ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ: ದೊಡ್ಡಬಳ್ಳಾಪುರಕ್ಕೆ ಸಂಬಂಧಿಸಿದ ಪ್ರಶ್ನೆಗಳು ಇಲ್ಲಿವೆ ನೋಡಿ..!| Winter session

ಬೆಳಗಾವಿ: ವಿಧಾನಮಂಡಲದ ಚಳಿಗಾಲದ 11ನೇ ಅಧಿವೇಶನ (Winter session) ಬೆಳಗಾವಿಯ ಸುವರ್ಣ ವಿಧಾನಸೌಧ ದಲ್ಲಿ ಸೋಮವಾರದಿಂದ ಆರಂಭವಾಗಲಿದೆ. ಬೆಳಗ್ಗೆ 11ಕ್ಕೆ ಅಧಿವೇಶನ ಆರಂಭವಾಗಲಿದೆ.

ಮೊದಲಿಗೆ ಸಂತಾಪ ಸೂಚನಾ ನಿರ್ಣಯ ಮಂಡನೆಮಾಡಲಿದ್ದು,ಕಳೆದಅಧಿವೇಶನದಿಂದ ಈಚೆಗೆ ನಿಧನಹೊಂದಿದ ಗಣ್ಯರಿಗೆ ಸಂತಾಪ ಸೂಚಿಸಲಾಗುವುದು.

ಸದನದಲ್ಲಿ ದೊಡ್ಡಬಳ್ಳಾಪುರ ತಾಲೂಕಿಗೆ ಸಂಬಂಧಿಸಿದಂತೆ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಬಗರ್ ಹುಕುಂ ಸಮಿತಿಯಲ್ಲಿ ಸ್ವೀಕೃತಗೊಂಡಿರುವ ಅರ್ಜಿಗಳು ಎಷ್ಟು..? ಈ ಪೈಕಿ ಮಂಜೂರಾದ, ವಿಲೇವಾರಿಯಾದ ಹಾಗೂ ತಿರಸ್ಕೃತಗೊಂಡ ಅರ್ಜಿಗಳಷ್ಟು..?

ಮಂಜೂರಾಗಿರುವ ಅರ್ಜಿಗಳ ಪೈಕಿ ಎಷ್ಟು ಅರ್ಜಿಗಳಿಗೆ ಸಾಗುವಳಿ ಚೀಟಿ ವಿತರಿಸಲಾಗಿದೆ; ಸಾಗುವಳಿ ಚೀಟಿ ವಿತರಿಸುವಲ್ಲಿ ವಿಳಂಬವಾಗಲು ಕಾರಣಗಳೇನು..?

ಮಂಜೂರಾಗಿರುವ ಅರ್ಜಿಗಳಿಗೆ ಸಾಗುವಳಿ ಚೀಟಿ ಮತ್ತು ಖಾತೆಯನ್ನು ರೈತರಿಗೆ ಅತೀ ಜರೂರಾಗಿ ನೀಡಲು ಸರ್ಕಾರದಿಂದ ಯಾವ ಕ್ರಮ ಕೈಗೊಳ್ಳಲಾಗುತ್ತಿದೆ..?

ಬಾಕಿಯಿರುವ ಅರ್ಜಿಗಳ ವಿಲೇವಾರಿಗೆ ಸರ್ಕಾರ ಯಾವ ಕ್ರಮ ಕೈಗೊಳ್ಳುತ್ತದೆ; ಯಾವ ಕಾಲಮಿತಿಯೊಳಗೆ ಸಾಗುವಳಿ ಚೀಟಿ ಮತ್ತು ಖಾತೆ ವಿತರಿಸಲಾಗುವುದು.? ಎಂಬುದಾಗಿ ಶಾಸಕ ಧೀರಜ್ ಮುನಿರಾಜು ಕಂದಾಯ ಸಚಿವರನ್ನು ಪ್ರಶ್ನಿಸಲಿದ್ದಾರೆ.

