ಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರ್‌ಲ್ಯಾಂಡ್ಸ್‌ ಒಲವು: ಸಚಿವ ಎಂಬಿ ಪಾಟೀಲ| MB Patila

ಹೇಗ್‌ (ನೆದರ್ಲ್ಯಾಂಡ್‌): ʼಕರ್ನಾಟಕದ ಜೊತೆ ವಾಣಿಜ್ಯ ಬಾಂಧವ್ಯ ಬೆಳೆಸಲು ನೆದರಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳು ತೀವ್ರ ಆಸಕ್ತಿ ವ್ಯಕ್ತಪಡಿಸಿವೆʼ ಎಂದು ಬೇಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ (MB Patila) ತಿಳಿಸಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಉದ್ಯಮಿಗಳನ್ನು ಆಹ್ವಾನಿಸಲು ಯುರೋಪ್‌ ಪ್ರವಾಸದಲ್ಲಿ ಇರುವ ಸಚಿವ ಪಾಟೀಲ ಅವರ ನೇತೃತ್ವದಲ್ಲಿನ ಉನ್ನತ ಮಟ್ಟದ ನಿಯೋಗವು ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ವಿದೇಶ ಆರ್ಥಿಕ ಸಂಬಂಧಗಳ ಮಹಾನಿರ್ದೇಶಕ ಮೈಕಲ್‌ ಸ್ವೀರ್ಸ್‌ ಅವರು ವಾಣಿಜ್ಯ ಸಂಬಂಧ ಬೆಳೆಸಲು ಇಂಗಿತ ವ್ಯಕ್ತಪಡಿಸಿದ್ದಾರೆ.

ʼರಾಜ್ಯ ಸರ್ಕಾರದ ಜೊತೆ ವಾಣಿಜ್ಯ ಸಂಬಂಧ ಬೆಳೆಸಲು ನೆದರ್‌ಲ್ಯಾಂಡ್ಸ್‌ ತೋರಿಸಿರುವ ಇಂಗಿತವು ಅಲ್ಲಿನ ಉದ್ಯಮಿಗಳು ರಾಜ್ಯದಲ್ಲಿ ಹೊಸ ಬಂಡವಾಳ ಹೂಡಿಕೆ ಮಾಡುವುದರ ಸ್ಪಷ್ಟ ಸಂಕೇತವಾಗಿದೆ.

ಪಾಲ್-ವಿ, ಫಿಲಿಪ್ಸ್, ಹೈನೆಕೆನ್, ಇನ್ನಾಟೆರಾ ನ್ಯಾನೊಸಿಸ್ಟಮ್ಸ್ ಮತ್ತು ಪೋರ್ಟ್ ಆಫ್ ರೋಟರ್‌ಡ್ಯಾಮ್ ಮತ್ತಿತರ ಕಂಪನಿಗಳು ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಆಸಕ್ತಿ ತೋರಿಸಿವೆʼ ಎಂದು ಪಾಟೀಲ ಅವರು ಹೇಳಿದ್ದಾರೆ.

ಇನ್ವೆಸ್ಟ್‌ ಕರ್ನಾಟಕದ ಅಂಗವಾಗಿ ಜಾಗತಿಕ ಉದ್ಯಮಿಗಳನ್ನು ಸಂಪರ್ಕಿಸಲು, ಹೂಡಿಕೆದಾರರನ್ನು ಆಹ್ವಾನಿಸಲು ರಾಜ್ಯ ಸರ್ಕಾರವು ನೆದರ್‌ಲ್ಯಾಂಡ್ಸ್‌ನ  ಹೇಗ್‌ನಲ್ಲಿ ಯಶಸ್ವಿಯಾಗಿ ರೋಡ್‌ಷೋ ನಡೆಸಿದೆ. ರೋಡ್‌ಷೋದಲ್ಲಿ ರಾಜ್ಯದ ನಿಯೋಗವು ನೆದರ್‌ಲ್ಯಾಂಡ್ಸ್‌ನ ಉದ್ದಿಮೆ ಪ್ರಮುಖರ  ಜೊತೆ ಸಮಾಲೋಚನೆ ನಡೆಸಿ, ಮುಂದಿನ ವರ್ಷದ ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಭಾಗವಹಿಸಲು ಆಹ್ವಾನ ನೀಡಿತು.

