Christmas 2024: ಇಂದು ಶಾಂತಿ, ಸೌಹಾರ್ದತೆ ಸಾರುವ ಕ್ರಿಸ್‌ಮಸ್​ ಹಬ್ಬ

Christmas 2024: ಇಂದು ವಿಶ್ವದಾದ್ಯಂತ ಕ್ರಿಸ್​ಮಸ್​​ ಹಬ್ಬವನ್ನು ಆಚರಿಸಲಾಗುತ್ತಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲೂ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ.

ಎಲ್ಲೆಲ್ಲೂ ಕ್ರಿಸ್‌ಮಸ್‌ನ ಸಂಭ್ರಮ ಜೋರಾಗಿದೆ. ಪ್ರತಿವರ್ಷ ಪ್ರಪಂಚದಾದ್ಯಂತ ಕ್ರಿಸ್‌ಮಸ್‌ ಹಬ್ಬವನ್ನು ಬಹಳ ಅದ್ಧೂರಿಯಾಗಿ ಆಚರಿಸಲಾಗುತ್ತದೆ. ಕ್ರಿಸ್‌ಮಸ್ ಎಂದರೆ ಎಲ್ಲರೂ ಒಟ್ಟಾಗಿ ಸಂತೋಷ, ಖುಷಿಯ ಕ್ಷಣಗಳನ್ನು ಕಳೆಯುವುದು. ಕ್ರಿಸ್‌ಮಸ್‌ ಹಳೆಯ ವರ್ಷಕ್ಕೆ ಅಂತ್ಯ ಹಾಡಿ, ಹೊಸ ವರ್ಷವನ್ನು ಸ್ವಾಗತಿಸುವ ಸಮಯವೂ ಹೌದು.

ಡಿ.24 ರಂದು ರಾತ್ರಿ ಮಧ್ಯರಾತ್ರಿಯಿಂದಲೇ ಜಿಲ್ಲೆಯಾದ್ಯಂತ ಎಲ್ಲ ಚರ್ಚ್​ಗಳಲ್ಲಿ ಪವಿತ್ರ ದಿವ್ಯ ಬಲಿಪೂಜೆ, ಪ್ರಾರ್ಥನೆ ನಡೆಯಿತು. ವಿವಿಧ ಚರ್ಚ್​ಗಳ ಉಸ್ತುವಾರಿ ಹೊಂದಿರುವ ಆಯಾ ಪ್ರದೇಶಗಳ ಬಿಷಪ್​ಗಳು ಹಾಗೂ ಧರ್ಮಗುರುಗಳ ನೇತೃತ್ವದಲ್ಲಿ ಕ್ರಿಸ್​ಮಸ್​​​ ವಿಶೇಷ ಪೂಜೆಗಳು ನೆರವೇರಿದವು.

ಏಸುಕ್ರಿಸ್ತ ಹುಟ್ಟಿದ ದಿನವೇ ಕ್ರಿಸ್​ಮಸ್​ ಹಬ್ಬ. ಈ ದಿನವನ್ನು ಕ್ರಿಸ್ತ ಜಯಂತಿ ಎಂದೂ ಆಚರಿಸಲಾಗುತ್ತದೆ. ಜಗತ್ತಿನಾದ್ಯಂತ ಪ್ರತಿ ವರ್ಷ ಡಿಸೆಂಬರ್​ 25 ರಂದು ಈ ಹಬ್ಬ ಹಬ್ಬವನ್ನು ಅದ್ಧೂರಿಯಾಗಿ ಆಚರಿಸಲಾಗುತ್ತದೆ.

