ಕಾಣೆಯಾಗಿವೆ ದೊಡ್ಡಬಳ್ಳಾಪುರದ ಎರಡು 108 ಆಂಬುಲೆನ್ಸ್..! ಹುಡುಕೋರ್ ಯಾರು..?| 108 ambulance

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ 108 ಆಂಬುಲೆನ್ಸ್ (108 ambulance) ಸಮಸ್ಯೆ ಮತ್ತೆ ಮಿತಿಮೀರಿದ್ದು, ಕೇವಲ ಮೂರು ಆಂಬುಲೆನ್ಸ್ ಇಡೀ ತಾಲೂಕಿನ ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇತ್ತೀಚೆಗಷ್ಟೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವ ತುರ್ತು ಸಮಯದಲ್ಲಿ 108 ಆಂಬುಲೆನ್ಸ್ ಸಿಗದೆ ಸಾವನಪ್ಪಿರುವ ಪ್ರಕರಣ ತಾಲೂಕಿನಲ್ಲಿ 108 ಆಂಬುಲೆನ್ಸ್ ಸಮಸ್ಯೆ ಎಷ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿತ್ತು.

ಈ ಕುರಿತು ಕನ್ನಡ ಪರ ಸಂಘಟನೆಗಳು ಅಧಿಕಾರಿಗಳು, ಜನಪ್ರತಿನಿದಿಗಳ ಗಮನಕ್ಕೂ ತಂದಿದ್ದರು. ನಂತರ ಏಕಾಏಕಿ ಕಾಣೆಯಾಗಿದ್ದ ಅಂಬುಲೆನ್ಸ್ ರಸ್ತೆಗಿಳಿದವು. ಆದರೆ ಕೇವಲ ಒಂದು ವಾರದ ನಂತರ ಎರಡು ಆಂಬುಲೆನ್ಸ್ ಕಾಣೆಯಾಗಿದ್ದು, ಹಲವು ತಿಂಗಳು ಕಳೆದರು ಪತ್ತೆಯಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನ ನಗರ, ಘಾಟಿ ಮಧುರೆ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಒಟ್ಟು ಐದು 108 ಅಂಬುಲೆನ್ಸ್ ಕಾರ್ಯ ನಿರ್ವಹಿಸಬೇಕಿದೆ. ಆದರೆ ಪ್ರಸ್ತುತ ಕಾರ್ಯನಿರ್ವವಹಿಸುತ್ತಿರುವುದು ಮೂರು ಆಂಬುಲೆನ್ಸ್ ಮಾತ್ರ.

ನಿರ್ಲಕ್ಷ್ಯ; 108 ಆಂಬುಲೆನ್ಸ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ತುರ್ತು ಸಂದರ್ಭದಲ್ಲಿ ವರದಾನವಾಗಿದ್ದ ಯೋಜನೆ ಸಂಪೂರ್ಣವಾಗಿ ಹಳ್ಳಹಿಡಿಯುತ್ತಿದೆ ಎಂದು ಪದೇ ಪದೇ ಮಾಧ್ಯಮಗಳು, ಸಂಘ ಸಂಸ್ಥೆಗಳು ದನಿ ಎತ್ತಬೇಕಿದೆ.

ಪ್ರಸ್ತುತ ದೊಡ್ಡಬೆಳವಂಗಲ, ಎಸ್‌ಎಸ್ ಘಾಟಿ 108 ಅಂಬುಲೆನ್ಸ್ ದುರಸ್ತಿಗೆ ತೆರಳಿ ಹಲವು ತಿಂಗಳು ಕಳೆದರು ಪತ್ತೆಯಿಲ್ಲವಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದಾಗ ಪ್ರತ್ಯಕ್ಷವಾಗಿ ಮತ್ತೆ ಕಣ್ಮರೆಯಾಗುತ್ತವೆ.

