Darshan ಪ್ರಕರಣ: ಕೊಲ್ಲುವ ಉದ್ದೇಶವಿದ್ದರೆ ಊಟ, ನೀರು ತಂದುಕೊಡಿ, ಪೊಲೀಸರಿಗೆ ಒಪ್ಪಿಸಿ ಎನ್ನಲು ಸಾಧ್ಯವೇ..?; ನ್ಯಾಯವಾದಿ ಸಿವಿ ನಾಗೇಶ್ ಪ್ರಬಲ ವಾದ

ಬೆಂಗಳೂರು: ಗೆಳತಿಗೆ ಅಶ್ಲೀಲ ಸಂದೇಶ ಕಳುಹಿಸಿದ ವ್ಯಕ್ತಿಯೋರ್ವನ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ಹೈಕೋರ್ಟ್ ನಲ್ಲಿ ಇಂದೂ ಕೂಡ ನಡೆದಿದ್ದು, ದರ್ಶನ್ (Darshan) ಪರ ಹಿರಿಯ ವಕೀಲರಾದ ಸಿವಿ ನಾಗೇಶ್ ಅವರು ಲೋಪ ದೋಶಗಳನ್ನು ಪಟ್ಟಿ ಮಾಡಿ, ದರ್ಶನ್ ಅವರಿಗೆ ಜಾಮೀನು ನೀಡಬೇಕೆಂಬ ತಮ್ಮ ಪ್ರಬಲ ವಾದವನ್ನು ಮುಕ್ತಾಯಗೊಳಿಸಿದರು.

ಇಂದು ಮಧ್ಯಾಹ್ನ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ ಪೀಠದಲ್ಲಿ ಆರಂಭವಾದ ವಿಚಾರಣೆಯಲ್ಲಿ ತಮ್ಮ ವಾದ ಮುಂದುವರಿಸಿದ ಸಿವಿ ನಾಗೇಶ್ ಅವರು,
ಆರೋಪಿಗಳ 164 ಹೇಳಿಕೆ ಪ್ರಾಮುಖ್ಯತೆ ಇದ್ದಾಗ ದಾಖಲಿಸಲಾಗುತ್ತದೆ. ಪೊಲೀಸರು ದಾಖಲಿಸಿರುವ ಸ್ವಇಚ್ಛಾ ಹೇಳಿಕೆಗಳೂ ಹೀಗೆ ಬಂದು ಹಾಗೇ ಕಾರು ಹೋಗಿವೆ. ಎಂದು ಹೇಳಿದ್ದಾರೆ. ಪಟ್ಟಣಗೆರೆ ಶೆಡ್‌ಗೆ ಯಾರು? ಯಾವಾಗ ಬಂದರು. ಯಾರು ಯಾರು ಇದ್ದರು ಎಂಬುವುದು ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಯಲ್ಲಿ ಸ್ಪಷ್ಟತೆ ಇಲ್ಲ.

ಸಾಕ್ಷಿಗಳು ಜೂ.10ನೇ ತಾರೀಖಿನಂದು ಕೊಲೆ ನಡೆದ ವಿಷಯ ಗೊತ್ತಾಗಿದೆ ಎಂದು ಹೇಳಿದ್ದಾರೆ. ಅದು ಮಾಧ್ಯಮಗಳಲ್ಲಿ ನೋಡಿದ ಮೇಲೆ ಇಂಥವರೇ ಕೊಲೆ ಮಾಡಿದ್ದಾರೆ ಎಂಬ ವಿಷಯಗಳು ತಿಳಿದವು. ಆದರೆ ಯಾವತ್ತು ಏನು ಆಗಿದೆ ಎಂಬುವುದನ್ನು ಸರಿಯಾಗಿ ಹೇಳಿಲ್ಲ ಪ್ರತ್ಯಕ್ಷದರ್ಶಿ ಓರ್ವರ ಹೇಳಿಕೆ ಆಧರಿಸಿ ನಾಗೇಶ್ ಅವರು ವಾದಿಸಿದರು.