ನಾವೀನ್ಯತೆ, ಎಲೆಕ್ಟ್ರಾನಿಕ್ಸ್‌ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರಗಳಲ್ಲಿ ಕರ್ನಾಟಕವು ಮುಂಚೂಣಿಯಲ್ಲಿ ಇರುವುದನ್ನು ರೋಡ್‌ಷೋದಲ್ಲಿ ವಿವರಿಸಲಾಗಿದೆ. ರಾಜ್ಯದಲ್ಲಿನ ಸದೃಢ ಮೂಲಸೌಲಭ್ಯಗಳು, ನಾವೀನ್ಯತೆ ಆಧಾರಿತ ಅರ್ಥವ್ಯವಸ್ಥೆ, ಹೂಡಿಕೆದಾರ ಸ್ನೇಹಿ ಕೈಗಾರಿಕಾ ನೀತಿಗಳು ನೆದರ್‌ಲ್ಯಾಂಡ್ಸ್‌ನ ವಾಣಿಜ್ಯ ಹಾಗೂ ಕೈಗಾರಿಕಾ ಸಂಘಟನೆಗಳ ಗಮನ ಸೆಳೆದಿವೆ.  
ನೆದರ್‌ಲ್ಯಾಂಡ್ಸ್‌ನಲ್ಲಿನ ಭಾರತದ ರಾಯಭಾರಿ ಕುಮಾರ್ ತುಹಿನ್ ಅವರು ರೋಡ್‌ಷೋದಲ್ಲಿ ಮಾತನಾಡಿ, ಬಂಡವಾಳ ಹೂಡಿಕೆಯ ಪ್ರಮುಖ ತಾಣವಾಗಿ ಕರ್ನಾಟಕವು ವಿಶ್ವದ ಗಮನ ಸೆಳೆಯುತ್ತಿರುವುದನ್ನು ವಿವರಿಸಿದರು.

ಎಲೆಕ್ಟ್ರಾನಿಕ್ಸ್, ನವೀಕರಿಸಬಹುದಾದ ಇಂಧನ ಮತ್ತು ಸುಧಾರಿತ ತಯಾರಿಕೆಯಂತಹ ಪ್ರಮುಖ ಕ್ಷೇತ್ರಗಳಲ್ಲಿ ನೆದರ್‌ಲ್ಯಾಂಡ್ಸ್‌ನ ಕಂಪನಿಗಳಿಗೆ ಕರ್ನಾಟಕದಲ್ಲಿ ವಿಪುಲ ಅವಕಾಶಗಳು ಇರುವುದರ ಬಗ್ಗೆ ಮಾಹಿತಿ ನೀಡಲಾಯಿತು. ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆ  ತ್ವರಿತಗೊಳಿಸಲು ವಿನ್ಯಾಸಗೊಳಿಸಲಾಗಿರುವ ಕ್ವಿನ್‌ ಸಿಟಿ ಯೋಜನೆ ಸೇರಿದಂತೆ ರಾಜ್ಯದ ದೂರದೃಷ್ಟಿಯ ಉಪಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿತ್ತು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಅವರು ಈ ಸಂದರ್ಭದಲ್ಲಿ ಇದ್ದರು.

ರಾಜಕೀಯ

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ಮುಂದೆ ಬಿಜೆಪಿ, ಜೆಡಿಎಸ್ ವಿಲೀನ ಸಾಧ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

“ಕುಮಾರಸ್ವಾಮಿ ಅವರ ಧೋರಣೆ ನೋಡುತ್ತಿದ್ದರೆ, ಸದ್ಯದಲ್ಲೇ ಜೆಡಿಎಸ್ ಪಕ್ಷ ಬಿಜೆಪಿ ಜತೆ ವಿಲೀನವಾಗುವ ಸಾಧ್ಯತೆ ಇದೆ. ವಿಲೀನವಾದರೆ ನಮಗೂ ಒಳ್ಳೆಯದೇ. ನಾವೂ ನೇರವಾಗಿ ಬಿಜೆಪಿ ಜೊತೆ ಹೋರಾಟ ಮಾಡಬಹುದು. ಆಗ 'ಆಟಕ್ಕೆ ಮೂರು ಪಕ್ಷ,

