MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ದೊಡ್ಡಬಳ್ಳಾಪುರ: ಶಿಕ್ಷಣ ಸಂಸ್ಥೆಗಳು ಮುಂದಿನ ಸುಭದ್ರ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಬೇಕಾಗಿದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ (B.Veerappa) ಕರೆ ನೀಡಿದರು.

ನಗರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ 17ನೇ ವರ್ಷದ ಶಾಲಾ ವಾರ್ಷಿಕೋತ್ಸವ “ಸಾರಂಗ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

“ವಿದ್ಯೆ ರಾಜನಿಗೆ ರಾಜ” ಅಂತಹ ವಿದ್ಯೆ ನೀಡುತ್ತಿರುವ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕರ ಜೀವನ ಸಾರ್ಥಕ. ಈ ಸಮಾಜದಲ್ಲಿ ನಮಗಿಂತ ದೊಡ್ಡ ವ್ಯಕ್ತಿಯಾಗಿ ಬೆಳೆಯಬೇಕು. ಸಮಾಜದಲ್ಲಿ ಸಾಧಕನಾಗಿ ಗುರುತಿಸುವ ವ್ಯಕ್ತಿತ್ವ ನಮ್ಮ ಮಕ್ಕಳದ್ದಾಗಬೇಕು.

ಎದೆಗುಂದದೇ ನ್ಯಾಯಯುತವಾಗಿ ಬದುಕಬೇಕು ಎನ್ನುವುದು ಪ್ರತಿಯೊಬ್ಬ ತಂದೆ ತಾಯಿಗಳ ಬಯಕೆಯಾಗಿರುತ್ತದೆ. ಆ ತಂದೆ ತಾಯಿಗಳ ಋಣ ತೀರಿಸುವ ಸಮಾಜದ ಹಾಗೂ ಕಲಿಸಿದ ಶಿಕ್ಷಣ ಮತ್ತು ಶಿಕ್ಷಕನ ಋಣ ತೀರಿಸುವ ಕೆಲಸ ಇಂದಿನ ಮಕ್ಕಳ ಜವಾಬ್ದಾರಿಯಾಗಬೇಕು.

“ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎನ್ನುವ ವಿವೇಕವಾಣಿ ಮಕ್ಕಳ ಮನಸಲ್ಲಿ ಸದಾ ಗುನುಗುಟ್ಟುತ್ತಿರಬೇಕು. ಮಕ್ಕಳಲ್ಲಿ ದೃಢವಾದ ಸಂಕಲ್ಪ, ಹಠ, ನಿರಂತರ ಪ್ರಯತ್ನ ಇದ್ದಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಸಾಧನೆ ಕಂಡು ಹೆತ್ತೊಡಲು ಸಂತಸ ಪಡಬೇಕು. ಸತ್ತಾಗ ಶತ್ರುಗಳೂ ಸಹ ಕಣ್ಣೀರು ಹಾಕುವ ಹಾಗೆ ಜಗ ಮೆಚ್ಚುವ ರೀತಿಯಲ್ಲಿ ಬದುಕಬೇಕು.

ವಿದ್ಯೆಯ ಜೊತೆಗೆ ವಿನಯ, ಸಂಸ್ಕಾರ, ದೇಶಾಭಿಮಾನವನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು. ಕಲ್ಲಿನಲ್ಲಿರುವ ಬೇಡವಾದ ವಸ್ತುವನ್ನು ಹೊರತೆಗೆದು ಪ್ರತಿ ಕಲ್ಲಿನಲ್ಲೂ ಒಂದು ಸುಂದರ ವಿಗ್ರಹವನ್ನು ಕಾಣುವ ಶಿಕ್ಷಕರಿಗೆ ಗೌರವ ತರುವ ಕೆಲಸ ಮಕ್ಕಳದ್ದಾಗಬೇಕು.

