ದೊಡ್ಡಬಳ್ಳಾಪುರದ ಅವ್ಯವಸ್ಥೆ CMC ಸಭೆಯಲ್ಲಿ ಬಯಲು: ಸ್ವಾತಂತ್ರ್ಯ ದಿನಾಚರಣೆಯಂದು ಮಕ್ಕಳಿಗೆ ಸಿಹಿ ನೀಡಲು ಆಕ್ಷೇಪ..!

ದೊಡ್ಡಬಳ್ಳಾಪುರ: ನಗರಸಭೆ(CMC) ನೂತನ ಅಧ್ಯಕ್ಷೆ ಕೆ.ಸುಮಿತ್ರಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಮೊದಲ ಸರ್ವ ಸದಸ್ಯರ ಸಾಮಾನ್ಯ ಸಭೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯಂದು ಖಾಸಗಿ ಶಾಲೆ ಎಂಬ ಕಾರಣಕ್ಕೆ ಮಕ್ಕಳಿಗೆ ಸಿಹಿ ನೀಡಲು ಆಕ್ಷೇಪ, ನಗರಸಭೆಗೆ ಬರಬೇಕಿರುವ ವಿವಿಧ ತೆರಿಗೆ, ಕಂದಾಯ ಬಾಕಿ ವಸೂಲಿಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಕುರಿತು ವಿಷಯದ ಮೇಲೆ ಚರ್ಚೆ ನಡೆಸಿದ ಪ್ರಸಂಗ ನಡೆಯಿತು.

ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣ ಸಮಿತಿಯಿಂದ ನಡೆಯುವ ಎಲ್ಲಾ ಕಾರ್ಯಕ್ರಮಗಳ ಖರ್ಚುಗಳನ್ನು ನಗರಸಭೆ ವತಿಯಿಂದಲೇ ಭರಿಸುವ ಹೊಸ ಸಂಪ್ರದಾಯ ಪ್ರಾರಂಭವಾಗಿದೆ. ಇದಕ್ಕೆ ಕಡಿವಾಣ ಹಾಕಬೇಕು.

ನಗರದಲ್ಲಿ ಸರ್ಕಾರದ ಇತರೆ ಇಲಾಖೆಗಳು ಇವೆ. ಎಲ್ಲಾ ಇಲಾಖೆಗಳಿಗೆ ಖರ್ಚುಗಳನ್ನು ಸಮಾನವಾಗಿ ಹಂಚಿಕೆ ಮಾಡಬೇಕು. ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ನಗರಸಭೆ ವತಿಯಿಂದ ನಗರಸಭೆ ವ್ಯಾಪ್ತಿಯಲ್ಲಿನ ಸರ್ಕಾರಿ ಶಾಲಾ ಮಕ್ಕಳಿಗೆ ಪ್ರತಿ ವರ್ಷವು ಸಿಹಿ ತಿಂಡಿಯನ್ನು ನೀಡಲಾಗುತ್ತದೆ. ಆದರೆ ಪೋಷಕರಿಂದ ಸಾವಿರಾರು ರೂಪಾಯಿ ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳಿಗು ಸಿಹಿ ವಿತರಣೆ ಮಾಡುವುದು ಸೂಕ್ತ ನಿರ್ಧಾರ ಅಲ್ಲ ಎಂದು ನಗರಸಭೆ ಸದಸ್ಯರಾದ ಟಿ.ಎನ್ ಪ್ರಭುದೇವ್, ವಡ್ಡರಹಳ್ಳಿ ರವಿಕುಮಾರ್, ಪದ್ಮನಾಭ ಆಕ್ಷೇಪ ವ್ಯಕ್ತಪಡಿಸಿದರು.

ಈ ಆಕ್ಷೇಪಕ್ಕೆ ಬೇಸರ ವ್ಯಕ್ತಪಡಿಸಿದ ನಗರಸಭೆ ಸದಸ್ಯ ಭಾಸ್ಕರ್, ಶಿವಶಂಕರ್ ಮಕ್ಕಳು ಎಂದರೆ ಎಲ್ಲರೂ ಒಂದೇ, ನಮ್ಮ ನಗರಸಭೆಯ ಅನೇಕ ಸದಸ್ಯರ ಮಕ್ಕಳು ವ್ಯಾಸಂಗ ಮಾಡ್ತಾ ಇರೋದು ಖಾಸಗಿ ಶಾಲೆಯಲ್ಲಿಯೇ ಎಂಬುದನ್ನು ಮರೆಯಬೇಡಿ ಎಂದರು.

