Astrology: Likely to be a memorable day

ದಿನ ಭವಿಷ್ಯ: ಈ ರಾಶಿಯವರಿಗಿಂದು ದೂರ ಪ್ರಯಾಣ ಸಾಧ್ಯತೆ| Astrology

ಮಂಗಳವಾರ ಡಿಸೆಂಬರ್.17, 2024, ದೈನಂದಿನ ರಾಶಿ ಭವಿಷ್ಯ Astrology..

ಮೇಷ: ಆಸ್ತಿ ಖರೀದಿ ಅಥವಾ ಮಾರಾಟದ ವ್ಯವಹಾರಗಳು ಕುದುರುವುದು. ನೌಕರರ ತೊಂದರೆಗಳು ನಿವಾರಣೆಯಾಗುವುದು. ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗದ ಯೋಗವಿದೆ.

ವೃಷಭ: ವ್ಯಕ್ತಿತ್ವಕ್ಕೆ ತಕ್ಕ ಗೌರವಗಳು ದೊರೆಯುವುದು. ಚಾಣಾಕ್ಷತನದಿಂದ ಕಷ್ಟ ಪರಿಹರಿಸಿಕೊಳ್ಳುವಿರಿ. ಅಪೇಕ್ಷಿತ ಕಾರ್ಯಗಳು ಕೈಗೂಡುವುದು. ಸಂಬಂಧಿಗಳಿಂದ ಸಹಕಾರ ದೊರೆಯುವುದು. ದೂರ ಪ್ರಯಾಣ, ಪರಸ್ಥಳವಾಸ ಸಂಭವ.

ಮಿಥುನ: ಒಳ್ಳೆಯ ಮಾತುಗಳಿಂದ ಸಂಬಂಧ ಸುಧಾರಿಸುವುದು. ಸ್ನೇಹಿತರಲ್ಲಿಯ ಮನಸ್ತಾಪ ದೂರಾಗುವ ಸಾಧ್ಯತೆ.ಶಕ್ತಿ ಮೀರಿ ದುಡಿಯುವ ಕಾರ್ಯ ಭಾರವಿರುವುದು. ಉದ್ಯೋಗದ ಹೊರತಾಗಿ ಬೇರೆ ಕೆಲಸಕ್ಕೂ ಗಮನಹರಿಸಿ.

ಕಟಕ: ಅನೇಕ ರೀತಿಯ ಲಾಭ ದೊರೆಯುವ ಸಾಧ್ಯತೆ ಇದೆ. ಆದರ್ಶ ವ್ಯಕ್ತಿತ್ವದಿಂದ ಜನ ಮನ್ನಣೆಗೆ ಪಾತ್ರರಾಗುವಿರಿ. ಎಲ್ಲ ಕೆಲಸಗಳೂ ಸಕಾಲದಲ್ಲಿ ಪೂರ್ಣವಾಗುವುದು. ಕೌಟುಂಬಿಕ ವಿವಾದ ಕೊನೆಗೊಳ್ಳುವುದು.

ಸಿಂಹ: ಸಹೋದರರು, ಮಿತ್ರರು ಬೆನ್ನೆಲುಬಾಗಿ ನಿಲ್ಲುವರು. ಧೈರ್ಯಪ್ರವೃತ್ತಿಯು ಉತ್ತಮ ಫಲಕೊಡುವುದು. ಹಳೆಯ ಬಾಕಿ ವಸೂಲಾಗುವುದು. ವ್ಯಾಜ್ಯಗಳು ಅಂತ್ಯಕಾಣುವವು. ಗೃಹ ಸೌಖ್ಯವಿರುವುದು.

ಕನ್ಯಾ: ಮಹತ್ವಾಕಾಂಕ್ಷೆಗೆ ಪೂರಕವಾದ ವಾತಾವರಣ ಇರುವುದು. ಬಂಧುಮಿತ್ರರ ಸಹಕಾರ ದೊರೆಯುವುದು. ಉದ್ಯೋಗದಲ್ಲಿ ಪ್ರಗತಿ ಕಂಡುಬರುವುದು. ಮನೆಯಲ್ಲಿ ಸಂತಸ ಮೂಡುವುದು. ಶುಭಕಾರ್ಯಗಳು ಜರುಗುವುದು.ಸರ್ಕಾರಿ ಕಚೇರಿಯಲ್ಲಿ ನಿಮ್ಮ ಕೆಲಸಗಳೆನಾದರೂ ಇದ್ದರೆ ಇಂದು ನಿಮ್ಮ ಪರವಾಗಿರುತ್ತದೆ.