ಉಳಿದಂತೆ ಲಿಖಿತ ಮೂಲಕ ಉತ್ತರಿಸುವ ಪಟ್ಟಿಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಕಳೆದ 3 ವರ್ಷಗಳಿಂದ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಲೋಕೋಪಯೋಗಿ ಇಲಾಖೆಯಿಂದ ಕೈಗೊಂಡ ಕಾಮಗಾರಿಗಳು ಯಾವುವು..? (ಕಾಮಗಾರಿವಾರು ಸಂಪೂರ್ಣ ಮಾಹಿತಿ ನೀಡುವುದು)

ಕಳೆದ 3 ವರ್ಷಗಳಲ್ಲಿ ಒಟ್ಟು ಎಷ್ಟು ಕಾಮಗಾರಿಗಳಿಗೆ ಟೆಂಡರ್ ಕರೆಯಲಾಗಿದೆ ; ಯಾವ ಯಾವ ಗುತ್ತಿಗೆದಾರರಿಗೆ ಎಲ್‌ 1 ನೀಡಲಾಗಿದೆ ; (ಎಲ್ಲಾ ಕಾಮಗಾರಿಗಳ ಎಲ್ 1 ಗುತ್ತಿಗೆದಾರರ ಸಹಿತ ಟೆಂಡ‌ರ್ ಆಗಿರುವ ಮಾಹಿತಿಯನ್ನು ಒದಗಿಸುವುದು).

ಸದರಿ ಕಾಮಗಾರಿಗಳ ಪೈಕಿ ಪೂರ್ಣಗೊಂಡಿರುವ, ಪ್ರಗತಿಯಲ್ಲಿರುವ ಮತ್ತು ಸ್ಥಗಿತಗೊಂಡಿರುವ ಕಾಮಗಾರಿಗಳು ಯಾವುವು (ಕಾಮಗಾರಿವಾರು ವಿವರ ನೀಡುವುದು).

ದೊಡ್ಡಬಳ್ಳಾಪುರ ತಾಲ್ಲೂಕಿನ ಕೆ.ಸಿ.ಪಿ ಸರ್ಕಲ್‌ನಿಂದ ರಂಗಪ್ಪ ಸರ್ಕಲ್‌ವರೆಗೆ ಕಾಮಗಾರಿಯ ಟೆಂಡರ್ ಪಡೆದಿರುವ ಗುತ್ತಿಗೆದಾರರು ಯಾರು..? ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿರುವುದಲ್ಲದೆ ಕಾಮಗಾರಿ ಸ್ಥಗಿತಗೊಂಡಿರುವ ಹಿನ್ನಲೆಯಲ್ಲಿ, ಸದರಿ ಗುತ್ತಿಗೆದಾರಣ ವಿರುದ್ಧ ಸರ್ಕಾರ ಕೈಗೊಂಡಿರುವ ಕ್ರಮಗಳೇನು ? ಎಂಬುದನ್ನು ಲೋಕೋಪಯೋಗಿ ಇಲಾಖೆ ಸಚಿವರನ್ನು ಪ್ರಶ್ನಿಸಿದ್ದಾರೆ.

ಹಾಗೆ ಕಂದಾಯ ಸಚಿವರಿಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು ಎಷ್ಟು ಸರ್ಕಾರಿ ಭೂಮಿ ಇದೆ..? ಸದರಿ ಜಮೀನಿನ ವಿಸ್ತೀರ್ಣವೆಷ್ಟು.? ಅನುಭವದಾರರು ಯಾರು.? (ಗ್ರಾಮವಾರು, ಸರ್ವೇ ನಂ. ವಾರು ಸಂಪೂರ್ಣ ವಿವರ ನೀಡುವುದು)

ಕಳೆದ 3 ವರ್ಷಗಳಿಂದ ಎಷ್ಟು ಸರ್ಕಾರಿ ಭೂಮಿಯನ್ನು ಯಾವ ಯಾವ ಉದ್ದೇಶಕ್ಕಾಗಿ ಬೇರೆ ಇಲಾಖೆಗೆ ಹಸ್ತಾಂತರಿಸಲಾಗಿದೆ ಹಾಗೂ ಮೀಸಲಿಡಲಾಗಿದೆ.? (ಇಲಾಖಾವಾರು ವಿವರ ನೀಡುವುದು)

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿರುವ ಎಲ್ಲಾ ಸರ್ಕಾರಿ ಗೋಮಾಳಗಳೆಷ್ಟು..?(ಸಂಪೂರ್ಣ ಹಕ್ಕುದಾರರ ಮಾಹಿತಿ ನೀಡುವುದು)

ಪ್ರಸ್ತುತ ಗೋಮಾಳದ ಸ್ಥಿತಿಗತಿಯೇನು..? ಇದುವರೆಗೂ ಎಷ್ಟು ಗೋಮಾಳವು ಒತ್ತುವರಿಯಾಗಿದೆ ? (ಗೋಮಾಳದ ಒತ್ತುವರಿದಾರರ ಹೆಸರು ಸಹಿತ ಸಂಪೂರ್ಣ ವಿವರ ನೀಡುವುದು ಎಂದು ಪ್ರಶ್ನಿಸಿದ್ದಾರೆ.

