MSV ಶಾಲೆಯಲ್ಲಿ ಅದ್ಧೂರಿ ವಾರ್ಷಿಕೋತ್ಸವ; ಉಪಲೋಕಾಯುಕ್ತ ಬಿ.ವೀರಪ್ಪರ ಮಾತಿಗೆ ಮಕ್ಕಳು ಫಿದಾ..!| B.Veerappa

ದೊಡ್ಡಬಳ್ಳಾಪುರ: ಶಿಕ್ಷಣ ಸಂಸ್ಥೆಗಳು ಮುಂದಿನ ಸುಭದ್ರ ಸಮಾಜ ಕಟ್ಟುವ ಕಾರ್ಯದಲ್ಲಿ ತೊಡಗಬೇಕಾಗಿದೆ ಎಂದು ಉಪಲೋಕಾಯುಕ್ತ ಬಿ.ವೀರಪ್ಪ (B.Veerappa) ಕರೆ ನೀಡಿದರು.

ನಗರ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಎಂ.ಎಸ್.ವಿ. ಪಬ್ಲಿಕ್ ಶಾಲೆಯಲ್ಲಿ ಶುಕ್ರವಾರ ನಡೆದ 17ನೇ ವರ್ಷದ ಶಾಲಾ ವಾರ್ಷಿಕೋತ್ಸವ “ಸಾರಂಗ್” ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.

“ವಿದ್ಯೆ ರಾಜನಿಗೆ ರಾಜ” ಅಂತಹ ವಿದ್ಯೆ ನೀಡುತ್ತಿರುವ ಶಿಕ್ಷಣ ಸಂಸ್ಥೆ ಹಾಗೂ ಶಿಕ್ಷಕರ ಜೀವನ ಸಾರ್ಥಕ. ಈ ಸಮಾಜದಲ್ಲಿ ನಮಗಿಂತ ದೊಡ್ಡ ವ್ಯಕ್ತಿಯಾಗಿ ಬೆಳೆಯಬೇಕು. ಸಮಾಜದಲ್ಲಿ ಸಾಧಕನಾಗಿ ಗುರುತಿಸುವ ವ್ಯಕ್ತಿತ್ವ ನಮ್ಮ ಮಕ್ಕಳದ್ದಾಗಬೇಕು.

ಎದೆಗುಂದದೇ ನ್ಯಾಯಯುತವಾಗಿ ಬದುಕಬೇಕು ಎನ್ನುವುದು ಪ್ರತಿಯೊಬ್ಬ ತಂದೆ ತಾಯಿಗಳ ಬಯಕೆಯಾಗಿರುತ್ತದೆ. ಆ ತಂದೆ ತಾಯಿಗಳ ಋಣ ತೀರಿಸುವ ಸಮಾಜದ ಹಾಗೂ ಕಲಿಸಿದ ಶಿಕ್ಷಣ ಮತ್ತು ಶಿಕ್ಷಕನ ಋಣ ತೀರಿಸುವ ಕೆಲಸ ಇಂದಿನ ಮಕ್ಕಳ ಜವಾಬ್ದಾರಿಯಾಗಬೇಕು.

“ಏಳಿ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ” ಎನ್ನುವ ವಿವೇಕವಾಣಿ ಮಕ್ಕಳ ಮನಸಲ್ಲಿ ಸದಾ ಗುನುಗುಟ್ಟುತ್ತಿರಬೇಕು. ಮಕ್ಕಳಲ್ಲಿ ದೃಢವಾದ ಸಂಕಲ್ಪ, ಹಠ, ನಿರಂತರ ಪ್ರಯತ್ನ ಇದ್ದಾಗ ಮಾತ್ರ ಸಾಧನೆ ಸಾಧ್ಯವಾಗುತ್ತದೆ. ಸಾಧನೆ ಕಂಡು ಹೆತ್ತೊಡಲು ಸಂತಸ ಪಡಬೇಕು. ಸತ್ತಾಗ ಶತ್ರುಗಳೂ ಸಹ ಕಣ್ಣೀರು ಹಾಕುವ ಹಾಗೆ ಜಗ ಮೆಚ್ಚುವ ರೀತಿಯಲ್ಲಿ ಬದುಕಬೇಕು.

