ಕಾಣೆಯಾಗಿವೆ ದೊಡ್ಡಬಳ್ಳಾಪುರದ ಎರಡು 108 ಆಂಬುಲೆನ್ಸ್..! ಹುಡುಕೋರ್ ಯಾರು..?| 108 ambulance

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ 108 ಆಂಬುಲೆನ್ಸ್ (108 ambulance) ಸಮಸ್ಯೆ ಮತ್ತೆ ಮಿತಿಮೀರಿದ್ದು, ಕೇವಲ ಮೂರು ಆಂಬುಲೆನ್ಸ್ ಇಡೀ ತಾಲೂಕಿನ ತುರ್ತು ಸಂದರ್ಭದಲ್ಲಿ ಸೇವೆ ಒದಗಿಸಬೇಕಾದ ಅನಿವಾರ್ಯತೆ ಎದುರಾಗಿದೆ.

ಇತ್ತೀಚೆಗಷ್ಟೆ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯೋರ್ವ ತುರ್ತು ಸಮಯದಲ್ಲಿ 108 ಆಂಬುಲೆನ್ಸ್ ಸಿಗದೆ ಸಾವನಪ್ಪಿರುವ ಪ್ರಕರಣ ತಾಲೂಕಿನಲ್ಲಿ 108 ಆಂಬುಲೆನ್ಸ್ ಸಮಸ್ಯೆ ಎಷ್ಟಿದೆ ಎಂಬುದಕ್ಕೆ ಸಾಕ್ಷಿಯಾಗಿತ್ತು.

ಈ ಕುರಿತು ಕನ್ನಡ ಪರ ಸಂಘಟನೆಗಳು ಅಧಿಕಾರಿಗಳು, ಜನಪ್ರತಿನಿದಿಗಳ ಗಮನಕ್ಕೂ ತಂದಿದ್ದರು. ನಂತರ ಏಕಾಏಕಿ ಕಾಣೆಯಾಗಿದ್ದ ಅಂಬುಲೆನ್ಸ್ ರಸ್ತೆಗಿಳಿದವು. ಆದರೆ ಕೇವಲ ಒಂದು ವಾರದ ನಂತರ ಎರಡು ಆಂಬುಲೆನ್ಸ್ ಕಾಣೆಯಾಗಿದ್ದು, ಹಲವು ತಿಂಗಳು ಕಳೆದರು ಪತ್ತೆಯಿಲ್ಲ.

ದೊಡ್ಡಬಳ್ಳಾಪುರ ತಾಲೂಕಿನ ನಗರ, ಘಾಟಿ ಮಧುರೆ, ದೊಡ್ಡಬೆಳವಂಗಲ ಹಾಗೂ ಸಾಸಲು ಹೋಬಳಿಯ ಒಟ್ಟು ಐದು 108 ಅಂಬುಲೆನ್ಸ್ ಕಾರ್ಯ ನಿರ್ವಹಿಸಬೇಕಿದೆ. ಆದರೆ ಪ್ರಸ್ತುತ ಕಾರ್ಯನಿರ್ವವಹಿಸುತ್ತಿರುವುದು ಮೂರು ಆಂಬುಲೆನ್ಸ್ ಮಾತ್ರ.

ನಿರ್ಲಕ್ಷ್ಯ; 108 ಆಂಬುಲೆನ್ಸ್ ನಿರ್ವಹಣೆಯಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಧೋರಣೆಯಿಂದಾಗಿ ತುರ್ತು ಸಂದರ್ಭದಲ್ಲಿ ವರದಾನವಾಗಿದ್ದ ಯೋಜನೆ ಸಂಪೂರ್ಣವಾಗಿ ಹಳ್ಳಹಿಡಿಯುತ್ತಿದೆ ಎಂದು ಪದೇ ಪದೇ ಮಾಧ್ಯಮಗಳು, ಸಂಘ ಸಂಸ್ಥೆಗಳು ದನಿ ಎತ್ತಬೇಕಿದೆ.