ಮುಂದುವರಿದು, ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆಗಳನ್ನು ಜೂ.15ರಂದು ದಾಖಲಿಸಲಾಗಿದೆ. ಬೆಂಗಳೂರಿನಲ್ಲೇ ಇಬ್ಬರು ಸಾಕ್ಷಿಗಳ ಹೇಳಿಕೆಗಳನ್ನು ತಡವಾಗಿ ದಾಖಲಿಸಲಾಗಿದೆ. ಘಟನೆ ನಡೆದ ದಿನ ಸಾಕ್ಷಿ ಓರ್ವನು ಶೆಡ್‌ನಲ್ಲೇ ಇದ್ದ ಅದರೂ ತನಿಖಾಧಿಕಾರಿಗಳು 15 ದಿನಗಳ ಬಳಿಕ ಹೇಳಿಕೆಗಳನ್ನು ತಡವಾಗಿ ದಾಖಲಿಸಿದ್ದು ಯಾಕೇ..? ಎಂದು ಪೊಲೀಸರ ತನಿಖೆಯ ಬಗ್ಗೆ ಸಿವಿ ನಾಗೇಶ್ ಅವರು ಅನುಮಾನ ವ್ಯಕ್ತಪಡಿಸಿದರು.

7 ರಿಮ್ಯಾಂಡ್ ಅರ್ಜಿಗಳನ್ನು ಹಾಕಲಾಗಿದೆ. ಪೊಲೀಸರು ಈವರೆಗೂ ಯಾವ ಸಾಕ್ಷಿಯನ್ನು ಸಂಗ್ರಹಿಸಿದ್ದಾರೋ ಆ ಬಗ್ಗೆ ಯಾವುದೇ ರಿಮ್ಯಾಂಡ್ ಅರ್ಜಿಯಲ್ಲೂ ಉಲ್ಲೇಖ ಮಾಡಿಲ್ಲ. ಜೂ.21ರಂದು ಮ್ಯಾಜಿಸ್ಟ್ರೇಟ್ ಮುಂದೆ 164 ಹೇಳಿಕ ದಾಖಲಿಸಲಾಗಿದೆ. ಹೀಗಿದ್ದೂ ರಿಮ್ಯಾಂಡ್ ಅರ್ಜಿಯಲ್ಲಿ ಉಲ್ಲೇಖಿಸದಿರಲು ಕಾರಣವೇನು ಎಂದು ಪ್ರಶ್ನಿಸಿದ್ದಾರೆ.

ಸಾಕ್ಷಿದಾರರ ಮೂವರ ಸ್ವಇಚ್ಚಾ ಹೇಳಿಕೆಗಳನ್ನು ಪೀಠದ ಮುಂದೆ ವಿವರಿಸಿದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್‌ ಶೀಟ್ ನಲ್ಲೂ ದೋಷಗಳು ಇವೆ. ಸಾಕಷ್ಟು ಸಾಕ್ಷಿಗಳನ್ನು ಸೃಷ್ಟಿ ಮಾಡಿದ್ದಾರೆ. ಸಾಕ್ಷಿ ಓರ್ವನ ಮೊಬೈಲ್ ಟವರ್ ಜಂಪ್ ತೋರಿಸಲಾಗಿದೆ.

ಸಾಕ್ಷಿಯೋರ್ವ ಬೇಸಿಕ್ ಮೊಬೈಲ್ ಗೆ ಸಿಮ್ ಹಾಕಿಕೊಂಡು, ಬೇರೆ ಮೊಬೈಲ್ ಮನೆಯಲ್ಲಿಟ್ಟಿದ್ದ ಆರೋಪಿ ವಿನಯ್ಗೆ ಈ ಸಾಕ್ಷಿಯು ಕರೆ ಮಾಡಿದ್ದ ಭಯವಾದ ಕಾರಣ ಮಲೆಮಹದೇಶ್ವರ ಬೆಟ್ಟಕ್ಕೆ ಹೋಗಿದ್ದೆ ಹಾಸನಕ್ಕೆ ಹೋಗಿದ್ದೆ ಅಲ್ಲಿ ಇಲ್ಲಿ ಹೋಗಿದ್ದೆ ಅಂತಾ ಸಾಕ್ಷಿ ಹೇಳಿದ್ದಾನೆ. ಈ ರೀತಿ ಕಥೆಗಳನ್ನು ಕಟ್ಟಲಾಗಿದ್ದು ಇವುಗಳನ್ನು ಹೇಗೆ ನಂಬುವುದು ಎಂದ ನಾಗೇಶ್ ಅವರು ಹೆಚ್ಚುವರಿ ಚಾರ್ಜ್ ಶೀಟ್ ದೋಷಗಳಿಂದ ಕೂಡಿದೆ. ಸಾಕ್ತಿಯೋರ್ವನು ತನಗೆ ಭಯವಾದ್ದರಿಂದ ಗೋವಾಗೆ ಹೋಗಿದ್ದೆ ಅಂತಾ ಹೇಳಿದ್ದಾನೆ. ಆದರೆ ಮುಂಚಿತವಾಗಿಯೇ ಟಿಕೆಟ್ ಬುಕ್ ಮಾಡಲಾಗಿದೆ.

