agriculture: ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆ; ಸಚಿವ ಎನ್‌. ಚಲುವರಾಯಸ್ವಾಮಿ

ಬೆಂಗಳೂರು: ಕೃಷಿ (agriculture) ಇಲಾಖೆಯ ಪ್ರಮುಖ ಆಧಾರ ಸ್ತಂಭಗಳಾದ ಬೀಜೋತ್ಪಾದನಾ ಕೇಂದ್ರಗಳು, ರೈತ ಸಂಪರ್ಕ ಕೇಂದ್ರಗಳು, ಜಿಲ್ಲಾ ಕೃಷಿ ತರಬೇತಿ ಕೇಂದ್ರಗಳು ಮತ್ತು ಜೈವಿಕ ನಿಯಂತ್ರಣ/ ಪರತಂತ್ರ ಜೀವಿ ಪ್ರಯೋಗಾಲಯಗಳನ್ನು ಒಂದೇ ಸೂರಿನಡಿ ತಂದು ಅಭಿವೃದ್ಧಿಪಡಿಸಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿಯನ್ನು ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ಪಡೆಯಲಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ತಿಳಿಸಿದರು.

ವಿಕಾಸಸೌಧದ ಸಮಿತಿ ಕೊಠಡಿಯಲ್ಲಿ ಕೃಷಿ ಮತ್ತು ಜಲಾನಯನ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಸಚಿವರು ಮಾಹಿತಿ ನೀಡಿದರು.

ಬೆಳೆಗಳಲ್ಲಿ ಕಂಡುಬರುವ ಕೀಟ/ ರೋಗ ಬಾಧೆ ಹಾಗೂ ಪೋಷಕಾಂಶಗಳ ಕೊರತೆಯನ್ನು ನಿಖರವಾಗಿ ಗುರುತಿಸಿ, ಪೀಡೆ ಬಾಧೆಯ ತೀವ್ರತೆಗನುಗುಣವಾಗಿ ನಿರ್ವಹಣಾ ಕ್ರಮಗಳನ್ನು ರೈತರಿಗೆ ತಲುಪಿಸಲು ಇ-ಸ್ಯಾಪ್‌ ತಂತ್ರಜ್ಞಾನವನ್ನು ಜಾರಿಗೊಳಿಸಿ ಇಲ್ಲಿಯವರೆಗೆ 70,016 ರೈತರಿಗೆ 1,30,152 ವಿವಿಧ ತಾಂತ್ರಿಕ ಸಲಹೆಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು.

ಮಣ್ಣು ಪರೀಕ್ಷೆಗೆ ಭೂಸಾರ ಆಪ್‌ ತಂತ್ರಾಂಶ ಬಳಸಿ 4.76 ಲಕ್ಷ ಮಣ್ಣು ಮಾದರಿಗಳ ಗುರಿಗೆ ಇಲ್ಲಿಯವರೆಗೆ 4.54 ಲಕ್ಷ ಮಣ್ಣು ಮಾದರಿಗಳನ್ನು ಸಂಗ್ರಹಿಸಿದ್ದು, 2.30 ಲಕ್ಷ ಮಣ್ಣು ಮಾದರಿಗಳನ್ನು ವಿಶ್ಲೇಷಿಸಿ 1.58 ಲಕ್ಷ ಮಣ್ಣು ಆರೋಗ್ಯ ಕಾರ್ಡ್‌ಗಳನ್ನು ವಿತರಿಸಲಾಗಿರುತ್ತದೆ.

ರಾಜ್ಯದಲ್ಲಿನ 29 ಮಣ್ಣು ಆರೋಗ್ಯ ಕೇಂದ್ರಗಳ ಪೈಕಿ 26 ಕೇಂದ್ರಗಳಿಗೆ NABL recognition ಪಡೆಯಲಾಗಿದೆ ಎಂದು ಹೇಳಿದರು.
ಕೇಂದ್ರ ಪುರಸ್ಕೃತ ಯೋಜನೆಗಳಡಿ 2023-24ನೇ ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳಿಗೆ ರೂ.297 ಕೋಟಿ ಅನುದಾನವನ್ನು ಹೆಚ್ಚುವರಿಯಾಗಿ ಪಡೆಯಲಾಗಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

