ಪಾಲನಜೋಗಿಹಳ್ಳಿ ಕೆರೆ ಒತ್ತುವರಿ ಆರೋಪ: ಕರವೇ ಪ್ರತಿಭಟನೆ.. ಕಂದಾಯ ಇಲಾಖೆ ಅಧಿಕಾರಿಗಳಿಗೆ ವಾರ್ನಿಂಗ್| Illegal occupation

ದೊಡ್ಡಬಳ್ಳಾಪುರ: ನಗರದ ಹೊರವಲಯದಲ್ಲಿರುವ ಪಾಲನಜೋಗಿಹಳ್ಳಿ ಕೆರೆಯನ್ನು ಖಾಸಗಿ ಬಡಾವಣೆಯವರು ಅಕ್ರಮವಾಗಿ ಒತ್ತುವರಿ (Illegal occupation) ಮಾಡಿಕೊಂಡು ರಸ್ತೆಯನ್ನು ನಿರ್ಮಾಣ ಮಾಡುತ್ತಿದ್ದಾರೆಂದು ಆರೋಪಿಸಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ಕಾರ್ಯಕರ್ತರು ನಗರದ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ಈ ವೇಳೆ ಮಾತನಾಡಿದ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಘಟಕದ ಉಪಾಧ್ಯಕ್ಷ ಜೋಗಹಳ್ಳಿ ಅಮ್ಮು, ನಗರಾಧ್ಯಕ್ಷ ಶ್ರೀನಗರ ಬಶೀರ್, ಗೌರವ ಅಧ್ಯಕ್ಷ ಪು.ಮಹೇಶ್, ಪಾಲನಜೋಗಿಹಳ್ಳಿ ಕೆರೆಗೆ ಹೊಂದಿಕೊಂಡಂತೆ ಖಾಸಗಿಯವರು ಬಡಾವಣೆ ಮಾಡುತ್ತಿದ್ದು, ಕೆರೆಯ ಅಂಗಳವನ್ನು ಮುಚ್ಚಿ ಸುಮಾರು 60 ಅಡಿ ಉದ್ದದ ರಸ್ತೆಯನ್ನು ನಿರ್ಮಾಣ ಮಾಡಲು ಮುಂದಾಗಿದ್ದಾರೆಂದು ಆರೋಪಿಸಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯು ಅತಿ ವೇಗವಾಗಿ ಬೆಳೆಯುತ್ತಿದ್ದು, ಕೆಲವು ಖಾಸಗಿಯವರು ಇದನ್ನು ತಿಳಿದು, ಯಾವುದೇ ಸರಿಯಾದ ಅನುಮತಿಗಳಿಲ್ಲದೆ ಬಡಾವಣೆಗಳನ್ನು ಮಾಡಿ ಗ್ರಾಹಕರಿಗೆ ಟೋಪಿ ಹಾಕಿ ಮೋಸ ಮಾಡುತ್ತಿದ್ದಾರೆಂದು ದೂರಿದರು‌.

ಬೆಂಗಳೂರು ಅನಂತಪುರ ಅಂತರ್ ರಾಜ್ಯ ಹೆದ್ದಾರಿಯಲ್ಲಿ ಪಾಲನಜೋಗಳ್ಳಿಯ ಸರ್ವೇ ನಂಬರ್ 21ರಲ್ಲಿ ಸುಮಾರು 13 ಎಕರೆಯಲ್ಲಿ ಕೆರೆ ಇದ್ದು, ಖಾಸಗಿಯವರು ಕೆರೆಯನ್ನು ಸಂಪೂರ್ಣವಾಗಿ ಮುಚ್ಚುತ್ತಿರುವುದು ಕಂಡುಬಂದಿದೆ.