ಕ್ರೈಸ್ತ ಧರ್ಮದ ಪವಿತ್ರ ಗ್ರಂಥ ಬೈಬಲ್​ನ ಪ್ರಕಾರ ಯೇಸುಕ್ರಿಸ್ತ, ಮೇರಿ ಹಾಗೂ ಜೋಸೆಫರ ಮಗನಾಗಿ ಜೆರುಸಲೇಮ್​ ಪಟ್ಟಣದ ಬೆತ್ಲಹೆಮ್​​ ಎಂಬ ಊರಿನಲ್ಲಿ ಜನಿಸಿದರು. ರೋಮನ್​ ಜನಗಣತಿಯ ಪ್ರಕಾರ ಮೇರಿ ಹಾಗೂ ಜೋಸೆಫ್​ ದಂಪತಿ ತಮ್ಮ ಹೆಸರನ್ನು ನೋಂದಾಯಿಸಲು ಹೋಗುತ್ತಿದ್ದ ವೇಳೆ ಮೇರಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಅಲ್ಲೇ ಇದ್ದ ಗೋದಲಿಯೊಂದರಲ್ಲಿ ಆಶ್ರಯ ಪಡೆದು, ಯೇಸುಕ್ರಿಸ್ತನಿಗೆ ಜನ್ಮ ನೀಡಿದ್ದರು.

ಯಹೂದ್ಯ ಧರ್ಮದ ಪ್ರಕಾರ ಪ್ರವಾದನೆಗಳನ್ನು ನೆರವೇರಿಸಲು ಡೇವಿಡ್‌ನ ವಂಶದಲ್ಲಿ ಮಿಸಿಹಾ ಅಥವಾ ಮೆಸ್ಸಾಯ ಎನ್ನುವ ಅರ್ಥದ ದೇವರ ದೂತ, ರಕ್ಷಕ ಬರುವನೆಂಬ ನಂಬಿಕೆಯಿತ್ತು. ಈ ದೇವರ ದೂತನೇ ಯೇಸುಕ್ರಿಸ್ತ ಎಂದು ಕ್ರೈಸ್ತರು ಭಾವಿಸುತ್ತಾರೆ.

ಗ್ರೀಕ್ ಲಿಪಿಯಲ್ಲಿ ಕ್ರಿಸ್ತನ ಮೊದಲ ಅಕ್ಷರವು ಇಂಗ್ಲಿಷಿನ ಎಕ್ಸ್​ನಂತೆ ತೋರುವುದರಿಂದ ಕೆಲವರು ಎಕ್ಸ್​ಮಸ್ ಎಂದು ಬರೆಯುತ್ತಿದ್ದರು. ಅದು ಮುಂದುವರೆದು ಕ್ರಿಸ್ಮಸ್ ಆಗಿದೆ ಎನ್ನಲಾಗಿದೆ.

ಕ್ರಿಸ್​ಮಸ್​​ ಹಬ್ಬವನ್ನು ವಿಶೇಷವಾಗಿ ಆಚರಿಸಲಾಗುತ್ತಿದ್ದು, ಸಾಮಾನ್ಯವಾಗಿ ಎಲ್ಲಾ ಮನೆಗಳಲ್ಲೂ ಕ್ರಿಸ್​ಮಸ್​ ವೃಕ್ಷವನ್ನು ತಂದು ನಿಲ್ಲಿಸುವುದು ವಾಡಿಕೆಯಾಗಿದೆ. ಕ್ರಿಸ್​ಮಸ್​​ ವೃಕ್ಷಕ್ಕೆ ದೀಪಗಳು ಹಾಗೂ ಇತರ ವಸ್ತುಗಳಿಂದ ಅಲಂಕಾರ ಮಾಡಲಾಗುತ್ತದೆ.

ಅನೇಕ ಕಡೆಗಳಲ್ಲಿ ಮನೆಯ ಹೊರಗಡೆ ಕ್ರಿಸ್ತನ ಜನನ ಸಮಯದಲ್ಲಿ ಗೊಲ್ಲರಿಗೆ ಮಾರ್ಗದರ್ಶಿಯಾಗಿ ಗೋಚರಿಸಿದ ನಕ್ಷತ್ರದ ಆಕೃತಿಗಳನ್ನು, ನಕ್ಷತ್ರ ದೀಪಗಳನ್ನು ಕಟ್ಟುವುದು ಪಾರಂಪರಿಕೆಯಾಗಿ ಮುಂದುವರಿದುಕೊಂಡು ಬಂದಿದೆ. ಅದಷ್ಟೇ ಅಲ್ಲದೆ ಕ್ರಿಸ್​ಮಸ್​​ ಹಬ್ಬಕ್ಕೆ ಚರ್ಚ್​ಗಳು ಹಾಗೂ ಮನೆಗಳ ಮುಂದೆ ಗೋದಲಿಗಳ ನಿರ್ಮಾಣ ಮಾಡಲಾಗುತ್ತದೆ.

