ಮಹಿಳೆಯರನ್ನು ಮಂಚಕ್ಕೆ ಕರೆದ, ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯನ್ನು ನ್ಯಾಷನಲ್ ಹೀರೋ ಮಾಡಲಾಗಿದೆ: ನ್ಯಾಯಾಧೀಶರಿಗೆ Darshan ಪರ ವಕೀಲರ ಮನವರಿಕೆ

ಬೆಂಗಳೂರು: ಗೆಳತಿಗೆ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Darshan) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸಂಜೆ ನಾಲ್ಕು ಗಂಟೆಗೆ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಆರಂಭಿಸಲಾಯಿತು.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿನಾಗೇಶ್ ಅವರು ಪ್ರಕರಣದ ತನಿಖೆಯ ಲೋಪದೋಷಗಳನ್ನು ಮುಂದಿಟ್ಟು ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಕುರಿತು ಪ್ರಬಲ ವಾದ ಮಂಡಿಸುತ್ತಿದ್ದಾರೆ.

ಕೊಲೆಯಾಗಿರುವ ರೇಣುಕಾಸ್ವಾಮಿ ಹಿನ್ನೆಲೆಯ ಬಗ್ಗೆ ಮತ್ತು ಮಹಿಳೆಯರ ಕುರಿತು ರೇಣುಕಾಸ್ವಾಮಿ ನಡೆದುಕೊಂಡ ರೀತಿ ಕುರಿತಾಗಿ ಪೀಠಕ್ಕೆ ನಾಗೇಶ್ ಅವರು ವಿವರಿಸುತ್ತಾ, ಮೃತ ರೇಣುಕಾಸ್ವಾಮಿ 4-1 ಆರೋಪಿ ಪವಿತ್ರಾಗೌಡ ಅವರನ್ನು ಮಂಚಕ್ಕೆ ಕರೆದಿದ್ದ ಮಂಚಕ್ಕೆ ಕರೆದಂತಹ ಅವರನ್ನು ನ್ಯಾಷನಲ್ ಹೀರೋ ಎಂಬಂತೆ ಬಿಂಬಿಸಲಾಗುತ್ತಿದೆ.

ಗೌತಮ್ ಹೆಸರಿನಲ್ಲಿ ರೇಣುಕಾಸ್ವಾಮಿ ಕಳುಹಿಸಿರುವ ಅಶ್ಲೀಲ ಫೋಟೋ ಚಿತ್ರ ಸಂದೇಶಗಳನ್ನು ಪೀಠಕ್ಕೆ ಸಲ್ಲಿಸಿದರು.

ಸಮಾಜದಲ್ಲಿ ಮಹಿಳೆರನ್ನು ಗೌರವಿಸದ ವ್ಯಕ್ತಿ ರೇಣುಕಾಸ್ವಾಮಿಯನ್ನು ಹೀರೋ, ನಮ್ಮ ಕಕ್ಷಿದಾರ ದರ್ಶನ್‌ರನ್ನು ಖಳನಾಯಕನಂತೆ ಸಮಾಜದಲ್ಲಿ ಬಿಂಬಿಸಲಾಗುತ್ತಿದೆ. ಇನ್ನು ರೇಣುಕಾಸ್ವಾಮಿಯ ಹತ್ಯೆಯಾದ ನಂತರದಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಪ್ರಕರಣ ದಾಖಲಾಗಿರುವ ನಿಧಾನಗತಿಯ ಬಗ್ಗೆ ನಾಗೇಶ್ ಅವರ ಪೀಠದ ಗಮನಕ್ಕೆ ತಂದರು.

ಕೊಲೆ ಮಾಡಲೇಬೇಕು ಎಂಬ ಉದ್ದೇಶದಿಂದ ಕಿಡ್ನಾಪ್ ಮಾಡಿಲ್ಲ. ಸಾಕ್ಷ್ಯ ನಾಶವಾಗಲಿ, ಕೊಲೆ, ಹಲ್ಲೆ ಸುಳ್ಳು ಆರೋಪವನ್ನು ದರ್ಶನ್ ವಿರುದ್ಧ ಮಾಡಲಾಗಿದೆ. IPC ಸೆಕ್ಷನ್ 364 & 302 ಜಾಮೀನುರಹಿತ ಅಪಾದನೆಗಳನ್ನು ಹೊರಿಸಲಾಗಿದೆ IPC 364 ಆರೋಪ ಒಪ್ಪಲಾಗದು. ಇದು ಅಪಹರಣಕ್ಕೆ ಸಂಬಂಧಿಸಿದೆ. ಆದರೆ ರೇಣುಕಾಸ್ವಾಮಿ ಇಲ್ಲಿ ಅಪ್ರಾಪ್ತನಲ್ಲ. ಅವರನ್ನು ಹೊರದೇಶಕ್ಕೆ ಕರೆದುಕೊಂಡು ಹೋಗಿಲ್ಲ.