ಆಗಸ್ಟ್ 09 ರಂದು ಟಿಬಿ ವೃತ್ತದ ಬಳಿ ಮೊಗಚಿ ಬಿದ್ದ ವೇಳೆ ಗ್ಯಾರೆಜ್ ಸೇರಿದ ಘಾಟಿ ಸುಬ್ರಮಣ್ಯ ವ್ಯಾಪ್ತಿಯ ಅಂಬುಲೆನ್ಸ್ 5 ತಿಂಗಳುಗಳು ಕಳೆದರು ಇದುವರೆಗೂ ಪತ್ತೆ ಇಲ್ಲ ಎಂದರೆ ಇದರ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಎಷ್ಟಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಉಳಿದಿರುವ ದೊಡ್ಡಬಳ್ಳಾಪುರ ನಗರ ಮಧುರೆ, ಸಾಸಲು ವ್ಯಾಪ್ತಿಗೆ ಸೇರಿದ 108 ಅಂಬುಲೆನ್ಸ್ಗಳು ಇಡೀ ತಾಲೂಕು ಅಲ್ಲದೆ ಅಕ್ಕಪಕ್ಕದ ತಾಲೂಕಿಗೂ ಸೇವೆ ನೀಡಬೇಕಾದ ಅನಿವಾರ್ಯತೆಯಲ್ಲಿವೆ‌

ತಾಲೂಕಿನಲ್ಲಿ ಖಾಸಗಿ ಆಂಬುಲೆನ್ಸ್ ಹೆಚ್ಚಾಗಿದ್ದು, ಕೆಲವರ ಲಾಭಿಯಿಂದಾಗಿ 108 ಆಂಬುಲೆನ್ಸ್ ವ್ಯವಸ್ಥೆ ಹಾಳಾಗುತ್ತಿದೆ ಎಂಬ ಆರೋಪ ಕೂಡ ವ್ಯಾಪಕವಾಗಿದೆ.

ಶಡ್ಯಂತ್ರದ ಶಂಕೆ: ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ಆದರೆ ಸರ್ಕಾರಿ ಆಸ್ಪತ್ರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಹಿನ್ನಡೆಯಾಗುತ್ತದೆ. ಅದೇ ಖಾಸಗಿ ಆಂಬುಲೆನ್ಸ್ ಆದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭ ಎಂಬ ದುರುದ್ದೇಶದಿಂದ 108 ಆಂಬುಲೆನ್ಸ್ ವ್ಯವಸ್ಥೆ ಹಾಳುಗೆಡವಲು ಕೆಲ ಪ್ರಭಾವಿಗಳು ಈ ರೀತಿ ಶಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣ್ಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಆರೋಪಿಸಿದ್ದಾರೆ.

ಇದೇ ಕಾರಣಕ್ಕೆ 108 ಆಂಬುಲೆನ್ಸ್ ಸೌಲಭ್ಯ ಸಮರ್ಪಕವಾಗಿ ದೊರಕುವಂತಾಗಲು ಯಾರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ವ್ಯಾಪಕವಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಮಹತ್ವದ ಸಭೆಗೆ ಪ್ರಧಾನಿ ಮೋದಿ ಗೈರು..! ವಿಪಕ್ಷಗಳ ಆಕ್ರೋಶ

ಪಶ್ಚಿಮ ಏಷ್ಯಾ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಮುಖ ಸಂಸತ್ತಿನ ಕಲಾಪಗಳು ಮತ್ತು ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಗೈರುಹಾಜರಿ ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾಗಿದೆ, ಅವರು ಅವರು ಹೊಣೆಗಾರಿಕೆಯಿಂದ ತಪ್ಪಿಸಿಕೊಳ್ಳುತ್ತಿದ್ದಾರೆ

[ccc_my_favorite_select_button post_id="120446"]
ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ಸಿದ್ದರಾಮಯ್ಯ ನವರ ದಿಕ್ಕೆಟ್ಟ ನೀತಿಗಳು ಸರ್ಕಾರಿ ನೌಕರರನ್ನು ಬೀದಿಗೆ ತಂದಿವೆ;ಆರ್. ಅಶೋಕ