ತುಲಾ: ಆಸೆ ಆಕಾಂಕ್ಷೆಗಳ ಈಡೇರಿಕೆಗಾಗಿ ಪ್ರಯತ್ನಿಸುವಿರಿ. ಅಪೇಕ್ಷಿತ ಧನ ಸಹಾಯ ದೊರೆಯುವುದು. ಸಹೋದರ ಸಹಕಾರ ತೋರುವುದರಿಂದ ನಿರಾತಂಕವಾಗಿ ಕಾರ್ಯ ಪೂರ್ಣವಾಗುವುದು. ಮನೆಯಲ್ಲಿ ಸಂತಸದ ವಾತಾವರಣ ಇರುವುದು.

ವೃಶ್ಚಿಕ: ಮಹತ್ವದ ಕಾರ್ಯ ಕಲಾಪಗಳಲ್ಲಿ ಭಾಗವಹಿಸುವ ಯೋಗವಿದೆ. ವಿವಿಧ ಮೂಲಗಳಿಂದ ಸಹಾಯ ದೊರೆಯುವುದು. ಸ್ವಸಾಮರ್ಥ್ಯದಿಂದ ಕಠಿಣ ಪರಿಸ್ಥಿತಿಯನ್ನು ನಿಭಾಯಿಸುವಿರಿ. ಅನಾವಶ್ಯಕ ಖರ್ಚಿನ ಸಾಧ್ಯತೆ ಇದೆ.

ಧನಸ್ಸು: ಸಂಕುಚಿತ ಭಾವನೆ ಅಥವಾ ಸಂದೇಹಗಳಿಂದ ದೂರವಿರಿ. ಕೆಲಸದಲ್ಲಿ ಸ್ಪಷ್ಟತೆ ಇರಲಿ. ಅಲ್ಪಧನಲಾಭವಾದರೂ ಹಳೆಯ ಸಾಲ ತೀರುವುದು. ವ್ಯಾಪಾರದಲ್ಲಿ ಅಭಿವೃದ್ಧಿಯಾಗುವುದು. ವಿವಾಹ ಅಪೇಕ್ಷಿತರಿಗೆ ಕಂಕಣಬಲ ಕೂಡಿಬರುವುದು.

ಮಕರ: ವ್ಯಾಪಾರಾದಿ ಉದ್ಯಮಗಳಲ್ಲಿ ಪ್ರಗತಿಯಿದ್ದು ಧನಲಾಭ, ಐಶ್ವರ್ಯವೃದ್ಧಿಯಿದೆ. ಆದರೆ ವ್ಯವಹಾರಿಕ ಕಿರಿಕಿರಿ ಇರುವುದು. ಅನಿರೀಕ್ಷಿತ ಧನಲಾಭವೂ ಇದೆ. ಕೈಗೊಂಡ ಕಾರ್ಯಗಳಿಗೆ ವಿಘ್ನ ತೋರಿದರೂ ನೆರವೇರುತ್ತದೆ.

ಕುಂಭ: ಅಪರಿಮಿತ ಖರ್ಚು ತೋರಿದರೂ ಅಡಚಣೆಯಾಗುವ ಸಂಭವವಿಲ್ಲ. ಸ್ಥಾನ ಮಾನಗಳೂ ಭದ್ರವಾಗಿ, ಸಾಂಸಾರಿಕ ದೃಷ್ಟಿಯಲ್ಲೂ ಸುಖದಾಯಕ, ವಿಶೆಷ ಪ್ರಯತ್ನದಿಂದ ವ್ಯವಹಾರ ಸಿದ್ಧಿ ಇರುವುದು.

ಮೀನ: ಕಾಯಕದಲ್ಲಿ ಯಶಸ್ಸು, ಕೀರ್ತಿ, ಧನಲಾಭ, ಉದ್ಯೋಗ ಪ್ರಾಪ್ತಿಯ ಯೋಗವಿದೆ. ಮೊದಲು ಕಷ್ಟ ನಂತರದಲ್ಲಿ ಉತ್ತಮವಾದ ಫಲ ದೊರೆಯುವುದು. ಹಿರಿಯರ ಬಲ ವೃದ್ಧಿಸುವುದು. ವೈವಾಹಿಕ ಮಾತುಕತೆಗೆ ಕಾಲಕೂಡಿ ಬರುವುದು.