ಕಿಡ್ಯಾಪ್ ಮಾಡಲು ಯಾವುದೇ ಟೀಂ ಕೂಡ ಮಾಡಿಲ್ಲ ಈ ಬಗ್ಗೆ ಚಾರ್ಜ್ ಶೀಟ್‌ನಲ್ಲೂ ಸಾಕ್ಷಿ ಉಲ್ಲೇಖಿಸಿಲ್ಲ. ನಾಲ್ವರು ಸ್ನೇಹಿತರ ಜೊತೆ ಊಟಕ್ಕೆ ಹೋಗುತ್ತಿರುವುದಾಗಿ ತಾಯಿ ಜೊತೆ ಖುದ್ದು ರೇಣುಕಾಸ್ವಾಮಿ ಹೇಳಿದ್ದಾನೆ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ ನಾಗೇಶ್ ಅವರು ಸಂಕ್ಷಿಪ್ತವಾಗಿ ಪೀಠಕ್ಕೆ ವಿವರ ಸಲ್ಲಿಸಿದರು.

ಹಗ್ಗ ಮರದ 2 ರೆಕ್ಕೆಯನ್ನು ಹತ್ಯೆ ಸ್ಥಳದಲ್ಲಿ ಸಾಕ್ಷ್ಯವಾಗಿ ಪ್ರಾಸಿಕ್ಯೂಷನ್ ಜಪ್ತಿ ಮಾಡಿದ್ದಾರೆ. ಇನ್ನು ಪಟ್ಟಣಗೆರೆ ಶೆಡ್ಗೆ ಜೂನ್ 9ರಂದು ಬೀಗ ಹಾಕಿ ತಮ್ಮ ಬಳಿ ಇಟ್ಟುಕೊಂಡಿದ್ದರು.

ಜೂ.1ರಂದು ರೇಣುಕಾಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಜೂ.12ದು ಶೆಡ್ಗೆ ತನಿಖಾಧಿಕಾರಿಗಳು ಭೇಟಿ ನೀಡಿದ್ದರು. ಇದಕ್ಕೂ ಮುನ್ನ 3 ದಿನ ಸುಮ್ಮನೇ ಸಮಯ ವ್ಯರ್ಥ ಮಾಡಿದ್ದಾರೆ. ವಶಕ್ಕೆ ಪಡೆದ ವಸ್ತುಗಳು ಶೆಡ್‌ನಲ್ಲೇ 3 ದಿನ ಬಿದ್ದಿರುತ್ತವೆ.

ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ ಆದರೂ ರಕ್ತದ ಕಲೆ ದೊರೆತಿದೆ. ದರ್ಶನ್ ಚಪ್ಪಲಿ ತೊಟ್ಟಿದ್ದರೆ ಪೊಲೀಸರು ಶೂ ತರ್ತಾರೆ ಎಂದು ನಾಗೇಶ್ ಅವರು ತನಿಖೆಯ ಹಂತದ ಲೋಪದೋಷಗಳ ಕುರಿತು ವಾದ ಮಂಡಿಸಿದ್ದರು.

ಈ ನಡುವೆ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದರು.

ರಾಜಕೀಯ

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಮುನೇಗೌಡರ ಮನೆಗೆ JDS ದೊಡ್ಡಬಳ್ಳಾಪುರ ಅಧ್ಯಕ್ಷ ಹರೀಶ್ ಗೌಡ ಭೇಟಿ..!

ಜೆಡಿಎಸ್ (JDS) ದೊಡ್ಡಬಳ್ಳಾಪುರ ತಾಲೂಕು ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಹರೀಶ್ ಗೌಡ ಅವರು ಬೆಂಗಳೂರು ಗ್ರಾಮಾಂತರ ಜಿಲ್ಲಾ ನಿಕಟಪೂರ್ವ ಅಧ್ಯಕ್ಷ ಬಿ.ಮುನೇಗೌಡ ಅವರ ಸ್ವ ಗೃಹಕ್ಕೆ ಭೇಟಿ ನೀಡಿದ್ದಾರೆ.

[ccc_my_favorite_select_button post_id="121727"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ವೇಪಿಂಗ್ ಮಾಡಿದ್ದ ರಿಯಾನ್ ಪರಾಗ್ ಕಠಿಣ ಕ್ರಮದಿಂದ ಪಾರು..!

ಮುಲ್ಲನ್‌ಪುರದಲ್ಲಿ ನಡೆದ ಐಪಿಎಲ್ (IPL) ಪಂದ್ಯದ ವೇಳೆ ವ್ಯಾಪಿಂಗ್ ಮಾಡಿದ್ದಕ್ಕಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ರಿಯಾನ್ ಪರಾಗ್‌ಗೆ (Riyan Parag) ಪಂದ್ಯ ಶುಲ್ಕದ 25% ದಂಡ ವಿಧಿಸಿದೆ, ರಾಜಸ್ಥಾನ ರಾಯಲ್ಸ್ ನಾಯಕ ಕಠಿಣ

[ccc_my_favorite_select_button post_id="121572"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]