[ccc_my_favorite_select_button post_id="118247"]
ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ ಕ್ಯಾಲೆಂಡರ್ ಬಿಡುಗಡೆ

ರಾಜ್ಯ ಸರ್ಕಾರಿ ನೌಕರ ಸಂಘದ (State Government Employees Association) 2026ನೇ ವರ್ಷದ ಕ್ಯಾಲೆಂಡರ್ (Calendar) ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Cmsiddaramaiah) ಅವರು ಬಿಡುಗಡೆ ಮಾಡಿ, ಸರ್ಕಾರಿ ನೌಕರರಿಗೆ ಹೊಸ ವರ್ಷದ ಶುಭಾಶಯ ಕೋರಿದರು.‌

[ccc_my_favorite_select_button post_id="117770"]
ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ, ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ: ಮೋಹನ್ ಭಾಗವತ್

ಭಾರತ ಹಿಂದೂ ರಾಷ್ಟ್ರ ಎಂಬುದು ಸತ್ಯ. ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಅಗತ್ಯವಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಮುಖ್ಯಸ್ಥ ಮೋಹನ್ ಭಾಗವತ್ (Mohan Bhagwat) ಹೇಳಿದ್ದಾರೆ.

[ccc_my_favorite_select_button post_id="117699"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ಕ್ರೀಡಾಪಟುಗಳಿಂದ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾ ಸ್ಪಧೆಯಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ (Athletes) 2025-26ನೇ ಸಾಲಿನಲ್ಲಿ ಪ್ರೋತ್ಸಾಹಧನಕ್ಕೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (Applications invited).

[ccc_my_favorite_select_button post_id="118180"]
ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ದೊಡ್ಡಬಳ್ಳಾಪುರ: ಕಿಡಿಗೇಡಿಗಳ ಹಾವಳಿ.. ಕಾರಿನ ಗಾಜು ಪುಡಿಪುಡಿ..!

ಮನೆಯ ಮುಂದೆ ನಿಲ್ಲಿಸಿದ್ದ ಕಾರಿನ ಗಾಜನ್ನು ಹೊಡೆಯುವ ಮೂಲಕ ಕಿಡಿಗೇಡಿಗಳು ಉಪಟಳ (Miscreant's annoyance) ಮೆರೆದಿರುವ ಘಟನೆ ಬುಧವಾರ ರಾತ್ರಿ ತಾಲೂಕಿನ ಆರೂಢಿ ಗ್ರಾಮದಲ್ಲಿ ನಡೆ

[ccc_my_favorite_select_button post_id="118236"]
ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ದೊಡ್ಡಬಳ್ಳಾಪುರ: ಕಾರು ಡಿಕ್ಕಿ.. ಮಹಿಳೆಗೆ ತೀವ್ರ ಗಾಯ

ಇತ್ತೀಚೆಗಷ್ಟೇ ಜೆಸಿಬಿಗೆ (JCB) ಕಾರು (Car) ಡಿಕ್ಕಿ ಹೊಡೆದಿದ್ದ ಘಟನೆ ಮಾಸುವ ಮುನ್ನವೇ, ಅದೇ ಸ್ಥಳದಲ್ಲಿ ಕಾರು ಮಹಿಳೆಗೆ ಡಿಕ್ಕಿ ಹೊಡೆದು (Accident) ಪರಾರಿಯಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ ಮೆಣಸಿ ಗೇಟ್ ಬಳಿ ಸಂಭವಿಸಿದೆ.

[ccc_my_favorite_select_button post_id="118137"]

ಆರೋಗ್ಯ

ಸಿನಿಮಾ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ರಾಯಭಾರಿಯಾಗಿ ಪ್ರಕಾಶ್ ರಾಜ್ ನೇಮಕ

ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕ ಪ್ರಕಾಶ್ ರಾಜ್ (Prakash Raj) ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ (Brand Ambassador) ಆಗಿ ನೇಮಿಸಲಾಗಿದೆ.

[ccc_my_favorite_select_button post_id="117722"]
error: Content is protected !!