ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂಬಿ ಪಾಟೀಲ| MB Patila

ಹೇಗ್‌ (ನೆದರ್ಲ್ಯಾಂಡ್‌): ʼಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆʼ ಎಂದು ಬೇಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಯುರೋಪ್‌ ಪ್ರವಾಸದಲ್ಲಿ ಇರುವ ಸಚಿವ ಪಾಟೀಲ ಅವರ ನೇತೃತ್ವದಲ್ಲಿನ ಉನ್ನತ ಮಟ್ಟದ ನಿಯೋಗವು ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ವಿದೇಶ ಆರ್ಥಿಕ ಸಂಬಂಧಗಳ ಮಹಾನಿರ್ದೇಶಕ ಮೈಕಲ್‌ ಸ್ವೀರ್ಸ್‌ ಅವರು ವಾಣಿಜ್ಯ ಸಂಬಂಧ ಬೆಳೆಸಲು ಇಂಗಿತ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂಬಿ ಪಾಟೀಲ| MB Patila

ʼರಾಜ್ಯ ಸರ್ಕಾರದ ಜೊತೆ ವಾಣಿಜ್ಯ ಸಂಬಂಧ ಬೆಳೆಸಲು ನೆದರ್‌ಲ್ಯಾಂಡ್ಸ್‌ ತೋರಿಸಿರುವ ಇಂಗಿತವು ಅಲ್ಲಿನ ಉದ್ಯಮಿಗಳು ರಾಜ್ಯದಲ್ಲಿ ಹೊಸ ಬಂಡವಾಳ ಹೂಡಿಕೆ ಮಾಡುವುದರ ಸ್ಪಷ್ಟ ಸಂಕೇತವಾಗಿದೆ.

ಪಾಲ್-ವಿ, ಫಿಲಿಪ್ಸ್, ಹೈನೆಕೆನ್, ಇನ್ನಾಟೆರಾ ನ್ಯಾನೊಸಿಸ್ಟಮ್ಸ್ ಮತ್ತು ಪೋರ್ಟ್ ಆಫ್ ರೋಟರ್‌ಡ್ಯಾಮ್ ಮತ್ತಿತರ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿವೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಇನ್ವೆಸ್ಟ್‌ ಕರ್ನಾಟಕದ ಅಂಗವಾಗಿ ಜಾಗತಿಕ ಉದ್ಯಮಿಗಳನ್ನು ಸಂಪರ್ಕಿಸಲು, ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯ ಸರ್ಕಾರವು ನೆದರ್‌ಲ್ಯಾಂಡ್ಸ್‌ನ  ಹೇಗ್‌ನಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿದೆ. ರೋಡ್‌ಷೋದಲ್ಲಿ ರಾಜ್ಯದ ನಿಯೋಗವು ನೆದರ್‌ಲ್ಯಾಂಡ್ಸ್‌ನ ಉದ್ದಿಮೆ ಪ್ರಮುಖರ  ಜೊತೆ ಸಮಾಲೋಚನೆ ನಡೆಸಿ, ಮುಂದಿನ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಆಹ್ವಾನ ನೀಡಿತು.

ನಾವೀನ್ಯತೆ, ಎಲೆಕ್ಟ್ರಾನಿಕ್ಸ್‌ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಇರುವುದನ್ನು ರೋಡ್‌ಷೋದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿನ ಸದೃಢ ಮೂಲಸೌಲಭ್ಯಗಳು, ನಾವೀನ್ಯತೆ ಆಧಾರಿತ ಅರ್ಥವ್ಯವಸ್ಥೆ, ಹೂಡಿಕೆದಾರ ಸ್ನೇಹಿ ಕೈಗಾರಿಕಾ ನೀತಿಗಳು ನೆದರ್‌ಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳ ಗಮನ ಸೆಳೆದಿವೆ.  
ನೆದರ್‌ಲ್ಯಾಂಡ್ಸ್‌ನಲ್ಲಿನ ಭಾರತದ ರಾಯಭಾರಿ ಕುಮಾರ್ ತುಹಿನ್ ಅವರು ರೋಡ್‌ಷೋದಲ್ಲಿ ಮಾತನಾಡಿ, ಬಂಡವಾಳ ಹೂಡಿಕೆಯ ಪ್ರಮುಖ ತಾಣವಾಗಿ ಕರ್ನಾಟಕವು ವಿಶ್ವದ ಗಮನ ಸೆಳೆಯುತ್ತಿರುವುದನ್ನು ವಿವರಿಸಿದರು.

ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ ಮತ್ತು ಸುಧಾರಿತ ತಯಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ನೆದರ್‌ಲ್ಯಾಂಡ್ಸ್‌ನ ಕಂಪನಿಗಳಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳು ಇರುವುದರ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ  ತ್ವರಿತಗೊಳಿಸಲು ವಿನ್ಯಾಸಗೊಳಿಸಲಾಗಿರುವ ಕ್ವಿನ್‌ ಸಿಟಿ ಯೋಜನೆ ಸೇರಿದಂತೆ ರಾಜ್ಯದ ದೂರದೃಷ್ಟಿಯ ಉಪಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಅವರು ಈ ಸಂದರ್ಭದಲ್ಲಿ ಇದ್ದರು.