ಹಿರಿಯ ಸದಸ್ಯ ಟಿ.ಎನ್.ಪ್ರಭುದೇವ್ ಮಾತನಾಡಿ, ನಗರದ ಕೋಟೆ ರಸ್ತೆ, ಸೌಂದರ್ಯ ಮಹಲ್ ಚಿತ್ರ ಮಂದಿರ ಸಮೀಪದ ವಕ್ಫ್ ಅಧಿನದಲ್ಲಿ ಇರುವ ವಾಣಿಜ್ಯ ಮಳಿಗೆಗಳಿಂದ ನಗರಸಭೆಗೆ ಪಾವತಿಸಬೇಕಿರುವ ಲಕ್ಷಾಂತರ ರೂಪಾಯಿ ತೆರಿಗೆ ಬಾಕಿ ಇದೆ. ಹಾಗೆಯೇ ಚಿತ್ರಮಂದಿರ, ಕಲ್ಯಾಣ ಮಂದಿರ, ಪಾರ್ಟಿ ಹಾಲ್, ಪೆಟ್ರೋಲ್ ಬಂಕ್ಗಳ ಮಾಲೀಕರು ಉಳಿಸಿಕೊಂಡಿರುವ ತೆರಿಗೆ ಬಾಕಿ ವಸೂಲಿಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಈ ಬಗ್ಗೆ ಹತ್ತಾರು ಬಾರಿ ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸಹ ಕುಂಟು ನೆಪಗಳನ್ನು ಹೇಳುತ್ತಲೇ ಕಾಲಾಹಣ ಮಾಡಲಾಗುತ್ತಿದೆ ಎಂದು ತೀವ್ರ ಅಸಮಧಾನ ವ್ಯಕ್ತಪಡಿಸಿದರು.

ನಗರ ವಿಸ್ತಾರವಾಗಿ ಬೆಳೆಯುತ್ತಿದೆ. ಬೃಹತ್ ವಾಣಿಜ್ಯ ಸಂಕೀರ್ಣಗಳು ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ಮನೆಗಳನ್ನು ವಾಣಿಜ್ಯ ಮಳಿಗೆಗಳಾಗಿ ಪರಿವರ್ತಿಸಲಾಗಿದೆ. ಆದರೆ ನಗರದಲ್ಲಿ ಎಷ್ಟು ವಾಣಿಜ್ಯ ಮಳಿಗೆಗಳು ಇವೆ ಎನ್ನುವ ನಿಖಿರವಾದ ಮಾಹಿತಿಯೇ ನಗರಸಭೆಯಲ್ಲಿ ಇಲ್ಲದಾಗಿದೆ. ಹೀಗಾದರೆ ತೆರಿಗೆ ವಸೂಲಿ ಮಾಡುವುದಾದರು ಹೇಗೆ, ನಗರದ ಅಭಿವೃದ್ದಿಗೆ ಹಣ ಕ್ರೂಢೀಕರಿಸುವುದಾದರು ಹೇಗೆ ಎಂದು ಪ್ರಶ್ನಿಸಿದರು. ಮುಂದಿನ ಸಾಮಾನ್ಯ ಸಭೆಯ ವೇಳೆಗೆ ನಗರದಲ್ಲಿನ ವಾಣಿಜ್ಯ ಮಳಿಗೆಗಳ ಸಮೀಪಕ್ಷೆ ನಡೆಸಿ ಅಧಿಕೃತ ಪಟ್ಟಿಯನ್ನು ಸಭೆಯ ಗಮನಕ್ಕೆ ತರಬೇಕು ಎಂದು ಆಗ್ರಹಿಸಿದರು.