ಮುಂಜರಾಯಿ ಇಲಾಖೆ ಸಚಿವರ ಕುರಿತು, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿರುವ ಒಟ್ಟು ಮುಜರಾಯಿ ಇಲಾಖೆಗೆ ಒಳಪಡುವ ಆಸ್ತಿಯೆಷ್ಟು..? (ಹೋಬಳಿವಾರು ಆಸಿ ಸಂಪೂರ್ಣ ವಿವರ ನೀಡುವುದು)

ಈ ವಿಧಾನಸಭಾ ಕ್ಷೇತ್ರದ ದೇವಸ್ಥಾನಗಳಿಗೆ ಹೆಚ್ಚಿನ ಅನುದಿ ನೀಡಲು ಸರ್ಕಾರವು ಕೈಗೊಳ್ಳುವ ಕ್ರಮಗಳೇನು..? ಎಂದು ಶಾಸಕ ಧೀರಜ್ ಮುನಿರಾಜು ಲಿಖಿತ ರೂಪದಲ್ಲಿ ಉತ್ತರವನ್ನು ಕೋರಿದ್ದಾರೆನ್ನಲಾದ ಪಟ್ಟಿ ಸಾಮಾಜಿಕ ಜಾಲತಾಣದಲ್ಲಿ ದೊರೆತಿದೆ.

ರಾಜಕೀಯ

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ TAPMCS ಚುನಾವಣೆ; ಕಣದಲ್ಲಿ ಉಳಿದವರು ಎಷ್ಟು ಗೊತ್ತೆ..!?

ದೊಡ್ಡಬಳ್ಳಾಪುರ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ (TAPMCS) ಚುನಾವಣೆಗೆ ಸಲ್ಲಿಕೆಯಾಗಿದ್ದ ನಾಮಪತ್ರಗಳನ್ನು ಹಿಂದಕ್ಕೆ ಪಡೆಯಲು ಕೊನೆಯ ದಿನವಾದ ಸೋಮವಾರ ಅಂತಿಮ ಕಣದಲ್ಲಿ ‘ಎ’ ತರಗತಿಯಿಂದ 9, ‘ಬಿ’ ತರಗತಿಯಿಂದ 19 ಜನ ಉಳಿದಿದ್ದಾರೆ.

[ccc_my_favorite_select_button post_id="115412"]
ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ಪೊಲೀಸರಿಗೆ ನೂತನ ಕ್ಯಾಪ್..!

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವಿಧಾನಸೌಧದ ಬ್ಯಾಂಕ್ವೆಟ್ ಆಯೋಜಿಸಿದ್ದ ಪೊಲೀಸ್ ಸಿಬ್ಬಂದಿಯ ನೂತನ ಪೀಕ್ ಕ್ಯಾಚ್ ವಿತರಣೆ: Cmsiddaramaiah, D.K.Shivakumar

[ccc_my_favorite_select_button post_id="115427"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರರಿಬ್ಬರ ದುರ್ಮರಣ

ಇಂದು ಬೆಳ್ಳಂಬೆಳಗ್ಗೆ ಸಂಭವಿಸಿದ ದ್ವಿಚಕ್ರ ವಾಹನ ಅಪಘಾತದಲ್ಲಿ (Accident) ಗಂಭೀರವಾಗಿ ಗಾಯಗೊಂಡ ಇಬ್ಬರು ಸವಾರರು ಸಾವನ್ನಪ್ಪಿರುವ ತಾಲೂಕಿನ ರಾಮಯ್ಯನಪಾಳ್ಯ ಬಳಿ ನಡೆದಿದೆ.

[ccc_my_favorite_select_button post_id="115419"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!