Darshan ಪ್ರಕರಣ: ಕೊಲ್ಲುವ ಉದ್ದೇಶವಿದ್ದರೆ ಊಟ, ನೀರು ತಂದುಕೊಡಿ, ಪೊಲೀಸರಿಗೆ ಒಪ್ಪಿಸಿ ಎನ್ನಲು ಸಾಧ್ಯವೇ..?; ನ್ಯಾಯವಾದಿ ಸಿವಿ ನಾಗೇಶ್ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಇಂದೂ ಕೂಡ ನಡೆದಿದ್ದು, ದರ್ಶನ್ (Darshan) ಪರ ಹಿರಿಯ ವಕೀಲರಾದ ಸಿವಿ ನಾಗೇಶ್ ಅವರು ಲೋಪ ದೋಶಗಳನ್ನು ಪಟ್ಟಿ ಮಾಡಿ, ದರ್ಶನ್ ಅವರಿಗೆ ಜಾಮೀನು ನೀಡಬೇಕೆಂಬ ತಮ್ಮ ಪ್ರಬಲ ವಾದವನ್ನು ಮುಕ್ತಾಯಗೊಳಿಸಿದರು.

ಇಂದು ಮಧ್ಯಾಹ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ಆರಂಭವಾದ ವಿಚಾರಣೆಯಲ್ಲಿ ತಮ್ಮ ವಾದ ಮುಂದುವರಿಸಿದ ಸಿವಿ ನಾಗೇಶ್ ಅವರು,
ಆರೋಪಿಗಳ 164 ಹೇಳಿಕೆ ಪ್ರಾಮುಖ್ಯತೆ ಇದ್ದಾಗ ದಾಖಲಿಸಲಾಗುತ್ತದೆ. ಪೊಲೀಸರು ದಾಖಲಿಸಿರುವ ಸ್ವಇಚ್ಛಾ ಹೇಳಿಕೆಗಳೂ ಹೀಗೆ ಬಂದು ಹಾಗೇ ಕಾರು ಹೋಗಿವೆ. ಎಂದು ಹೇಳಿದ್ದಾರೆ. ಪಟ್ಟಣಗೆರೆ ಶೆಡ್‌ಗೆ ಯಾರು? ಯಾವಾಗ ಬಂದರು. ಯಾರು ಯಾರು ಇದ್ದರು ಎಂಬುವುದು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ.

ಸಾಕ್ಷಿಗಳು ಜೂ.10ನೇ ತಾರೀಖಿನಂದು ಕೊಲೆ ನಡೆದ ವಿಷಯ ಗೊತ್ತಾಗಿದೆ ಎಂದು ಹೇಳಿದ್ದಾರೆ. ಅದು ಮಾಧ್ಯಮಗಳಲ್ಲಿ ನೋಡಿದ ಮೇಲೆ ಇಂಥವರೇ ಕೊಲೆ ಮಾಡಿದ್ದಾರೆ ಎಂಬ ವಿಷಯಗಳು ತಿಳಿದವು. ಆದರೆ ಯಾವತ್ತು ಏನು ಆಗಿದೆ ಎಂಬುವುದನ್ನು ಸರಿಯಾಗಿ ಹೇಳಿಲ್ಲ ಪ್ರತ್ಯಕ್ಷದರ್ಶಿ ಓರ್ವರ ಹೇಳಿಕೆ ಆಧರಿಸಿ ನಾಗೇಶ್ ಅವರು ವಾದಿಸಿದರು.

ಮುಂದುವರಿದು, ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಜೂ.15ರಂದು ದಾಖಲಿಸಲಾಗಿದೆ. ಬೆಂಗಳೂರಿನಲ್ಲೇ ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ತಡವಾಗಿ ದಾಖಲಿಸಲಾಗಿದೆ. ಘಟನೆ ನಡೆದ ದಿನ ಸಾಕ್ಷಿ ಓರ್ವನು ಶೆಡ್‌ನಲ್ಲೇ ಇದ್ದ ಅದರೂ ತನಿಖಾಧಿಕಾರಿಗಳು 15 ದಿನಗಳ ಬಳಿಕ ಹೇಳಿಕೆಗಳನ್ನು ತಡವಾಗಿ ದಾಖಲಿಸಿದ್ದು ಯಾಕೇ..? ಎಂದು ಪೊಲೀಸರ ತನಿಖೆಯ ಬಗ್ಗೆ ಸಿವಿ ನಾಗೇಶ್ ಅವರು ಅನುಮಾನ ವ್ಯಕ್ತಪಡಿಸಿದರು.