ರಾಜಕೀಯ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಮೋದಿ, ಶಾ ಶ್ರಮದಿಂದ 2028ಕ್ಕೆ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ: ಬಿ.ವೈ. ವಿಜಯೇಂದ್ರ

ಬಿಜೆಪಿಯ (BJP) ಗತವೈಭವದ ದಿನಗಳು ದಾವಣಗೆರೆಯಲ್ಲಿ ಮರುಕಳಿಸಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ (B.Y. Vijayendra) ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

[ccc_my_favorite_select_button post_id="121758"]
ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ – ಡಿಸಿಎಂ‌ ಡಿ.ಕೆ. ಶಿವಕುಮಾರ್

ಬೌರಿಂಗ್ ಆಸ್ಪತ್ರೆ ದುರ್ಘಟನೆ: ಟೀಕೆ ಮಾಡೋದ್ ಬಿಟ್ಟು ಬಿಜೆಪಿಗರು ಸಹಾಯ ಮಾಡಲ್ಲ –

"ಬೌರಿಂಗ್ ಆಸ್ಪತ್ರೆ (Bowring Hospital) ಕಾಂಪೌಂಡ್ ಕುಸಿದು ಏಳು ಜನ ಮೃತಪಟ್ಟಿರುವುದು ಅತ್ಯಂತ ದುಃಖಕರ ವಿಚಾರ. ಇಂತಹ ಘಟನೆಗಳು ಆಗಬಾರದಿತ್ತು. ನನಗೂ ಇದರಿಂದ ಆಘಾತವಾಗಿದೆ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ (D.K. Shivakumar) ಬೇಸರ

[ccc_my_favorite_select_button post_id="121538"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

CSK ಅಭಿಮಾನಿಗಳಿಗೆ ಮತ್ತೆ ನಿರಾಸೆ..

ಚೆನ್ನೈ ಸೂಪರ್ ಕಿಂಗ್ಸ್ (CSK) ಅಭಿಮಾನಿಗಳಿಗೆ ಮತ್ತೊಮ್ಮೆ ನಿರಾಶೆಯಾಗಲಿದೆ. ಎಂಎಸ್ ಧೋನಿಯನ್ನು (MS Dhoni) ಮೈದಾನದಲ್ಲಿ ಕಣ್ಣುಂಬಿಸಿಕೊಳ್ಳಲು ಎದುರು ನೋಡುತ್ತಿದ್ದವರಿಗೆ ಈ ಆವೃತ್ತಿಯಲ್ಲಿ ಸಾಧ್ಯವಾಗುತ್ತದೆಯೋ ಇಲ್ಲವೋ ಎಂಬ ಆತಂಕ ಎದುರಾಗಿದೆ‌.

[ccc_my_favorite_select_button post_id="121736"]
ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ದೊಡ್ಡಬಳ್ಳಾಪುರ: ಕಾರಿನಲ್ಲಿ ಮಹಿಳೆ ಭಸ್ಮ ಪ್ರಕರಣ.. ಗೃಹಿಣಿಯ ಗುರುತು ಪತ್ತೆ

ಜಿಂಕೆಬಚ್ಚಹಳ್ಳಿ ಸಮೀಪ ಶನಿವಾರ ಬೆಂಕಿಗೆ ಆಹುತಿಯಾಗಿದ್ದ ಕಾರಿನಲ್ಲಿ (Car) ಅನುಮಾನಸ್ಪದ ರೀತಿಯಲ್ಲಿ ಸುಟ್ಟು ಹೋಗಿದ್ದ ಮಹಿಳೆಯ (Woman) ಅಸ್ಥಿಪಂಜರ ಪತ್ತೆಯಾಗಿದ್ದ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ವ್ಯಕ್ತಿ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ.

[ccc_my_favorite_select_button post_id="121693"]
ದೊಡ್ಡಬಳ್ಳಾಪುರ:  ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಡಿವೈಡರ್ಗೆ ಕಾರು ಡಿಕ್ಕಿ.. ಚಾಲಕನಿಗೆ ಗಂಭೀರ ಗಾಯ

ದಾಬಸ್ ಪೇಟೆ ಮಾರ್ಗವಾಗಿ ದೊಡ್ಡಬಳ್ಳಾಪುರ ಕಡೆಗೆ ತೆರಳುತ್ತಿದ್ದ ಕಾರು, ಏಕಾಏಕಿ ಚಾಲಕ ನಿಯಂತ್ರಣ ತಪ್ಪಿ ರಸ್ತೆ ಬದಿಯ ಡಿವೈಡರ್ಗೆ ಡಿಕ್ಕಿ (Accident) ಹೊಡೆದಿದೆ.

[ccc_my_favorite_select_button post_id="121485"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]