ಮಾನವೀಯ ಅಂತಃಕರಣದ ಪ್ರತೀಕವಾಗಿದ್ದರು ಡಾ.ಎಂ.ಎಂ.ಕಲಬುರ್ಗಿ: ನಾಡೋಜ ಗೊ.ರು.ಚನ್ನಬಸಪ್ಪ (goru channabasappa)

ಧಾರವಾಡ: ಕಲಬುರ್ಗಿ ಅವರ ಶ್ರೇಷ್ಠತೆ ಇರುವುದು ಕೇವಲ ಅವರು ಹಿರಿಯ ಸಂಶೋಧಕರು ಆಗಿದ್ದರು ಎಂಬುವುದಕ್ಕಲ್ಲ; ಅವರು ಸೃಜನಶೀಲ ಬರಹಗಾರರಾಗಿದ್ದರು ಎಂಬ ಕಾರಣಕ್ಕೂ ಅಲ್ಲ; ಅದಕ್ಕಿಂತ ಅವರಲ್ಲಿದ್ದ ಮಾನವೀಯ ಅಂಥಃಕರಣ ಎಂಬುದು ಅವರ ಶ್ರೇಷ್ಠತೆಯನ್ನು ಎತ್ತಿ ತೋರಿಸುತ್ತದೆ. ನಾವು ಮಾಡುವಂತಹ ಕೆಲಸದಲ್ಲಿ ನಿಷ್ಠೆ ಇಲ್ಲದಿದ್ದರೆ ನಮ್ಮ ಬದುಕು ಶೃತಿ ಕೆಟ್ಟ ಸಂಗೀತವಾಗುತ್ತದೆ ಎಂದು ಹೇಳುತ್ತಿದ್ದರು. ಸಂಗೀತ ಮತ್ತು ಅಧ್ಯಯನದಲ್ಲಿ ಯಾವುದೇ ರೀತಿಯ ಅಡೆತಡೆಗಳು ಬರದಂತೆ ಎಚ್ಚರ ವಹಿಸಿದ ವ್ಯಕ್ತಿ ನಮ್ಮ ಕಲಬುರ್ಗಿಯವರು ಎಂದು ನಾಡೋಜ ಗೊ.ರು.ಚನ್ನಬಸಪ್ಪ (goru channabasappa) ಅವರು ಹೇಳಿದರು.

ಅವರು ಇಂದು ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ವತಿಯಿಂದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಆಯೋಜಿಸಲಾದ ಡಾ.ಎಂ.ಎಂ.ಕಲಬುರ್ಗಿ ಅವರ 86 ನೇ ಜನ್ಮ ದಿನಾಚರಣೆ, ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಮತ್ತು ಗ್ರಂಥ ಬಿಡುಗಡೆ ಕಾರ್ಯಕ್ರಮದ ಅಂಗವಾಗಿ ಡಾ.ಎಂ.ಎಂ.ಕಲಬುರ್ಗಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಾತನಾಡಿದರು.

ಕಲಬುರ್ಗಿ ಅವರು ಯಾವುದೇ ಕೊರತೆ, ಹಸಿವು, ನಿದ್ದೆಗಳ ಹಂಗಿಲ್ಲದೆ ಕೆಲಸ ಮಾಡುವ ವ್ಯಕ್ತಿ ಆಗಿದ್ದರು. ಸಾಮಾನ್ಯವಾಗಿ ನಾವು ಸಮಗ್ರ ಎಂಬ ಪದವನ್ನು ಬಳಸುತ್ತೇವೆ. ಸಮಗ್ರ ಅಂದರೆ ಪೂರ್ಣವಾಗಿದ್ದು, ಒಟ್ಟಾಗಿರುವುದು ಎಂಬ ಅರ್ಥ ಇದೆ. ಲೋಕವ್ಯವಹಾರದಲ್ಲಿ ಸಮಗ್ರ ನೋಟ, ಸಮಗ್ರ ವರದಿ, ಸಮಗ್ರ ವ್ಯಕ್ತಿತ್ವ ಎಂಬ ಇಂತಹ ಪದಗಳನ್ನು ಬಳಸುತ್ತೇವೆ. ವ್ಯಕ್ತಿಗತವಾಗಿ ಅನ್ವಯಿಸುವುದಾದರೆ ಅದು ನಮ್ಮ ನೆಚ್ಚಿನ ಸಾಹಿತಿಗಳಾದ ಡಾ.ಎಂ.ಎಂ ಕಲಬುರ್ಗಿ ಅವರಿಗೆ ಅನ್ವಯಿಸುತ್ತದೆ ಎಂದರು.