ಸದಸ್ಯರಾದ ಎಚ್.ಎಸ್.ಶಿವಶಂಕರ್, ಟಿ.ಎನ್.ಪ್ರಭುದೇವ ಮಾತನಾಡಿ, ನಗರಸಭೆಗೆ ಮುಖ್ಯ ಆದಾಯದ ಮೂಲಗಳಲ್ಲಿ ಒಂದಾಗಿದ್ದ ಬಸ್ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ವಾಣಿಜ್ಯ ಮಳಿಗೆಗಳು ಸೇರಿದಂತೆ ನಗರದ ವಿವಿಧೆಡೆಗಳಲ್ಲಿನ ಸುಮಾರು 40 ವಾಣಿಜ್ಯ ಮಳಿಗೆಗಳು ಎರಡು ವರ್ಷಗಳಿಂದಲು ಖಾಲಿ ಉಳಿದಿವೆ. ಈ ಬಗ್ಗೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದು ಹರಾಜು ಪ್ರಕ್ರಿಯೆ ನಡೆಸುವಲ್ಲಿ ವಿಳಂಬ ಮಾಡುತ್ತಿರುವುದು ಸರಿಯಲ್ಲ. ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ಸಂಪರ್ಕ ಶುಲ್ಕ ವಸೂಲಿಯಲ್ಲಿ ಶೇ 10ರಷ್ಟು ಪ್ರಗತಿಯಾಗಿಲ್ಲ. ₹8 ಕೋಟಿ ನೀರಿನ ಶುಲ್ಕ ಭಾಕಿ ಇದೆ. ಆದರೆ ವಸೂಲಿಯಾಗಿರುವುದು ಕೇವಲ ₹1 ಕೋಟಿ. ವಾರ್ಷಿಕ ನೀರಿನ ಶುಲ್ಕ ₹2.87 ಕೋಟಿ ವಸೂಲಿಯಾಗಬೇಕು ಎನ್ನುವ ಅಂಕಿಅಂಶ ಇದೆ. ಆದರೆ ವಾಸ್ತವ ಲೆಕ್ಕದಲ್ಲಿ ₹1 ಕೋಟಿ ತೋರಿಸಲಾಗಿದೆ ಎಂದು ದೂರಿದರು.

ಕಟ್ಟಡ ಪರವಾನಗಿಯೇ ಪಡೆಯುತ್ತಿಲ್ಲ

ನಗರದ ವ್ಯಾಪ್ತಿಲ್ಲಿ ಅಭಿವೃದ್ದಿ ಪ್ರಾಧಿಕಾರದಿಂದ ಅನುಮೋದಿತವಾಗಿರುವ 20 ಬಡಾವಣೆಗಳು ಇವೆ. ನಗರದ ಒಳ ಭಾಗವು ಸೇರಿದಂತೆ ಹೊಸ ಬಡಾವಣೆಗಳಲ್ಲಿ ನೂರಾರು ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಆದರೆ ಏಪ್ರಿಲ್ ನಿಂದ ಇಲ್ಲಿಯವರೆಗೆ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಲ್ಲಿಕೆಯಾಗಿರುವ ಅರ್ಜಿಗಳು 103. ಇವುಗಳ ಪೈಕಿ 25 ಅರ್ಜಿಗಳಿಗೆ ನಗರಸಭೆಯಿಂದ ಅನುಮೋದನೆ ದೊರೆತಿವೆ.