ಹಬ್ಬಕ್ಕೆ ಇನ್ನೇನು ಒಂದು ತಿಂಗಳ ಇರುವಾಗಲೇ ಇದರ ತಯಾರಿ ಪ್ರಾರಂಭವಾಗುತ್ತದೆ. ಇದರ ಜೊತೆಗೆ ಕ್ರಿಸ್ಮಸ್​ ಪ್ರಯುಕ್ತ ಡಿಸೆಂಬರ್​ ತಿಂಗಳ ಆರಂಭದಿಂದಲೇ ವೃತಾಚರಣೆ ಆರಂಭವಾಗುತ್ತದೆ.

ಡಿಸೆಂಬರ್​ ತಿಂಗಳ ಕೊನೆಯ ವಾರದಲ್ಲಿ ಮನೆ ಮನೆಗೆ ತೆರಳಿ ಕ್ರಿಸ್​ಮಸ್​​ ಸಂದೇಶ ಸಾರುವ ಕ್ಯಾರಲ್​ ಹಾಡುಗಳನ್ನು ಹಾಡಲಾಗುತ್ತದೆ.

ರಾಜಕೀಯ

ಬಿಜೆಪಿಗೆ ಜೆಡಿಎಸ್ ಅನಿರ್ವಾರ್ಯವೇ ಹೊರತು.. ಜೆಡಿಎಸ್‌ಗೆ ಬಿಜೆಪಿಯಲ್ಲ: ಬಿಜೆಪಿ ನಾಯಕರಿಗೆ ಹರೀಶ್ ಗೌಡ ಎಚ್ಚರಿಕೆ

ಬಿಜೆಪಿಗೆ ಜೆಡಿಎಸ್ ಅನಿರ್ವಾರ್ಯವೇ ಹೊರತು.. ಜೆಡಿಎಸ್‌ಗೆ ಬಿಜೆಪಿಯಲ್ಲ: ಬಿಜೆಪಿ ನಾಯಕರಿಗೆ ಹರೀಶ್ ಗೌಡ

ದೊಡ್ಡಬಳ್ಳಾಪುರದ ಜೆಡಿಎಸ್ ಹಿರಿಯ ಮುಖಂಡ ಹರೀಶ್ ಗೌಡ (Garish Gowda) ಅವರು, ಬಿಜೆಪಿ (BJP) ಮುಖಂಡರ ವಿರುದ್ಧ ವಾಗ್ದಾಳಿ ನಡೆಸಿದ್ದು, ದೊಡ್ಡಬಳ್ಳಾಪುರ ನಗರಸಭೆ ಅಧಿಕಾರ ಹಂಚಿಕೆಯಲ್ಲಿ ಬಿಜೆಪಿ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿಲ್ಲ ಎಂದು ಆಕ್ರೋಶ

[ccc_my_favorite_select_button post_id="119514"]
20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ: ಎಂ ಬಿ ಪಾಟೀಲ

ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20 ವರ್ಷಗಳಲ್ಲಿ ಎಚ್125 ದರ್ಜೆಯ

[ccc_my_favorite_select_button post_id="119504"]
UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

UGC ನಿಯಮಾವಳಿಗೆ ಸುಪ್ರೀಂ ತಡೆ.. ಕೇಂದ್ರ ಸರ್ಕಾರಕ್ಕೆ ನೋಟಿಸ್

ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ತಾರತಮ್ಯವನ್ನು ತಡೆಗಟ್ಟಲು ವಿಶ್ವವಿದ್ಯಾಲಯ ಅನುದಾನ ಆಯೋಗ (UGC) ಇತ್ತೀಚೆಗೆ ಸೂಚಿಸಿದ ನಿಯಮಗಳನ್ನು ಸ್ಥಗಿತಗೊಳಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಆದೇಶಿಸಿದ್ದು, ಕೇಂದ್ರ ಸರ್ಕಾರಕ್ಕೆ ನೋಟೀಸ್ ನೀಡಿದೆ.

