Astrology: Likely to be a memorable day

ದಿನ ಭವಿಷ್ಯ, ಡಿ.15: ಈ ರಾಶಿಯವರ ಆರ್ಥಿಕ ಸ್ಥಿತಿ ಉತ್ತಮವಾಗಿರುವ ಸಾಧ್ಯತೆ| Astrology

ಭಾನುವಾರ, ಡಿಸೆಂಬರ್ 15, 2024, ದೈನಂದಿನ ರಾಶಿ ಭವಿಷ್ಯ astrology..

ಮೇಷ ರಾಶಿ: ಧನಾತ್ಮಕ ಚಿಂತನೆಯಿಂದ ಹಮ್ಮಿಕೊಂಡ ಕಾರ್ಯಗಳಲ್ಲಿ ಯಶಸ್ಸು ಕಾಣುವಿರಿ. ವ್ಯಾಪಾರ ವ್ಯವಹಾರಗಳಲ್ಲಿ ಯಶಸ್ಸು. ಬಂಧುಗಳಿಂದ ಸುವಾರ್ತೆ ಕೇಳುವಿರಿ.

ವೃಷಭ ರಾಶಿ: ಸಂಸಾರದಲ್ಲಿ ಏರುಪೇರು ಸಹಜ. ಆದರೆ ಅದೇ ಜೀವನವಲ್ಲ. ಹಾಗಾಗಿ ಇಂದಿನ ಸೋಲು ನಾಳಿನ ಗೆಲುವು ಎಂಬ ವಿಶ್ವಾಸದಿಂದ ಮುನ್ನೆಡೆದಲ್ಲಿ ಒಳಿತಾಗುವುದು. ಮಹತ್ತರ ಕಾರ್ಯಗಳನ್ನು ಮುಂದೂಡಿರಿ. ಹಣವು ನೀರಿನಂತೆ ಖರ್ಚಾಗುವ ಸಾಧ್ಯತೆ.

ಮಿಥುನ ರಾಶಿ: ಈ ದಿನ ನೀವಾಡುವ ಮಾತಿಗೆ ಹೆಚ್ಚು ಬೆಲೆ ಸಿಗುವುದು. ಎಲ್ಲರೂ ನಿಮ್ಮನ್ನು ಕೊಂಡಾಡುವರು. ಮನೋರಥ ಈಡೇರುವುದು. ಕೌಟುಂಬಿಕವಾಗಿ ನೆಮ್ಮದಿಯ ದಿನ. ಬೆಲೆಯುಳ್ಳ ವಸ್ತುಗಳ ಖರೀದಿಗೆ ಮನಸು ಮಾಡುವಿರಿ.

ಕಟಕ ರಾಶಿ: ವ್ಯಾಪಾರಸ್ಥರಿಗೆ ಅಧಿಕ ಲಾಭಾಂಶ ಬರುವುದು. ಧಾರ್ಮಿಕ ವಿಷಯಗಳ ಬಗ್ಗೆ ಸದ್ಭಾವನೆ ಮೂಡುವುದು. ದೈವಾನುಕೂಲತೆಯಿಂದ ಇಚ್ಛಿಸಿದ ಕಾರ್ಯಗಳು ನೆರವೇರುವುದು. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.‌

ಸಿಂಹ ರಾಶಿ: ಉದಾಸಿನವೇ ಅಧೋಗತಿಗೆ ಮೂಲ ಎಂದರು ಹಿರಿಯರು. ಈ ದಿನ ಕೆಲಸ ಕಾರ್ಯಗಳಲ್ಲಿ ಉದಾಸಿನ ತೋರಿದರೆ ಭಾರಿ ಪ್ರಮಾಣದ ದಂಡ ತೆರಬೇಕಾಗುವುದು. ಸಂಗಾತಿಯ ಸಲಹೆಯನ್ನು ಆಧರಿಸಿ ಕಾರ್ಯಕ್ರಮ ರೂಪಿಸಿಕೊಳ್ಳಿ, ಒಳಿತಾಗುವುದು.

ಕನ್ಯಾ ರಾಶಿ: ಹಮ್ಮಿಕೊಂಡ ಕಾರ್ಯಗಳು ಯಶಸ್ಸಿನತ್ತ ಸಾಗುವವು. ವಾದ ಸ್ಪರ್ಧೆಯಲ್ಲಿ ಜಯ, ವಿದ್ಯಾಬುದ್ಧಿಯಲ್ಲಿ ಯಶಸ್ಸು. ಸಮಾಜದಲ್ಲಿ ಮಾನ ಸನ್ಮಾನಗಳು ಏರ್ಪಡುವ ಸಾಧ್ಯತೆ. ಕೆಲವರಿಗೆ ವಿದೇಶ ಪ್ರವಾಸ ಹೋಗುವ ಸಾಧ್ಯತೆ ಇರುವುದು.

ತುಲಾ ರಾಶಿ: ಸ್ತ್ರೀ ಸಂಬಂಧ ವಿಷಯದಲ್ಲಿ ಅನಗತ್ಯ ಮೂಗು ತೂರಿಸದಿರಿ. ಗಾಳಿಗುದ್ದಿ ಮೈ ನೋಯಿಸಿ ಕೊಂಡಂತೆ ಈ ದಿನ ವಿಚಾರಗಳಲ್ಲಿ ಹೆಚ್ಚಿನ ಶುಭ ಹೊಂದಲಾಗುವುದಿಲ್ಲ. ಸ್ನೇಹಿತನ ಸಹಕಾರ ಪಡೆಯಿರಿ ಮತ್ತು ಕುಲ ದೇವತಾ ಪ್ರಾರ್ಥನೆ ಮಾಡಿ.