ಈ ಖಾಸಗಿ ಬಡಾವಣೆ ಯಾವುದೇ ಪೂರ್ಣ ಅನುಮತಿಯನ್ನು ಪಡೆದಿರುವುದಿಲ್ಲ, ಅಲ್ಲದೆ ಕೆರೆಯನ್ನು ಮುಚ್ಚಿ ರಸ್ತೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಈ ಕುರಿತು ಕ್ರಮಕೈಗೊಳ್ಳಬೇಕಾದ ಕಂದಾಯ ಅಧಿಕಾರಿಗಳು ಇದನ್ನು ನೋಡಿ ನೋಡದಂತೆ ವರ್ತಿಸುತ್ತಿದ್ದು, ಬಡಾವಣೆ ಅಧಿಕಾರಿಗಳಿಗೆ ಯಾವುದೇ ನೋಟಿಸ್ ಅನ್ನು ನೀಡಿರುವುದಿಲ್ಲ ಎಂದು ಗಂಭೀರ ಆರೋಪ ಮಾಡಿದರು.

ಈ ಕೂಡಲೇ ಸ್ಥಳ ಪರಿಶೀಲಿಸಿ, ಕೆರೆಯ ಸಂರಕ್ಷಣೆಯನ್ನು ಮಾಡಲು ಒತ್ತಾಯಿಸಿದ್ದು, ಅಧಿಕಾರಿಗಳು ಸ್ಪಂದಿಸದೆ ಇದ್ದರೆ ಕೆರೆಯ ಸ್ಥಳದಲ್ಲೇ ಗ್ರಾಮಸ್ಥರೊಂದಿಗೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು‌.

ಪ್ರತಿಭಟನೆಯಲ್ಲಿ ಕರವೇ ಪ್ರವೀಣ್ ಕುಮಾರ್ ಶೆಟ್ಟಿ ಬಣದ ದೊಡ್ಡಬಳ್ಳಾಪುರ ತಾಲೂಕು ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಎಲ್‌ಎನ್ ವೇಣು, ಕಾನೂನು ಸಲಹೆಗಾರ ನ್ಯಾಯವಾದಿ ಆನಂದ್, ಕಾರ್ಯದರ್ಶಿಗಳಾದ ಮಂಜು, ಮುಕ್ಕೇನಹಳ್ಳಿ ರವಿ, ಖಜಾಂಚಿ ಆನಂದ್, ಪ್ರಧಾನ ಕಾರ್ಯದರ್ಶಿ ರಘುನಂದನ್, ಸೂರಿ, ಸಿರಾಜ್, ಶ್ರೀನಿವಾಸ್, ನೂರುಲ್ಲ, ಪಂಚಾಯಿತಿ ಸದಸ್ಯರಾದ ಯಾಕೋಬ್ ಬೇಗ್, ಮುನಿರಾಜು, ಉಮೇಶ್, ಮಂಜುನಾಥ್, ಮುಖಂಡರಾದ ಮುನಿಕೃಷ್ಣ, ರಾಜಣ್ಣ, ಇಮ್ತಿಯಾಜ್, ಮೋಹನ್ ಮತ್ತಿತರರಿದ್ದರು.

ರಾಜಕೀಯ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕ ಸೇರಿ ಹಲವು ರಾಜ್ಯಾಧ್ಯಕ್ಷರ ಘೋಷಣೆ: ಬಿ.ವೈ.ವಿಜಯೇಂದ್ರ

ಅತಿ ಶೀಘ್ರವೇ ಕರ್ನಾಟಕವೂ ಒಳಗೊಂಡಂತೆ ಹಲವು ರಾಜ್ಯಾಧ್ಯಕ್ಷರ ಹೆಸರು ಘೋಷಣೆ ಆಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (B.Y.Vijayendra) ತಿಳಿಸಿದ್ದಾರೆ

[ccc_my_favorite_select_button post_id="109998"]
ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಇಂದು ನಾಡಪ್ರಭು ಕೆಂಪೇಗೌಡರ 516ನೇ ಜಯಂತ್ಯೋತ್ಸವಕ್ಕೆ ಚಾಲನೆ: ಕೆಂಪೇಗೌಡ ಪ್ರಶಸ್ತಿ ಪ್ರಕಟ

ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ (Nadaprabhu Kempegowda) 516ನೇ ಜಯಂತಿಯನ್ನು 27ನೇ ಜೂನ್ 2025ರ (ಶುಕ್ರವಾರ) ಆಚರಿಸಲಾಗುತ್ತಿದೆ.