[ccc_my_favorite_select_button post_id="118953"]
ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ -ಚೀನಿ ಬಾಯಿ ಬಾಯಿ

ಗುಡ್ಮಾರ್ನಿಂಗ್ ನ್ಯೂಸ್: ಪ್ರಧಾನಿ ಮೋದಿ ಚೀನಾ ಭೇಟಿ.. 7 ವರ್ಷಗಳ ಬಳಿಕ ಹಿಂದಿ

ಅಮೇರಿಕಾದ ಅಧ್ಯಕ್ಷ ಡೋನಾಲ್ಡ್ ಟ್ರಂಪ್ (Donald Trump) ಶೇ.50 ರಷ್ಟು ತೆರಿಗೆ ಬರೆ ಬೆನ್ನಲ್ಲೇ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು 7 ವರ್ಷಗಳ ಬಳಿಕ ಚೀನಾಗೇ ಭೇಟಿ ನೀಡಿದ್ದಾರೆ.

[ccc_my_favorite_select_button post_id="113347"]

ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳ ಆಯೋಜನೆಗೆ ಅನುಮತಿ: ಡಿಸಿಎಂ ಡಿ.ಕೆ. ಶಿವಕುಮಾರ್

"ಯುವಕರು ಹಾಗೂ ಕ್ರಿಕೆಟ್ ಕ್ರೀಡೆಯ ಹಿತದೃಷ್ಟಿಯಿಂದ ಇನ್ನುಮುಂದೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ಆಯೋಜನೆಗೆ ಸರ್ಕಾರ ಅನುಮತಿ ನೀಡುತ್ತಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (D.K. Shivakumar) ಅವರು ತಿಳಿಸಿದರು.

[ccc_my_favorite_select_button post_id="119372"]
ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಮರಕ್ಕೆ ಕಾರು ಡಿಕ್ಕಿ: ಸಬ್‌ಇನ್ಸ್‌ಪೆಕ್ಟರ್ ಸಾವು

ಆರೋಪಿಯನ್ನು ಹಿಡಿಯಲು ಹೋದ ಪೊಲೀಸರು ಪ್ರಯಾಣಿಸುತ್ತಿದ್ದ ಕಾರೊಂದು ರಸ್ತೆಬದಿಯ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ (Accident) ಸಬ್‌ಇನ್ಸ್‌ಪೆಕ್ಟರ್ ಸಾವನ್ನಪ್ಪಿ, ಇನ್ಸ್‌ಪೆಕ್ಟರ್ ಸೇರಿ ಐವರು ಪೊಲೀಸರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಮಹಾರಾಜಗಂಜ್ ಗೋರಖ್‌ಪುರ ಮುಖ್ಯ ರಸ್ತೆಯಲ್ಲಿ ಇಂದು ಬೆಳಿಗ್ಗೆ ನಡೆದಿದೆ.

[ccc_my_favorite_select_button post_id="119478"]
ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ದೊಡ್ಡಬಳ್ಳಾಪುರ: ಅಪಘಾತ.. ಬೈಕ್ ಸವಾರ ದುರ್ಮರಣ

ಖಾಸಗಿ ಕಾರ್ಖಾನೆಯ ಬಸ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿ (Accident), ದ್ವಿಚಕ್ರ ವಾಹನ ಸವಾರ ಸಾವನಪ್ಪಿರುವ ಘಟನೆ ತಾಲೂಕಿನ ಗೊಲ್ಲಹಳ್ಳಿ ಕ್ರಾಸ್ ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸಮೀಪ ಇಂದು ಸಂಜೆ

[ccc_my_favorite_select_button post_id="119492"]

ಆರೋಗ್ಯ

ಸಿನಿಮಾ

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ದರ್ಶನ್ ಬರ್ತ್‌ಡೇ: ಅಭಿಮಾನಿಗಳಿಂದ ವಿಶೇಷ ವಿಶ್

ಕನ್ನಡ ಚಿತ್ರರಂಗದ ಖ್ಯಾತ ನಟ ದರ್ಶನ್ (Actor Darshan) ಅವರಿಗೆ ಇಂದು ಜನ್ಮದಿನದ (Birthday) ಸಡಗರ. 49ನೇ ವರ್ಷಕ್ಕೆ ದರ್ಶನ್ ಕಾಲಿಟ್ಟಿದ್ದಾರೆ.

[ccc_my_favorite_select_button post_id="119431"]
error: Content is protected !!