ಕಟ್ಟಡ ಪರವಾನಿಗಿ ಶುಲ್ಕ ₹1ಲಕ್ಷ ಸಂಗ್ರಹವಾಗಿದೆ. ನಗರಸಭೆಯಿಂದ ಕುಡಿಯುವ ನೀರಿನ ಸಂಪರ್ಕ, ಒಳಚರಂಡಿ ಸೌಲಭ್ಯ, ಬೀದಿ ದೀಪ, ರಸ್ತೆ, ಕಸ ಗುಡಿಸುವುದು ಸೇರಿದಂತೆ ಎಲ್ಲಾ ಸೌಕರ್ಯಗಳು ನೀಡಬೇಕು. ಆದರೆ ಪರವಾನಗಿ ಮಾತ್ರ ಪಡೆಯದೇ ಕಟ್ಟಡಗಳನ್ನು ನಿರ್ಮಿಸುತ್ತಿದ್ದರು ಸಹ ಮಾಲೀಕರನ್ನು ಅಧಿಕಾರಿಗಳು ಪ್ರಶ್ನಿಸದೇ ಇದ್ದರೆ ನಗರಸಭೆ ಆಡಳಿತ ನಡೆಯುವುದಾದರು ಹೇಗೆ, ಅಧಿಕಾರಿಗಳಿಗೆ ಸಂಬಳ ಏಕೆ ನೀಡಬೇಕು ಎಂದು ಸದಸ್ಯರಾದ ಶಿವಣ್ಣ, ವಿ.ಎಸ್.ರವಿಕುಮಾರ್, ಆನಂದ್, ಸುಬ್ಬು ಪ್ರಶ್ನಿಸಿದರು.

ಸದಸ್ಯರ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಿದ ಪೌರಾಯುಕ್ತ ಕಾರ್ತೀಕ ಈಶ್ವರ್, ನಗರಸಭೆ ವತಿಯಿಂದ ನಿರ್ಮಿಸಲಾಗಿರುವ ಕೆಲವು ವಾಣಿಜ್ಯ ಮಳೆಗಳ ಬಾಡಿಗೆ ವಿವಾದ ನ್ಯಾಯಲಯದಲ್ಲಿ ಇವೆ. ಯಾವುದೇ ವಿವಾದ ಇಲ್ಲದ ಮಳಿಗೆಗಳ ಹರಾಜು ಪ್ರಕ್ರಿಯೆ ಇದೇ ಪ್ರಥಮ ಬಾರಿಗೆ ಇ-ಟೆಂಡರ್ ಮೂಲಕ ನಡೆಸಲಾಗುತ್ತಿದೆ. ಈಗಾಗಲೇ ಜಿಲ್ಲಾಧಿಕಾರಿಗಳು ಅನುಮತಿ ನೀಡಿದ್ದಾರೆ. ವಾಣಿಜ್ಯ ಮಳಿಗೆಗಳ ಬಾಡಿಗೆ ವಸೂಲಿ ಸೇರಿದಂತೆ ಎಲ್ಲವನ್ನು ಆನ್ ಲೈನ್ ಮಾಡಲಾಗುತ್ತಿದೆ. ಇದರಿಂದ ತೆರಿಗೆ ವಸೂಲಿ ಸರಳವಾಗಲಿದೆ ಎಂದರು.

ನಗರೋತ್ತಾನ ನಿಧಿಯಲ್ಲಿ ನಗರಸಭೆ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಕಾಮಗಾರಿಗಳ ಗುತ್ತಿಗೆ ವಿಳಂಭವಾಗುತ್ತಿರುವ ಕುರಿತು ಗುತ್ತಿಗೆದಾರೊಂದಿಗೆ ಸಭೆ ನಡೆಸಿ ಕಾಲಮಿತಿಯಲ್ಲಿ ಕಾಮಗಾರಿ ಪೂರ್ಣಗೊಳಿಸದೇ ಇದ್ದರೆ ಗುತ್ತಿಗೆ ರದ್ದು ಮಾಡಲಾಗುವುದು.

ತೆರಿಗೆ ವಸೂಲಿಯ ಕಡೆಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು ಈಗ ಮಾಸಿಕ ಪ್ರಗತಿ ಶೇ 60 ರಿಂದ 70 ಇದೆ. ಡಿಸೆಂಬರ್ ಅಂತ್ಯಕ್ಕೆ ಶೇ 90 ರಷ್ಟು ಗುರಿ ಮುಟ್ಟವ ಉದ್ದೇಶ ಹೊಂದಲಾಗಿದೆ. ಕಟ್ಟಡ ನಿರ್ಮಾಣ ಪರವಾನಿಗಿ ನೀಡಲು ಸರ್ಕಾರದ ನಿಯಮಗಳು ಕಠಿಣವಾಗಿವೆ. ಈ ನಿಯಮದ ಪ್ರಕಾರವೇ ಪರವಾನಿಗಿ ನೀಡಬೇಕು. ಹಾಗಾಗಿಯೇ ಸಾರ್ವಜನಿಕರು ಪರವಾನಗಿ ಪಡೆಯದೇ ಕಟ್ಟಡಗಳನ್ನು ನಿರ್ಮಿಸುತ್ತಿದ್ದಾರೆ. ಇಂತಹವರಿಗೆ ನೋಟಿಸ್ ನೀಡಲಾಗುತ್ತಿದೆ.