ಪ್ರೀತಿ ಪ್ರೇಮದ ಪಾಶ

ಬಾಹ್ಯ ಸೌಂದರ್ಯಕ್ಕೆ ಮನಸೋತು ಇಂದಿನ ಮಕ್ಕಳು ಪ್ರೀತಿ ಪ್ರೇಮದ ಪಾಶದಲ್ಲಿ ಸಿಲುಕಿ ತಮ್ಮ ಮುಂದಿನ ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳಿಗೆ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಡುವಲ್ಲಿ ತಂದೆ ತಾಯಿಗಳು ತಮ್ಮ ಮಕ್ಕಳ ಮೇಲಿನ ಧೃತರಾಷ್ಟ್ರ ವ್ಯಾಮೋಹವನ್ನು ತೊರೆದು, ಸುಂದರವಾಗಿ ಬದುಕುವ ಕಲೆಯನ್ನು ಕಲ್ಪಿಸಿಕೊಡಬೇಕು ಎಂದರು.

ಹಳ್ಳಿಯ ಬದುಕಿನ ಅರಿವು ಮಕ್ಕಳಲ್ಲಿ ಮೂಡಿಸುವ ಜವಾಬ್ದಾರಿಯುತ ಪಾಲಕರಾಗಬೇಕು. ಮಾನವನ ದುರಾಸೆಯಿಂದ ಪ್ರಕೃತಿ ವಿನಾಶದಂಚಿಗೆ ಸಾಗುತ್ತಿದೆ. ಪರಿಸರ ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಕೈಜೋಡಿಸಬೇಕು. ಪ್ರಕೃತಿಯಲ್ಲಿ ನಿಸ್ವಾರ್ಥತೆಯಿಂದ ಬದುಕುವ ಗಿಡಮರಗಳ ರೀತಿಯಲ್ಲಿ ವಿದ್ಯಾರ್ಥಿಗಳು ಬದುಕಬೇಕು ಎಂದು ಹೇಳಿದರು.

ಒಂಭತ್ತು ಭಾಷೆಯನ್ನು ಬಲ್ಲವ, ಸಮಾಜದಲ್ಲಿ ಅವಮಾನಿತನಾಗಿ ಇಡೀ ದೇಶಕ್ಕೆ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.

ಸಮಾಜದಲ್ಲಿ ಕ್ಯಾನ್ಸರ್ ರೋಗ ತೊಲಗಿಸಬಹುದು. ಆದರೆ ಆ ರೋಗದಂತೆ ಹಬ್ಬಿದ ಭ್ರಷ್ಟಾಚಾರವನ್ನು ತೊಲಗಿಸಲು ಸಾಧ್ಯವಿಲ್ಲ. ಅಂತಹ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಪ್ರತಿ ತಾಯಂದಿರೂ, ತಮ್ಮ ತಮ್ಮ ಪತಿಯರನ್ನು ಹಾಗೂ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ತಾಯಂದಿರಿಗೆ ಸಲಹೆ ನೀಡಿದರು.

MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ಈ ಶಿಕ್ಷಣ ಸಂಸ್ಥೆ 132 ಮಕ್ಕಳಿಂದ ಪ್ರಾರಂಭವಾಗಿ ಇಂದು ಸಾವಿರ ಸಾವಿರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ ಭಾಗದ ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಬೆಳೆದಿರುವುದರ ಹಿಂದೆ ಸಂಸ್ಥೆಯ ಅಧ್ಯಕ್ಷರಾದ ಸುಬ್ರಮಣ್ಯ ಹಾಗೂ ಅವರ ಧರ್ಮಪತ್ನಿ ಮಂಜುಳಾರವರ ಅದಮ್ಯ ಆಲೋಚನಾ ಶಕ್ತಿ ನಿರಂತರ ಪ್ರಯತ್ನ ಹಾಗೂ ನಗರದ ಜನರ ಪ್ರೋತ್ಸಾಹವೇ ಕಾರಣವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ರೆಮ್ಯ ಬಿ.ವಿ ಅವರು, ಶಾಲೆಯ ವರ್ಷದ ಸಾಧನೆಗಳನ್ನು ತಮ್ಮ ವಾರ್ಷಿಕ ವರದಿಯಲ್ಲಿ ವಿವರಿಸಿದರು.

MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ಸಂಸ್ಥೆಯ ಉಪಾಧ್ಯಕ್ಷ ಸ್ವರೂಪ್ ರವರು 2023-24ನೇ ಸಾಲಿನ ಸಿ.ಬಿ.ಎಸ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.

ಕಳೆದ ವರ್ಷದ 10 ನೇ ತರಗತಿ ಪರೀಕ್ಷೆಯ. ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಟ್ರಸ್ಟಿ ಡಾ| ಮೃದುಲಾ ಎಸ್. ಸನ್ಮಾನಿಸಿದರು.

ಸಿ.ಬಿ.ಎಸ್.ಸಿ. ವಲಯ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ಕ್ರೀಡಾ ರತ್ನಗಳಿಗೆ ಟ್ರಸ್ಟಿ ನಯನಾ ಸ್ವರೂಪ ಸನ್ಮಾನಿಸಿದರು.

MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ಕಾರ್ಯಕ್ರಮದ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಎಂಬಂತೆ ಭಾರತದ ವಿವಿಧ ರಾಜ್ಯಗಳ ಹಬ್ಬಗಳನ್ನು ಬಿಂಬಿಸುವ ನೃತ್ಯ ನಮ್ಮ ಶಾಲೆಯ ಸ್ವಾಗತ ನೃತ್ಯ, ಸುಮಾರು 20 ನಿಮಿಷಗಳ ಕಾಲ ವೀಕ್ಷಕರನ್ನು ಮಂತ್ರ ಮುಗ್ಧಗೊಳಿಸಿತು.

ಹಿರಣ್ಯ ಕಷ್ಯಪ ಸಂಹಾರ, ರಾಮಾಯಣ, ರೈತ ಗೀತೆ, ಉತ್ತರ ಭಾರತ ಹಾಗೂ ಗೋವಾದ ಸ್ಥಳೀಯ ನೃತ್ಯ ಪ್ರಾಕಾರಗಳನ್ನೊಳಗೊಂಡ ಕಾರ್ಯಕ್ರಮಗಳು ವಾರ್ಷಿಕೋತ್ಸವದ ಪ್ರಮುಖ ಅಂಶಗಳಾಗಿದ್ದವು.

MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ಜಗಮಗಿಸುವ ಬೆಳಕಿನ ಮಧ್ಯದಲ್ಲಿ ನಕ್ಷತ್ರ ಲೋಕವೇ ಧರೆಗಿಳಿದು ಬಂದಂತೆ, ಮಕ್ಕಳ ಮನರಂಜನಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ವಹಿಸಿಕೊಂಡಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ DYSP ಗಿರೀಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್, ANT ಟೆನ್ನಿಸ್ ಅಕಾಡೆಮಿಯ ಆದಿನಾಥ್ ನಾರ್ಡೆ, ರೇವತಿ ನಾರ್ಡೆ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ, ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದ ಸೇರಿ ಸುಮಾರು 4000 ರಿಂದ 5000 ಪ್ರೇಕ್ಷಕರು ಈ ವಾರ್ಷಿಕೋತ್ಸವಕ್ಕೆ ಸಾಕ್ಷಿಯಾದರು.

ರಾಜಕೀಯ

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬಿ.ಮುನೇಗೌಡರ ತಬ್ಬಲಿ ಮಾಡುದ್ರಾ ಜೆಡಿಎಸ್ ವರಿಷ್ಠರು..?!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಾತ್ಯತೀತ ಜನತಾದಳ (JDS) ಪಕ್ಷದ ಅಧ್ಯಕ್ಷರಾಗಿ ಮಂಜುನಾಥ್ ಕೆ.ವಿ (Manjunath K.V) ಅವರನ್ನು ನೇಮಕ ಮಾಡಲಾಗಿದೆ. ಈ ಮೂಲಕ ಹಲವು ವರ್ಷಗಳ ಕಾಲ ಪಕ್ಷಕ್ಕಾಗಿ ತನು, ಮನ, ಧನವನ್ನ ಅರ್ಪಿಸಿದ್ದ