ರಾಹುಕಾಲ: 03:00 ರಿಂದ 04:30
ಗುಳಿಕಕಾಲ: 12:00 ರಿಂದ 01:30
ಯಮಗಂಡಕಾಲ: 09:00 ರಿಂದ 10:30

ರಾಜಕೀಯ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಪ್ರತಿಪಕ್ಷದ ವೈಫಲ್ಯವೇ ಆಡಳಿತ ಪಕ್ಷಕ್ಕೆ ಲಾಭ: ವಿಜಯೇಂದ್ರ ವಿರುದ್ಧ ಯತ್ನಾಳ್ ವಾಗ್ದಾಳಿ

ಅಬಕಾರಿ ಹಗರಣದ ಬಗ್ಗೆ ಬಿಜೆಪಿ (BJP) ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (B.Y. Vijayendra) ಏನೂ ಮಾತನಾಡಿಲ್ಲ. ಹೋರಾಟ ತಾರ್ಕಿಕ ಅಂತ್ಯ ಕಂಡಿಲ್ಲ. ವಿರೋಧ ಪಕ್ಷದ ವೈಫಲ್ಯದ ಲಾಭಆಡಳಿತ ಪಕ್ಷಕ್ಕೆ ಸಿಕ್ಕಿದೆ ಎಂದು ಶಾಸಕ ಬಸನಗೌಡ

[ccc_my_favorite_select_button post_id="119407"]
ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಮೈಸೂರು ಸ್ಯಾಂಡಲ್‌ ಪ್ರಚಾರ ರಾಯಭಾರಿಯಾಗಿ ಬಂದ ಚೆಲುವೆ ತಮನ್ನಾ

ಅಲ್ಲಿ ಇದ್ದಿದ್ದು ಕಣ್ಣು ಕೋರೈಸುತ್ತಿದ್ದ ಲೇಸರ್ ಬೆಳಕಿನ ಲೀಲೆ; ಅದರ ಝಗಮಗದ ನಡುವೆ ಹಿಂಬಾಗಿಲ ಮೂಲಕ ಕಾಣಿಸಿಕೊಂಡಿದ್ದು ಖ್ಯಾತ ನಟಿ ತಮನ್ನಾ ಭಾಟಿಯಾ (Tamannaah Bhatia). ಹಾಲ್ಬಣ್ಣದ ಈ ಚೆಲುವೆಯ ಸೌಂದರ್ಯಕ್ಕೆ ಮೆರುಗು ನೀಡಿದ್ದು

[ccc_my_favorite_select_button post_id="119304"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೇಮ ವೈಪಲ್ಯ: ಬಾಡಿಬಿಲ್ಡರ್ ಆತ್ಮಹತ್ಯೆ..!

ಪ್ರೀತಿಸಿದ ಯುವತಿ ಬೇರೆಯವರೊಂದಿಗೆ ಮದುವೆಯಾಗುತ್ತಿದ್ದಾಳೆಂದು ಮನನೊಂದ ಪ್ರೇಮಿಯೋರ್ವ ಆತ್ಮಹತ್ಯೆಗೆ (Suicide) ಶರಣಾಗಿರುವ (Crime) ಘಟನೆ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ.

[ccc_my_favorite_select_button post_id="119241"]
ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ಭೀಕರ ಅಪಘಾತ: ದೊಡ್ಡಬಳ್ಳಾಪುರದ 5 ಯುವಕರು ಸಾವು

ನೆಲಮಂಗಲ ಹೆದ್ದಾರಿಯ ಜಿಂದಾಲ್ ಮೇಲ್ಸೇತುವೆ ಬಳಿ ಸಂಭವಿಸಿದ ಕೆಎಸ್ ಆರ್ ಟಿಸಿ ಬಸ್​​ (KSRTC Bus) ಮತ್ತು ಇಂಡಿಕ ಕಾರಿನ (Indica Car) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ದೊಡ್ಡಬಳ್ಳಾಪುರದ ಐವರು ಯುವಕರು

[ccc_my_favorite_select_button post_id="119422"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!