ನಗರಸಭೆಯಿಂದ ನೋಟಿಸ್ ನೀಡುತ್ತಿದ್ದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತರುತ್ತಾರೆ. ಹಾಗಾಗಿ ನಾವು ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ ಕಟ್ಟಡ ನಿರ್ಮಾಣವಾದ ನಂತರ ಎರಡು ಪಟ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದರು.

ಸಭೆಯಲ್ಲಿ ಉಪಾಧ್ಯಕ್ಷ ಮಲ್ಲೇಶ್ ಸೇರಿದಂತೆ ಸದಸ್ಯರು, ಅಧಿಕಾರಿಗಳು ಇದ್ದರು.

ರಾಜಕೀಯ

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಧರ್ಮದ ವಿಚಾರದಲ್ಲಿ ರಾಜಕೀಯ ಬೇಡ; ನಾವು ಅವರ ಪರವೂ ಇಲ್ಲ,‌ ಇವರ ಪರವೂ

"ನಾವು ಅವರ (ಧರ್ಮಸ್ಥಳ) ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ ಪರ. ಧರ್ಮದ ವಿಚಾರದಲ್ಲಿ ರಾಜಕಾರಣ ಮಾಡಬೇಡಿ ಎಂದಷ್ಟೇ ನಾವು ಹೇಳುತ್ತಿದ್ದೇವೆ": ಡಿಸಿಎಂ ಡಿ.ಕೆ.ಶಿವಕುಮಾರ್ (D.K. Shivakumar)

[ccc_my_favorite_select_button post_id="113000"]
2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

2ನೇ ವಂದೇ ಭಾರತ್ ಎಕ್ಸ್‌ಪ್ರೆಸ್‍ಗೆ ಹಸಿರು ನಿಶಾನೆ ತೋರಿದ ಸಂಸದೆ ಡಾ;ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಬೆಂಗಳೂರು-ದಾವಣಗೆರೆ- ಬೆಳಗಾವಿಗೆ ವಂದೇ ಭಾರತ್ ಎಕ್ಸ್‍ಪ್ರೆಸ್ (Vande Bharat Express) ರೈಲು ಸೇವೆಯಿಂದ ಶಿಕ್ಷಣ, ಆರೋಗ್ಯ ಸೇವೆಯ ಅನುಕೂಲದ ಜೊತೆಗೆ ವ್ಯಾಪಾರ ವಹಿವಾಟು ವೃದ್ದಿಯಾಗಲಿದೆ ಎಂದು ಸಂಸದರಾದ ಡಾ; ಪ್ರಭಾ ಮಲ್ಲಿಕಾರ್ಜುನ್ (Dr.

[ccc_my_favorite_select_button post_id="112408"]
Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

Crime News: ನಡುರಸ್ತೆಯಲ್ಲೇ 2 ಗುಂಪುಗಳ ನಡುವೆ ಮಾರಾಮಾರಿ

ಹಳೆ ದ್ವೇಷದ ಹಿನ್ನೆಲೆ ಎರಡು ಗ್ಯಾಂಗ್‌ಗಳ ನಡುವೆ ಮಾರಾಮಾರಿ ನಡೆದಿದೆ. ದೊಣ್ಣೆ, ಮಾರಕಾಸ್ತ್ರಗಳಿಂದ ಪರಸ್ಪರ ಹೊಡೆ ದಾಡಿಕೊಂಡಿದ್ದಾರೆ. Crime News;

[ccc_my_favorite_select_button post_id="110866"]
ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಹಣಕಾಸು ಸಚಿವರೊಂದಿಗೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ವಿಸ್ತೃತ ಮಾತುಕತೆ