ಕಳೆದ ಒಂದೂವರೆ ವರ್ಷದಲ್ಲಿ ರಾಜ್ಯದಲ್ಲಿ ಬಿತ್ತನೆ ಬೀಜ ವಿತರಣೆ ಹಾಗೂ ರಸಗೊಬ್ಬರ ಪೂರೈಕೆಯನ್ನು ಯಾವುದೇ ಕೊರತೆ ಮತ್ತು ದೂರು ಇಲ್ಲದಂತೆ ನಿರ್ವಹಿಸಲಾಗಿದೆ. 2023-24ನೇ ಸಾಲಿನಲ್ಲಿ 13 ಲಕ್ಷ ರೈತರಿಗೆ 5.77 ಲಕ್ಷ ಕ್ವಿಂಟಾಲ್ ಬಿತ್ತನೆ ಬೀಜಗಳ ವಿತರಣೆ ಮಾಡಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 12.92 ಲಕ್ಷ ಫಲಾನುಭವಿಗಳಿಗೆ 6.11ಕ್ವಿಂಟಾಲ್‌ ಬಿತ್ತನೆ ಬೀಜಗಳನ್ನು ಇಲ್ಲಿಯವರೆಗೆ ವಿತರಣೆ ಮಾಡಲಾಗಿದೆ. ಕಳೆದ ಸಾಲಿಗೆ ಹೋಲಿಸಿದರೆ ಪ್ರಸಕ್ತ ಸಾಲಿನಲ್ಲಿ 46,000 ಕ್ವಿಂಟಾಲ್‌ ಹೆಚ್ಚುವರಿ ಬಿತ್ತನೆ ಬೀಜವನ್ನು ಸಹಾಯಧನದಡಿಯಲ್ಲಿ ವಿತರಿಸಲಾಗಿದೆ. ಬಿತ್ತನೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.

ರಾಜ್ಯದ ಸಾವಯವ ಮತ್ತು ಸಿರಿಧಾನ್ಯ ಉತ್ಪಾದಕರಿಗೆ, ಮಾರುಕಟ್ಟೆದಾರರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗುವಂತೆ ಮಾರುಕಟ್ಟೆ ಸಂಪರ್ಕವನ್ನು ವಿಸ್ತರಿಸಲು ಮತ್ತು ಆರೋಗ್ಯವನ್ನು ಸುಧಾರಿಸಲು ಸಾವಯವ ಮತ್ತು ಸಿರಿಧಾನ್ಯ ಹಬ್‌ ನ್ನು ಹೆಬ್ಬಾಳ, ಬೆಂಗಳೂರಿನಲ್ಲಿ ರೂ.20.00 ಕೋಟಿ ಅನುದಾನದಲ್ಲಿ ಸ್ಥಾಪಿಸಲು ಸಚಿವ ಸಂಪುಟದ ಅನುಮೋದನೆ ನೀಡಿದೆ ಎಂದು ಕೃಷಿ ಸಚಿವರು ತಿಳಿಸಿದರು.

2023-24ನೇ ಸಾಲಿನಲ್ಲಿ 3.07 ಲಕ್ಷ ರೈತರಿಗೆ 3.12 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಹನಿ/ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ ರೂ. 627.10 ಕೋಟಿ ಸಹಾಯಧನವನ್ನು ನೀಡಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 109250 ರೈತ ಫಲಾನುಭವಿಗಳಿಗೆ ಸೂಕ್ಷ್ಮ ನೀರಾವರಿ ಘಟಕಗಳ ಅಳವಡಿಕೆಗೆ ಸಹಾಯಧನ ನೀಡಲಾಗಿದೆ ಎಂದು ಚಲುವರಾಯಸ್ವಾಮಿ ತಿಳಿಸಿದರು.

2023-24ನೇ ಸಾಲಿನಲ್ಲಿ ಕೃಷಿಯಲ್ಲಿ ಯಾಂತ್ರೀಕತೆಯನ್ನು ಪ್ರೋತ್ಸಾಹಿಸಲು ಅನುವಾಗುವಂತೆ ರೂ.433.92 ಕೋಟಿಗಳ ವೆಚ್ಚದಲ್ಲಿ 1,16,181 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ ಇಲ್ಲಿಯವರೆಗೆ 20301 ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ಸಹಾಯಧನದಡಿ ವಿತರಣೆ ಮಾಡಲಾಗಿದೆ.

ಹೈಟೆಕ್ ಹಾರ್ವೆಸ್ಟರ್ ಹಬ್‌ ಯೋಜನೆಯಡಿ 2023-24ನೇ ಸಾಲಿನಲ್ಲಿ 104 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆಗೆ ರೂ.41.39 ಕೋಟಿಗಳ ಸಹಾಯಧನ ನೀಡಲಾಗಿದ್ದು, 2024-25ನೇ ಸಾಲಿನಲ್ಲಿ 100 ಹೈಟೆಕ್ ಹಾರ್ವೆಸ್ಟರ್ ಹಬ್‌ಗಳನ್ನು ರೂ. 45.00 ಕೋಟಿಗಳ ಅನುದಾನದಲ್ಲಿ ಸ್ಥಾಪಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಸಚಿವರು ತಿಳಿಸಿದರು.