ಗ್ರಂಥ ಬಿಡುಗಡೆ ಮಾಡಿ ಮಾತನಾಡಿದ ಅವರು ಕಲಬುರ್ಗಿ ಅವರ ಸಮಗ್ರ ಲೇಖನಗಳು ಪ್ರಕಟವಾಗಬೇಕು. ಸರಕಾರ ಕಲಬುರ್ಗಿ ಟ್ರಸ್ಟ್ ಸ್ಥಾಪಿಸಿದೆ, ಅವರ ಮನಸ್ಸಿನಲ್ಲಿ ಏನು ಇತ್ತೋ ಅದೆಲ್ಲಾ ಇಂದು ನೆರವೇರುತ್ತಿದೆ. ಕಲಬುರ್ಗಿ ಅವರು ತಮ್ಮ ಸಾಧನೆ, ಅವರು ನಡೆದು ಬಂದ ಬದುಕು, ಇದಾವುದರ ಬಗ್ಗೆಯೂ ಸಹ ಬರೆಯಲಿಲ್ಲ.

ಅವರು ಸಂಶೋಧನೆ ಸ್ತರಗಳ ಬಗ್ಗೆ ಬರೆದರು. ಮುಂದೆ ಬರುವಂತಹ ವಿದ್ಯಾರ್ಥಿಲೋಕಕ್ಕೆ ತಿಳುವಳಿಕೆ ಉಂಟಾಗಬೇಕು. ಸಂಶೋಧನೆ ಅಂದರೆ ಏನು?, ಸಂಶೋಧನೆಯ ಬಗ್ಗೆ ಯಾಕೆ ಆಸಕ್ತಿಯನ್ನು ಹೊಂದಬೇಕು, ಸಂಶೋಧನೆಯ ಸ್ವರೂಪ ಯಾವುದು ಎಂಬುದನ್ನು ತಿಳಿಸಿಕೊಡುವುದು ಪ್ರಾಮಾಣಿಕ ಪ್ರಯತ್ನವನ್ನು ಅವರು ಮಾಡಿದರು.

ಡಾ.ಎಂ.ಎಂ.ಕಲಬುರ್ಗಿ ವಚನ ಸಂಗೀತ ಪ್ರಶಸ್ತಿ ಪುರಸ್ಕೃತ ಡಾ.ಶರಣಬಸಪ್ಪ ಮೇಡೆದಾರ ಅವರು ಮಾತನಾಡಿ, ಡಾ.ಎಂ.ಎಂ.ಕಲಬುರ್ಗಿ ಹೆಸರಿನ ಪ್ರಶಸ್ತಿ ಪಡೆದಿರುವುದಾಗಿ ತುಂಬಾ ಸಂತಸವಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚು ಹೆಚ್ಚು ಶರಣರ ವಚನಗಳು ಮತ್ತು ಸಾಹಿತ್ಯವನ್ನು ಉತ್ತಮವಾಗಿ ನಿಮ್ಮ ಮುಂದೆ ಹಾಡುತ್ತೇನೆ. ಸಾಹಿತ್ಯವನ್ನು ವಿದ್ಯಾರ್ಥಿಗಳಿಗೆ ಸ್ವತಃ ನಾನೇ ಬರೆದು ಕಲಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಬೆಳಗಾವಿ ವಿಭಾಗದ ಜಂಟಿ ನಿರ್ದೇಶಕ ಕೆ. ಎಚ್. ಚನ್ನೂರ, ಡಾ.ಎಂ.ಎಂ.ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಅಧ್ಯಕ್ಷ ವೀರಣ್ಣ ರಾಜೂರ, ಉಮಾದೇವಿ ಎಂ. ಕಲಬುರ್ಗಿ ಉಪಸ್ಥಿತರಿದ್ದರು.

ಡಾ. ಎಂ ಎಂ ಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನದ ಸದಸ್ಯ ಶಶಿಧರ ತೊಡಕರ ಅವರು ಅತಿಥಿ ಪರಿಚಯ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಅವರು ಸ್ವಾಗತಿಸಿದರು.

ಡಾ.ಈರಣ್ಣ ಇಂಜಗನೇರಿ ಅವರು ಕಾರ್ಯಕ್ರಮ ನಿರೂಪಿಸಿದರು. ಡಾ.ಎಂ.ಎಂ.ಲಕಲಬುರ್ಗಿ ರಾಷ್ಟ್ರೀಯ ಪ್ರತಿಷ್ಠಾನ ಸದಸ್ಯ ಡಾ.ಬಾಳಣ್ಣ ಶೀಗಿಹಳ್ಳಿ ಅವರು ವಂದಿಸಿದರು.

ಕಾರ್ಯಕ್ರಮದಲ್ಲಿ ಹಿರಿಯರು, ಗಣ್ಯವ್ಯಕ್ತಿಗಳು, ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ರಾಜಕೀಯ

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಮುನೇಗೌಡ ಗೈರು..?!; ದೊಡ್ಡಬಳ್ಳಾಪುರದಲ್ಲಿ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಸಭೆ..!

ಜೆಡಿಎಸ್ (JDS) ಬೆಂಗಳೂರು ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆ ಬಳಿಕ ದೊಡ್ಡಬಳ್ಳಾಪುರ ಜೆಡಿಎಸ್ ಬಣಗಳ ಅಂತರ ಹೆಚ್ಚಾಗುತ್ತಿದೆ.

[ccc_my_favorite_select_button post_id="119451"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!