[ccc_my_favorite_select_button post_id="110037"]
ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ದೇಶವು ವಿಶ್ವದಲ್ಲಿ ನಂ.1 ಆಗಲು ಮಾನವ ಸಂಪನ್ಮೂಲದ ಸದ್ಭಳಕೆ ಆಗಬೇಕು: ಪ್ರಲ್ಹಾದ ಜೋಶಿ

ವಿಶ್ವದ ಬೇರೆ ಬೇರೆ ದೇಶಗಳಿಗೆ ಹೊಲಿಕೆ ಮಾಡಿದಾಗ ಭಾರತವು ಹೇರಳವಾದ ಮಾನವ ಸಂಪನ್ಮೂಲ ಹೊಂದಿದೆ ಸಚಿವ ಪ್ರಲ್ಹಾದ ಜೋಶಿ (Pralhad Joshi)

[ccc_my_favorite_select_button post_id="108459"]
ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಲಾಸ್ ಏಂಜಲೀಸ್‌ ಧಗಧಗ..!| Video ನೋಡಿ

ಪ್ರಸ್ತುತ ವರದಿ ಪ್ರಕಾರ, ಡೊನಾಲ್ಡ್ ಟ್ರಂಪ್ ಅವರ ಐಸಿಇ ದಾಳಿಗಳನ್ನು ಧಿಕ್ಕರಿಸಿ ಲಾಸ್ ಏಂಜಲೀಸ್‌ನಲ್ಲಿ ದೊಡ್ಡಮಟ್ಟದದಲ್ಲಿ ಶಾಂತಿಯುತ ಪ್ರತಿಭಟನೆ Los Angeles

[ccc_my_favorite_select_button post_id="108829"]

ಕ್ರೀಡೆ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಕಾಲ್ತುಳಿತ; ತುರ್ತು ಅಧಿವೇಶನ ಕರೆಯಲು ಆರ್‌ ಅಶೋಕ ಆಗ್ರಹ

RCB ವಿಜಯೋತ್ಸವದ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ

[ccc_my_favorite_select_button post_id="109276"]
ಬೆಂಕಿ ಹಚ್ಚಿ ಹೆತ್ತ ತಾಯಿಯ ಕೊಲೆ ಮಾಡಿದ ಪಾಪಿ ಮಗ..!

ಬೆಂಕಿ ಹಚ್ಚಿ ಹೆತ್ತ ತಾಯಿಯ ಕೊಲೆ ಮಾಡಿದ ಪಾಪಿ ಮಗ..!

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಹೆತ್ತ ಮಗನೇ ತಾಯಿಯನ್ನು ಕೊಲೆ (Murdered) ಮಾಡಿದ ಘಟನೆ ಮಂಜೇಶ್ವರ ತಾಲೂಕಿನ ವರ್ಕಾಡಿಯಲ್ಲಿ ನಡೆದಿದೆ.

[ccc_my_favorite_select_button post_id="110047"]
ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಿಂದ 297 ಸಾವು..! ಜಿಲ್ಲಾಧಿಕಾರಿ ಕಳವಳ

ಬೆಂ.ಗ್ರಾ.ಜಿಲ್ಲೆ: ಜಿಲ್ಲೆಯಲ್ಲಿ ದಿನೇ ದಿನೇ ರಸ್ತೆ ಅಪಘಾತಗಳು ಹೆಚ್ಚುತ್ತಲೇ ಇವೆ, ರಾಷ್ಟ್ರೀಯ ಹೆದ್ದಾರಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದೆ; ಜಿಲ್ಲಾಧಿಕಾರಿ ಎ.ಬಿ ಬಸವರಾಜು (Deputy Commissioner A.B. Basavaraju)

[ccc_my_favorite_select_button post_id="109939"]

ಆರೋಗ್ಯ

ಸಿನಿಮಾ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

CET ಫಲಿತಾಂಶ ಪ್ರಕಟ| ಫಲಿತಾಂಶ ನೋಡಲು ಲಿಂಕ್ ಇಲ್ಲಿದೆ

ವಿದ್ಯಾರ್ಥಿಗಳು ಸಾಕಷ್ಟು ಕಾತರದಿಂದ ಕಾಯುತ್ತಿದ್ದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ 2025ರ (CET) ಫಲಿತಾಂಶ ಪ್ರಕಟಗೊಂಡಿದೆ.

[ccc_my_favorite_select_button post_id="107812"]