಾವು..!

ಕಾಂಟಾ ಲಾಗಾ ಪ್ರಸಿದ್ಧ ಹಿಂದಿ ಗೀತೆಯ ನಟಿ ಶೆಫಾಲಿ ಜರಿವಾಲಾ (Shefali Jariwala) ಶುಕ್ರವಾರ ರಾತ್ರಿ ಅನುಮಾನಾಸ್ಪದವಾಗಿ ಸಾವನಪ್ಪಿದ್ದಾರೆ‌.

[ccc_my_favorite_select_button post_id="110113"]
error: Content is protected !!