ಬೆಂಗಳೂರು: ಅನಾರೋಗ್ಯದ ನಿಮಿತ್ತ ಶಸ್ತ್ರ ಚಿಕಿತ್ಸೆಗಾಗಿ ನಟ ಶಿವರಾಜ್ ಕುಮಾರ್ (Shivarajkumar) ಈಗಾಗಲೇ ವಿದೇಶಕ್ಕೆ ತೆರಳಿದ್ದು ಎಂದು ಅಮೆರಿಕಾದಲ್ಲಿ ಶಸ್ತ್ರ ಚಿಕಿತ್ಸೆ ನಡೆಯಲಿದೆ.
ಈ ಹಿನ್ನಲೆ ರಾಜ್ಯಾದ್ಯಂತ ಅಭಿಮಾನಿಗಳು ದೇವರಿಗೆ ವಿಶೇಷ ಊಜೆ ಸಲ್ಲಿಸಿ ಶಿವನ್ನ ಕ್ಷೇಮವಾಗಿ ಮರಳಲಿ ಎಂದು ಬೇಡಿಕೊಂಡಿದ್ದಾರೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ ಕೂಡ ಶಿವಣ್ಣಗೆ ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ.
ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ.
ಈ ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.