7 ರಿಮ್ಯಾಂಡ್ ಅರ್ಜಿಗಳನ್ನು ಹಾಕಲಾಗಿದೆ. ಪೊಲೀಸರು ಈವರೆಗೂ ಯಾವ ಸಾಕ್ಷಿಯನ್ನು ಸಂಗ್ರಹಿಸಿದ್ದಾರೋ ಆ ಬಗ್ಗೆ ಯಾವುದೇ ರಿಮ್ಯಾಂಡ್ ಅರ್ಜಿಯಲ್ಲೂ ಉಲ್ಲೇಖ ಮಾಡಿಲ್ಲ. ಜೂ.21ರಂದು ಮ್ಯಾಜಿಸ್ಟ್ರೇಟ್ ಮುಂದೆ 164 ಹೇಳಿಕ ದಾಖಲಿಸಲಾಗಿದೆ. ಹೀಗಿದ್ದೂ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸದಿರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಸಾಕ್ಷಿದಾರರ ಮೂವರ ಸ್ವಇಚ್ಚಾ ಹೇಳಿಕೆಗಳನ್ನು ಪೀಠದ ಮುಂದೆ ವಿವರಿಸಿದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್‌ ಶೀಟ್ ನಲ್ಲೂ ದೋಷಗಳು ಇವೆ. ಸಾಕಷ್ಟು ಸಾಕ್ಷಿಗಳನ್ನು ಸೃಷ್ಟಿ ಮಾಡಿದ್ದಾರೆ. ಸಾಕ್ಷಿ ಓರ್ವನ ಮೊಬೈಲ್ ಟವರ್ ಜಂಪ್ ತೋರಿಸಲಾಗಿದೆ.

ಸಾಕ್ಷಿಯೋರ್ವ ಬೇಸಿಕ್ ಮೊಬೈಲ್ ಗೆ ಸಿಮ್ ಹಾಕಿಕೊಂಡು, ಬೇರೆ ಮೊಬೈಲ್ ಮನೆಯಲ್ಲಿಟ್ಟಿದ್ದ ಆರೋಪಿ ವಿನಯ್ಗೆ ಈ ಸಾಕ್ಷಿಯು ಕರೆ ಮಾಡಿದ್ದ ಭಯವಾದ ಕಾರಣ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದೆ ಹಾಸನಕ್ಕೆ ಹೋಗಿದ್ದೆ ಅಲ್ಲಿ ಇಲ್ಲಿ ಹೋಗಿದ್ದೆ ಅಂತಾ ಸಾಕ್ಷಿ ಹೇಳಿದ್ದಾನೆ. ಈ ರೀತಿ ಕಥೆಗಳನ್ನು ಕಟ್ಟಲಾಗಿದ್ದು ಇವುಗಳನ್ನು ಹೇಗೆ ನಂಬುವುದು ಎಂದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ದೋಷಗಳಿಂದ ಕೂಡಿದೆ. ಸಾಕ್ತಿಯೋರ್ವನು ತನಗೆ ಭಯವಾದ್ದರಿಂದ ಗೋವಾಗೆ ಹೋಗಿದ್ದೆ ಅಂತಾ ಹೇಳಿದ್ದಾನೆ. ಆದರೆ ಮುಂಚಿತವಾಗಿಯೇ ಟಿಕೆಟ್ ಬುಕ್ ಮಾಡಲಾಗಿದೆ.

ಪೊಲೀಸರು ಇತ್ತೀಚೆಗೆ 8 ಫೋಟೋಗಳನ್ನು ರಿಟ್ರೇವ್ ಮಾಡಿದ್ದಾರೆ. ಫೋಟೋಗಳು ಜೂ.ರಂದು ತೆಗೆಯಲಾಗಿದೆ. ಇದನ್ನು ಪ್ರಾಸಿಕ್ಯೂಷನ್ ಹೇಳ್ತಾ ಇದೆ. ಫೋಟೋದಲ್ಲಿ ಸಾಕ್ಷಿ ಧರಿಸಿದ ಪ್ಯಾಂಟ್, ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತೋರಿಸಿರುವ ಪ್ಯಾಂಟ್ ಬೇರೆ ಇದೆ ಇನ್ನು ಸಾಕ್ಷಿಯೋರ್ವ ಗೋವಾಕ್ಕೆ ಹೋಗಲು ಮೊದಲೇ ಪ್ಲಾನ್ ಮಾಡಿದ್ದ ಗೋವಾಗೆ ಗೋಗುವ ಪ್ಲಾನ್ ಮೊದಲೇ ಇತ್ತು ರೇಣುಕಾಸ್ವಾಮಿ ಕೊಲೆ ಜೂ.8ರಂದು ನಡೆದಿದೆ. ಸಾಕ್ಷಿ ಗೋವಾಗೆ ಗೋವಾಗೆ ಹೋಗಲು ಜೂ.21ಕ್ಕೆ ಟಿಕೆಟ್ ಬುಕ್ ಮಾಡಿಕೊಂಡಿದ್ದ ಹೆದರಿಕೊಂಡು ಆತ ಗೋವಾಗೆ ಹೋಗಿಲ್ಲ. ಮೊದಲೇ ಪ್ಲಾನ್ ಮಾಡಿ ಟಿಕೆಟ್ ಕೂಡ ಬುಕ್ ಮಾಡಿಕೊಂಡಿದ್ದ