ವೃಶ್ಚಿಕ ರಾಶಿ: ಹಣಕಾಸಿನ ತೊಂದರೆ ಇರುವುದಿಲ್ಲ. ವೃತ್ತಿಪರರಿಗೆ ಸ್ವಲ್ಪ ವಿಶ್ರಾಂತಿಯ ಅಗತ್ಯವಿದೆ. ಹಿರಿಯರ ಸಲಹೆ- ಸಹಕಾರಗಳನ್ನು ಪಡೆಯಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.

ಧನಸ್ಸು ರಾಶಿ: ಗ್ರಹಗತಿಗಳು ನಿಮ್ಮ ನಡೆಯನ್ನು ಪರೀಕ್ಷಿಸುತ್ತಿರುವವು. ಹಾಗಾಗಿ
ಪ್ರತಿಯೊಂದು ಕಾರ್ಯದಲ್ಲೂ ಎಚ್ಚರಿಕೆಯಿಂದಿರಿ. ಲೆಕ್ಕಪತ್ರ ಗಳನ್ನು ಸರಿಯಾಗಿಡಿ. ಇದರಿಂದ ಮೇಲಧಿಕಾರಿಗಳ ಪ್ರೀತಿಗೆ ಪಾತ್ರರಾಗುವಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮಕರ ರಾಶಿ: ಅಮೂಲ್ಯ ವಸ್ತುವಿನ ಖರೀದಿ-ವಿಕ್ರಯದಿಂದ ಲಾಭವಾಗುವುದು. ವಿರೋಧಿಗಳಿಗೆ ಸೋಲು ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು ಮತ್ತು ಮಗನ ಭವಿಷ್ಯದ ಕುರಿತು ಚಿಂತೆ ಕಾಡುವುದು. ಗುರುವಿನ ಮೊರೆ ಹೋಗಿ.

ಕುಂಭ ರಾಶಿ: ಕೆಲವು ಘಟನೆಗಳು ನಿಮ್ಮ ಆಸಕ್ತಿಯನ್ನು ಹೆಚ್ಚಿಸುವ ಸಾಧ್ಯತೆ ಇದೆ. ಮಿತ್ರರ ಸಹಕಾರವೂ ದೊರೆಯಲಿದ್ದು ಈ ದಿನ ನಿಮಗೆ ಮಂಗಳವನ್ನು ಉಂಟುಮಾಡುವುದು. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ಮೀನ ರಾಶಿ: ಪರಾಕ್ರಮ ಕೆಲಸ ಕಾರ್ಯಗಳಲ್ಲಿ ಜಯ. ಮಹತ್ವದ ಪತ್ರ ಕೈಸೇರುವುದು. ಉದ್ಯೋಗ-ವ್ಯವಹಾರಗಳಲ್ಲಿ ಉತ್ಕರ್ಷ. ಬಂಧು ಬಳಗದವರ ಭೇಟಿ. ಆರ್ಥಿಕ ಸ್ಥಿತಿ ಉತ್ತಮವಾಗಿರುವುದು.

ರಾಹುಕಾಲ: 05:02 ರಿಂದ 06:36
ಗುಳಿಕಕಾಲ: 03:29 ರಿಂದ 05:02
ಯಮಗಂಡಕಾಲ: 12:22 ರಿಂದ 01:56

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ ಹೆಚ್.ಕೆ.ಪಾಟೀಲ್ ತಿರುಗೇಟು

ಅವರದ್ ಬಿಡ್ರೀ.. ನೀವ್ ಸಿಎಂ ಆಗಿದ್ದಾಗ ವರದಿಗಳನ್ನು ಏನ್ ಮಾಡ್ದೇ ಹೇಳು; ಹೆಚ್‌ಡಿಕೆಗೆ

ಈಗ ಅಕ್ರಮ ಗಣಿಗಾರಿಕೆ ಪತ್ರದ ಮಾತಾಡುವ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ಅಭಿಷೇಕ ಮಾಡಿಕೊಂಡು ಕುಳಿತಿದ್ರಾ; ಸಚಿವ ಹೆಚ್.ಕೆ.ಪಾಟೀಲ್ (H.K.Patil)

[ccc_my_favorite_select_button post_id="109884"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

ಲೈವ್ ಬೆತ್ತಲೆ ವಿಡಿಯೋ ಬ್ಯುಸಿನೆಸ್.. ದಂಪತಿಗಳು ಪೊಲೀಸರ ಅತಿಥಿ

HD ಕ್ಯಾಮೆರಾಗಳೊಂದಿಗೆ ದಂಪತಿಗಳು ಲೈವ್ ಬೆತ್ತಲೆ ವಿಡಿಯೋ (Live nude video) ವ್ಯವಹಾರ ನಡೆಸಿ ಪೊಲೀಸರ ಅತಿಥಿಯಾಗಿದ್ದಾರೆ.

[ccc_my_favorite_select_button post_id="109995"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]