ಮಹಿಳೆಯರನ್ನು ಮಂಚಕ್ಕೆ ಕರೆದ, ಅಶ್ಲೀಲ ಸಂದೇಶ ಕಳಿಸಿದ ವ್ಯಕ್ತಿಯನ್ನು ನ್ಯಾಷನಲ್ ಹೀರೋ ಮಾಡಲಾಗಿದೆ: ನ್ಯಾಯಾಧೀಶರಿಗೆ Darshan ಪರ ವಕೀಲರ ಮನವರಿಕೆ

ಬೆಂಗಳೂರು: ಗೆಳತಿಗೆ ಸಂದೇಶ ಕಳುಹಿಸಿದ ರೇಣುಕಾಸ್ವಾಮಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಟ ದರ್ಶನ್ (Darshan) ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಸಂಜೆ ನಾಲ್ಕು ಗಂಟೆಗೆ ಕರ್ನಾಟಕ ಹೈಕೋರ್ಟ್ನಲ್ಲಿ ಮತ್ತೆ ಆರಂಭಿಸಲಾಯಿತು.

ದರ್ಶನ್ ಪರ ಹಿರಿಯ ವಕೀಲರಾದ ಸಿ.ವಿನಾಗೇಶ್ ಅವರು ಪ್ರಕರಣದ ತನಿಖೆಯ ಲೋಪದೋಷಗಳನ್ನು ಮುಂದಿಟ್ಟು ದರ್ಶನ್ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಷಡ್ಯಂತ್ರ ರೂಪಿಸಿದ್ದಾರೆ ಎಂಬ ಕುರಿತು ಪ್ರಬಲ ವಾದ ಮಂಡಿಸುತ್ತಿದ್ದಾರೆ.

ಕೊಲೆಯಾಗಿರುವ ರೇಣುಕಾಸ್ವಾಮಿ ಹಿನ್ನೆಲೆಯ ಬಗ್ಗೆ ಮತ್ತು ಮಹಿಳೆಯರ ಕುರಿತು ರೇಣುಕಾಸ್ವಾಮಿ ನಡೆದುಕೊಂಡ ರೀತಿ ಕುರಿತಾಗಿ ಪೀಠಕ್ಕೆ ನಾಗೇಶ್ ಅವರು ವಿವರಿಸುತ್ತಾ, ಮೃತ ರೇಣುಕಾಸ್ವಾಮಿ 4-1 ಆರೋಪಿ ಪವಿತ್ರಾಗೌಡ ಅವರನ್ನು ಮಂಚಕ್ಕೆ ಕರೆದಿದ್ದ ಮಂಚಕ್ಕೆ ಕರೆದಂತಹ ಅವರನ್ನು ನ್ಯಾಷನಲ್ ಹೀರೋ ಎಂಬಂತೆ ಬಿಂಬಿಸಲಾಗುತ್ತಿದೆ.

ಗೌತಮ್ ಹೆಸರಿನಲ್ಲಿ ರೇಣುಕಾಸ್ವಾಮಿ ಕಳುಹಿಸಿರುವ ಅಶ್ಲೀಲ ಫೋಟೋ ಚಿತ್ರ ಸಂದೇಶಗಳನ್ನು ಪೀಠಕ್ಕೆ ಸಲ್ಲಿಸಿದರು.

ಸಮಾಜದಲ್ಲಿ ಮಹಿಳೆರನ್ನು ಗೌರವಿಸದ ವ್ಯಕ್ತಿ ರೇಣುಕಾಸ್ವಾಮಿಯನ್ನು ಹೀರೋ, ನಮ್ಮ ಕಕ್ಷಿದಾರ ದರ್ಶನ್‌ರನ್ನು ಖಳನಾಯಕನಂತೆ ಸಮಾಜದಲ್ಲಿ ಬಿಂಬಿಸಲಾಗುತ್ತಿದೆ. ಇನ್ನು ರೇಣುಕಾಸ್ವಾಮಿಯ ಹತ್ಯೆಯಾದ ನಂತರದಲ್ಲಿ ಮೃತದೇಹ ಪತ್ತೆಯಾಗಿರುವುದು ಮತ್ತು ಪ್ರಕರಣ ದಾಖಲಾಗಿರುವ ನಿಧಾನಗತಿಯ ಬಗ್ಗೆ ನಾಗೇಶ್ ಅವರ ಪೀಠದ ಗಮನಕ್ಕೆ ತಂದರು.

ಕೊಲೆ ಮಾಡಲೇಬೇಕು ಎಂಬ ಉದ್ದೇಶದಿಂದ ಕಿಡ್ನಾಪ್ ಮಾಡಿಲ್ಲ. ಸಾಕ್ಷ್ಯ ನಾಶವಾಗಲಿ, ಕೊಲೆ, ಹಲ್ಲೆ ಸುಳ್ಳು ಆರೋಪವನ್ನು ದರ್ಶನ್ ವಿರುದ್ಧ ಮಾಡಲಾಗಿದೆ. IPC ಸೆಕ್ಷನ್ 364 & 302 ಜಾಮೀನುರಹಿತ ಅಪಾದನೆಗಳನ್ನು ಹೊರಿಸಲಾಗಿದೆ IPC 364 ಆರೋಪ ಒಪ್ಪಲಾಗದು. ಇದು ಅಪಹರಣಕ್ಕೆ ಸಂಬಂಧಿಸಿದೆ. ಆದರೆ ರೇಣುಕಾಸ್ವಾಮಿ ಇಲ್ಲಿ ಅಪ್ರಾಪ್ತನಲ್ಲ. ಅವರನ್ನು ಹೊರದೇಶಕ್ಕೆ ಕರೆದುಕೊಂಡು ಹೋಗಿಲ್ಲ.

