ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ದೊಡ್ಡಬಳ್ಳಾಪುರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇಲ್ಲಿವೆ ನೋಡಿ..!| Winter session

ಬೆಳಗಾವಿ: ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ (Winter session) ಬೆಳಗಾವಿಯ ಸುವರ್ಣ ವಿಧಾನಸೌಧ ದಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ.

ಮೊದಲಿಗೆ ಸಂತಾಪ ಸೂಚನಾ ನಿರ್ಣಯ ಮಂಡನೆಮಾಡಲಿದ್ದು,ಕಳೆದಅಧಿವೇಶನದಿಂದ ಈಚೆಗೆ ನಿಧನಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು.

ಸದನದಲ್ಲಿ ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬಗರ್ ಹುಕುಂ ಸಮಿತಿಯಲ್ಲಿ ಸ್ವೀಕೃತಗೊಂಡಿರುವ ಅರ್ಜಿಗಳು ಎಷ್ಟು..? ಈ ಪೈಕಿ ಮಂಜೂರಾದ, ವಿಲೇವಾರಿಯಾದ ಹಾಗೂ ತಿರಸ್ಕೃತಗೊಂಡ ಅರ್ಜಿಗಳಷ್ಟು..?

ಮಂಜೂರಾಗಿರುವ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ; ಸಾಗುವಳಿ ಚೀಟಿ ವಿತರಿಸುವಲ್ಲಿ ವಿಳಂಬವಾಗಲು ಕಾರಣಗಳೇನು..?

ಮಂಜೂರಾಗಿರುವ ಅರ್ಜಿಗಳಿಗೆ ಸಾಗುವಳಿ ಚೀಟಿ ಮತ್ತು ಖಾತೆಯನ್ನು ರೈತರಿಗೆ ಅತೀ ಜರೂರಾಗಿ ನೀಡಲು ಸರ್ಕಾರದಿಂದ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ..?

ಬಾಕಿಯಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ; ಯಾವ ಕಾಲಮಿತಿಯೊಳಗೆ ಸಾಗುವಳಿ ಚೀಟಿ ಮತ್ತು ಖಾತೆ ವಿತರಿಸಲಾಗುವುದು.? ಎಂಬುದಾಗಿ ಶಾಸಕ ಧೀರಜ್ ಮುನಿರಾಜು ಕಂದಾಯ ಸಚಿವರನ್ನು ಪ್ರಶ್ನಿಸಲಿದ್ದಾರೆ.

ಉಳಿದಂತೆ ಲಿಖಿತ ಮೂಲಕ ಉತ್ತರಿಸುವ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕಳೆದ 3 ವರ್ಷಗಳಿಂದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳು ಯಾವುವು..? (ಕಾಮಗಾರಿವಾರು ಸಂಪೂರ್ಣ ಮಾಹಿತಿ ನೀಡುವುದು)

ಕಳೆದ 3 ವರ್ಷಗಳಲ್ಲಿ ಒಟ್ಟು ಎಷ್ಟು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ; ಯಾವ ಯಾವ ಗುತ್ತಿಗೆದಾರರಿಗೆ ಎಲ್‌ 1 ನೀಡಲಾಗಿದೆ ; (ಎಲ್ಲಾ ಕಾಮಗಾರಿಗಳ ಎಲ್ 1 ಗುತ್ತಿಗೆದಾರರ ಸಹಿತ ಟೆಂಡ‌ರ್ ಆಗಿರುವ ಮಾಹಿತಿಯನ್ನು ಒದಗಿಸುವುದು).

ಸದರಿ ಕಾಮಗಾರಿಗಳ ಪೈಕಿ ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಮತ್ತು ಸ್ಥಗಿತಗೊಂಡಿರುವ ಕಾಮಗಾರಿಗಳು ಯಾವುವು (ಕಾಮಗಾರಿವಾರು ವಿವರ ನೀಡುವುದು).

ದೊಡ್ಡಬಳ್ಳಾಪುರ ತಾಲ್ಲೂಕಿನ ಕೆ.ಸಿ.ಪಿ ಸರ್ಕಲ್‌ನಿಂದ ರಂಗಪ್ಪ ಸರ್ಕಲ್‌ವರೆಗೆ ಕಾಮಗಾರಿಯ ಟೆಂಡರ್ ಪಡೆದಿರುವ ಗುತ್ತಿಗೆದಾರರು ಯಾರು..? ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದಲ್ಲದೆ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ, ಸದರಿ ಗುತ್ತಿಗೆದಾರಣ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳೇನು ? ಎಂಬುದನ್ನು ಲೋಕೋಪಯೋಗಿ ಇಲಾಖೆ ಸಚಿವರನ್ನು ಪ್ರಶ್ನಿಸಿದ್ದಾರೆ.