ದುಬೈ ಪ್ರವಾಸದಲ್ಲಿರುವ ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ (H.D.Kumaraswamy) ತಮ್ಮ ಪ್ರವಾಸದ ಎರಡನೇ ದಿನವೂ ಇಲ್ಲಿನ ಆಡಳಿತ

[ccc_my_favorite_select_button post_id="110371"]

ಕ್ರೀಡೆ

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಮಂಡ್ಯದ ಮಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಕೀರ್ತಿ ಪತಾಕೆ ಹಾರಿಸಲಿ: ಡಿ.ಕೆ.ಶಿವಕುಮಾರ್

ಒಡಿಶಾದ ಭುವನೇಶ್ವರದಲ್ಲಿ‌ ಇದೇ ತಿಂಗಳ 10ರಂದು ನಡೆದ ವಿಶ್ವ ಅಥ್ಲೆಟಿಕ್ಸ್ ನ ಕಾಂಟಿನೆಂಟಲ್ ಕೂಟದ ಮಹಿಳೆಯರ ವಿಭಾಗದ 400 ಮೀಟರ್ ಓಟದಲ್ಲಿ ಚಿನ್ನದ ಪದಕ ಗಳಿಸಿದ ರಾಜ್ಯಕ್ಕೆ ಕೀರ್ತಿ ತಂದ ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ

[ccc_my_favorite_select_button post_id="112580"]
ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ದೊಡ್ಡಬಳ್ಳಾಪುರ: ಹೆಂಡ ಸಾಗಿಸುತ್ತಿದ್ದ ಮಹಿಳೆಯ ಬಂಧನ.. 70 ಲೀಟರ್‌ ಹೆಂಡ ವಶ..!

ನೆರೆ ರಾಜ್ಯದಿಂದ ಅಕ್ರಮವಾಗಿ ಹೆಂಡ (Toddy) ಸಾಗಿಸುತ್ತಿದ್ದ ಮಹಿಳೆಯನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.

[ccc_my_favorite_select_button post_id="112911"]
ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ದೊಡ್ಡಬಳ್ಳಾಪುರ: ಮಳೆಗೆ ಟ್ರಾಕ್ಟರ್ ಕಾಣದೆ ಡಿಕ್ಕಿ.. ಬೈಕ್ ಸವಾರ ಸ್ಥಳದಲ್ಲೇ ಸಾವು..!

ಮಳೆಯ ವೇಳೆ ವಾಹನ ಸವಾರರು ಎಷ್ಟು ಮುಂಜಾಗ್ರತೆ ಸಾಲದು. ಏಕೆಂದರೆ ನಿನ್ನೆ ಸಂಜೆ ಸುರಿದ ಭಾರಿ ಮಳೆಯ ಕಾರಣ ರಸ್ತೆ ಬದಿಯಲ್ಲಿ ಕೆಟ್ಟು ನಿಂತಿದ್ದ ಟ್ರಾಕ್ಟರ್ ಕಾಣದೆ Accident

[ccc_my_favorite_select_button post_id="112435"]

ಆರೋಗ್ಯ

ಸಿನಿಮಾ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಗುಡ್ಮಾರ್ನಿಂಗ್ ನ್ಯೂಸ್: ಇಂದು ಚುನಾವಣೆ ಆಯೋಗ ಸುದ್ದಿಗೋಷ್ಠಿ

ಕಾಂಗ್ರೆಸ್ (Congress) ಮಾಡಿರುವ ಓಟ್ ಚೋರಿ ಆರೋಪ ದಿನೇದಿನೇ ತೀವ್ರ ಸ್ವರೂಪ ಪಡೆಯುತ್ತಿದ್ದು, ಚುನಾವಣೆ ಆಯೋಗ (Election Commission) ಹಾಗೂ ಕೇಂದ್ರ ಸರ್ಕಾರದ (Central Government) ವಿರುದ್ಧ ಅನುಮಾನ ಹೆಚ್ಚಿಸುವಂತೆ ಮಾಡುತ್ತಿದೆ‌.

[ccc_my_favorite_select_button post_id="112714"]
error: Content is protected !!