ಪೊಲೀಸರು ಇತ್ತೀಚೆಗೆ 8 ಫೋಟೋಗಳನ್ನು ರಿಟ್ರೇವ್ ಮಾಡಿದ್ದಾರೆ. ಫೋಟೋಗಳು ಜೂ.ರಂದು ತೆಗೆಯಲಾಗಿದೆ. ಇದನ್ನು ಪ್ರಾಸಿಕ್ಯೂಷನ್ ಹೇಳ್ತಾ ಇದೆ. ಫೋಟೋದಲ್ಲಿ ಸಾಕ್ಷಿ ಧರಿಸಿದ ಪ್ಯಾಂಟ್, ಪೊಲೀಸರು ಚಾರ್ಜ್‌ಶೀಟ್‌ನಲ್ಲಿ ತೋರಿಸಿರುವ ಪ್ಯಾಂಟ್ ಬೇರೆ ಇದೆ ಇನ್ನು ಸಾಕ್ಷಿಯೋರ್ವ ಗೋವಾಕ್ಕೆ ಹೋಗಲು ಮೊದಲೇ ಪ್ಲಾನ್ ಮಾಡಿದ್ದ ಗೋವಾಗೆ ಗೋಗುವ ಪ್ಲಾನ್ ಮೊದಲೇ ಇತ್ತು ರೇಣುಕಾಸ್ವಾಮಿ ಕೊಲೆ ಜೂ.8ರಂದು ನಡೆದಿದೆ. ಸಾಕ್ಷಿ ಗೋವಾಗೆ ಗೋವಾಗೆ ಹೋಗಲು ಜೂ.21ಕ್ಕೆ ಟಿಕೆಟ್ ಬುಕ್ ಮಾಡಿಕೊಂಡಿದ್ದ ಹೆದರಿಕೊಂಡು ಆತ ಗೋವಾಗೆ ಹೋಗಿಲ್ಲ. ಮೊದಲೇ ಪ್ಲಾನ್ ಮಾಡಿ ಟಿಕೆಟ್ ಕೂಡ ಬುಕ್ ಮಾಡಿಕೊಂಡಿದ್ದ

ಪೊಲೀಸರು ಸಾಕ್ಷಿಯ ಮೊಬೈಲ್‌ನಿಂದ ರಿಟೀವ್ ಆದ ಫೋಟೋಗಳನ್ನು ತೋರಿಸಿದ್ದಾರೆ. ಪೊಲೀಸರು ಸಾಕ್ಷಿಯ ಫೋಟೋದಲ್ಲಿರುವ ಪ್ಯಾಂಟ್, ಅವರು ತೋರಿಸಿರುವ ಪ್ಯಾಂಟ್ ಬೇರೆ ಇದೆ. ಪ್ಯಾಂಟನ್ನೇ ಪೊಲೀಸರು ಬದಲಾಯಿಸಿದ್ದಾರೆ.

ಪೊಲೀಸರು ಜೈಲಿನಿಂದ ರಿಲೀಸ್ ಆದ ಆರೋಪಿ ನಿಂದ ಬಿಡುಗಡೆ ನಂತರವೂ ಅವರ ಇಷ್ಟದಂತೆ ಹೇಳಿಕೆ ಮತ್ತೊಮ್ಮೆ ಪಡೆದಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿ ವಾದಿಸಿದರು. ಪ್ರತ್ಯಕ್ಷ ಸಾಕ್ಷಿಗಳ ಹೇಳಿಕೆ ದಾಖಲಿಸಲು ತನಿಖಾಧಿಕಾರಿಗಳಿಂದ ವಿಳಂಬ ಆಗಿದೆ. ಲೋಪಗಳಿವೆ. ಹೀಗಾಗಿ ತಮ್ಮ ಕಕ್ಷಿದಾರ ದರ್ಶನ್ ಅವರಿಗೆ ಜಾಮೀನು ಮಂಜೂರು ಮಾಡಬೇಕು ಎಂದು ಹೇಳಿಕೆ ದಾಖಲಿಸಲು ವಿಳಂಬ ಮಾಡಿದರೆ ಜಾಮೀನು ನೀಡಬಹುದೆಂಬ ಸುಪ್ರೀಂ ಕೋರ್ಟ್ ಆದೇಶ ಉಲ್ಲೇಖಿಸಿ ಜಾಮೀನು ಕೋರಿದರು.