ಪೊಲೀಸರು ಸಾಕ್ಷಿಯ ಮೊಬೈಲ್‌ನಿಂದ ರಿಟೀವ್ ಆದ ಫೋಟೋಗಳನ್ನು ತೋರಿಸಿದ್ದಾರೆ. ಪೊಲೀಸರು ಸಾಕ್ಷಿಯ ಫೋಟೋದಲ್ಲಿರುವ ಪ್ಯಾಂಟ್, ಅವರು ತೋರಿಸಿರುವ ಪ್ಯಾಂಟ್ ಬೇರೆ ಇದೆ. ಪ್ಯಾಂಟನ್ನೇ ಪೊಲೀಸರು ಬದಲಾಯಿಸಿದ್ದಾರೆ.

ಪೊಲೀಸರು ಜೈಲಿನಿಂದ ರಿಲೀಸ್ ಆದ ಆರೋಪಿ ನಿಂದ ಬಿಡುಗಡೆ ನಂತರವೂ ಅವರ ಇಷ್ಟದಂತೆ ಹೇಳಿಕೆ ಮತ್ತೊಮ್ಮೆ ಪಡೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ವಾದಿಸಿದರು. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಲು ತನಿಖಾಧಿಕಾರಿಗಳಿಂದ ವಿಳಂಬ ಆಗಿದೆ. ಲೋಪಗಳಿವೆ. ಹೀಗಾಗಿ ತಮ್ಮ ಕಕ್ಷಿದಾರ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಹೇಳಿಕೆ ದಾಖಲಿಸಲು ವಿಳಂಬ ಮಾಡಿದರೆ ಜಾಮೀನು ನೀಡಬಹುದೆಂಬ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ಜಾಮೀನು ಕೋರಿದರು.

ಅಲ್ಲದೆ ದರ್ಶನ್ಗೆ ಕೊಲ್ಲುವ ಉದ್ದೇಶ ಇದ್ದಿದ್ದರೆ ಊಟ ತಂದುಕೊಡಿ, ನೀರು ತಂದು ಕೊಡಿ, ಪೊಲೀಸರ ಮುಂದೆ ಹಾಜರು ಪಡಿಸಿ ಎಂದು ಯಾಕೆ ಹೇಳ್ತಾ ಇದ್ದರೇ.? ಹೇಳುವುದು ಮತ್ತಷ್ಟು ಇದ ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇನ್ನು ದರ್ಶನ್ ಅವರ ಆರೋಗ್ಯದ ಸ್ಥಿತಿಗತಿ ಹೇಗಿದೆ ಎಂದು ಪ್ರಶ್ನಿಸಿರುವ ನ್ಯಾಯಮೂರ್ತಿ ವಿಶ್ವಜಿತ್ ಅವರಗೆ ಉತ್ತರಿಸಿದ ನಾಗೇಶ್ ಅವರು, ದರ್ಶನ್ ಅವರನ್ನು ಎಂಆರ್‌ಐ ಪರೀಕ್ಷೆಗೆ ಒಳಪಡಿಸಲಾಗಿದೆ. ಬಿ.ಪಿ ವ್ಯತ್ಯಾಸವಾಗುತ್ತಿದೆ ಹೀಗಾಗಿ ಸರ್ಜರಿಗೆ ಇನ್ನು ಮುಂದಾಗಿಲ್ಲ. ಸರ್ಜರಿಯನ್ನು ವೈದ್ಯರು ನಿರ್ಧರಿಸುತ್ತಾರೆ ಎಂದು ವಿವರಣೆ ನೀಡಿದರು.

ನಂತರ ವಿಚಾರಣೆಯನ್ನು ಪೀಠ ನಾಳೆಗೆ (ನವೆಂಬರ್ 29ಕ್ಕೆ) ಮುಂದೂಡಿತು ಎಂದು ವರದಿಯಾಗಿದೆ.

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!