ಹಾಗೆ ಕಂದಾಯ ಸಚಿವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಎಷ್ಟು ಸರ್ಕಾರಿ ಭೂಮಿ ಇದೆ..? ಸದರಿ ಜಮೀನಿನ ವಿಸ್ತೀರ್ಣವೆಷ್ಟು.? ಅನುಭವದಾರರು ಯಾರು.? (ಗ್ರಾಮವಾರು, ಸರ್ವೇ ನಂ. ವಾರು ಸಂಪೂರ್ಣ ವಿವರ ನೀಡುವುದು)

ಕಳೆದ 3 ವರ್ಷಗಳಿಂದ ಎಷ್ಟು ಸರ್ಕಾರಿ ಭೂಮಿಯನ್ನು ಯಾವ ಯಾವ ಉದ್ದೇಶಕ್ಕಾಗಿ ಬೇರೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಹಾಗೂ ಮೀಸಲಿಡಲಾಗಿದೆ.? (ಇಲಾಖಾವಾರು ವಿವರ ನೀಡುವುದು)

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಎಲ್ಲಾ ಸರ್ಕಾರಿ ಗೋಮಾಳಗಳೆಷ್ಟು..?(ಸಂಪೂರ್ಣ ಹಕ್ಕುದಾರರ ಮಾಹಿತಿ ನೀಡುವುದು)

ಪ್ರಸ್ತುತ ಗೋಮಾಳದ ಸ್ಥಿತಿಗತಿಯೇನು..? ಇದುವರೆಗೂ ಎಷ್ಟು ಗೋಮಾಳವು ಒತ್ತುವರಿಯಾಗಿದೆ ? (ಗೋಮಾಳದ ಒತ್ತುವರಿದಾರರ ಹೆಸರು ಸಹಿತ ಸಂಪೂರ್ಣ ವಿವರ ನೀಡುವುದು ಎಂದು ಪ್ರಶ್ನಿಸಿದ್ದಾರೆ.

ಮುಂಜರಾಯಿ ಇಲಾಖೆ ಸಚಿವರ ಕುರಿತು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮುಜರಾಯಿ ಇಲಾಖೆಗೆ ಒಳಪಡುವ ಆಸ್ತಿಯೆಷ್ಟು..? (ಹೋಬಳಿವಾರು ಆಸಿ ಸಂಪೂರ್ಣ ವಿವರ ನೀಡುವುದು)

ಈ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳಿಗೆ ಹೆಚ್ಚಿನ ಅನುದಿ ನೀಡಲು ಸರ್ಕಾರವು ಕೈಗೊಳ್ಳುವ ಕ್ರಮಗಳೇನು..? ಎಂದು ಶಾಸಕ ಧೀರಜ್ ಮುನಿರಾಜು ಲಿಖಿತ ರೂಪದಲ್ಲಿ ಉತ್ತರವನ್ನು ಕೋರಿದ್ದಾರೆನ್ನಲಾದ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ದೊರೆತಿದೆ.

ರಾಜಕೀಯ

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ ಮನವಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡಗಳ ಎತ್ತರದ ಮಿತಿ ಮರುಪರಿಶೀಲಿಸಲು ಕೇಂದ್ರ ಸಚಿವರಿಗೆ

“ಬೆಂಗಳೂರಿನಲ್ಲಿರುವ ಹೆಚ್ಎಎಲ್, ಜಕ್ಕೂರು, ವಾಯುನೆಲೆ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಕಟ್ಟಡ ಎತ್ತರದ ಮಿತಿಯಿಂದ ಅಭಿವೃದ್ಧಿ ಕಾಮಗಾರಿಗೆ ತೊಡಕಾಗಿದ್ದು, ಈ ಮಿತಿಯ ಬಗ್ಗೆ ಪರಿಶೀಲನೆ ನಡೆಸುವಂತೆ ಕೇಂದ್ರ ನಾಗರೀಕ ವಿಮಾನಯಾನ ಸಚಿವರಿಗೆ ಮನವಿ

[ccc_my_favorite_select_button post_id="120305"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಪೊಲೀಸ್‌ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು..!: ಲಾಕಪ್ ಡೆತ್ ಆರೋಪ

ಯುಗಾದಿ ಹಬ್ಬದ ದಿನ ಜೂಜಾಟದಲ್ಲಿ ತೊಡಗಿದ್ದವರ ಬಂಧಿಸಿದ್ದ ಪೊಲೀಸರು ಇಕ್ಕಟ್ಟಿಗೆ ಸಿಲುಕಿದ್ದು, ಬಂಧಿತರಲ್ಲಿ ಓರ್ವ ಸಾವನಪ್ಪಿರುವ ಕಾರಣ, ಲಾಕಪ್ ಡೆತ್ (lockup death) ಆರೋಪ ಕೇಳಿಬಂದಿದೆ.

[ccc_my_favorite_select_button post_id="120325"]
ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ದೊಡ್ಡಬಳ್ಳಾಪುರ: ಬೆಳ್ಳಂಬೆಳಗ್ಗೆ ಕ್ಯಾಂಟರ್..ಕಂಟೈನರ್ ನಡುವೆ ಅಪಘಾತ.. ಬೈಕ್ ಸವಾರನಿಗೆ ಗಂಭೀರ ಪೆಟ್ಟು..!

ಬೆಳ್ಳಂಬೆಳಗ್ಗೆ ಕ್ಯಾಂಟರ್ ಹಾಗೂ ಕಂಟೈನರ್ ನಡುವೆ ಡಿಕ್ಕಿ ಸಂಭವಿಸಿ (Accident), ಬೈಕ್ ಸವಾರ ಗಾಯಗೊಂಡಿರುವ ಘಟನೆ ಚನ್ನಾದೇವಿ ಅಗ್ರಹಾರದ ಬಳಿ ಇಂದು ಮುಂಜಾನೆ 5,30 ರ ವೇಳೆಗೆ ಸಂಭವಿಸಿದೆ.

[ccc_my_favorite_select_button post_id="120173"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!