ಅಲ್ಲದೆ ದರ್ಶನ್ಗೆ ಕೊಲ್ಲುವ ಉದ್ದೇಶ ಇದ್ದಿದ್ದರೆ ಊಟ ತಂದುಕೊಡಿ, ನೀರು ತಂದು ಕೊಡಿ, ಪೊಲೀಸರ ಮುಂದೆ ಹಾಜರು ಪಡಿಸಿ ಎಂದು ಯಾಕೆ ಹೇಳ್ತಾ ಇದ್ದರೇ.? ಹೇಳುವುದು ಮತ್ತಷ್ಟು ಇದ ಎಂದು ಪ್ರಬಲವಾಗಿ ವಾದ ಮಂಡಿಸಿದರು.

ಇನ್ನು ದರ್ಶನ್ ಅವರ ಆರೋಗ್ಯದ ಸ್ಥಿತಿಗತಿ ಹೇಗಿದೆ ಎಂದು ಪ್ರಶ್ನಿಸಿರುವ ನ್ಯಾಯಮೂರ್ತಿ ವಿಶ್ವಜಿತ್ ಅವರಗೆ ಉತ್ತರಿಸಿದ ನಾಗೇಶ್ ಅವರು, ದರ್ಶನ್ ಅವರನ್ನು ಎಂಆರ್‌ಐ ಪರೀಕ್ಷೆಗೆ ಒಳಪಡಿಸಲಾಗಿದೆ. ಬಿ.ಪಿ ವ್ಯತ್ಯಾಸವಾಗುತ್ತಿದೆ ಹೀಗಾಗಿ ಸರ್ಜರಿಗೆ ಇನ್ನು ಮುಂದಾಗಿಲ್ಲ. ಸರ್ಜರಿಯನ್ನು ವೈದ್ಯರು ನಿರ್ಧರಿಸುತ್ತಾರೆ ಎಂದು ವಿವರಣೆ ನೀಡಿದರು.

ನಂತರ ವಿಚಾರಣೆಯನ್ನು ಪೀಠ ನಾಳೆಗೆ (ನವೆಂಬರ್ 29ಕ್ಕೆ) ಮುಂದೂಡಿತು ಎಂದು ವರದಿಯಾಗಿದೆ.

ರಾಜಕೀಯ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಧರ್ಮಸ್ಥಳದ ವಿಚಾರದಲ್ಲಿ ಮಧ್ಯಂತರ ವರದಿಯಿಂದ ಗೊಂದಲಕ್ಕೆ ತೆರೆ: ಬಿ.ವೈ. ವಿಜಯೇಂದ್ರ

ಶ್ರೀ ಕ್ಷೇತ್ರ ಧರ್ಮಸ್ಥಳದ (Dharmasthala) ವಿಚಾರದಲ್ಲಿ ಮಧ್ಯಂತರ ವರದಿಯನ್ನೂ ಒಳಗೊಂಡಂತೆ ಗೊಂದಲಕ್ಕೆ ಗೃಹ ಸಚಿವರು ತೆರೆ ಎಳೆಯುವ ವಿಶ್ವಾಸದಲ್ಲಿ ನಾವು ಇದ್ದೇವೆ: ಬಿ.ವೈ.ವಿಜಯೇಂದ್ರ (B.Y. Vijayendra)

[ccc_my_favorite_select_button post_id="112771"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ದೊಡ್ಡಬಳ್ಳಾಪುರ: ಸತತ 5ನೇ ಬಾರಿ ಅಂಗಡಿಗಳಲ್ಲಿ ಕಳವು..!ಆತಂಕದಲ್ಲಿ ವ್ಯಾಪಾರಿಗಳು

ಡಿ.ಕ್ರಾಸ್ ಹಾಗೂ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಸ್ತೆಯಲ್ಲಿನ ಅಂಗಡಿಗಳಲ್ಲಿ ಪದೇ ಪದೇ ಕಳ್ಳತನ ಪ್ರಕರಣಗಳು (Shops robbed) ನಡೆಯುತ್ತಿದ್ದು, ವ್ಯಾಪಾರಿಗಳನ್ನು ಚಿಂತೆಗೀಡುಮಾಡಿದೆ.

[ccc_my_favorite_select_button post_id="112687"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!