ಪ್ರಸ್ತುತ ದೊಡ್ಡಬೆಳವಂಗಲ, ಎಸ್‌ಎಸ್ ಘಾಟಿ 108 ಅಂಬುಲೆನ್ಸ್ ದುರಸ್ತಿಗೆ ತೆರಳಿ ಹಲವು ತಿಂಗಳು ಕಳೆದರು ಪತ್ತೆಯಿಲ್ಲವಾಗಿದೆ. ಈ ಕುರಿತು ಮಾಧ್ಯಮಗಳು ವರದಿ ಮಾಡಿದಾಗ ಪ್ರತ್ಯಕ್ಷವಾಗಿ ಮತ್ತೆ ಕಣ್ಮರೆಯಾಗುತ್ತವೆ.

ಆಗಸ್ಟ್ 09 ರಂದು ಟಿಬಿ ವೃತ್ತದ ಬಳಿ ಮೊಗಚಿ ಬಿದ್ದ ವೇಳೆ ಗ್ಯಾರೆಜ್ ಸೇರಿದ ಘಾಟಿ ಸುಬ್ರಮಣ್ಯ ವ್ಯಾಪ್ತಿಯ ಅಂಬುಲೆನ್ಸ್ 5 ತಿಂಗಳುಗಳು ಕಳೆದರು ಇದುವರೆಗೂ ಪತ್ತೆ ಇಲ್ಲ ಎಂದರೆ ಇದರ ಬಗ್ಗೆ ಅಧಿಕಾರಿಗಳಿಗೆ ಕಾಳಜಿ ಎಷ್ಟಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕಿದೆ ಎಂಬ ಆರೋಪ ಸಾರ್ವಜನಿಕರದ್ದಾಗಿದೆ.

ಉಳಿದಿರುವ ದೊಡ್ಡಬಳ್ಳಾಪುರ ನಗರ ಮಧುರೆ, ಸಾಸಲು ವ್ಯಾಪ್ತಿಗೆ ಸೇರಿದ 108 ಅಂಬುಲೆನ್ಸ್ಗಳು ಇಡೀ ತಾಲೂಕು ಅಲ್ಲದೆ ಅಕ್ಕಪಕ್ಕದ ತಾಲೂಕಿಗೂ ಸೇವೆ ನೀಡಬೇಕಾದ ಅನಿವಾರ್ಯತೆಯಲ್ಲಿವೆ‌

ತಾಲೂಕಿನಲ್ಲಿ ಖಾಸಗಿ ಆಂಬುಲೆನ್ಸ್ ಹೆಚ್ಚಾಗಿದ್ದು, ಕೆಲವರ ಲಾಭಿಯಿಂದಾಗಿ 108 ಆಂಬುಲೆನ್ಸ್ ವ್ಯವಸ್ಥೆ ಹಾಳಾಗುತ್ತಿದೆ ಎಂಬ ಆರೋಪ ಕೂಡ ವ್ಯಾಪಕವಾಗಿದೆ.

ಶಡ್ಯಂತ್ರದ ಶಂಕೆ: ತುರ್ತು ಸಂದರ್ಭದಲ್ಲಿ 108 ಆಂಬುಲೆನ್ಸ್ ಆದರೆ ಸರ್ಕಾರಿ ಆಸ್ಪತ್ರೆಗೆ ಮೊದಲ ಪ್ರಾಶಸ್ತ್ಯ ನೀಡಬೇಕು. ಇದರಿಂದಾಗಿ ಖಾಸಗಿ ಆಸ್ಪತ್ರೆಗಳಿಗೆ ಹಿನ್ನಡೆಯಾಗುತ್ತದೆ. ಅದೇ ಖಾಸಗಿ ಆಂಬುಲೆನ್ಸ್ ಆದರೆ ಖಾಸಗಿ ಆಸ್ಪತ್ರೆಗಳಿಗೆ ಲಾಭ ಎಂಬ ದುರುದ್ದೇಶದಿಂದ 108 ಆಂಬುಲೆನ್ಸ್ ವ್ಯವಸ್ಥೆ ಹಾಳುಗೆಡವಲು ಕೆಲ ಪ್ರಭಾವಿಗಳು ಈ ರೀತಿ ಶಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣ್ಣದ ರಾಜ್ಯ ಕಾರ್ಯದರ್ಶಿ ರಾಜಘಟ್ಟರವಿ ಆರೋಪಿಸಿದ್ದಾರೆ.