ವಿದ್ಯೆಯ ಜೊತೆಗೆ ವಿನಯ, ಸಂಸ್ಕಾರ, ದೇಶಾಭಿಮಾನವನ್ನು ಮಕ್ಕಳು ಮೈಗೂಡಿಸಿಕೊಳ್ಳಬೇಕು. ಕಲ್ಲಿನಲ್ಲಿರುವ ಬೇಡವಾದ ವಸ್ತುವನ್ನು ಹೊರತೆಗೆದು ಪ್ರತಿ ಕಲ್ಲಿನಲ್ಲೂ ಒಂದು ಸುಂದರ ವಿಗ್ರಹವನ್ನು ಕಾಣುವ ಶಿಕ್ಷಕರಿಗೆ ಗೌರವ ತರುವ ಕೆಲಸ ಮಕ್ಕಳದ್ದಾಗಬೇಕು.

ಪ್ರೀತಿ ಪ್ರೇಮದ ಪಾಶ

ಬಾಹ್ಯ ಸೌಂದರ್ಯಕ್ಕೆ ಮನಸೋತು ಇಂದಿನ ಮಕ್ಕಳು ಪ್ರೀತಿ ಪ್ರೇಮದ ಪಾಶದಲ್ಲಿ ಸಿಲುಕಿ ತಮ್ಮ ಮುಂದಿನ ಸುಂದರ ಬದುಕನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಅಂತಹ ಮಕ್ಕಳಿಗೆ ಒಳ್ಳೆಯ ವ್ಯಕ್ತಿತ್ವ ರೂಪಿಸಿಕೊಡುವಲ್ಲಿ ತಂದೆ ತಾಯಿಗಳು ತಮ್ಮ ಮಕ್ಕಳ ಮೇಲಿನ ಧೃತರಾಷ್ಟ್ರ ವ್ಯಾಮೋಹವನ್ನು ತೊರೆದು, ಸುಂದರವಾಗಿ ಬದುಕುವ ಕಲೆಯನ್ನು ಕಲ್ಪಿಸಿಕೊಡಬೇಕು ಎಂದರು.

ಹಳ್ಳಿಯ ಬದುಕಿನ ಅರಿವು ಮಕ್ಕಳಲ್ಲಿ ಮೂಡಿಸುವ ಜವಾಬ್ದಾರಿಯುತ ಪಾಲಕರಾಗಬೇಕು. ಮಾನವನ ದುರಾಸೆಯಿಂದ ಪ್ರಕೃತಿ ವಿನಾಶದಂಚಿಗೆ ಸಾಗುತ್ತಿದೆ. ಪರಿಸರ ಉಳಿಸಿ ಬೆಳೆಸುವಲ್ಲಿ ವಿದ್ಯಾರ್ಥಿಗಳು ಹಾಗೂ ಪಾಲಕರು ಕೈಜೋಡಿಸಬೇಕು. ಪ್ರಕೃತಿಯಲ್ಲಿ ನಿಸ್ವಾರ್ಥತೆಯಿಂದ ಬದುಕುವ ಗಿಡಮರಗಳ ರೀತಿಯಲ್ಲಿ ವಿದ್ಯಾರ್ಥಿಗಳು ಬದುಕಬೇಕು ಎಂದು ಹೇಳಿದರು.

ಒಂಭತ್ತು ಭಾಷೆಯನ್ನು ಬಲ್ಲವ, ಸಮಾಜದಲ್ಲಿ ಅವಮಾನಿತನಾಗಿ ಇಡೀ ದೇಶಕ್ಕೆ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.

ಸಮಾಜದಲ್ಲಿ ಕ್ಯಾನ್ಸರ್ ರೋಗ ತೊಲಗಿಸಬಹುದು. ಆದರೆ ಆ ರೋಗದಂತೆ ಹಬ್ಬಿದ ಭ್ರಷ್ಟಾಚಾರವನ್ನು ತೊಲಗಿಸಲು ಸಾಧ್ಯವಿಲ್ಲ. ಅಂತಹ ಭ್ರಷ್ಟಾಚಾರ ನಿರ್ಮೂಲನೆಯಲ್ಲಿ ಪ್ರತಿ ತಾಯಂದಿರೂ, ತಮ್ಮ ತಮ್ಮ ಪತಿಯರನ್ನು ಹಾಗೂ ಮಕ್ಕಳನ್ನು ಸಂಸ್ಕಾರವಂತರನ್ನಾಗಿ ಮಾಡಬೇಕು ಎಂದು ತಾಯಂದಿರಿಗೆ ಸಲಹೆ ನೀಡಿದರು.