ಕಿಡ್ಯಾಪ್ ಮಾಡಲು ಯಾವುದೇ ಟೀಂ ಕೂಡ ಮಾಡಿಲ್ಲ ಈ ಬಗ್ಗೆ ಚಾರ್ಜ್ ಶೀಟ್‌ನಲ್ಲೂ ಸಾಕ್ಷಿ ಉಲ್ಲೇಖಿಸಿಲ್ಲ. ನಾಲ್ವರು ಸ್ನೇಹಿತರ ಜೊತೆ ಊಟಕ್ಕೆ ಹೋಗುತ್ತಿರುವುದಾಗಿ ತಾಯಿ ಜೊತೆ ಖುದ್ದು ರೇಣುಕಾಸ್ವಾಮಿ ಹೇಳಿದ್ದಾನೆ ಎಂದು ರೇಣುಕಾಸ್ವಾಮಿಯವರ ತಂದೆ ಕಾಶಿನಾಥಯ್ಯ ಅವರ ಹೇಳಿಕೆಯನ್ನು ಉಲ್ಲೇಖಿಸುತ್ತಾ ನಾಗೇಶ್ ಅವರು ಸಂಕ್ಷಿಪ್ತವಾಗಿ ಪೀಠಕ್ಕೆ ವಿವರ ಸಲ್ಲಿಸಿದರು.

ಹಗ್ಗ ಮರದ 2 ರೆಕ್ಕೆಯನ್ನು ಹತ್ಯೆ ಸ್ಥಳದಲ್ಲಿ ಸಾಕ್ಷ್ಯವಾಗಿ ಪ್ರಾಸಿಕ್ಯೂಷನ್ ಜಪ್ತಿ ಮಾಡಿದ್ದಾರೆ. ಇನ್ನು ಪಟ್ಟಣಗೆರೆ ಶೆಡ್ಗೆ ಜೂನ್ 9ರಂದು ಬೀಗ ಹಾಕಿ ತಮ್ಮ ಬಳಿ ಇಟ್ಟುಕೊಂಡಿದ್ದರು.

ಜೂ.1ರಂದು ರೇಣುಕಾಸ್ವಾಮಿ ಮೃತದೇಹದ ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಜೂ.12ದು ಶೆಡ್ಗೆ ತನಿಖಾಧಿಕಾರಿಗಳು ಭೇಟಿ ನೀಡಿದ್ದರು. ಇದಕ್ಕೂ ಮುನ್ನ 3 ದಿನ ಸುಮ್ಮನೇ ಸಮಯ ವ್ಯರ್ಥ ಮಾಡಿದ್ದಾರೆ. ವಶಕ್ಕೆ ಪಡೆದ ವಸ್ತುಗಳು ಶೆಡ್‌ನಲ್ಲೇ 3 ದಿನ ಬಿದ್ದಿರುತ್ತವೆ.

ದರ್ಶನ್ ತೊಟ್ಟ ಬಟ್ಟೆಯನ್ನು ಕುಕ್ಕಿ ಕುಕ್ಕಿ ಒಗೆಯಲಾಗಿದೆ ಆದರೂ ರಕ್ತದ ಕಲೆ ದೊರೆತಿದೆ. ದರ್ಶನ್ ಚಪ್ಪಲಿ ತೊಟ್ಟಿದ್ದರೆ ಪೊಲೀಸರು ಶೂ ತರ್ತಾರೆ ಎಂದು ನಾಗೇಶ್ ಅವರು ತನಿಖೆಯ ಹಂತದ ಲೋಪದೋಷಗಳ ಕುರಿತು ವಾದ ಮಂಡಿಸಿದ್ದರು.

ಈ ನಡುವೆ ನ್ಯಾಯಾಧೀಶರು ಅರ್ಜಿಯ ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿದರು.

ರಾಜಕೀಯ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ ಬೆಂಬಲ

ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರ: ದೊಡ್ಡಬಳ್ಳಾಪುರ ಬಂದ್‌ಗೆ ವರ್ತಕರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ವಿರೋಧಿ ಸಂಹಿತೆಗಳನ್ನು ಹಿಂಪಡೆಯುವುದು ಸೇರಿದಂತೆ ಕಾರ್ಮಿಕ ವಿರೋಧಿ ಮಸೂದೆ ಗಳನ್ನು ರದ್ದುಪಡಿಸುವಂತೆ ಹಾಗೂ ಮನ್ರೇಗಾ ಮರು ಜಾರಿ, ಸಾರ್ವಜನಿಕ ಸೇವೆಗಳ ಖಾಸಗೀಕರಣ ರದ್ದತಿಗೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳ

[ccc_my_favorite_select_button post_id="119366"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ದೊಡ್ಡಬಳ್ಳಾಪುರ: ಪತ್ನಿಗೆ ಚಿಕಿತ್ಸೆ ಕೊಡಿಸಿ ಮನೆಗೆ ಕರೆದೊಯ್ಯುತ್ತಿದ್ದವ ಅಪಘಾತದಲ್ಲಿ ಸಾವು.‌.!

ಮಡದಿಗೆ ಉಂಟಾಗಿದ್ದ ಅನಾರೋಗ್ಯ ಕಾರಣ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಮನೆಗೆ ಕರೆದೊಯ್ಯುತ್ತಿದ್ದ ವ್ಯಕ್ತಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ (Accident) ತಾಲೂಕಿನಲ್ಲಿ ಸಂಭವಿಸಿದೆ.

[ccc_my_favorite_select_button post_id="119259"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!