2024ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ವಿವಿಧ ಕೃಷಿ ಬೆಳೆಗಳನ್ನು 82.48 ಲಕ್ಷ ಹೆಕ್ಟೇರ್ ಗುರಿಗೆ 81.36 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.99 ರಷ್ಟು ಬಿತ್ತನೆಯಾಗಿರುತ್ತದೆ. ದಿನಾಂಕ:15.11.2024 ವರೆಗೆ 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಕೃಷಿ ಬೆಳೆಗಳ ಪ್ರಸ್ತಾವಿತ ಬಿತ್ತನೆ ಗುರಿ 25.53 ಲಕ್ಷ ಹೆಕ್ಟೇರ್ ಪ್ರತಿಯಾಗಿ 13.38 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ಶೇ.52ರಷ್ಟು ಬಿತ್ತನೆಯಾಗಿದ್ದು ಡಿಸೆಂಬರ್ವರೆಗೂ ಬಿತ್ತನೆಯಾಗಲಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಒಟ್ಟು 17.61 ಲಕ್ಷ ರೈತ ಫಲಾನುಭವಿಗಳಿಗೆ ರೂ.2021.17 ಕೋಟಿಗಳ ಬೆಳೆ ವಿಮೆ ಪರಿಹಾರವನ್ನು ಇತ್ಯರ್ಥಪಡಿಸಲಾಗಿದೆ. ಪ್ರಸಕ್ತ ಮುಂಗಾರು 2024ರ ಹಂಗಾಮಿನಲ್ಲಿ 22.97 ಲಕ್ಷ ರೈತ ಪ್ರಸ್ತಾವನೆಗಳು 17.60 ಲಕ್ಷ ಹೇಕ್ಟೆರ್ ಪ್ರದೇಶಕ್ಕೆ ನೋಂದಣಿಯಾಗಿದ್ದು, 2024-25ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 25148 ರೈತ ಪ್ರಸ್ತಾವನೆಗಳು 31690.28 ಹೆಕ್ಟೇರ್‌ ಪ್ರದೇಶಕ್ಕೆ ನೋಂದಣಿಯಾಗಿದ್ದು ನೋಂದಣಿ ಕಾರ್ಯವು ಪ್ರಗತಿಯಾಗಿದೆ ಎಂದು ಕೃಷಿ ಸಚಿವ ಎನ್‌.ಚಲುವರಾಯಸ್ವಾಮಿ ಹೇಳಿದರು.

ರಾಷ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ: ದ್ವಿದಳ ಧಾನ್ಯ ಪ್ರಾತ್ಯಕ್ಷಿಕೆಗಳಿಗೆ 2024-25ನೇ ಸಾಲಿನಲ್ಲಿ 121.56 ಕೋಟಿ ಹಾಗೂ ಹೆಚ್ಚುವರಿ ಅನುದಾನ 63.42ಕೋಟಿ ಒಳಗೊಂಡಂತೆ ಒಟ್ಟು 184.98ಕೋಟಿ ಅನುದಾನದಲ್ಲಿ ದ್ವಿದಳ ಧಾನ್ಯ ವಿಸ್ತೀರ್ಣ ಹೆಚ್ಚಿಸಲು ಅಗತ್ಯ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

ರಾಷ್ರೀಯ ಆಹಾರ ಮತ್ತು ಪೌಷ್ಟಿಕ ಭದ್ರತೆಯ ಯೋಜನೆ: ದ್ವಿದಳ ಧಾನ್ಯ ಕಾರ್ಯಕ್ರಮದಡಿ 100ಹೆಕ್ಟೇರ್ ಪ್ರದೇಶದಂತೆ ಗುಚ್ಚ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು 75,500 ಹೆಕ್ಟೇರ್ ಪ್ರದೇಶದಲ್ಲಿ ದ್ವಿದಳ ಧಾನ್ಯಗಳ ನೂತನ ತಾಂತ್ರಿಕತೆಗಳ ಪರಿಚಯಗಳ ಬಗ್ಗೆ ಪ್ರಾತ್ಯಕ್ಷಿಕೆಗಳನ್ನು ಕೈಗೊಳ್ಳಲಾಗಿದೆ ಅಲ್ಲದೇ ಬೆಳೆ ಸಾಂದ್ರತೆ (Croping Intensity) : ಶೇ.100ರಿಂದ ಶೇ.175ರಷ್ಟು ಹೆಚ್ಚಳವಾಗಲಿದೆ ಎಂದು ಸಚಿವರು ಮಾಹಿತಿ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ ಆಯುಕ್ತರು ವೈ.ಎಸ್.ಪಾಟೀಲ, ಜಲಾನಯನ ಅಭಿವೃದ್ಧಿ ಇಲಾಖೆ ಆಯುಕ್ತರು ಮಹೇಶ್ ಶಿರೂರು, ನಿರ್ದೇಶಕ ಬಂತನಾಳ, ಕರ್ನಾಟಕ ರಾಜ್ಯ ಬೀಜ ನಿಗಮದ ವ್ಯವಸ್ಥಾಪಕ ನಿರ್ದೇಶಕರು ದೇವರಾಜು ಸೇರಿದಂತೆ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ರಾಜಕೀಯ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ದೊಡ್ಡಬಳ್ಳಾಪುರದಲ್ಲಿ ಬೃಹತ್ ಶ್ರೀರಾಮ ಶೋಭಾಯಾತ್ರೆ: ಪೂರ್ವಭಾವಿಯಾಗಿ ಅಬ್ಬರದ ಬೈಕ್ ರ‍್ಯಾಲಿ