ಇದೇ ಕಾರಣಕ್ಕೆ 108 ಆಂಬುಲೆನ್ಸ್ ಸೌಲಭ್ಯ ಸಮರ್ಪಕವಾಗಿ ದೊರಕುವಂತಾಗಲು ಯಾರು ಕ್ರಮಕೈಗೊಳ್ಳುತ್ತಿಲ್ಲ ಎಂಬ ಆಕ್ರೋಶ ವ್ಯಾಪಕವಾಗಿದೆ. (ಸಾಂದರ್ಭಿಕ ಚಿತ್ರ ಬಳಸಲಾಗಿದೆ)

ರಾಜಕೀಯ

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಮೋದಿ ಸರ್ಕಾರದ ಮಲತಾಯಿ ಧೋರಣೆ: ಕೇರಳದಲ್ಲಿ ಇಂದು ಬ್ಲ್ಯಾಕ್ ಡೇ..!

ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ಮಿತ್ರಪಕ್ಷ ಅಧಿಕಾರದಲ್ಲಿರುವ ಆಂಧ್ರಪ್ರದೇಶದ ಹೊರತುಪಡಿಸಿ ದಕ್ಷಿಣ ಭಾರತದ ರಾಜ್ಯಗಳಿಗೆ ನಿರ್ಲಕ್ಷ್ಯ ತೋರಿದೆ ಎಂಬ ಆಕ್ರೋಶ ವ್ಯಾಪಕವಾಗಿದೆ.

[ccc_my_favorite_select_button post_id="119088"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

ದೊಡ್ಡಬಳ್ಳಾಪುರದಲ್ಲಿ ಜಿಲ್ಲಾ ಕ್ರೀಡಾಂಗಣ.. 25 ಕೋಟಿ ರೂ. ಮಂಜೂರು: ಕೆ.ಹೆಚ್.ಮುನಿಯಪ್ಪ

2025-26 ನೇ ಸಾಲಿನ ಬೆಂಗಳೂರು ಗ್ರಾಮಾಂತರ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳ ಕಾರ್ಯಕ್ರಮವನ್ನು ಉದ್ಘಾಟಿಸಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ (K.H. Muniyappa) ಮಾತನಾಡಿದರು.

[ccc_my_favorite_select_button post_id="118983"]
ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣ: ದಂಡುಪಾಳ್ಯ ಗ್ಯಾಂಗ್‌ನ ಮತ್ತೊಬ್ಬನ ಬಂಧನ.!

ಭೀಕರ ಜೋಡಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ದಂಡುಪಾಳ್ಯ ಗ್ಯಾಂಗ್‌ನ (Dandupalya gang) ಚಿಕ್ಕ ಹನುಮಂತಪ್ಪ (ಅಲಿಯಾಸ್ ಕೆ.ಕೃಷ್ಣಪ್ಪ) ಎಂಬಾತನನ್ನು ಆಂಧ್ರಪ್ರದೇಶದ ಮದನಪಳ್ಳೆ ಗ್ರಾಮದಲ್ಲಿ ಬಂಧಿಸಲಾಗಿದೆ.

[ccc_my_favorite_select_button post_id="118778"]
ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ: ಗೂಡ್ಸ್ ವಾಹನ ಡಿಕ್ಕಿ.. ವೃದ್ಧನಿಗೆ ಗಂಭೀರ ಗಾಯ

ಪೆಟ್ಟಿ ಅಂಗಡಿ ಬಳಿ ಕುಳಿತಿದ್ದ ವೃದ್ಧನಿಗೆ ನಿಯಂತ್ರಣ ತಪ್ಪಿದ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ (Accident) ವೃದ್ಧ ತೀವ್ರವಾಗಿ ಗಾಯಗೊಂಡಿರುವ ಘಟನೆ ತಾಲೂಕಿ‌ನ ****** ಇಂದು ಮಧ್ಯಾಹ್ನ ನಡೆದಿದೆ

[ccc_my_favorite_select_button post_id="119094"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!