ವಯನಾಡು: ಶಬರಿಮಲೆ ಯಾತ್ರೆ ಮುಗುಸಿ ಕರ್ನಾಟಕಕ್ಕೆ ವಾಪಸಾಗುತ್ತಿದ್ದ ಯಾತ್ರಿಕರಿದ್ದ ಬಸ್ ಕೇರಳದ ವಯನಾಡುನಲ್ಲಿ ಪಲ್ಟಿಯಾಗಿದೆ (Accident). ಅಪಘಾತದಲ್ಲಿ ಹಲವಾರು ಪ್ರಯಾಣಿಕರಿಗೆ ಗಾಯಗಳಾಗಿವೆ ಎಂದು ವರದಿಯಾಗಿದೆ.
ಮಂಗಳವಾರ ಬೆಳಗಿನ ಜಾವ 6 ಗಂಟೆ ಸಮಯದಲ್ಲಿ ಕಿರಿದಾದ ತಿರುನೆಲ್ಲಿ ಥೆಟ್ಟು ರಸ್ತೆಯಲ್ಲಿ ಈ ಘಟನೆ ನಡೆದಿದೆ.
ಬಸ್ ನಿಯಂತ್ರಣ ತಪ್ಪಿ ರಸ್ತೆಗೆ ಅಡ್ಡಲಾಗಿ ಪಲ್ಟಿಯಾಗಿದೆ. ಬಸ್ನಲ್ಲಿ 50ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎಂದು ಅಂದಾಜಿಸಲಾಗಿದೆ.
ಗಾಯಾಳುಗಳನ್ನು ವಿವಿಧ ವಾಹನಗಳಲ್ಲಿ ಮಾನಂತವಾಡಿ ವೈದ್ಯಕೀಯ ಕಾಲೇಜಿಗೆ ಸಾಗಿಸಲಾಯಿತು. ಸಹ ಪ್ರಯಾಣಿಕರು ಮತ್ತು ಸ್ಥಳೀಯ ನಿವಾಸಿಗಳು ಕೂಡಲೇ ರಕ್ಷಣಾ ಕಾರ್ಯಗಳನ್ನು ನಡೆಸಿದರು.
ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಕೂಡ ಘಟನಾ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.