ವಿಶ್ವ ಹಿಂದೂ ಪರಿಷದ್ ಬಜರಂಗದ ವತಿಯಿಂದ ಮೂರು ದಿನಗಳ ಕಾಲ ಹಮ್ಮಿಕೊಂಡಿರುವ ಬೃಹತ್ ಶ್ರೀರಾಮ ಶೋಭಾಯಾತ್ರೆ (Sri Rama Sobhayatre) ಹಿನ್ನಲೆಯಲ್ಲಿ ಮೊದಲ ದಿನ ಪೂರ್ವಭಾವಿಯಾಗಿ ಬೈಕ್ ರ‍್ಯಾಲಿ ನಡೆಸುವ ಮೂಲಕ ಶೋಭಾ ಯಾತ್ರೆಯ

[ccc_my_favorite_select_button post_id="120514"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

IPLಗೆ ಕ್ಷಣಗಣನೆ.. ಟಿಕೆಟ್ ಬೇಡಿ ಮರ್ಯಾದೆ ಕಳೆದುಕೊಂಡ ಶಾಸಕರು

ಇಂಡಿಯನ್ ಪ್ರೀಮಿಯರ್ ಲೀಗ್ (IPL) 19ನೇ ಆವೃತ್ತಿಯ ಉದ್ಘಾಟನಾ ಪಂದ್ಯ ಇಂದು (ಮಾರ್ಚ್ 28) ಚಿನ್ನಸ್ವಾಮಿಯಲ್ಲಿ ನಡೆಯಲಿದ್ದು, ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್‌ ರೈಸರ್ಸ್ ಹೈದರಾಬಾದ್ ತಂಡ ಮುಖಾಮುಖಿಯಾಗಲಿವೆ.

[ccc_my_favorite_select_button post_id="120518"]

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

[ccc_my_favorite_select_button post_id="120461"]

RCBಗೆ ಕೆಎಂಎಫ್ ಪ್ರಾಯೋಜಕತ್ವ..!

[ccc_my_favorite_select_button post_id="120424"]

IPL ಟಿಕೆಟ್: ನಕಲಿ ಲಿಂಕ್ ಎಚ್ಚರಿಕೆ

[ccc_my_favorite_select_button post_id="120376"]
ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಫೋಟೋಶೂಟ್ ವೇಳೆ ಫೊಟೋಗ್ರಾಫರ್‌‌ಗಳ ಮೇಲೆ ಹಲ್ಲೆ: 7 ಜನರ ಬಂಧನ

ಮದುವೆ ನಿಶ್ಚಯವಾಗಿದ್ದ ಜೋಡಿಯೊಂದರ ಪ್ರೀ ವೆಡ್ಡಿಂಗ್ ಫೋಟೋ ಶೂಟ್‌ಗೆಂದು (photoshoot) ತೆರಳಿದ್ದ ಫೋಟೋಗ್ರಾಫರ್‌ಗಳ (Photographers) ಮೇಲೆ ಸ್ಥಳೀಯ ಕೆಲವರು ಹಲ್ಲೆ ನಡೆಸಿರುವ ಘಟನೆ ಸಕಲೇಶಪುರ ತಾಲೂಕಿನ ಬೆಟ್ಟದ ಭೈರವೇಶ್ವರ ದೇವಾಲಯದ ಆವರಣದಲ್ಲಿ ನಡೆದಿದೆ.

[ccc_my_favorite_select_button post_id="120523"]
ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ತಮ್ಮನ ಮನೆಗೆ ಬರುತ್ತಿದ್ದ ಮಹಿಳೆ ದುರ್ಮರಣ

ಶ್ರೀರಾಮನವಮಿ ಹಬ್ಬಕ್ಕೆಂದು ತಮ್ಮನ ಮನೆಗೆ ಬರುತ್ತಿದ್ದ ಮಹಿಳೆಗೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ (Accident) ಸ್ಥಳದಲ್ಲಿಯೇ ಸಾವನಪ್ಪಿರುವ ಘಟನೆ ಹಮಾಮ್ ಗೇಟ್ ಬಳಿ ಗುರುವಾರ ರಾತ್ರಿ ನಡೆದಿದೆ.

[ccc_my_favorite_select_button post_id="120487"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!