ಈ ಶಿಕ್ಷಣ ಸಂಸ್ಥೆ 132 ಮಕ್ಕಳಿಂದ ಪ್ರಾರಂಭವಾಗಿ ಇಂದು ಸಾವಿರ ಸಾವಿರ ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಈ ಭಾಗದ ದೊಡ್ಡ ಶಿಕ್ಷಣ ಸಂಸ್ಥೆಯಾಗಿ ಬೆಳೆದಿರುವುದರ ಹಿಂದೆ ಸಂಸ್ಥೆಯ ಅಧ್ಯಕ್ಷರಾದ ಸುಬ್ರಮಣ್ಯ ಹಾಗೂ ಅವರ ಧರ್ಮಪತ್ನಿ ಮಂಜುಳಾರವರ ಅದಮ್ಯ ಆಲೋಚನಾ ಶಕ್ತಿ ನಿರಂತರ ಪ್ರಯತ್ನ ಹಾಗೂ ನಗರದ ಜನರ ಪ್ರೋತ್ಸಾಹವೇ ಕಾರಣವಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಪ್ರಾಂಶುಪಾಲರಾದ ರೆಮ್ಯ ಬಿ.ವಿ ಅವರು, ಶಾಲೆಯ ವರ್ಷದ ಸಾಧನೆಗಳನ್ನು ತಮ್ಮ ವಾರ್ಷಿಕ ವರದಿಯಲ್ಲಿ ವಿವರಿಸಿದರು.

ಸಂಸ್ಥೆಯ ಉಪಾಧ್ಯಕ್ಷ ಸ್ವರೂಪ್ ರವರು 2023-24ನೇ ಸಾಲಿನ ಸಿ.ಬಿ.ಎಸ್.ಸಿ. ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.

ಕಳೆದ ವರ್ಷದ 10 ನೇ ತರಗತಿ ಪರೀಕ್ಷೆಯ. ಕನ್ನಡ ವಿಷಯದಲ್ಲಿ 100ಕ್ಕೆ 100 ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸಂಸ್ಥೆಯ ಟ್ರಸ್ಟಿ ಡಾ| ಮೃದುಲಾ ಎಸ್. ಸನ್ಮಾನಿಸಿದರು.

ಸಿ.ಬಿ.ಎಸ್.ಸಿ. ವಲಯ ಮಟ್ಟ ಹಾಗೂ ರಾಜ್ಯಮಟ್ಟದ ಕ್ರೀಡೆಯಲ್ಲಿ ಚಿನ್ನ ಮತ್ತು ಬೆಳ್ಳಿ ಪದಕ ಪಡೆದ ಕ್ರೀಡಾ ರತ್ನಗಳಿಗೆ ಟ್ರಸ್ಟಿ ನಯನಾ ಸ್ವರೂಪ ಸನ್ಮಾನಿಸಿದರು.

ಕಾರ್ಯಕ್ರಮದ ಅಂಗವಾಗಿ “ವಿವಿಧತೆಯಲ್ಲಿ ಏಕತೆ” ಎಂಬಂತೆ ಭಾರತದ ವಿವಿಧ ರಾಜ್ಯಗಳ ಹಬ್ಬಗಳನ್ನು ಬಿಂಬಿಸುವ ನೃತ್ಯ ನಮ್ಮ ಶಾಲೆಯ ಸ್ವಾಗತ ನೃತ್ಯ, ಸುಮಾರು 20 ನಿಮಿಷಗಳ ಕಾಲ ವೀಕ್ಷಕರನ್ನು ಮಂತ್ರ ಮುಗ್ಧಗೊಳಿಸಿತು.