ತುಘಲಕ್‌ ನೀತಿಗಳಿಂದಲೇ ದುರಾಡಳಿತಕ್ಕೆ ಹೆಸರಾಗಿರುವ ಕಾಂಗ್ರೆಸ್ ಸರ್ಕಾರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ಇದರಿಂದ ಸರ್ಕಾರಿ ನೌಕರರಿಗೆ ಸಂಬಳ ಕೊಡುವುದಕ್ಕೂ ಸರ್ಕಾರದ ಬಳಿ ದುಡ್ಡಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ (R. Ashoka)

[ccc_my_favorite_select_button post_id="120234"]
ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಯುದ್ಧ: ಭಾರತದ ಷೇರುಪೇಟೆ ತತ್ತರ.. ಬೆಲೆಯೇರಿಕೆ ಚಿಂತೆ

ಮಧ್ಯಪ್ರಾಚ್ಯದಲ್ಲಿ ಯುದ್ದ ನಡೆಯುತ್ತಿರುವುದರಿಂದ ಭಾರತದ ಷೇರುಪೇಟೆ (Indian share market ) ತತ್ತರಿಸುತ್ತಿದ್ದು, ಕೋಟ್ಯಾಂತರ ರೂ ನಷ್ಟದ ಜೊತೆಗೆ, ತೈಲ ಬೆಲೆಯೇರಿಕೆಯಾಗುವ ಭೀತಿ ಉಂಟಾಗಿದೆ.

[ccc_my_favorite_select_button post_id="119892"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

RCB ಮಾರಾಟ: ವಿಜಯ್ ಮಲ್ಯ ಭಾವುಕ ಸಂದೇಶ

ಐಪಿಎಲ್‌ (IPL) ಅತ್ಯಂತ ಜನಪ್ರಿಯ ಫ್ರಾಂಚೈಸಿ ಆರ್‌ಸಿಬಿಯನ್ನು (RCB) ಆದಿತ್ಯ ಬಿರ್ಲಾ ಗ್ರೂಪ್ ಮತ್ತು ಟೈಮ್ಸ್ ಆಫ್ ಇಂಡಿಯಾ ನೇತೃತ್ವದ ಒಕ್ಕೂಟವು ಖರೀದಿಸಿದೆ.

[ccc_my_favorite_select_button post_id="120461"]
ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ..!

ದೊಡ್ಡಬಳ್ಳಾಪುರ: ಪೊಲೀಸರ ಕರ್ತವ್ಯಕ್ಕೆ ಅಡ್ಡಿ, ಹಲ್ಲೆ.. ಆರೋಪಿಗಳಿಗೆ 10 ವರ್ಷ ಕಠಿಣ ಜೈಲು

ಡಕಾಯಿತಿ ಮತ್ತು ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ತೆರಳಿದ್ದ ಪೊಲೀಸರ (Police) ಮೇಲೆ ಹಲ್ಲೆ ನಡೆಸಿ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಿಗಳಿಗೆ 4ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷಗಳ ಕಠಿಣ ಜೈಲು ಶಿಕ್ಷೆ (Prison sentence) ಹಾಗೂ 15 ಸಾವಿರ

[ccc_my_favorite_select_button post_id="120420"]
ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ದೊಡ್ಡಬಳ್ಳಾಪುರ: 30 ತಿಂಗಳು ಕಳೆದರು ಮುಗಿಯದ ರಸ್ತೆ ಕಾಮಗಾರಿ.. ಪದೇ ಪದೇ ಅಪಘಾತ..!

ಶಂಕುಸ್ಥಾಪನೆ ಕಂಡು 2 ವರ್ಷ 10 ತಿಂಗಳು ಕಳೆದರು ಪೂರ್ಣಗೊಳ್ಳದ ರಸ್ತೆ ಕಾಮಗಾರಿಯಿಂದಾಗಿ ವಾಹನ ಸವಾರರು ಪದೇ ಪದೇ ಅಪಘಾತಕ್ಕೆ (Accident) ಒಳಗಾಗುತ್ತಿರುವ ಘಟನೆ ರಾಜಘಟ್ಟ ಕೆರೆ ಏರಿ ಮೇಲೆ ನಡೆಯುತ್ತಿದೆ.

[ccc_my_favorite_select_button post_id="120455"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!