[ccc_my_favorite_select_button post_id="119223"]
ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರ ಬಜೆಟ್.. ಕಾಂಗ್ರೆಸ್ ಸರ್ಕಾರದ ಟೀಕೆಗಳಿಗೆ ಉತ್ತರ: ಹೆಚ್.ಡಿ. ಕುಮಾರಸ್ವಾಮಿ

ಕೇಂದ್ರದ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2026-27ನೇ ಸಾಲಿನ ಆಯವ್ಯಯದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವ ಟೀಕೆಗಳಿಗೆ ಉತ್ತರ ಕೊಡಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು

[ccc_my_favorite_select_button post_id="119030"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

RCB: ಮತ್ತೆ ಕಪ್ ನಮ್ದು

RCB: ಮತ್ತೆ ಕಪ್ ನಮ್ದು

4ನೇ ಆವೃತ್ತಿಯ ಮಹಿಳಾ ಪ್ರೀಮಿ ಯರ್ ಲೀಗ್ (ಡಬ್ಲ್ಯೂಪಿ ಎಲ್) ಟೂರ್ನಿಯಲ್ಲಿ ಸ್ಮೃತಿ ಮಂಧಾನಾ ನಾಯಕತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಚಾಂಪಿಯನ್ ಆಗಿ ಹೊರ ಹೊಮ್ಮಿದ್ದು, ಸಿಎಂ ಸಿದ್ದರಾಮಯ್ಯ (Cmsiddaramaiah), ಡಿಸಿಎಂ

[ccc_my_favorite_select_button post_id="119174"]
ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ..  ರೈತರಿಗೆ ಅಪಾರ ನಷ್ಟ

ದೊಡ್ಡಬಳ್ಳಾಪುರ: ಹುಲ್ಲಿನ ಬಣವೆಗೆ ಬೆಂಕಿ.. ರೈತರಿಗೆ ಅಪಾರ ನಷ್ಟ

ಸಹೋದರರು ಒಂದೇ ಕಡೆ ಹಾಕಿದ್ದ ಬಣವೆಗೆ (Haystack) ಆಕಸ್ಮಿಕವಾಗಿ ಬೆಂಕಿ (Fire) ತಗುಲಿ, ಹುಲ್ಲು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ತಾಲೂಕಿನ ***** ಗ್ರಾಮದಲ್ಲಿ ಗುರುವಾರ ರಾತ್ರಿ ಸಂಭವಿಸಿದೆ.

[ccc_my_favorite_select_button post_id="119190"]
ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ದೊಡ್ಡಬಳ್ಳಾಪುರ: ಅಪಘಾತ.. ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಬೈಕ್ ಸವಾರ ಮಸಣಕ್ಕೆ…!

ಖಾಸಗಿ ಕಂಪನಿಯಲ್ಲಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸಾವರ ರಸ್ತೆ ಬದಿಯ ಹಳ್ಳಕ್ಕೆ ಬಿದ್ದು ಸಾವನಪ್ಪಿರುವ ಘಟನೆ (Accident) ತಾಲೂಕಿನ ಮಾಕಳಿ ಬಳಿ ಇಂದು ಮುಂಜಾನೆ ಸಂಭವಿಸಿದೆ.

[ccc_my_favorite_select_button post_id="119217"]

ಆರೋಗ್ಯ

ಸಿನಿಮಾ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

2020 ಹಾಗೂ 2021 ರ ರಾಜ್ಯ ಚಲನಚಿತ್ರ ಪ್ರಶಸ್ತಿಗಳು ಪ್ರಕಟ

ಕರ್ನಾಟಕ ಸರ್ಕಾರವು ಚಲನಚಿತ್ರ ರಂಗದಲ್ಲಿನ ಜೀವಮಾನ ಸಾಧನೆಗಾಗಿ ನೀಡುವ ಡಾ.ರಾಜಕುಮಾರ್, ಪುಟ್ಟಣ್ಣ ಕಣಗಾಲ್ ಹಾಗೂ ಡಾ.ವಿಷ್ಣುವರ್ಧನ್ ಪ್ರಶಸ್ತಿಗಳನ್ನು ಪ್ರಕಟಿಸಿದೆ (State Film Awards).

[ccc_my_favorite_select_button post_id="118307"]
error: Content is protected !!