ಹಿರಣ್ಯ ಕಷ್ಯಪ ಸಂಹಾರ, ರಾಮಾಯಣ, ರೈತ ಗೀತೆ, ಉತ್ತರ ಭಾರತ ಹಾಗೂ ಗೋವಾದ ಸ್ಥಳೀಯ ನೃತ್ಯ ಪ್ರಾಕಾರಗಳನ್ನೊಳಗೊಂಡ ಕಾರ್ಯಕ್ರಮಗಳು ವಾರ್ಷಿಕೋತ್ಸವದ ಪ್ರಮುಖ ಅಂಶಗಳಾಗಿದ್ದವು.

ಜಗಮಗಿಸುವ ಬೆಳಕಿನ ಮಧ್ಯದಲ್ಲಿ ನಕ್ಷತ್ರ ಲೋಕವೇ ಧರೆಗಿಳಿದು ಬಂದಂತೆ, ಮಕ್ಕಳ ಮನರಂಜನಾ ಕಾರ್ಯಕ್ರಮ ನೆರೆದ ಪ್ರೇಕ್ಷಕರನ್ನು ರಂಜಿಸಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಸುಬ್ರಮಣ್ಯ ವಹಿಸಿಕೊಂಡಿದ್ದರು.

ಬೆಂಗಳೂರು ಗ್ರಾಮಾಂತರ ಲೋಕಾಯುಕ್ತ DYSP ಗಿರೀಶ್, ಉಪವಿಭಾಗಾಧಿಕಾರಿ ದುರ್ಗಾಶ್ರೀ, ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್, ANT ಟೆನ್ನಿಸ್ ಅಕಾಡೆಮಿಯ ಆದಿನಾಥ್ ನಾರ್ಡೆ, ರೇವತಿ ನಾರ್ಡೆ ಕೂಡ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಉಪ ಪ್ರಾಂಶುಪಾಲರಾದ ಪ್ರತಿಮಾ ಪೈ, ಹಾಗೂ ಶಿಕ್ಷಕ-ಶಿಕ್ಷಕೇತರ ವೃಂದ ಸೇರಿ ಸುಮಾರು 4000 ರಿಂದ 5000 ಪ್ರೇಕ್ಷಕರು ಈ ವಾರ್ಷಿಕೋತ್ಸವಕ್ಕೆ ಸಾಕ್ಷಿಯಾದರು.

ರಾಜಕೀಯ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಭವಿಷ್ಯ ನುಡಿಯೋಕೆ ಅವರ‍್ಯಾರು, ಜ್ಯೋತಿಷಿನಾ? – ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್‌ ಕುಮಾರಸ್ವಾಮಿ

ಖಾತಾ ಪರಿವರ್ತನೆ ಹೆಸರಿನಲ್ಲಿ ರಾಜ್ಯ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದೆ. ಸರ್ಕಾರದ ಬಳಿ ಗುಂಡಿ ಮುಚ್ಚಲು ಹಣವಿಲ್ಲ, ಹಗಲು ದರೋಡೆ ದಂಧೆ ಮಾಡ್ತಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil

[ccc_my_favorite_select_button post_id="115363"]
ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ: Cm ಸಿದ್ದರಾಮಯ್ಯ ಎಚ್ಚರಿಕೆ

ಪ್ರಾಣಿ ಸಂಪತ್ತು ಇಲ್ಲದೆ ಅರಣ್ಯ ಸಂಪತ್ತಿಗೆ ಮೌಲ್ಯವೇ ಇಲ್ಲ. ಹೀಗಾಗಿ ಪ್ರಾಣಿ ಸಂಪತ್ತನ್ನು ಕೊಲ್ಲುವವರ ವಿರುದ್ಧ ಕಠಿಣ ಕ್ರಮ ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Cm Siddaramaiah) ಅವರು ಸ್ಪಷ್ಟ ಎಚ್ಚರಿಕೆ ನೀಡಿದರು.

[ccc_my_favorite_select_button post_id="114725"]
ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಸಂಸದ ಡಾ.ಕೆ.ಸುಧಾಕರ್‌ ಭಾಗಿ

ಕಾಮನ್‌ವೆಲ್ತ್‌ ಸಂಸದೀಯ ಸಂಘದ ಭಾರತೀಯ ವಿಭಾಗದ 11ನೇ ಸಮ್ಮೇಳನದಲ್ಲಿ ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರೊಂದಿಗೆ, ಸಂಘಟನೆಯ ಟ್ರಸ್ಟಿಯೂ ಆಗಿರುವ ಸಂಸದ ಡಾ.ಕೆ.ಸುಧಾಕರ್‌ (Dr.K.Sudhakar)

[ccc_my_favorite_select_button post_id="113863"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ಯೋಗ ಚಾಂಪಿಯನ್‌ಶಿಪ್: ವಿ.ವರ ಪ್ರಸಾದ್‌ಗೆ ಚಿನ್ನದ ಪದಕ

ನಿಸರ್ಗ ಯೋಗ ಕೇಂದ್ರದ ಹಾಗೂ ರಾಜ್ಯ ಬಾಲಕರ ಯೋಗ ತಂಡದ ನಾಯಕ ವಿ.ವರ ಪ್ರಸಾದ್ (V. Vara Prasad) 50ನೇ ಗೋಲ್ಡನ್‌ ಜುಬ್ಲಿ ರಾಷ್ಟ್ರೀಯ ಯೋಗ ಚಾಂಪಿಯನ್‌ಶಿಪ್ (Yoga Championship) ನಲ್ಲಿ ಭಾಗವಹಿಸಿ ಚಿನ್ನದ

[ccc_my_favorite_select_button post_id="114944"]
ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ದೊಡ್ಡಬಳ್ಳಾಪುರ: ಗುಟ್ಟೆ ನರಸಿಂಹಸ್ವಾಮಿ ದೇವಾಲಯದಲ್ಲಿ ಮತ್ತೆ ಕಳವು..!

ಕಳೆದ ತಿಂಗಳ ಕೊನೆಯ ದಿನ ನಡೆದಿದ್ದ ತಾಲೂಕಿನ ಪ್ರಸಿದ್ಧ ಗುಟ್ಟೆ ಶ್ರೀ ಲಕ್ಷೀನರಸಿಂಹ ಸ್ವಾಮಿ (Gutte Lakshmi Narasimhaswamy Temple) ದೇವಾಲಯದಲ್ಲಿ ಕಳ್ಳತನ (Theft) ಪ್ರಕರಣ ಮತ್ತೆ ಮುಂದುವರಿದಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

[ccc_my_favorite_select_button post_id="115220"]
ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಬೆಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿಗೆ ಬೆಂಕಿ..!: 20 ಪ್ರಯಾಣಿಕರ ದುರ್ಮರಣ| Video

ಹೈದರಾಬಾದ್‌ನಿಂದ (Hyderabad) ಬೆಂಗಳೂರಿಗೆ (Bangalore) ಬರುತ್ತಿದ್ದ ಖಾಸಗಿ ಬಸ್ಸೊಂದು ಆಂಧ್ರಪ್ರದೇಶದ (Andhra Pradesh) ಕರ್ನೂಲು (Kurnool) ಜಿಲ್ಲೆಯ ಚಿನ್ನ ಟೆಕೂರು ಬಳಿ ನಡೆದ ಭೀಕರ ಅಗ್ನಿ (fire) ದುರಂತದಲ್ಲಿ ಬೆಂಕಿಗಾಹುತಿಯಾಗಿ 20 ಮಂದಿ ಸಾವನ್ನಪ್ಪಿದ್ದಾರೆ.

[ccc_my_favorite_select_button post_id="115273"]

ಆರೋಗ್ಯ

ಸಿನಿಮಾ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಭಾರತೀಯ ಚಿತ್ರರಂಗ ಕನ್ನಡದತ್ತ ಬೆರಗಿನಿಂದ ನೋಡುತ್ತಿದೆ; ಹೆಚ್.ಡಿ. ಕುಮಾರಸ್ವಾಮಿ

ಕನ್ನಡ ಚಿತ್ರರಂಗ ಸಮೃದ್ಧವಾಗಿ ಬೆಳೆಯಬೇಕಾದರೆ ನಾಯಕ ನಟರು ಹೆಚ್ಚು ಸಿನಿಮಾಗಳನ್ನು ಮಾಡಬೇಕು ಹಾಗೂ ಹೆಚ್ಚು ನಾಯಕ ನಟರು ಚಿತ್ರರಂಗಕ್ಕೆ ಬರಬೇಕು ಎಂದು ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರಾದ ಹೆಚ್.ಡಿ.

[ccc_my_favorite_select_button post_id="115245"]
error: Content is protected !!